Homeಅಂಕಣಗಳುಮಾತು ಮರೆತ ಭಾರತ; ಜಜ್ಜಾರ್ ಫೈಲ್: ದಲಿತರಿಗಿಂತ ಗೋವಿನ ಜೀವ ದೊಡ್ಡದು

ಮಾತು ಮರೆತ ಭಾರತ; ಜಜ್ಜಾರ್ ಫೈಲ್: ದಲಿತರಿಗಿಂತ ಗೋವಿನ ಜೀವ ದೊಡ್ಡದು

- Advertisement -
- Advertisement -

ಗೋವು ತಿಂದು ಗೋವಿನಂತಾದವನು
ನಿಮ್ಮಂತೆ ಮನುಷ್ಯರನ್ನು ಕೊಂದು
ಮನುಷ್ಯನಾಗಲಾರೆ

ಇದು ಕವಿ ಎನ್. ಕೆ. ಹನುಮಂತಯ್ಯನವರ ಕವಿತೆಯೊಂದರ ಸಾಲುಗಳು. ಈ ಸಾಲುಗಳು 2002ರಲ್ಲಿ ಹರ್‍ಯಾಣದ ಜಜ್ಜಾರಿನಲ್ಲಿ ನಡೆದ ದಲಿತರ ಹತ್ಯಾಕಾಂಡಕ್ಕೆ ಪ್ರತಿರೋಧವಾಗಿ ಕಾಣುತ್ತದೆ. ಸನಾತನ ಹಿಂದೂ ಧರ್ಮದಲ್ಲಿ ಗೋವಿನ ಕಳೇಬರವನ್ನು ವಿಲೇವಾರಿ ಮಾಡುವ ಕಾಯಕವನ್ನು ದಲಿತರಿಗೆ ಒಪ್ಪಿಸಿ ಅಸ್ಪೃಶ್ಯತೆಗೊಂದು ಕಾರಣ ಹುಡುಕಿಕೊಂಡ ಹಿಂದೂ ಮೇಲ್ಜಾತಿಗಳು ಮುಸ್ಲಿಮರನ್ನು ಗುರಿ ಮಾಡಿಕೊಳ್ಳುವ ಮುಂಚೆ ದಲಿತರನ್ನು ಗುರಿಯಾಗಿಸಿಕೊಂಡಿದ್ದರು. ಅಂತಹ ಲಿಂಚಿಂಗ್ ಪ್ರಕರಣಕ್ಕೆ ಉದಾಹರಣೆ ’ಜಜ್ಜಾರ್ ಫೈಲ್’ ಆಗಿದೆ.

ಅದು 2002ನೇ ಇಸವಿಯ ಅಕ್ಟೋಬರ್ 15, ದಸರಾ ನಡೆಯುತ್ತಿದ್ದ ದಿನವದು. ಹರ್‍ಯಾಣದ ಜಜ್ಜಾರ್‌ನಲ್ಲಿಯೂ ಅಂದು ಸಂಜೆ ದಸರಾ ಮೆರವಣಿಗೆಯನ್ನು ಮುಗಿಸಿಕೊಂಡು ಮರಳುತ್ತಿದ್ದ ಒಂದಷ್ಟು ’ವಿಶ್ವ ಹಿಂದೂ ಪರಿಷತ್’ ಕಾರ್ಯಕರ್ತರು ಏಕಾಏಕಿ ಪೊಲೀಸ್ ಠಾಣೆಗೆ ಐವರು ದಲಿತರನ್ನು ಕರೆದುತಂದರು. ಆ ಐವರ ಮೇಲೆ ಅವರು ಹೊರಿಸಿದ ಆರೋಪ, ಜೀವಂತ ದನವನ್ನು ಕೊಂದು ಅದರ ಚರ್ಮವನ್ನು ರಸ್ತೆ ಪಕ್ಕದಲ್ಲಿಯೇ ಸುಲಿಯುತ್ತಿದ್ದರು ಎಂಬುದಾಗಿದೆ. ಹೀಗೆ ಠಾಣೆಗೆ ಕರೆದುಕೊಂಡು ಬಂದ ವಿಶ್ವ ಹಿಂದೂ ಪರಿಷತ್ ಸಂಘಟನೆಯ ಗುಂಪು ಆ ಐವರ ಮೇಲೆ ಗೋ ಹತ್ಯಾ ನಿಷೇಧ ಕಾಯ್ದೆಯಡಿ ದೂರು ದಾಖಲಾಗುವಂತೆ ನೋಡಿಕೊಂಡಿದೆ. ಅಲ್ಲಿಂದ ಆ ಪ್ರಕರಣವನ್ನು ಪೊಲೀಸರಿಗೆ ಒಪ್ಪಿಸಿ ಹಿಂದೂ ಸಂಘಟನೆಯವರು ಮನೆಗೆ ಮರಳಿದ್ದರೆ ಇಂದು ಈ ಲೇಖನವನ್ನು ಬರೆಯಬೇಕಾಗಿಯೇ ಬರುತ್ತಿರಲಿಲ್ಲ. ಅದಕ್ಕೆ ಬದಲಾಗಿ ಆ ಐವರು ದಲಿತರನ್ನು ಪೊಲೀಸ್ ಠಾಣೆಯಿಂದ ಹೊರಗೆ ಎಳೆದುಕೊಂಡು ಬಂದ ಗುಂಪು ಥಳಿಸಿ, ಕ್ರೂರವಾಗಿ ಹಿಂಸಿಸಿ ಕೊಂದುಹಾಕಿತು.

ಆ ಐವರು ದಲಿತ ಯುವಕರಿಗೆ ಇನ್ನೂ 20 ತುಂಬಿರಲಿಲ್ಲ. ವೀರೆಂದರ್, ದಯಾನಂದ್, ತೋಟ ರಾಮ್, ರಾಜು ಮತ್ತು ಕೈಲಾಶ್ ಇವರೇ ಆ ನತದೃಷ್ಟ ದಲಿತ ಯುವಕರು. ಈ ಐವರ ಕೆಲಸ ಕಸಾಯಿ ಖಾನೆಯ ಪ್ರಾಣಿಗಳ ಮೂಳೆಯನ್ನು ಸಂಗ್ರಹಿಸುವುದು ಹಾಗೂ ಸತ್ತ ಪ್ರಾಣಿಗಳ ಚರ್ಮ ಸುಲಿದು ವ್ಯಾಪಾರ ಮಾಡುವುದು. ಈ ಕಾಯಕವನ್ನು ಸೊಹ್ನಾ ಪಂಚಾಯತ್ ಸಮಿತಿ ಹಾಗೂ ಆದರ್ಶ ಗೋಶಾಲೆಯು ಇವರಿಗೆ ಲೈಸೆನ್ಸ್ ನೀಡಿ ನಡೆಸುತ್ತಿತ್ತು. ಈ ಐವರು 35,000 ಹಣ ನೀಡಿ ಲೈಸೆನ್ಸ್ ಪಡೆದಿದ್ದರು. ಈ ಕಾಯಕವನ್ನು ಅವರ ಕುಟುಂಬ ಕಳೆದ 35 ವರ್ಷಗಳಿಂದ ಮಾಡಿಕೊಂಡು ಬರುತ್ತಿತ್ತು.

ಎಲ್ಲರಿಗೂ ತಿಳಿದಿರುವ ಸತ್ಯವೆಂದರೆ, ಸತ್ತ ಗೋವುಗಳ ಚರ್ಮವನ್ನು ದೂರದ ಕಾಡಿನಲ್ಲಿಯೋ ಅಥವಾ ಪ್ರತ್ಯೇಕ ಕೊಠಡಿಗಳಲ್ಲಿಯೋ ಸುಲಿಯುತ್ತಾರೆ ಎಂಬುದು. ಆದರೆ ಅಕ್ಟೋಬರ್ 15ರ ಸಂಜೆ 6 ಗಂಟೆ ಸಮಯದಲ್ಲಿ ವ್ಯಾನ್ ಮೂಲಕ ಚರ್ಮವನ್ನು ಹೊತ್ತೊಯ್ಯುತ್ತಿದ್ದ ದಲಿತರನ್ನು ಅಡ್ಡಗಟ್ಟಿದ ವಿಹೆಚ್‌ಪಿಯವರಿಗೆ ದನದ ಚರ್ಮ ಇರುವುದು ಕಂಡುಬಂದಿದೆ. ಇದೇನು ಹೊಸ ಸುದ್ದಿಯಲ್ಲದಿದ್ದರೂ, ಉನ್ಮಾದದಲ್ಲಿದ್ದ ಗುಂಪಿಗೆ ಗಲಾಟೆ ಮಾಡಲು ಅಥವಾ ಗೋರಕ್ಷಕರಂತೆ ಪೋಸು ಕೊಡಲು ಅದಷ್ಟು ಸಾಕಾಗಿದೆ. ಥಳಿತದಲ್ಲಿ ಒಬ್ಬ ದಲಿತ ಅಲ್ಲಿಯೇ ಅಸುನೀಗಿದ್ದಾನೆ. ಆಗ ಈ ಪ್ರಕರಣಕ್ಕೆ ಗೋವನ್ನು ಕೊಂದು ಬಹಿರಂಗವಾಗಿ ಚರ್ಮ ಸುಲಿಯುತ್ತಿದ್ದವರನ್ನು ಥಳಿಸಲಾಗಿದೆ ಎಂಬ ಬಣ್ಣ ಹಚ್ಚಲಾಗಿದೆ. ನಂತರ ಪೊಲೀಸ್ ಠಾಣೆಗೆ ಎಳೆದೊಯ್ದಿದ್ದಾರೆ. ಪೊಲೀಸರು ಸಹ ಈ ಕೃತ್ಯಕ್ಕೆ ಸಹಕಾರ ನೀಡಿದ್ದಾರೆ ಎಂದು ಹಲವು ಪತ್ರಿಕೆಗಳು ಸಾಕ್ಷಿ ಸಮೇತ ಸಾಬೀತುಮಾಡಿವೆ. ಪೊಲೀಸರು, ಬಹುದೊಡ್ಡ ಗುಂಪು ಬಂದು ಆ ಐವರನ್ನು ಎಳೆದೊಯ್ದಿತು; ನಾವು ಏನು ಮಾಡಲಾಗಲಿಲ್ಲ ಎಂದು ಕೋರ್ಟಿನಲ್ಲಿ ಉತ್ತರಿಸಿದ್ದಾರಾದರೂ ಪೊಲೀಸ್ ಸ್ಟೇಷನ್ನಿನಲ್ಲಿ ಗಾಳಿಯಲ್ಲಿ ಗುಂಡು ಹಾರಿಸಲು ಬಂದೂಕುಗಳಿರಲಿಲ್ಲವೇ ಎಂಬ ಪ್ರಶ್ನೆಗೆ ಅವರ ಬಳಿ ಉತ್ತರವಿಲ್ಲ. ಅತ್ಯಂತ ನೋವು ತರುವ ಹಾಗೂ ಕಣ್ಣು ಕೆಂಪಗಾಗಿಸುವ ವಿಚಾರವೇನೆಂದರೆ ದಲಿತರನ್ನು ವಿಹೆಚ್‌ಪಿಯವರು ಥಳಿಸುವಾಗ ಸ್ಥಳದಲ್ಲಿ 50ಕ್ಕೂ ಹೆಚ್ಚು ಪೊಲೀಸರೊಂದಿಗೆ ಡೆಪ್ಯೂಟಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಸಹ ಅಲ್ಲಿದ್ದರು! ಅವರೆಲ್ಲರ ಸಮ್ಮುಖದಲ್ಲಿಯೇ ಐವರು ದಲಿತರನ್ನು ಥಳಿಸಿದರು. ಅದೆಷ್ಟರ ಮಟ್ಟಿಗೆ ಥಳಿಸಿದರೆಂದರೆ ನೆಲದ ಮೇಲೆ ಮೆತ್ತಿಕೊಂಡಿದ್ದ ರಕ್ತದ ಕಲೆಗಳು ಮಾಯವಾಗಲು ವಾರಗಳೇ ಬೇಕಾದವಂತೆ. ಇಬ್ಬರ ಕಣ್ಣು ಕಿತ್ತರು. ಇಬ್ಬರ ಮುಖದ ಮೇಲೆ ಪೆಟ್ರೋಲ್ ಸುರಿದು ಸುಡುತ್ತಾ ಕೇಕೆ ಹಾಕಿದರು. ಈ ಹತ್ಯಾಕಾಂಡ ಪೊಲೀಸರ ಸಮ್ಮುಖದಲ್ಲಿಯೇ ನಡೆದಿದ್ದರೂ, ಅವರು ದಲಿತ ಯುವಕರ ಕುಟುಂಬಗಳಿಗೆ ತಿಳಿಸಿದ್ದು ಆಕ್ಸಿಡೆಂಟ್ ಆಗಿದೆ ಎಂದು. ಇಷ್ಟರಲ್ಲಿಯೇ ದಲಿತ ಕುಟುಂಬಗಳಿಗೆ ಅರ್ಥವಾಗಿ ಹೋಯಿತು. ತಮ್ಮ ಮಕ್ಕಳ ಹತ್ಯೆಯಲ್ಲಿ ಪೊಲೀಸರ ಪಾತ್ರವೂ ಸಹ ಇದೆ ಎಂಬುದು. ಇದನ್ನು ಕುಟುಂಬದವರು ಒಪ್ಪದಿದ್ದಾಗ ’ನಿಮ್ಮ ಮಕ್ಕಳನ್ನು ಮುಸ್ಲಿಮರೆಂದು ಭಾವಿಸಿ ಕೊಂದಿದ್ದಾರೆ’ ಎಂಬ ಸಬೂಬನ್ನೂ ನೀಡಿದರು. ಆದರೆ ದಲಿತ ಕುಟುಂಬಗಳು ಅದಕ್ಕೆ ಒಪ್ಪಲಿಲ್ಲ. ’ಮುಸ್ಲಿಮರೂ ನಮ್ಮಂತೆ ಮನುಷ್ಯರಲ್ಲವೇ’ ಎಂದು ಪೊಲೀಸರನ್ನೇ ಪ್ರಶ್ನಿಸಿದವು.

ಇದಾದ ಮಾರನೇ ದಿನ ಅಂದರೆ ಅಕ್ಟೋಬರ್ 16ರಂದು ಜಜ್ಜಾರ್‌ನ ಬೀದಿಗಳಲ್ಲಿ ವಿಶ್ವ ಹಿಂದೂ ಪರಿಷತ್ತಿನ ಹಾಗೂ ಭಜರಂಗ ದಳದ ಕಾರ್ಯಕರ್ತರು ದಿಗ್ವಿಜಯದ ಮೆರವಣಿಗೆ ನಡೆಸಿದರು. ಅವರೆಲ್ಲರೂ ಬಹಿರಂಗವಾಗಿಯೇ ಐವರು ದಲಿತ ಯುವಕರ ಕೊಲೆಯನ್ನು ಸಮರ್ಥಿಸಿಕೊಂಡರು. ದೆಹಲಿಯ ವಿಹೆಚ್‌ಪಿಯ ಪ್ರಮುಖ ಮುಖಂಡ ಆಚಾರ್ಯ ಗಿರಿರಾಜ್ ಕಿಶೋರ್ ’ನಮಗೆ ದಲಿತರ ಜೀವಕ್ಕಿಂತ ಗೋವಿನ ಜೀವ ದೊಡ್ಡದು’ ಎಂದು ಬಹಿರಂಗವಾಗಿ ಹೇಳಿದ.

ಈ ಪ್ರಕರಣದ ತನಿಖೆ ನಡೆಸಿ ವರದಿ ನೀಡಲು ಸಮಿತಿ ರಚಿಸಲಾಯಿತು. ಆದರೆ ಅದರಿಂದ ಹೆಚ್ಚೇನು ಪ್ರಯೋಜನವಾಗಲಿಲ್ಲ. ಪೊಲೀಸರು ದೊಂಬಿ ಪ್ರಕರಣ ದಾಖಲಿಸಿಕೊಂಡರು. ಕೋರ್ಟುಗಳಿಗೆ ಸಾಕ್ಷಿ ಬೇಕು. ಆರೋಪಿಗಳು ಬೇಕು. ಆದರೆ ಪೊಲೀಸರೇ ದೊಂಬಿ ಎಂದ ಮೇಲೆ ಆರೋಪಿಗಳನ್ನು ಹಿಡಿದು ಕೊಡುವವರಾರು?


ಇದನ್ನೂ ಓದಿ: ಮಾತು ಮರೆತ ಭಾರತ; ರೋಹಿತ್ ವೇಮುಲ ಫೈಲ್: ದಲಿತ ವಿದ್ಯಾರ್ಥಿಯನ್ನು ಬಲಿ ಪಡೆದ ಪ್ರಭುತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...