Homeಅಂಕಣಗಳುಮಾತು ಮರೆತ ಭಾರತ; ಜಜ್ಜಾರ್ ಫೈಲ್: ದಲಿತರಿಗಿಂತ ಗೋವಿನ ಜೀವ ದೊಡ್ಡದು

ಮಾತು ಮರೆತ ಭಾರತ; ಜಜ್ಜಾರ್ ಫೈಲ್: ದಲಿತರಿಗಿಂತ ಗೋವಿನ ಜೀವ ದೊಡ್ಡದು

- Advertisement -
- Advertisement -

ಗೋವು ತಿಂದು ಗೋವಿನಂತಾದವನು
ನಿಮ್ಮಂತೆ ಮನುಷ್ಯರನ್ನು ಕೊಂದು
ಮನುಷ್ಯನಾಗಲಾರೆ

ಇದು ಕವಿ ಎನ್. ಕೆ. ಹನುಮಂತಯ್ಯನವರ ಕವಿತೆಯೊಂದರ ಸಾಲುಗಳು. ಈ ಸಾಲುಗಳು 2002ರಲ್ಲಿ ಹರ್‍ಯಾಣದ ಜಜ್ಜಾರಿನಲ್ಲಿ ನಡೆದ ದಲಿತರ ಹತ್ಯಾಕಾಂಡಕ್ಕೆ ಪ್ರತಿರೋಧವಾಗಿ ಕಾಣುತ್ತದೆ. ಸನಾತನ ಹಿಂದೂ ಧರ್ಮದಲ್ಲಿ ಗೋವಿನ ಕಳೇಬರವನ್ನು ವಿಲೇವಾರಿ ಮಾಡುವ ಕಾಯಕವನ್ನು ದಲಿತರಿಗೆ ಒಪ್ಪಿಸಿ ಅಸ್ಪೃಶ್ಯತೆಗೊಂದು ಕಾರಣ ಹುಡುಕಿಕೊಂಡ ಹಿಂದೂ ಮೇಲ್ಜಾತಿಗಳು ಮುಸ್ಲಿಮರನ್ನು ಗುರಿ ಮಾಡಿಕೊಳ್ಳುವ ಮುಂಚೆ ದಲಿತರನ್ನು ಗುರಿಯಾಗಿಸಿಕೊಂಡಿದ್ದರು. ಅಂತಹ ಲಿಂಚಿಂಗ್ ಪ್ರಕರಣಕ್ಕೆ ಉದಾಹರಣೆ ’ಜಜ್ಜಾರ್ ಫೈಲ್’ ಆಗಿದೆ.

ಅದು 2002ನೇ ಇಸವಿಯ ಅಕ್ಟೋಬರ್ 15, ದಸರಾ ನಡೆಯುತ್ತಿದ್ದ ದಿನವದು. ಹರ್‍ಯಾಣದ ಜಜ್ಜಾರ್‌ನಲ್ಲಿಯೂ ಅಂದು ಸಂಜೆ ದಸರಾ ಮೆರವಣಿಗೆಯನ್ನು ಮುಗಿಸಿಕೊಂಡು ಮರಳುತ್ತಿದ್ದ ಒಂದಷ್ಟು ’ವಿಶ್ವ ಹಿಂದೂ ಪರಿಷತ್’ ಕಾರ್ಯಕರ್ತರು ಏಕಾಏಕಿ ಪೊಲೀಸ್ ಠಾಣೆಗೆ ಐವರು ದಲಿತರನ್ನು ಕರೆದುತಂದರು. ಆ ಐವರ ಮೇಲೆ ಅವರು ಹೊರಿಸಿದ ಆರೋಪ, ಜೀವಂತ ದನವನ್ನು ಕೊಂದು ಅದರ ಚರ್ಮವನ್ನು ರಸ್ತೆ ಪಕ್ಕದಲ್ಲಿಯೇ ಸುಲಿಯುತ್ತಿದ್ದರು ಎಂಬುದಾಗಿದೆ. ಹೀಗೆ ಠಾಣೆಗೆ ಕರೆದುಕೊಂಡು ಬಂದ ವಿಶ್ವ ಹಿಂದೂ ಪರಿಷತ್ ಸಂಘಟನೆಯ ಗುಂಪು ಆ ಐವರ ಮೇಲೆ ಗೋ ಹತ್ಯಾ ನಿಷೇಧ ಕಾಯ್ದೆಯಡಿ ದೂರು ದಾಖಲಾಗುವಂತೆ ನೋಡಿಕೊಂಡಿದೆ. ಅಲ್ಲಿಂದ ಆ ಪ್ರಕರಣವನ್ನು ಪೊಲೀಸರಿಗೆ ಒಪ್ಪಿಸಿ ಹಿಂದೂ ಸಂಘಟನೆಯವರು ಮನೆಗೆ ಮರಳಿದ್ದರೆ ಇಂದು ಈ ಲೇಖನವನ್ನು ಬರೆಯಬೇಕಾಗಿಯೇ ಬರುತ್ತಿರಲಿಲ್ಲ. ಅದಕ್ಕೆ ಬದಲಾಗಿ ಆ ಐವರು ದಲಿತರನ್ನು ಪೊಲೀಸ್ ಠಾಣೆಯಿಂದ ಹೊರಗೆ ಎಳೆದುಕೊಂಡು ಬಂದ ಗುಂಪು ಥಳಿಸಿ, ಕ್ರೂರವಾಗಿ ಹಿಂಸಿಸಿ ಕೊಂದುಹಾಕಿತು.

ಆ ಐವರು ದಲಿತ ಯುವಕರಿಗೆ ಇನ್ನೂ 20 ತುಂಬಿರಲಿಲ್ಲ. ವೀರೆಂದರ್, ದಯಾನಂದ್, ತೋಟ ರಾಮ್, ರಾಜು ಮತ್ತು ಕೈಲಾಶ್ ಇವರೇ ಆ ನತದೃಷ್ಟ ದಲಿತ ಯುವಕರು. ಈ ಐವರ ಕೆಲಸ ಕಸಾಯಿ ಖಾನೆಯ ಪ್ರಾಣಿಗಳ ಮೂಳೆಯನ್ನು ಸಂಗ್ರಹಿಸುವುದು ಹಾಗೂ ಸತ್ತ ಪ್ರಾಣಿಗಳ ಚರ್ಮ ಸುಲಿದು ವ್ಯಾಪಾರ ಮಾಡುವುದು. ಈ ಕಾಯಕವನ್ನು ಸೊಹ್ನಾ ಪಂಚಾಯತ್ ಸಮಿತಿ ಹಾಗೂ ಆದರ್ಶ ಗೋಶಾಲೆಯು ಇವರಿಗೆ ಲೈಸೆನ್ಸ್ ನೀಡಿ ನಡೆಸುತ್ತಿತ್ತು. ಈ ಐವರು 35,000 ಹಣ ನೀಡಿ ಲೈಸೆನ್ಸ್ ಪಡೆದಿದ್ದರು. ಈ ಕಾಯಕವನ್ನು ಅವರ ಕುಟುಂಬ ಕಳೆದ 35 ವರ್ಷಗಳಿಂದ ಮಾಡಿಕೊಂಡು ಬರುತ್ತಿತ್ತು.

ಎಲ್ಲರಿಗೂ ತಿಳಿದಿರುವ ಸತ್ಯವೆಂದರೆ, ಸತ್ತ ಗೋವುಗಳ ಚರ್ಮವನ್ನು ದೂರದ ಕಾಡಿನಲ್ಲಿಯೋ ಅಥವಾ ಪ್ರತ್ಯೇಕ ಕೊಠಡಿಗಳಲ್ಲಿಯೋ ಸುಲಿಯುತ್ತಾರೆ ಎಂಬುದು. ಆದರೆ ಅಕ್ಟೋಬರ್ 15ರ ಸಂಜೆ 6 ಗಂಟೆ ಸಮಯದಲ್ಲಿ ವ್ಯಾನ್ ಮೂಲಕ ಚರ್ಮವನ್ನು ಹೊತ್ತೊಯ್ಯುತ್ತಿದ್ದ ದಲಿತರನ್ನು ಅಡ್ಡಗಟ್ಟಿದ ವಿಹೆಚ್‌ಪಿಯವರಿಗೆ ದನದ ಚರ್ಮ ಇರುವುದು ಕಂಡುಬಂದಿದೆ. ಇದೇನು ಹೊಸ ಸುದ್ದಿಯಲ್ಲದಿದ್ದರೂ, ಉನ್ಮಾದದಲ್ಲಿದ್ದ ಗುಂಪಿಗೆ ಗಲಾಟೆ ಮಾಡಲು ಅಥವಾ ಗೋರಕ್ಷಕರಂತೆ ಪೋಸು ಕೊಡಲು ಅದಷ್ಟು ಸಾಕಾಗಿದೆ. ಥಳಿತದಲ್ಲಿ ಒಬ್ಬ ದಲಿತ ಅಲ್ಲಿಯೇ ಅಸುನೀಗಿದ್ದಾನೆ. ಆಗ ಈ ಪ್ರಕರಣಕ್ಕೆ ಗೋವನ್ನು ಕೊಂದು ಬಹಿರಂಗವಾಗಿ ಚರ್ಮ ಸುಲಿಯುತ್ತಿದ್ದವರನ್ನು ಥಳಿಸಲಾಗಿದೆ ಎಂಬ ಬಣ್ಣ ಹಚ್ಚಲಾಗಿದೆ. ನಂತರ ಪೊಲೀಸ್ ಠಾಣೆಗೆ ಎಳೆದೊಯ್ದಿದ್ದಾರೆ. ಪೊಲೀಸರು ಸಹ ಈ ಕೃತ್ಯಕ್ಕೆ ಸಹಕಾರ ನೀಡಿದ್ದಾರೆ ಎಂದು ಹಲವು ಪತ್ರಿಕೆಗಳು ಸಾಕ್ಷಿ ಸಮೇತ ಸಾಬೀತುಮಾಡಿವೆ. ಪೊಲೀಸರು, ಬಹುದೊಡ್ಡ ಗುಂಪು ಬಂದು ಆ ಐವರನ್ನು ಎಳೆದೊಯ್ದಿತು; ನಾವು ಏನು ಮಾಡಲಾಗಲಿಲ್ಲ ಎಂದು ಕೋರ್ಟಿನಲ್ಲಿ ಉತ್ತರಿಸಿದ್ದಾರಾದರೂ ಪೊಲೀಸ್ ಸ್ಟೇಷನ್ನಿನಲ್ಲಿ ಗಾಳಿಯಲ್ಲಿ ಗುಂಡು ಹಾರಿಸಲು ಬಂದೂಕುಗಳಿರಲಿಲ್ಲವೇ ಎಂಬ ಪ್ರಶ್ನೆಗೆ ಅವರ ಬಳಿ ಉತ್ತರವಿಲ್ಲ. ಅತ್ಯಂತ ನೋವು ತರುವ ಹಾಗೂ ಕಣ್ಣು ಕೆಂಪಗಾಗಿಸುವ ವಿಚಾರವೇನೆಂದರೆ ದಲಿತರನ್ನು ವಿಹೆಚ್‌ಪಿಯವರು ಥಳಿಸುವಾಗ ಸ್ಥಳದಲ್ಲಿ 50ಕ್ಕೂ ಹೆಚ್ಚು ಪೊಲೀಸರೊಂದಿಗೆ ಡೆಪ್ಯೂಟಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಸಹ ಅಲ್ಲಿದ್ದರು! ಅವರೆಲ್ಲರ ಸಮ್ಮುಖದಲ್ಲಿಯೇ ಐವರು ದಲಿತರನ್ನು ಥಳಿಸಿದರು. ಅದೆಷ್ಟರ ಮಟ್ಟಿಗೆ ಥಳಿಸಿದರೆಂದರೆ ನೆಲದ ಮೇಲೆ ಮೆತ್ತಿಕೊಂಡಿದ್ದ ರಕ್ತದ ಕಲೆಗಳು ಮಾಯವಾಗಲು ವಾರಗಳೇ ಬೇಕಾದವಂತೆ. ಇಬ್ಬರ ಕಣ್ಣು ಕಿತ್ತರು. ಇಬ್ಬರ ಮುಖದ ಮೇಲೆ ಪೆಟ್ರೋಲ್ ಸುರಿದು ಸುಡುತ್ತಾ ಕೇಕೆ ಹಾಕಿದರು. ಈ ಹತ್ಯಾಕಾಂಡ ಪೊಲೀಸರ ಸಮ್ಮುಖದಲ್ಲಿಯೇ ನಡೆದಿದ್ದರೂ, ಅವರು ದಲಿತ ಯುವಕರ ಕುಟುಂಬಗಳಿಗೆ ತಿಳಿಸಿದ್ದು ಆಕ್ಸಿಡೆಂಟ್ ಆಗಿದೆ ಎಂದು. ಇಷ್ಟರಲ್ಲಿಯೇ ದಲಿತ ಕುಟುಂಬಗಳಿಗೆ ಅರ್ಥವಾಗಿ ಹೋಯಿತು. ತಮ್ಮ ಮಕ್ಕಳ ಹತ್ಯೆಯಲ್ಲಿ ಪೊಲೀಸರ ಪಾತ್ರವೂ ಸಹ ಇದೆ ಎಂಬುದು. ಇದನ್ನು ಕುಟುಂಬದವರು ಒಪ್ಪದಿದ್ದಾಗ ’ನಿಮ್ಮ ಮಕ್ಕಳನ್ನು ಮುಸ್ಲಿಮರೆಂದು ಭಾವಿಸಿ ಕೊಂದಿದ್ದಾರೆ’ ಎಂಬ ಸಬೂಬನ್ನೂ ನೀಡಿದರು. ಆದರೆ ದಲಿತ ಕುಟುಂಬಗಳು ಅದಕ್ಕೆ ಒಪ್ಪಲಿಲ್ಲ. ’ಮುಸ್ಲಿಮರೂ ನಮ್ಮಂತೆ ಮನುಷ್ಯರಲ್ಲವೇ’ ಎಂದು ಪೊಲೀಸರನ್ನೇ ಪ್ರಶ್ನಿಸಿದವು.

ಇದಾದ ಮಾರನೇ ದಿನ ಅಂದರೆ ಅಕ್ಟೋಬರ್ 16ರಂದು ಜಜ್ಜಾರ್‌ನ ಬೀದಿಗಳಲ್ಲಿ ವಿಶ್ವ ಹಿಂದೂ ಪರಿಷತ್ತಿನ ಹಾಗೂ ಭಜರಂಗ ದಳದ ಕಾರ್ಯಕರ್ತರು ದಿಗ್ವಿಜಯದ ಮೆರವಣಿಗೆ ನಡೆಸಿದರು. ಅವರೆಲ್ಲರೂ ಬಹಿರಂಗವಾಗಿಯೇ ಐವರು ದಲಿತ ಯುವಕರ ಕೊಲೆಯನ್ನು ಸಮರ್ಥಿಸಿಕೊಂಡರು. ದೆಹಲಿಯ ವಿಹೆಚ್‌ಪಿಯ ಪ್ರಮುಖ ಮುಖಂಡ ಆಚಾರ್ಯ ಗಿರಿರಾಜ್ ಕಿಶೋರ್ ’ನಮಗೆ ದಲಿತರ ಜೀವಕ್ಕಿಂತ ಗೋವಿನ ಜೀವ ದೊಡ್ಡದು’ ಎಂದು ಬಹಿರಂಗವಾಗಿ ಹೇಳಿದ.

ಈ ಪ್ರಕರಣದ ತನಿಖೆ ನಡೆಸಿ ವರದಿ ನೀಡಲು ಸಮಿತಿ ರಚಿಸಲಾಯಿತು. ಆದರೆ ಅದರಿಂದ ಹೆಚ್ಚೇನು ಪ್ರಯೋಜನವಾಗಲಿಲ್ಲ. ಪೊಲೀಸರು ದೊಂಬಿ ಪ್ರಕರಣ ದಾಖಲಿಸಿಕೊಂಡರು. ಕೋರ್ಟುಗಳಿಗೆ ಸಾಕ್ಷಿ ಬೇಕು. ಆರೋಪಿಗಳು ಬೇಕು. ಆದರೆ ಪೊಲೀಸರೇ ದೊಂಬಿ ಎಂದ ಮೇಲೆ ಆರೋಪಿಗಳನ್ನು ಹಿಡಿದು ಕೊಡುವವರಾರು?


ಇದನ್ನೂ ಓದಿ: ಮಾತು ಮರೆತ ಭಾರತ; ರೋಹಿತ್ ವೇಮುಲ ಫೈಲ್: ದಲಿತ ವಿದ್ಯಾರ್ಥಿಯನ್ನು ಬಲಿ ಪಡೆದ ಪ್ರಭುತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...