Homeಅಂಕಣಗಳುಮಾತು ಮರೆತ ಭಾರತ; ಜಜ್ಜಾರ್ ಫೈಲ್: ದಲಿತರಿಗಿಂತ ಗೋವಿನ ಜೀವ ದೊಡ್ಡದು

ಮಾತು ಮರೆತ ಭಾರತ; ಜಜ್ಜಾರ್ ಫೈಲ್: ದಲಿತರಿಗಿಂತ ಗೋವಿನ ಜೀವ ದೊಡ್ಡದು

- Advertisement -
- Advertisement -

ಗೋವು ತಿಂದು ಗೋವಿನಂತಾದವನು
ನಿಮ್ಮಂತೆ ಮನುಷ್ಯರನ್ನು ಕೊಂದು
ಮನುಷ್ಯನಾಗಲಾರೆ

ಇದು ಕವಿ ಎನ್. ಕೆ. ಹನುಮಂತಯ್ಯನವರ ಕವಿತೆಯೊಂದರ ಸಾಲುಗಳು. ಈ ಸಾಲುಗಳು 2002ರಲ್ಲಿ ಹರ್‍ಯಾಣದ ಜಜ್ಜಾರಿನಲ್ಲಿ ನಡೆದ ದಲಿತರ ಹತ್ಯಾಕಾಂಡಕ್ಕೆ ಪ್ರತಿರೋಧವಾಗಿ ಕಾಣುತ್ತದೆ. ಸನಾತನ ಹಿಂದೂ ಧರ್ಮದಲ್ಲಿ ಗೋವಿನ ಕಳೇಬರವನ್ನು ವಿಲೇವಾರಿ ಮಾಡುವ ಕಾಯಕವನ್ನು ದಲಿತರಿಗೆ ಒಪ್ಪಿಸಿ ಅಸ್ಪೃಶ್ಯತೆಗೊಂದು ಕಾರಣ ಹುಡುಕಿಕೊಂಡ ಹಿಂದೂ ಮೇಲ್ಜಾತಿಗಳು ಮುಸ್ಲಿಮರನ್ನು ಗುರಿ ಮಾಡಿಕೊಳ್ಳುವ ಮುಂಚೆ ದಲಿತರನ್ನು ಗುರಿಯಾಗಿಸಿಕೊಂಡಿದ್ದರು. ಅಂತಹ ಲಿಂಚಿಂಗ್ ಪ್ರಕರಣಕ್ಕೆ ಉದಾಹರಣೆ ’ಜಜ್ಜಾರ್ ಫೈಲ್’ ಆಗಿದೆ.

ಅದು 2002ನೇ ಇಸವಿಯ ಅಕ್ಟೋಬರ್ 15, ದಸರಾ ನಡೆಯುತ್ತಿದ್ದ ದಿನವದು. ಹರ್‍ಯಾಣದ ಜಜ್ಜಾರ್‌ನಲ್ಲಿಯೂ ಅಂದು ಸಂಜೆ ದಸರಾ ಮೆರವಣಿಗೆಯನ್ನು ಮುಗಿಸಿಕೊಂಡು ಮರಳುತ್ತಿದ್ದ ಒಂದಷ್ಟು ’ವಿಶ್ವ ಹಿಂದೂ ಪರಿಷತ್’ ಕಾರ್ಯಕರ್ತರು ಏಕಾಏಕಿ ಪೊಲೀಸ್ ಠಾಣೆಗೆ ಐವರು ದಲಿತರನ್ನು ಕರೆದುತಂದರು. ಆ ಐವರ ಮೇಲೆ ಅವರು ಹೊರಿಸಿದ ಆರೋಪ, ಜೀವಂತ ದನವನ್ನು ಕೊಂದು ಅದರ ಚರ್ಮವನ್ನು ರಸ್ತೆ ಪಕ್ಕದಲ್ಲಿಯೇ ಸುಲಿಯುತ್ತಿದ್ದರು ಎಂಬುದಾಗಿದೆ. ಹೀಗೆ ಠಾಣೆಗೆ ಕರೆದುಕೊಂಡು ಬಂದ ವಿಶ್ವ ಹಿಂದೂ ಪರಿಷತ್ ಸಂಘಟನೆಯ ಗುಂಪು ಆ ಐವರ ಮೇಲೆ ಗೋ ಹತ್ಯಾ ನಿಷೇಧ ಕಾಯ್ದೆಯಡಿ ದೂರು ದಾಖಲಾಗುವಂತೆ ನೋಡಿಕೊಂಡಿದೆ. ಅಲ್ಲಿಂದ ಆ ಪ್ರಕರಣವನ್ನು ಪೊಲೀಸರಿಗೆ ಒಪ್ಪಿಸಿ ಹಿಂದೂ ಸಂಘಟನೆಯವರು ಮನೆಗೆ ಮರಳಿದ್ದರೆ ಇಂದು ಈ ಲೇಖನವನ್ನು ಬರೆಯಬೇಕಾಗಿಯೇ ಬರುತ್ತಿರಲಿಲ್ಲ. ಅದಕ್ಕೆ ಬದಲಾಗಿ ಆ ಐವರು ದಲಿತರನ್ನು ಪೊಲೀಸ್ ಠಾಣೆಯಿಂದ ಹೊರಗೆ ಎಳೆದುಕೊಂಡು ಬಂದ ಗುಂಪು ಥಳಿಸಿ, ಕ್ರೂರವಾಗಿ ಹಿಂಸಿಸಿ ಕೊಂದುಹಾಕಿತು.

ಆ ಐವರು ದಲಿತ ಯುವಕರಿಗೆ ಇನ್ನೂ 20 ತುಂಬಿರಲಿಲ್ಲ. ವೀರೆಂದರ್, ದಯಾನಂದ್, ತೋಟ ರಾಮ್, ರಾಜು ಮತ್ತು ಕೈಲಾಶ್ ಇವರೇ ಆ ನತದೃಷ್ಟ ದಲಿತ ಯುವಕರು. ಈ ಐವರ ಕೆಲಸ ಕಸಾಯಿ ಖಾನೆಯ ಪ್ರಾಣಿಗಳ ಮೂಳೆಯನ್ನು ಸಂಗ್ರಹಿಸುವುದು ಹಾಗೂ ಸತ್ತ ಪ್ರಾಣಿಗಳ ಚರ್ಮ ಸುಲಿದು ವ್ಯಾಪಾರ ಮಾಡುವುದು. ಈ ಕಾಯಕವನ್ನು ಸೊಹ್ನಾ ಪಂಚಾಯತ್ ಸಮಿತಿ ಹಾಗೂ ಆದರ್ಶ ಗೋಶಾಲೆಯು ಇವರಿಗೆ ಲೈಸೆನ್ಸ್ ನೀಡಿ ನಡೆಸುತ್ತಿತ್ತು. ಈ ಐವರು 35,000 ಹಣ ನೀಡಿ ಲೈಸೆನ್ಸ್ ಪಡೆದಿದ್ದರು. ಈ ಕಾಯಕವನ್ನು ಅವರ ಕುಟುಂಬ ಕಳೆದ 35 ವರ್ಷಗಳಿಂದ ಮಾಡಿಕೊಂಡು ಬರುತ್ತಿತ್ತು.

ಎಲ್ಲರಿಗೂ ತಿಳಿದಿರುವ ಸತ್ಯವೆಂದರೆ, ಸತ್ತ ಗೋವುಗಳ ಚರ್ಮವನ್ನು ದೂರದ ಕಾಡಿನಲ್ಲಿಯೋ ಅಥವಾ ಪ್ರತ್ಯೇಕ ಕೊಠಡಿಗಳಲ್ಲಿಯೋ ಸುಲಿಯುತ್ತಾರೆ ಎಂಬುದು. ಆದರೆ ಅಕ್ಟೋಬರ್ 15ರ ಸಂಜೆ 6 ಗಂಟೆ ಸಮಯದಲ್ಲಿ ವ್ಯಾನ್ ಮೂಲಕ ಚರ್ಮವನ್ನು ಹೊತ್ತೊಯ್ಯುತ್ತಿದ್ದ ದಲಿತರನ್ನು ಅಡ್ಡಗಟ್ಟಿದ ವಿಹೆಚ್‌ಪಿಯವರಿಗೆ ದನದ ಚರ್ಮ ಇರುವುದು ಕಂಡುಬಂದಿದೆ. ಇದೇನು ಹೊಸ ಸುದ್ದಿಯಲ್ಲದಿದ್ದರೂ, ಉನ್ಮಾದದಲ್ಲಿದ್ದ ಗುಂಪಿಗೆ ಗಲಾಟೆ ಮಾಡಲು ಅಥವಾ ಗೋರಕ್ಷಕರಂತೆ ಪೋಸು ಕೊಡಲು ಅದಷ್ಟು ಸಾಕಾಗಿದೆ. ಥಳಿತದಲ್ಲಿ ಒಬ್ಬ ದಲಿತ ಅಲ್ಲಿಯೇ ಅಸುನೀಗಿದ್ದಾನೆ. ಆಗ ಈ ಪ್ರಕರಣಕ್ಕೆ ಗೋವನ್ನು ಕೊಂದು ಬಹಿರಂಗವಾಗಿ ಚರ್ಮ ಸುಲಿಯುತ್ತಿದ್ದವರನ್ನು ಥಳಿಸಲಾಗಿದೆ ಎಂಬ ಬಣ್ಣ ಹಚ್ಚಲಾಗಿದೆ. ನಂತರ ಪೊಲೀಸ್ ಠಾಣೆಗೆ ಎಳೆದೊಯ್ದಿದ್ದಾರೆ. ಪೊಲೀಸರು ಸಹ ಈ ಕೃತ್ಯಕ್ಕೆ ಸಹಕಾರ ನೀಡಿದ್ದಾರೆ ಎಂದು ಹಲವು ಪತ್ರಿಕೆಗಳು ಸಾಕ್ಷಿ ಸಮೇತ ಸಾಬೀತುಮಾಡಿವೆ. ಪೊಲೀಸರು, ಬಹುದೊಡ್ಡ ಗುಂಪು ಬಂದು ಆ ಐವರನ್ನು ಎಳೆದೊಯ್ದಿತು; ನಾವು ಏನು ಮಾಡಲಾಗಲಿಲ್ಲ ಎಂದು ಕೋರ್ಟಿನಲ್ಲಿ ಉತ್ತರಿಸಿದ್ದಾರಾದರೂ ಪೊಲೀಸ್ ಸ್ಟೇಷನ್ನಿನಲ್ಲಿ ಗಾಳಿಯಲ್ಲಿ ಗುಂಡು ಹಾರಿಸಲು ಬಂದೂಕುಗಳಿರಲಿಲ್ಲವೇ ಎಂಬ ಪ್ರಶ್ನೆಗೆ ಅವರ ಬಳಿ ಉತ್ತರವಿಲ್ಲ. ಅತ್ಯಂತ ನೋವು ತರುವ ಹಾಗೂ ಕಣ್ಣು ಕೆಂಪಗಾಗಿಸುವ ವಿಚಾರವೇನೆಂದರೆ ದಲಿತರನ್ನು ವಿಹೆಚ್‌ಪಿಯವರು ಥಳಿಸುವಾಗ ಸ್ಥಳದಲ್ಲಿ 50ಕ್ಕೂ ಹೆಚ್ಚು ಪೊಲೀಸರೊಂದಿಗೆ ಡೆಪ್ಯೂಟಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಸಹ ಅಲ್ಲಿದ್ದರು! ಅವರೆಲ್ಲರ ಸಮ್ಮುಖದಲ್ಲಿಯೇ ಐವರು ದಲಿತರನ್ನು ಥಳಿಸಿದರು. ಅದೆಷ್ಟರ ಮಟ್ಟಿಗೆ ಥಳಿಸಿದರೆಂದರೆ ನೆಲದ ಮೇಲೆ ಮೆತ್ತಿಕೊಂಡಿದ್ದ ರಕ್ತದ ಕಲೆಗಳು ಮಾಯವಾಗಲು ವಾರಗಳೇ ಬೇಕಾದವಂತೆ. ಇಬ್ಬರ ಕಣ್ಣು ಕಿತ್ತರು. ಇಬ್ಬರ ಮುಖದ ಮೇಲೆ ಪೆಟ್ರೋಲ್ ಸುರಿದು ಸುಡುತ್ತಾ ಕೇಕೆ ಹಾಕಿದರು. ಈ ಹತ್ಯಾಕಾಂಡ ಪೊಲೀಸರ ಸಮ್ಮುಖದಲ್ಲಿಯೇ ನಡೆದಿದ್ದರೂ, ಅವರು ದಲಿತ ಯುವಕರ ಕುಟುಂಬಗಳಿಗೆ ತಿಳಿಸಿದ್ದು ಆಕ್ಸಿಡೆಂಟ್ ಆಗಿದೆ ಎಂದು. ಇಷ್ಟರಲ್ಲಿಯೇ ದಲಿತ ಕುಟುಂಬಗಳಿಗೆ ಅರ್ಥವಾಗಿ ಹೋಯಿತು. ತಮ್ಮ ಮಕ್ಕಳ ಹತ್ಯೆಯಲ್ಲಿ ಪೊಲೀಸರ ಪಾತ್ರವೂ ಸಹ ಇದೆ ಎಂಬುದು. ಇದನ್ನು ಕುಟುಂಬದವರು ಒಪ್ಪದಿದ್ದಾಗ ’ನಿಮ್ಮ ಮಕ್ಕಳನ್ನು ಮುಸ್ಲಿಮರೆಂದು ಭಾವಿಸಿ ಕೊಂದಿದ್ದಾರೆ’ ಎಂಬ ಸಬೂಬನ್ನೂ ನೀಡಿದರು. ಆದರೆ ದಲಿತ ಕುಟುಂಬಗಳು ಅದಕ್ಕೆ ಒಪ್ಪಲಿಲ್ಲ. ’ಮುಸ್ಲಿಮರೂ ನಮ್ಮಂತೆ ಮನುಷ್ಯರಲ್ಲವೇ’ ಎಂದು ಪೊಲೀಸರನ್ನೇ ಪ್ರಶ್ನಿಸಿದವು.

ಇದಾದ ಮಾರನೇ ದಿನ ಅಂದರೆ ಅಕ್ಟೋಬರ್ 16ರಂದು ಜಜ್ಜಾರ್‌ನ ಬೀದಿಗಳಲ್ಲಿ ವಿಶ್ವ ಹಿಂದೂ ಪರಿಷತ್ತಿನ ಹಾಗೂ ಭಜರಂಗ ದಳದ ಕಾರ್ಯಕರ್ತರು ದಿಗ್ವಿಜಯದ ಮೆರವಣಿಗೆ ನಡೆಸಿದರು. ಅವರೆಲ್ಲರೂ ಬಹಿರಂಗವಾಗಿಯೇ ಐವರು ದಲಿತ ಯುವಕರ ಕೊಲೆಯನ್ನು ಸಮರ್ಥಿಸಿಕೊಂಡರು. ದೆಹಲಿಯ ವಿಹೆಚ್‌ಪಿಯ ಪ್ರಮುಖ ಮುಖಂಡ ಆಚಾರ್ಯ ಗಿರಿರಾಜ್ ಕಿಶೋರ್ ’ನಮಗೆ ದಲಿತರ ಜೀವಕ್ಕಿಂತ ಗೋವಿನ ಜೀವ ದೊಡ್ಡದು’ ಎಂದು ಬಹಿರಂಗವಾಗಿ ಹೇಳಿದ.

ಈ ಪ್ರಕರಣದ ತನಿಖೆ ನಡೆಸಿ ವರದಿ ನೀಡಲು ಸಮಿತಿ ರಚಿಸಲಾಯಿತು. ಆದರೆ ಅದರಿಂದ ಹೆಚ್ಚೇನು ಪ್ರಯೋಜನವಾಗಲಿಲ್ಲ. ಪೊಲೀಸರು ದೊಂಬಿ ಪ್ರಕರಣ ದಾಖಲಿಸಿಕೊಂಡರು. ಕೋರ್ಟುಗಳಿಗೆ ಸಾಕ್ಷಿ ಬೇಕು. ಆರೋಪಿಗಳು ಬೇಕು. ಆದರೆ ಪೊಲೀಸರೇ ದೊಂಬಿ ಎಂದ ಮೇಲೆ ಆರೋಪಿಗಳನ್ನು ಹಿಡಿದು ಕೊಡುವವರಾರು?


ಇದನ್ನೂ ಓದಿ: ಮಾತು ಮರೆತ ಭಾರತ; ರೋಹಿತ್ ವೇಮುಲ ಫೈಲ್: ದಲಿತ ವಿದ್ಯಾರ್ಥಿಯನ್ನು ಬಲಿ ಪಡೆದ ಪ್ರಭುತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...