Homeಅಂಕಣಗಳುಮಾತು ಮರೆತ ಭಾರತ-32; ಲಾಕ್‌ಡೌನ್ ಫೈಲ್ಸ್: ಪ್ರೀತಿಯನ್ನು ಮಣಿಸಿದ ಜಾತಿ

ಮಾತು ಮರೆತ ಭಾರತ-32; ಲಾಕ್‌ಡೌನ್ ಫೈಲ್ಸ್: ಪ್ರೀತಿಯನ್ನು ಮಣಿಸಿದ ಜಾತಿ

- Advertisement -
- Advertisement -

(ಭಾರತದ Dalit Human Rights Defenders Network ಎಂಬ ಸಂಸ್ಥೆಯು No lockdown on Caste Atrocities’ ಎಂಬ ಪುಸ್ತಕದಲ್ಲಿ ನೈಜ ಘಟನೆಗಳನ್ನು ವರದಿ ಮಾಡಿದೆ. ಇದರಲ್ಲಿ ’ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಭಾರತದ ಏಳು ರಾಜ್ಯಗಳಲ್ಲಿ ದಲಿತರ ಮೇಲೆ ನಡೆದ 60 ದೌರ್ಜನ್ಯಗಳನ್ನು ಪಟ್ಟಿ ಮಾಡಿದೆ. ಒಂದೊಂದೂ ಭೀಕರ ಮತ್ತು ಹಿಂದೂ ಮೇಲ್ಜಾತಿಗಳು ದಲಿತರ ಮೇಲೆ ನಡೆಸಿರುವ ಕ್ರೂರ ಕೃತ್ಯಗಳನ್ನು ಬಯಲುಗೊಳಿಸುತ್ತದೆ. ಆ ದಲಿತರ ಮೇಲಿನ ದೌರ್ಜನ್ಯಗಳ ಘಟನೆಗಳಲ್ಲಿ ಇದೂ ಒಂದು. ಇದನ್ನು ವರದಿ ಮಾಡುವ ಉದ್ದೇಶ ಖಂಡಿತವಾಗಿಯೂ ಹಿಂದೂ ಮೇಲ್ಜಾತಿಗಳ ಮನ ಪರಿವರ್ತಿಸುವುದಲ್ಲ. ಬದಲಾಗಿ ’ಹಿಂದೂ ನಾವೆಲ್ಲ ಒಂದೂ’ ಎನ್ನುತ್ತಿರುವ ದಲಿತರ ಅಂಧಕಾರವನ್ನು ಕಳಚುವುದಾಗಿದೆ.)

ಅದು 2020ರ ಅಕ್ಟೋಬರ್ 2. ಗಾಂಧಿ ಜಯಂತಿಯ ದಿನ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಆಸ್ಪತ್ರೆಯಲ್ಲಿ ಸೌಮ್ಯ ಎಂಬ ದಲಿತ ಹುಡುಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಳು.

ಸೌಮ್ಯ 10 ವರ್ಷದವಳಿದ್ದಾಗಲೇ ತಾಯಿ ಪಳನಿ ಅಮ್ಮಾಳನ್ನು ಕಳೆದುಕೊಂಡಿದ್ದಳು. ತಂದೆ ಇದ್ದಕ್ಕಿದ್ದಂತೆ ಕಾಣೆಯಾಗಿದ್ದರು. ಆಗ ಅವಳ ತಾತ ಮತ್ತು ಇಬ್ಬರು ಅಜ್ಜಿಯಂದಿರು ಆಕೆಯನ್ನು ಸಾಕಿ ಸಲಹಿದ್ದರು. ಕರಿಮಂಗಲಮ್ ಎಂಬ ಹಳ್ಳಿಯಲ್ಲಿ ವಾಸವಿದ್ದ ಈ ಕುಟುಂಬವು ದಲಿತ ಪರಯ್ಯಾ ಜಾತಿಗೆ ಸೇರಿತ್ತು. ಈ ಧರ್ಮಪುರಿ ಜಿಲ್ಲೆಯು ಇಂದಿಗೂ ಬಲಾಢ್ಯ ಮೇಲ್ಜಾತಿ ವಣ್ಣಿಯಾರ್ ಸಮುದಾಯದ ಹಿಡಿತದಲ್ಲಿದೆ.

ಕರಿಮಂಗಲಮ್ ಗ್ರಾಮದ ಬಹುಸಂಖ್ಯಾತರು ದಲಿತರೇ ಆಗಿದ್ದಾರೆ. ಇಲ್ಲಿನ ದಲಿತರ ಬಳಿ ಎಕರೆಗಟ್ಟಲೆ ಭೂಮಿ ಇದೆ. ಆದರೂ ಸೌಮ್ಯಳ ತಾತನ ಕುಟುಂಬ ಇಂದಿಗೂ ಕೂಲಿಯನ್ನೇ ನಂಬಿಕೊಂಡು ಜೀವಿಸುತ್ತಿದೆ. ಊರಿನ ಕಸ ಗುಡಿಸುವ ಹಾಗೂ ಮಲ ಬಾಚುವ ಕೆಲಸ ಈ ಕುಟುಂಬದ್ದಾಗಿದೆ.

ಇಂತಹ ಪರಿಸ್ಥಿತಿಯಲ್ಲಿಯೂ ಸೌಮ್ಯ 10ನೇ ತರಗತಿಯವರೆಗೆ ಓದಿದಳು. ಓದುತ್ತಲೇ ಸಾಧ್ಯವಾಗುವ ಕೂಲಿ ಕೆಲಸಕ್ಕೂ ಹೋಗಿ ಕುಟುಂಬಕ್ಕೆ ಸಹಾಯ ಮಾಡುತ್ತಿದ್ದಳು. ಆದರೆ ದೂರದೂರಿಗೆ ಹೋಗಿ ಓದಲಾಗದ ಶಕ್ತಿ ಇಲ್ಲದ ಕಾರಣ ಓದನ್ನು ಅರ್ಧಕ್ಕೆ ನಿಲ್ಲಿಸಿದಳು. ಇಲ್ಲಿನ ದಲಿತರು ಭೂಮಿ ಹೊಂದಿದ್ದರೂ ಬಹುತೇಕ ಎಲ್ಲಾ ತೀರ್ಮಾನವೂ ವಣ್ಣಿಯಾರರದ್ದೇ ಆಗಿತ್ತು. 2012ರಲ್ಲಿ ಅಂತರ್ಜಾತಿ ವಿವಾಹವಾದ ಕಾರಣಕ್ಕೆ 300 ದಲಿತರ ಮನೆಗಳನ್ನು ಸುಟ್ಟು ಕರಕಲಾಗಿಸಿದ್ದು ಇದೇ ಜಿಲ್ಲೆಯಲ್ಲಿಯೇ. ಈ ಗಲಭೆಯನ್ನು ಸಾವಿರ ಪೊಲೀಸರಿಗೂ ನಿಯಂತ್ರಿಸಲು ಆಗಿರಲಿಲ್ಲ.

ಹೀಗಿದ್ದ ಧರ್ಮಪುರಿ ಜಿಲ್ಲೆಯ ಕರಿಮಂಗಲಮ್ ಗ್ರಾಮದಲ್ಲಿ 19 ವರ್ಷದ ದಲಿತೆ ಸೌಮ್ಯಳಿಗೆ 17 ವರ್ಷದ ವಣ್ಣಿಯಾರ್ ಯುವಕ ಮನಿಷ್ ಕುಮಾರ್‌ನೊಂದಿಗೆ ಪ್ರೀತಿಯುಂಟಾಗುತ್ತದೆ. ಸನಾತನಿ ಧರ್ಮದ ಕಾನೂನಿನ ಪ್ರಕಾರ ಇದು ಸಾಧುವಲ್ಲದ ಪ್ರೇಮವಾಗಿದ್ದರೂ ಹೃದಯಕ್ಕೆ ಯಾವ ಜಾತಿ ಇದೆ ಹೇಳಿ? ದೇಶದ ಕಾನೂನಿನ ಪ್ರಕಾರವೂ ವಯಸ್ಸಿನ ತೊಡಕ್ಕಿತ್ತು! ಆದರೂ, ಇಬ್ಬರೂ ಒಬ್ಬರಿಗೊಬ್ಬರು ಬಹಳ ಹಚ್ಚಿಕೊಂಡುಬಿಟ್ಟಿದ್ದರು. ಇದೆಲ್ಲವನ್ನೂ ತಿಳಿಯದ ಜೋಡಿ ಊರುಬಿಟ್ಟು ದೂರ ತೆರಳಿ ಮದುವೆ ಆಗಿಬಿಟ್ಟರು. ಮನಿಷ್ ಕುಟುಂಬದ ಕಣ್ಣಿಗೆ ಬೀಳದಂತೆ ಅಲ್ಲಿಯೇ ಸುತ್ತಾಮುತ್ತಾ ಹಲವು ದಿನಗಳ ಕಾಲ ಜೀವನ ಸಾಗಿಸಿದರು. ಆದರೆ ವಣ್ಣಿಯಾರ್ ಕುಲದಲ್ಲಿ ಅಷ್ಟು ಸುಲಭಕ್ಕೆ ಬಿಡುವ ಮಾತೇ ಇಲ್ಲವಲ್ಲ! ತನ್ನ ಜಾತಿ ನೆಟ್‌ವರ್ಕ್ ಬಳಸಿಕೊಂಡು ಇಬ್ಬರನ್ನೂ ಹುಡುಕಲು ಹಚ್ಚಿತು. 90 ದಿನಗಳ ನಂತರ ಮನಿಷ್ ಮತ್ತು ಸೌಮ್ಯರನ್ನು ವಣ್ಣಿಯಾರ್ ಯುವಕರು ಪತ್ತೆ ಹಚ್ಚಿಬಿಟ್ಟರು. ಅದೂ ಪೊಲೀಸರ ನೆರವಿನಿಂದ ಮತ್ತು ಒಂದು ದೂರನ್ನೂ ದಾಖಲಿಸದಂತೆ!

ಬಲಾಢ್ಯ ವಣ್ಣಿಯಾರ್ ಕುಟುಂಬ ಸೌಮ್ಯಳಿಂದ ಮನಿಷನನ್ನು ದೂರ ಮಾಡುವುದರಲ್ಲಿ ಯಶಸ್ವಿಯಾಗುತ್ತದೆ. ಬಹುಶಃ ಮನಿಷ್ ಅಪ್ಪನ ಒಂದು ನೋಟಕ್ಕೆ ಸೌಮ್ಯ ತಣ್ಣಗಾಗಿರಬಹುದು. ಸೌಮ್ಯ ವಿಧಿ ಇಲ್ಲದೆ ತನ್ನ ತಾತನ ಬಳಿಗೆ ಮರಳುತ್ತಾಳೆ. ಆದರೆ ಪ್ರೀತಿ ಎಂಬುದು ಮಾತ್ರ ಮರಳುವುದಿಲ್ಲವಲ್ಲ! ಕೆಲವು ದಿನಗಳ ನಂತರ ಗಟ್ಟಿ ಮನಸ್ಸು ಮಾಡಿಕೊಂಡ ಸೌಮ್ಯ ಮನಿಷ್ ಮನೆಗೆ ಹೊರಟೇಬಿಡುತ್ತಾಳೆ. ’ನನ್ನ ಗಂಡ ನನಗೆ ಬೇಕು’ ಎಂದು ಅಂಗಲಾಚುತ್ತಾಳೆ. ’ಅವನನ್ನು ಒಮ್ಮೆ ಮಾತನಾಡಿಸಲು ಅವಕಾಶ ಕೊಡಿ’ ಎಂದು ಬೇಡಿಕೊಳ್ಳುತ್ತಾಳೆ. ಪಾಪ, ಸೌಮ್ಯಳ ಪ್ರೀತಿಗೆ ಪ್ರಪಂಚದ ಪರಿವೆಯೇ ಇರಲಿಲ್ಲ. ಮನೆಯೊಳಗಿಂದ ಹೊರಗಡೆ ಬಂದ ಮನಿಷ್‌ನನ್ನು ನೋಡಿ ಹರ್ಷಗೊಂಡ ಸೌಮ್ಯ ಇನ್ನೆಲ್ಲ ಕಷ್ಟವೂ ಕೊನೆಯಾಯಿತು ಎಂದುಕೊಳ್ಳುವಷ್ಟರಲ್ಲಿ, ಸ್ವತಃ ಮನಿಷ್ ’ನಿನಗೂ ನನಗೂ ಸಂಬಂಧವಿಲ್ಲ. ನಿನ್ನೊಂದಿಗೆ ಬಾಳಲು ನನಗಿಷ್ಟವಿಲ್ಲ’ ಎಂದುಬಿಡುತ್ತಾನೆ. ಅಲ್ಲಿಗೆ ಸೌಮ್ಯಳ ಕ್ಷಣದ ನಗು ಮಾಯವಾಗುತ್ತದೆ. ಹೌದು, ಅಲ್ಲಾಗಿದ್ದು ಅದೇ. ಕುಟುಂಬದ ಒತ್ತಡಕ್ಕೆ ಮಣಿದು ಮನಿಷ್ ಆ ಮಾತುಗಳನ್ನಾಡುತ್ತಿರಬಹುದು ಎಂದು ಭಾವಿಸಿದ ಸೌಮ್ಯ ಪೊಲೀಸ್ ಠಾಣೆಗೆ ಓಡಿಹೋಗುತ್ತಾಳೆ. ’ವಿಡುದಲೈ ಚಿರುತೈಗಳ್ ಕಚ್ಚಿ’ ರಾಜಕೀಯ ಪಕ್ಷ ಅವಳ ಬೆನ್ನಿಗೆ ನಿಲ್ಲುತ್ತದೆ. ಪೊಲೀಸರ ಬಳಿ ದೂರು ನೀಡಿದಾಗ, ಅವರು ’ಪಂಚಾಯ್ತಿ ಕಟ್ಟೆಯಲ್ಲಿ ತೀರ್ಮಾನ ಮಾಡ್ಕಳಮ್ಮ’ ಎನ್ನುತ್ತಾರೆ! ಆದರೆ ಅಪ್ರಾಪ್ತ ವಯಸ್ಕರಿಗೆ ಸಂಬಂಧಿಸಿದಂತೆ ಕಾನೂನು ಬೇರೆಯೇ ಹೇಳುತ್ತಿದೆ. ಎಪೆಕ್ಸ್ ಕೋರ್ಟ್ ಈ ವಿಷಯದಲ್ಲಿ ಸ್ಪಷ್ಟವಾಗಿ ತೀರ್ಪಿತ್ತಿದೆ. ಇಬ್ಬರನ್ನೂ ಪೊಲೀಸ್ ಕಸ್ಟಡಿಗೆ ತೆಗದುಕೊಂಡು ರಕ್ಷಣೆ ನೀಡಿ ರಿಮ್ಯಾಂಡ್ ರೂಮಿನಲ್ಲಿರಿಸಬೇಕೆಂಬ ಸ್ಪಷ್ಟ ಆದೇಶವಿದೆ. ಆದರೆ ಪೊಲೀಸರು ಈ ಜಾತಿವಾದಿ ನೆಲದವರಲ್ಲವೇ? ಸೌಮ್ಯಳ ಮಾತಿಗೆ ಬೆಲೆ ಕೊಡುವುದೇ ಇಲ್ಲ.

ಇದನ್ನೂ ಓದಿ: ಮಾತು ಮರೆತ ಭಾರತ-31; ಲಾಕ್‌ಡೌನ್ ಫೈಲ್ಸ್ : ಅಂಬೇಡ್ಕರ್ ಟಿ-ಶರ್ಟ್ ಜಾತಿ ಹೇಳಿತು

ಪಂಚಾಯ್ತಿ ಕಟ್ಟೆಗೆ ಸೌಮ್ಯಳ ಪ್ರೇಮ ಬಂದು ನಿಲ್ಲುತ್ತದೆ. ಫಲಿತಾಂಶ ಯಥಾವತ್ ಆಗುತ್ತದೆ. ಬಡವರ ಮಕ್ಕಳನ್ನು ದುಡ್ಡುಕೊಟ್ಟು ಸರಿ ಮಾಡಿಬಿಡುವ ಕುತಂತ್ರ ನಡೆಯುತ್ತದೆ. ಸೌಮ್ಯಳಿಗೆ ಇಂತಿಷ್ಟು ಹಣ ನೀಡಿಬಿಡುತ್ತೇವೆ ನಮ್ಮ ಮಗನ ತಂಟೆಗೆ ಬರಬಾರದು ಎಂಬ ತೀರ್ಮಾನವಾಗುತ್ತದೆ. ಇದರ ಪರವಾಗಿ ಮನಿಷ್ ಸಹ ನಿಂತುಬಿಡುತ್ತಾನೆ. ಹೆಣ್ಣುಜೀವ, ಅದು ಹೇಗೆ ತಡೆಯಬಲ್ಲದು? ಆಕಾಶವೇ ತಲೆ ಮೇಲೆ ಬಿದ್ದಂತಾಗುತ್ತದೆ. ಹಿಂದೆಮುಂದೆ ಯೋಚಿಸದೇ ಸೌಮ್ಯ ವಿಷ ಸೇವಿಸುತ್ತಾಳೆ. ಸತತವಾಗಿ 22 ದಿನಗಳ ಹೋರಾಟದಲ್ಲಿ ಸಾವು ಗೆಲ್ಲುತ್ತದೆ. ಪ್ರಾಮಾಣಿಕ ಪ್ರೀತಿ ಸೋಲುತ್ತದೆ.

ಇಂದು ಮನಿಷ್ ಕುಮಾರ್ ಮತ್ತು ಆತನ ಕುಟುಂಬದ ಮೇಲೆ ಕೇಸು ದಾಖಲಾಗಿದೆ. ನ್ಯಾಯಾಲಯ ಏನೆಂದು ತೀರ್ಪಿತ್ತಬಹುದೋ ಊಹಿಸಬಹುದಾಗಿದೆ. ಸೌಮ್ಯ ಮಾತ್ರ ತನ್ನ ಪ್ರಾಮಾಣಿಕ ಪ್ರೀತಿಯನ್ನು ಹೊತ್ತು ನೆಲದೊಳಗೆ ಮಲಗಿದ್ದಾಳೆ. ಅವಳಿಗೆ ಮನಿಷ್ ಮತ್ತೆ ಹಿಂದಿರುಗುವ ಕನಸಾದರೂ ಬೀಳಲಿ. ನಮಗೆ ಮನಿಷ್‌ನನ್ನು ಸೃಷ್ಟಿಸಿದ ಸಮಾಜದ ಬಗ್ಗೆ ಕಿಂಚಿತ್ತಾದರೂ ಕಣ್ಣು ಕೆಂಪಗಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...