Homeಅಂಕಣಗಳುಮಾತು ಮರೆತ ಭಾರತ; ಚುಂಡೂರು ಫೈಲ್ಸ್: ಅಟ್ರಾಸಿಟಿ ಕಾಯ್ದೆಯ ಹೊಸ್ತಿಲಲ್ಲಿ ದಲಿತರ ನರಮೇಧ

ಮಾತು ಮರೆತ ಭಾರತ; ಚುಂಡೂರು ಫೈಲ್ಸ್: ಅಟ್ರಾಸಿಟಿ ಕಾಯ್ದೆಯ ಹೊಸ್ತಿಲಲ್ಲಿ ದಲಿತರ ನರಮೇಧ

- Advertisement -
- Advertisement -

ಅದು 1991ನೇ ಇಸವಿಯ ಆಗಸ್ಟ್ ತಿಂಗಳು. ಭಾರತ ದೇಶವು 45ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಸಜ್ಜಾಗುತ್ತಿತ್ತು. ಸಂಭ್ರಮಾಚರಣೆಗೆ ಇನ್ನೊಂದು ವಾರವಿತ್ತಷ್ಟೆ. ಆ ಆಗಸ್ಟ್ 6ರ ಸಂಜೆ ಆಂಧ್ರಪ್ರದೇಶದ ತೆನಾಲಿ ಬಳಿಯಿರುವ ಚುಂಡೂರು ಗ್ರಾಮದಲ್ಲಿನ ದಲಿತರು ರೌರವ ನರಕ ನೋಡಿದರು. ಈ ದೇಶದಲ್ಲಿ ಇದನ್ನು ಆಶ್ಚರ್ಯವೆನ್ನಬೇಕೋ, ಅಥವಾ ಸಾಮಾನ್ಯ ಸಂಗತಿಯೆನ್ನಬೇಕೋ ಕೊಲೆಗಾರರಿಗೆ ಪೊಲೀಸರು ನೀಡಿದ ಸಹಾಯದಿಂದಲೇ ಈ ಕೊಲೆಗಳು ನಡೆದುಹೋಗಿದ್ದವು.

ಅದು ಚುಂಡೂರು. ಗುಂಟೂರು ಜಿಲ್ಲೆಯ ಗ್ರಾಮಪಂಚಾಯಿತಿ. ವೇಮೂರು ವಿಧಾನಸಭಾ ಕ್ಷೇತ್ರದಲ್ಲಿದೆ. ಈ ಚುಂಡೂರು ಬ್ರಿಟಿಷರ ಕಾಲದಲ್ಲಿ ಹಲವು ಯೋಜನೆಗಳನ್ನು ಕಂಡ ಗ್ರಾಮವಾಗಿತ್ತು. ಮದ್ರಾಸ್-ಕಲಕತ್ತಾ ರೈಲು ಮಾರ್ಗ ಈ ಗ್ರಾಮದ ಪಕ್ಕದಲ್ಲಿಯೇ ಹಾದುಹೋಗುತ್ತಿತ್ತು. ಈ ಕಾರಣವಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನೂ ಚುಂಡೂರಿನ ಜನ ಭೇಟಿಯಾಗಿದ್ದರು. ಬ್ರಿಟಿಷರು ಇಲ್ಲೊಂದು ಪೊಲೀಸ್ ಠಾಣೆಯನ್ನೂ ಸಹ ತೆರೆದಿದ್ದರು. ಇಡೀ ಗುಂಟೂರು ಜಿಲ್ಲೆಯ ಭೂಮಿಯೆಲ್ಲಾ ಕೃಷ್ಣಾ ನದಿಯಿಂದ ಹಚ್ಚಹಸಿರಾಗಿತ್ತು. ಈ ಭೂಮಿಯೆಲ್ಲ ರೆಡ್ಡಿಗಳ ಪಾಲಾಗಿತ್ತು. ಹಾಗೆಯೇ ಚುಂಡೂರಿನ ಸುಮಾರು 3000 ಎಕರೆ ಜಮೀನಿನಲ್ಲಿ ಬರೋಬ್ಬರಿ 2500 ಎಕರೆ ಜಮೀನು ರೆಡ್ಡಿ ಭೂಮಾಲೀಕರದ್ದಾಗಿತ್ತು. ಅವರ ಜಮೀನುಗಳಲ್ಲಿನ ದಲಿತರು ಕೂಲಿಗಳಾಗಿ ಕೆಲಸ ನಿರ್ವಹಿಸುತ್ತಿದ್ದರು. ಭೂಮಾಲೀಕತೆಯ ವಿಚಾರದಲ್ಲಿ ಅಲ್ಲಿನ ಪರಿಸ್ಥಿತಿ ಇಂದಿಗೂ ಹಾಗೆಯೇ ಇದೆ. ಆದರೆ ದಲಿತರು ಗ್ರಾಮ ತೊರೆದು ಪಟ್ಟಣ ಸೇರಿಕೊಂಡಿದ್ದಾರೆ.

ಇಂದಿಗೂ ಚುಂಡೂರಿನ ದಲಿತರು ಹಾಗೂ ದಲಿತೇತರ ವಸತಿಗಳು ಪ್ರತ್ಯೇಕವಾಗಿಯೇ ಉಳಿದಿವೆ. ಚುಂಡೂರಿನ ಮಧ್ಯಭಾಗದಲ್ಲಿ ಹಾದುಹೋಗಿರುವ ರಸ್ತೆಯ ಎರಡೂ ಬದಿಗಳಲ್ಲಿ ಈ ಎರಡು ಸಮುದಾಯಗಳು ಪ್ರತ್ಯೇಕವಾಗಿ ಜೀವಿಸುತ್ತಿವೆ.

ಆಗಸ್ಟ್ 6 ರಂದು ಆಗಿದ್ದೇನು?

1991 ಜುಲೈ 7ರಂದು ಚುಂಡೂರಿನ ದಲಿತ ಯುವಕರು ಸಿನೆಮಾ ನೋಡಲು ಥಿಯೇಟರಿಗೆ
ಹೋಗಿರುತ್ತಾರೆ. ಅಂದು ದಲಿತ ಯುವಕ ತನ್ನ ಕಾಲುಗಳನ್ನು ಚಾಚಿಕೊಂಡಾಗ ಅಕಸ್ಮಿಕವಾಗಿ ರೆಡ್ಡಿ ಭೂಮಾಲೀಕನ ಮಗ ಶ್ರೀನಿವಾಸರೆಡ್ಡಿಗೆ ತಗಲುತ್ತದೆ. ಇದೇ ವಿಚಾರಕ್ಕೆ ಆ ಎರಡು ಗುಂಪುಗಳ ನಡುವೆಯೂ ಗಲಾಟೆಗಳಾಗುತ್ತವೆ. ದಲಿತ ಯುವಕರು ರೆಡ್ಡಿ ಯುವತಿಯರೊಂದಿಗೆ ಅಸಭ್ಯವಾಗಿ ನಡೆದುಕೊಂಡರೆಂಬ ಸುಳ್ಳನ್ನು ಸಹ ಹರಿಯಬಿಡಲಾಗುತ್ತದೆ.

ರೆಡ್ಡಿಗಳು ಈ ರೀತಿಯ ಊಹಾಪೋಹವನ್ನು ಹರಡಿ ದಲಿತರ ಮೇಲೆ ಮುಗಿ ಬೀಳಬೇಕೆಂದುಕೊಂಡದ್ದರ ಹಿಂದೆ ದಲಿತರು ಪಡೆದ ಸಾಮಾಜಿಕ-ಆರ್ಥಿಕ-ಧಾರ್ಮಿಕ ಮೇಲ್ಚನೆಯೇ ಮುಖ್ಯ ಕಾರಣವಾಗಿದೆ. ಸುಮಾರು 500 ಕುಟುಂಬಗಳಿದ್ದ ದಲಿತರಲ್ಲಿ ಬಾಬಾಸಾಹೇಬ್ ಅಂಬೇಡ್ಕರ್‌ರವರ ಪ್ರಭಾವ 80ರ ದಶಕದಲ್ಲಿ ಹೆಚ್ಚಾಯಿತು. ಶಿಕ್ಷಣ, ಸಂಘಟನೆ ಮತ್ತು ಹೋರಾಟಗಳು ಸ್ವಾಭಿಮಾನ ತುಂಬಿದವು. ಕೇವಲ 10 ವರ್ಷಗಳ ಹಿಂದೆ ರೆಡ್ಡಿ ಭೂಮಾಲೀಕರ ಹೊಲಗಳಲ್ಲಿ ಜೀತಗಾರಿಕೆ ಮಾಡುತ್ತಿದ್ದ ದಲಿತರ ಮಕ್ಕಳು ಅಂದು ವಿದ್ಯಾವಂತರಾಗಿ ಸರ್ಕಾರಿ ಉದ್ಯೋಗ ಪಡೆದುಕೊಂಡಿದ್ದು ಕಡಿಮೆ ಅಕ್ಷರಸ್ಥರಾಗಿದ್ದ ರೆಡ್ಡಿ ಮತ್ತು ಕಾಪುಗಳಲ್ಲಿ ಅಸೂಯೆ ಮೂಡಿಸಿತು. ದಲಿತರು ಕ್ರೈಸ್ತ ಧರ್ಮ ಸ್ವೀಕರಿಸುತ್ತಿದ್ದದ್ದನ್ನು ಸಹಿಸದಾದರು. ಆ ಕಾಲಕ್ಕೆ ರೈಲ್ವೇ ಇಲಾಖೆಯಲ್ಲಿ ಚುಂಡೂರಿನ 300ಕ್ಕೂ ಹೆಚ್ಚು ಯುವಕರು ಕೆಲಸಕ್ಕೆ ಸೇರಿಕೊಂಡಿದ್ದರು. ಬ್ಯಾಂಕು ಹಾಗೂ ಕಂದಾಯ ಇಲಾಖೆಯಲ್ಲಿಯೂ ಕೆಲಸ ಗಿಟ್ಟಿಸಿಕೊಂಡರು. ಇದರಿಂದಾಗಿ ದಲಿತ ಯುವಕರು ಪಾರಂಪರಿಕ ಚಾಕರಿಗಳನ್ನು ಕೈಬಿಟ್ಟರು. ತಮ್ಮ ತಂದೆತಾಯಂದಿರು ಬಳಲಿದ್ದ ಜೀತಗಾರಿಕೆಯಿಂದ ದೂರವೇ ಉಳಿದರು. ದಲಿತರಲ್ಲಿ ಈ ಸ್ವಾಭಿಮಾನವನ್ನು ಬಗ್ಗುಬಡಿಯಲು ಹಾಗೂ ಬುದ್ಧಿ ಕಲಿಸಲು ಹೊಂಚುಹಾಕುತ್ತಿದ್ದ ಮೇಲ್ಜಾತಿ ಭೂಮಾಲೀಕರಿಗೆ ಸಿನೆಮಾ
ಥಿಯೇಟರಿನ ಪ್ರಸಂಗ ಒಂದು ಕಾರಣವಾಗಿತ್ತು.

ಈ ಘಟನೆಯ ನಂತರ ಪದೇಪದೇ ದಲಿತರ ಮೇಲೆ ಮೇಲ್ಜಾತಿ ರೆಡ್ಡಿ ಭೂಮಾಲೀಕರು ಜಗಳಕ್ಕೆ ಇಳಿದರು. ಇಡೀ ಸಮುದಾಯವನ್ನೇ ಬಹಿಷ್ಕರಿಸಿದರು. ಆದರೆ ಅಷ್ಟಕ್ಕೂ ತಲೆಬಾಗದ ದಲಿತರಿಗೆ ಮೇಲ್ಜಾತಿ ಪರಂಪರೆಯಲ್ಲಿಯೇ ಹಾಸು ಹೊಕ್ಕಾಗಿರುವ ’ಬುದ್ಧಿ ಕಲಿಸೋಣ’ ಎಂಬ ಅಹಂಕಾರ ಬಹಿರಂಗವಾಯಿತು. ಆಗಸ್ಟ್ 6ರಂದು ಸಂಜೆ ದಲಿತರ ಕೇರಿಗೆ ಬಂದ ಪೊಲೀಸರು, ’ರೆಡ್ಡಿ’ ಭೂಮಾಲೀಕರು ’ನಿಮ್ಮ ಮೇಲೆ ಮುಗಿಬೀಳುವವರಿದ್ದಾರೆ, ಕೂಡಲೇ ಊರು ಬಿಟ್ಟು ಹೊರಡಿ’ ಎಂದು ಹೇಳಿದರು. ಆದರೆ ದಲಿತ ಯುವಕರು ಬೆದರಿಕೆಗೆ ಜಗ್ಗಲಿಲ್ಲ. ಪೊಲೀಸರು ಸುಮ್ಮನಿರಲಿಲ್ಲ. ಮನೆಮನೆಗೆ ನುಗ್ಗಿ ದಲಿತರನ್ನು ಲಾಟಿಯಿಂದ ಥಳಿಸುತ್ತಾ ಹೊರ ಓಡಿಸಿದರು. ಇದು ಯಾಕೆ ಹೀಗೆ ಎಂದು ಅರ್ಥವಾಗುವಷ್ಟರಲ್ಲಿ ದಲಿತ ಯುವಕರನ್ನು ರೆಡ್ಡಿ ಭೂಮಾಲೀಕರು ಶಸ್ತ್ರಾಸ್ತ್ರಗಳನ್ನು ಹಿಡಿದು ಸುತ್ತುವರಿದರು. ಸಿಕ್ಕಸಿಕ್ಕ ದಲಿತ ಯುವಕರನ್ನು ಕೊಚ್ಚುತ್ತಾ ಹೋದರು. ಕೆಲವರ ದೇಹವನ್ನು ಅಕ್ಷರಶಃ ಸೀಳಿ ದಿಕ್ಕುದಿಕ್ಕುಗಳಿಗೆ ಎಸೆದರೆಂದು ಕಣ್ಣಾರೆ ಕಂಡ ದಯಾರಿ ಧನರಾಜ್ ಹೇಳುತ್ತಾರೆ. ತನ್ನ ಕುಟುಂಬದ ಮೂವರನ್ನು ಕಳೆದುಕೊಂಡ ಜಲಾಡಿ ಮೋಸಸ್ ಕಣ್ಣೀರಾಕುತ್ತಾರೆ. ಕೃಷ್ಣ ನದಿಯ ಕಾಲುವೆಗಳಲ್ಲಿ ಅಂದು ತುಂಡುತುಂಡಾಗಿ ಎಸೆಯಲ್ಪಟ್ಟಿದ್ದ ದಲಿತ ಯುವಕರ ಹೆಣಗಳು ಮೂರು ದಿನದ ನಂತರ ಗುರುತು ಪತ್ತೆಹಚ್ಚಲಾಗದ ಸ್ಥಿತಿಯಲ್ಲಿ ದೊರಕುತ್ತವೆ. ಈ ನರಮೇಧದ ನಡುವೆ ಕೊಲೆಗಾರರ ಕೈಗೆ ಸಿಕ್ಕಿದರೂ ಸಾವಿನಿಂದ ತಪ್ಪಿಸಿಕೊಂಡ ಧನರಾಜ್ ಕತೆ ಈ ಜಾತಿವ್ಯಾಧಿಗಳ ಮನಸ್ಥಿತಿಯನ್ನು ಹಾಗೂ ಅವರ ಕ್ರೌರ್ಯವನ್ನು ಜಗಜ್ಜಾಹೀರುಗೊಳಿಸುತ್ತದೆ. ಧನರಾಜನನ್ನು ಹಿಡಿದ ರೆಡ್ಡಿಗಳು ಸರಳಿನಿಂದ ಹೊಡೆದು ಗಾಯಗೊಳಿಸುತ್ತಾರೆ. ಆದರೆ ಸಾಯಿಸುವುದಿಲ್ಲ. ಕೇವಲ ಕಾಲು ತಿರುಚಿ ಮುರಿದು ಅವನನ್ನು ಓಡದಂತೆ ಮಾಡುತ್ತಾರೆ. ಇದಕ್ಕೆ ಕಾರಣ ಅದೇ ಊರಿನ ಮಲ್ಲಿಕಾರ್ಜುನ ರೆಡ್ಡಿಗೆ ಒಂದು ಆಸೆ ಇರುತ್ತದೆ. ಅದೇನೆಂದರೆ ಜೀವಮಾನದಲ್ಲಿ ಒಬ್ಬ ದಲಿತನನ್ನಾದರೂ ಕೊಲೆ ಮಾಡಬೇಕೆಂಬುದು. ಆದರೆ ಅವನು ಕಾಲಿಲ್ಲದವನಾಗಿರುತ್ತಾನೆ. ಹಾಗಾಗಿ ಅವನ ಆಸೆ ತೀರಿಸಲು ಧನರಾಜನ ಕಾಲು ಮುರಿದು ಮಲ್ಲಿಕಾರ್ಜುನ ರೆಡ್ಡಿಯನ್ನು ಕರೆದುಕೊಂಡು ಬರಲು ಗುಂಪು ಹೋಗಿರುತ್ತದೆ. ಆದರೆ ಅದೃಷ್ಟವಶಾತ್ ಕೆಲವು ಮಹಿಳೆಯರು ಶ್ರಮವಹಿಸಿ ಧನರಾಜ್‌ನನ್ನು ಉಳಿಸಿಕೊಳ್ಳುತ್ತಾರೆ.

ಹೀಗೆ ಅಂದು ರೆಡ್ಡಿಗಳು ಹಾಗೂ ಕಾಪುಗಳು ನಡೆಸಿದ ದಲಿತರ ನರಮೇಧದಲ್ಲಿ ಎಂಟು ಜನ ದಲಿತರನ್ನು ಕೊಲೆ ಮಾಡಲಾಗುತ್ತದೆ. ಅದೆಷ್ಟು ಕ್ರೂರವಾಗಿ ಕೊಂದಿರುತ್ತಾರೆಂದರೆ ಆ ದೇಹಗಳನ್ನು ಶವಪರೀಕ್ಷೆ ಮಾಡಿದ ವೈದ್ಯ ಮನನೊಂದು ಆತ್ಮಹತ್ಯೆ ಮಾಡಿಕೊಂಡನಂತೆ! ಒಂದು ಶವವೂ ಸಹ ಪೂರ್ಣಪ್ರಮಾಣದಲ್ಲಿ ದೊರೆತಿರಲಿಲ್ಲ!

ಸೆಷನ್ ಕೋರ್ಟ್ 21 ರೆಡ್ಡಿಗಳಿಗೆ ಜೀವಾವಧಿ ಶಿಕ್ಷೆಯನ್ನೂ 35 ಮಂದಿಗೆ ಒಂದು ವರ್ಷ ಜೈಲು ಶಿಕ್ಷೆಯನ್ನೂ ವಿಧಿಸಿತ್ತು. ಆದರೆ 2014ರಲ್ಲಿ ಆಂಧ್ರಪ್ರದೇಶದ ಹೈಕೋರ್ಟ್ ಈ ಮೇಲಿನ ತೀರ್ಪನ್ನು ಅನೂರ್ಜಿತಗೊಳಿಸಿ ಎಲ್ಲರನ್ನೂ ಬಿಡುಗಡೆಗೊಳಿಸಿತು. ನಂತರ ಈ ಪ್ರಕರಣ ಸುಪ್ರೀಂ ಕೋರ್ಟ್‌ಗೆ ತೆರಳಿತಾದರೂ, ಅಲ್ಲಿಯೂ ದಲಿತರಿಗೆ ನ್ಯಾಯ ಸಿಗದೇ ಏದುಸಿರುಬಿಟ್ಟಿತು.


ಇದನ್ನೂ ಓದಿ: ಮಾತು ಮರೆತ ಭಾರತ; ಕಾರಂಚೇಡು ಫೈಲ್ : ದಲಿತರ ಮೇಲೆ ಶೂದ್ರರ ಅಟ್ಟಹಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...