Homeಅಂಕಣಗಳುಮಾತು ಮರೆತ ಭಾರತ-32; ಲಾಕ್‌ಡೌನ್ ಫೈಲ್ಸ್: ಪ್ರೀತಿಯನ್ನು ಮಣಿಸಿದ ಜಾತಿ

ಮಾತು ಮರೆತ ಭಾರತ-32; ಲಾಕ್‌ಡೌನ್ ಫೈಲ್ಸ್: ಪ್ರೀತಿಯನ್ನು ಮಣಿಸಿದ ಜಾತಿ

- Advertisement -
- Advertisement -

(ಭಾರತದ Dalit Human Rights Defenders Network ಎಂಬ ಸಂಸ್ಥೆಯು No lockdown on Caste Atrocities’ ಎಂಬ ಪುಸ್ತಕದಲ್ಲಿ ನೈಜ ಘಟನೆಗಳನ್ನು ವರದಿ ಮಾಡಿದೆ. ಇದರಲ್ಲಿ ’ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಭಾರತದ ಏಳು ರಾಜ್ಯಗಳಲ್ಲಿ ದಲಿತರ ಮೇಲೆ ನಡೆದ 60 ದೌರ್ಜನ್ಯಗಳನ್ನು ಪಟ್ಟಿ ಮಾಡಿದೆ. ಒಂದೊಂದೂ ಭೀಕರ ಮತ್ತು ಹಿಂದೂ ಮೇಲ್ಜಾತಿಗಳು ದಲಿತರ ಮೇಲೆ ನಡೆಸಿರುವ ಕ್ರೂರ ಕೃತ್ಯಗಳನ್ನು ಬಯಲುಗೊಳಿಸುತ್ತದೆ. ಆ ದಲಿತರ ಮೇಲಿನ ದೌರ್ಜನ್ಯಗಳ ಘಟನೆಗಳಲ್ಲಿ ಇದೂ ಒಂದು. ಇದನ್ನು ವರದಿ ಮಾಡುವ ಉದ್ದೇಶ ಖಂಡಿತವಾಗಿಯೂ ಹಿಂದೂ ಮೇಲ್ಜಾತಿಗಳ ಮನ ಪರಿವರ್ತಿಸುವುದಲ್ಲ. ಬದಲಾಗಿ ’ಹಿಂದೂ ನಾವೆಲ್ಲ ಒಂದೂ’ ಎನ್ನುತ್ತಿರುವ ದಲಿತರ ಅಂಧಕಾರವನ್ನು ಕಳಚುವುದಾಗಿದೆ.)

ಅದು 2020ರ ಅಕ್ಟೋಬರ್ 2. ಗಾಂಧಿ ಜಯಂತಿಯ ದಿನ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಆಸ್ಪತ್ರೆಯಲ್ಲಿ ಸೌಮ್ಯ ಎಂಬ ದಲಿತ ಹುಡುಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಳು.

ಸೌಮ್ಯ 10 ವರ್ಷದವಳಿದ್ದಾಗಲೇ ತಾಯಿ ಪಳನಿ ಅಮ್ಮಾಳನ್ನು ಕಳೆದುಕೊಂಡಿದ್ದಳು. ತಂದೆ ಇದ್ದಕ್ಕಿದ್ದಂತೆ ಕಾಣೆಯಾಗಿದ್ದರು. ಆಗ ಅವಳ ತಾತ ಮತ್ತು ಇಬ್ಬರು ಅಜ್ಜಿಯಂದಿರು ಆಕೆಯನ್ನು ಸಾಕಿ ಸಲಹಿದ್ದರು. ಕರಿಮಂಗಲಮ್ ಎಂಬ ಹಳ್ಳಿಯಲ್ಲಿ ವಾಸವಿದ್ದ ಈ ಕುಟುಂಬವು ದಲಿತ ಪರಯ್ಯಾ ಜಾತಿಗೆ ಸೇರಿತ್ತು. ಈ ಧರ್ಮಪುರಿ ಜಿಲ್ಲೆಯು ಇಂದಿಗೂ ಬಲಾಢ್ಯ ಮೇಲ್ಜಾತಿ ವಣ್ಣಿಯಾರ್ ಸಮುದಾಯದ ಹಿಡಿತದಲ್ಲಿದೆ.

ಕರಿಮಂಗಲಮ್ ಗ್ರಾಮದ ಬಹುಸಂಖ್ಯಾತರು ದಲಿತರೇ ಆಗಿದ್ದಾರೆ. ಇಲ್ಲಿನ ದಲಿತರ ಬಳಿ ಎಕರೆಗಟ್ಟಲೆ ಭೂಮಿ ಇದೆ. ಆದರೂ ಸೌಮ್ಯಳ ತಾತನ ಕುಟುಂಬ ಇಂದಿಗೂ ಕೂಲಿಯನ್ನೇ ನಂಬಿಕೊಂಡು ಜೀವಿಸುತ್ತಿದೆ. ಊರಿನ ಕಸ ಗುಡಿಸುವ ಹಾಗೂ ಮಲ ಬಾಚುವ ಕೆಲಸ ಈ ಕುಟುಂಬದ್ದಾಗಿದೆ.

ಇಂತಹ ಪರಿಸ್ಥಿತಿಯಲ್ಲಿಯೂ ಸೌಮ್ಯ 10ನೇ ತರಗತಿಯವರೆಗೆ ಓದಿದಳು. ಓದುತ್ತಲೇ ಸಾಧ್ಯವಾಗುವ ಕೂಲಿ ಕೆಲಸಕ್ಕೂ ಹೋಗಿ ಕುಟುಂಬಕ್ಕೆ ಸಹಾಯ ಮಾಡುತ್ತಿದ್ದಳು. ಆದರೆ ದೂರದೂರಿಗೆ ಹೋಗಿ ಓದಲಾಗದ ಶಕ್ತಿ ಇಲ್ಲದ ಕಾರಣ ಓದನ್ನು ಅರ್ಧಕ್ಕೆ ನಿಲ್ಲಿಸಿದಳು. ಇಲ್ಲಿನ ದಲಿತರು ಭೂಮಿ ಹೊಂದಿದ್ದರೂ ಬಹುತೇಕ ಎಲ್ಲಾ ತೀರ್ಮಾನವೂ ವಣ್ಣಿಯಾರರದ್ದೇ ಆಗಿತ್ತು. 2012ರಲ್ಲಿ ಅಂತರ್ಜಾತಿ ವಿವಾಹವಾದ ಕಾರಣಕ್ಕೆ 300 ದಲಿತರ ಮನೆಗಳನ್ನು ಸುಟ್ಟು ಕರಕಲಾಗಿಸಿದ್ದು ಇದೇ ಜಿಲ್ಲೆಯಲ್ಲಿಯೇ. ಈ ಗಲಭೆಯನ್ನು ಸಾವಿರ ಪೊಲೀಸರಿಗೂ ನಿಯಂತ್ರಿಸಲು ಆಗಿರಲಿಲ್ಲ.

ಹೀಗಿದ್ದ ಧರ್ಮಪುರಿ ಜಿಲ್ಲೆಯ ಕರಿಮಂಗಲಮ್ ಗ್ರಾಮದಲ್ಲಿ 19 ವರ್ಷದ ದಲಿತೆ ಸೌಮ್ಯಳಿಗೆ 17 ವರ್ಷದ ವಣ್ಣಿಯಾರ್ ಯುವಕ ಮನಿಷ್ ಕುಮಾರ್‌ನೊಂದಿಗೆ ಪ್ರೀತಿಯುಂಟಾಗುತ್ತದೆ. ಸನಾತನಿ ಧರ್ಮದ ಕಾನೂನಿನ ಪ್ರಕಾರ ಇದು ಸಾಧುವಲ್ಲದ ಪ್ರೇಮವಾಗಿದ್ದರೂ ಹೃದಯಕ್ಕೆ ಯಾವ ಜಾತಿ ಇದೆ ಹೇಳಿ? ದೇಶದ ಕಾನೂನಿನ ಪ್ರಕಾರವೂ ವಯಸ್ಸಿನ ತೊಡಕ್ಕಿತ್ತು! ಆದರೂ, ಇಬ್ಬರೂ ಒಬ್ಬರಿಗೊಬ್ಬರು ಬಹಳ ಹಚ್ಚಿಕೊಂಡುಬಿಟ್ಟಿದ್ದರು. ಇದೆಲ್ಲವನ್ನೂ ತಿಳಿಯದ ಜೋಡಿ ಊರುಬಿಟ್ಟು ದೂರ ತೆರಳಿ ಮದುವೆ ಆಗಿಬಿಟ್ಟರು. ಮನಿಷ್ ಕುಟುಂಬದ ಕಣ್ಣಿಗೆ ಬೀಳದಂತೆ ಅಲ್ಲಿಯೇ ಸುತ್ತಾಮುತ್ತಾ ಹಲವು ದಿನಗಳ ಕಾಲ ಜೀವನ ಸಾಗಿಸಿದರು. ಆದರೆ ವಣ್ಣಿಯಾರ್ ಕುಲದಲ್ಲಿ ಅಷ್ಟು ಸುಲಭಕ್ಕೆ ಬಿಡುವ ಮಾತೇ ಇಲ್ಲವಲ್ಲ! ತನ್ನ ಜಾತಿ ನೆಟ್‌ವರ್ಕ್ ಬಳಸಿಕೊಂಡು ಇಬ್ಬರನ್ನೂ ಹುಡುಕಲು ಹಚ್ಚಿತು. 90 ದಿನಗಳ ನಂತರ ಮನಿಷ್ ಮತ್ತು ಸೌಮ್ಯರನ್ನು ವಣ್ಣಿಯಾರ್ ಯುವಕರು ಪತ್ತೆ ಹಚ್ಚಿಬಿಟ್ಟರು. ಅದೂ ಪೊಲೀಸರ ನೆರವಿನಿಂದ ಮತ್ತು ಒಂದು ದೂರನ್ನೂ ದಾಖಲಿಸದಂತೆ!

ಬಲಾಢ್ಯ ವಣ್ಣಿಯಾರ್ ಕುಟುಂಬ ಸೌಮ್ಯಳಿಂದ ಮನಿಷನನ್ನು ದೂರ ಮಾಡುವುದರಲ್ಲಿ ಯಶಸ್ವಿಯಾಗುತ್ತದೆ. ಬಹುಶಃ ಮನಿಷ್ ಅಪ್ಪನ ಒಂದು ನೋಟಕ್ಕೆ ಸೌಮ್ಯ ತಣ್ಣಗಾಗಿರಬಹುದು. ಸೌಮ್ಯ ವಿಧಿ ಇಲ್ಲದೆ ತನ್ನ ತಾತನ ಬಳಿಗೆ ಮರಳುತ್ತಾಳೆ. ಆದರೆ ಪ್ರೀತಿ ಎಂಬುದು ಮಾತ್ರ ಮರಳುವುದಿಲ್ಲವಲ್ಲ! ಕೆಲವು ದಿನಗಳ ನಂತರ ಗಟ್ಟಿ ಮನಸ್ಸು ಮಾಡಿಕೊಂಡ ಸೌಮ್ಯ ಮನಿಷ್ ಮನೆಗೆ ಹೊರಟೇಬಿಡುತ್ತಾಳೆ. ’ನನ್ನ ಗಂಡ ನನಗೆ ಬೇಕು’ ಎಂದು ಅಂಗಲಾಚುತ್ತಾಳೆ. ’ಅವನನ್ನು ಒಮ್ಮೆ ಮಾತನಾಡಿಸಲು ಅವಕಾಶ ಕೊಡಿ’ ಎಂದು ಬೇಡಿಕೊಳ್ಳುತ್ತಾಳೆ. ಪಾಪ, ಸೌಮ್ಯಳ ಪ್ರೀತಿಗೆ ಪ್ರಪಂಚದ ಪರಿವೆಯೇ ಇರಲಿಲ್ಲ. ಮನೆಯೊಳಗಿಂದ ಹೊರಗಡೆ ಬಂದ ಮನಿಷ್‌ನನ್ನು ನೋಡಿ ಹರ್ಷಗೊಂಡ ಸೌಮ್ಯ ಇನ್ನೆಲ್ಲ ಕಷ್ಟವೂ ಕೊನೆಯಾಯಿತು ಎಂದುಕೊಳ್ಳುವಷ್ಟರಲ್ಲಿ, ಸ್ವತಃ ಮನಿಷ್ ’ನಿನಗೂ ನನಗೂ ಸಂಬಂಧವಿಲ್ಲ. ನಿನ್ನೊಂದಿಗೆ ಬಾಳಲು ನನಗಿಷ್ಟವಿಲ್ಲ’ ಎಂದುಬಿಡುತ್ತಾನೆ. ಅಲ್ಲಿಗೆ ಸೌಮ್ಯಳ ಕ್ಷಣದ ನಗು ಮಾಯವಾಗುತ್ತದೆ. ಹೌದು, ಅಲ್ಲಾಗಿದ್ದು ಅದೇ. ಕುಟುಂಬದ ಒತ್ತಡಕ್ಕೆ ಮಣಿದು ಮನಿಷ್ ಆ ಮಾತುಗಳನ್ನಾಡುತ್ತಿರಬಹುದು ಎಂದು ಭಾವಿಸಿದ ಸೌಮ್ಯ ಪೊಲೀಸ್ ಠಾಣೆಗೆ ಓಡಿಹೋಗುತ್ತಾಳೆ. ’ವಿಡುದಲೈ ಚಿರುತೈಗಳ್ ಕಚ್ಚಿ’ ರಾಜಕೀಯ ಪಕ್ಷ ಅವಳ ಬೆನ್ನಿಗೆ ನಿಲ್ಲುತ್ತದೆ. ಪೊಲೀಸರ ಬಳಿ ದೂರು ನೀಡಿದಾಗ, ಅವರು ’ಪಂಚಾಯ್ತಿ ಕಟ್ಟೆಯಲ್ಲಿ ತೀರ್ಮಾನ ಮಾಡ್ಕಳಮ್ಮ’ ಎನ್ನುತ್ತಾರೆ! ಆದರೆ ಅಪ್ರಾಪ್ತ ವಯಸ್ಕರಿಗೆ ಸಂಬಂಧಿಸಿದಂತೆ ಕಾನೂನು ಬೇರೆಯೇ ಹೇಳುತ್ತಿದೆ. ಎಪೆಕ್ಸ್ ಕೋರ್ಟ್ ಈ ವಿಷಯದಲ್ಲಿ ಸ್ಪಷ್ಟವಾಗಿ ತೀರ್ಪಿತ್ತಿದೆ. ಇಬ್ಬರನ್ನೂ ಪೊಲೀಸ್ ಕಸ್ಟಡಿಗೆ ತೆಗದುಕೊಂಡು ರಕ್ಷಣೆ ನೀಡಿ ರಿಮ್ಯಾಂಡ್ ರೂಮಿನಲ್ಲಿರಿಸಬೇಕೆಂಬ ಸ್ಪಷ್ಟ ಆದೇಶವಿದೆ. ಆದರೆ ಪೊಲೀಸರು ಈ ಜಾತಿವಾದಿ ನೆಲದವರಲ್ಲವೇ? ಸೌಮ್ಯಳ ಮಾತಿಗೆ ಬೆಲೆ ಕೊಡುವುದೇ ಇಲ್ಲ.

ಇದನ್ನೂ ಓದಿ: ಮಾತು ಮರೆತ ಭಾರತ-31; ಲಾಕ್‌ಡೌನ್ ಫೈಲ್ಸ್ : ಅಂಬೇಡ್ಕರ್ ಟಿ-ಶರ್ಟ್ ಜಾತಿ ಹೇಳಿತು

ಪಂಚಾಯ್ತಿ ಕಟ್ಟೆಗೆ ಸೌಮ್ಯಳ ಪ್ರೇಮ ಬಂದು ನಿಲ್ಲುತ್ತದೆ. ಫಲಿತಾಂಶ ಯಥಾವತ್ ಆಗುತ್ತದೆ. ಬಡವರ ಮಕ್ಕಳನ್ನು ದುಡ್ಡುಕೊಟ್ಟು ಸರಿ ಮಾಡಿಬಿಡುವ ಕುತಂತ್ರ ನಡೆಯುತ್ತದೆ. ಸೌಮ್ಯಳಿಗೆ ಇಂತಿಷ್ಟು ಹಣ ನೀಡಿಬಿಡುತ್ತೇವೆ ನಮ್ಮ ಮಗನ ತಂಟೆಗೆ ಬರಬಾರದು ಎಂಬ ತೀರ್ಮಾನವಾಗುತ್ತದೆ. ಇದರ ಪರವಾಗಿ ಮನಿಷ್ ಸಹ ನಿಂತುಬಿಡುತ್ತಾನೆ. ಹೆಣ್ಣುಜೀವ, ಅದು ಹೇಗೆ ತಡೆಯಬಲ್ಲದು? ಆಕಾಶವೇ ತಲೆ ಮೇಲೆ ಬಿದ್ದಂತಾಗುತ್ತದೆ. ಹಿಂದೆಮುಂದೆ ಯೋಚಿಸದೇ ಸೌಮ್ಯ ವಿಷ ಸೇವಿಸುತ್ತಾಳೆ. ಸತತವಾಗಿ 22 ದಿನಗಳ ಹೋರಾಟದಲ್ಲಿ ಸಾವು ಗೆಲ್ಲುತ್ತದೆ. ಪ್ರಾಮಾಣಿಕ ಪ್ರೀತಿ ಸೋಲುತ್ತದೆ.

ಇಂದು ಮನಿಷ್ ಕುಮಾರ್ ಮತ್ತು ಆತನ ಕುಟುಂಬದ ಮೇಲೆ ಕೇಸು ದಾಖಲಾಗಿದೆ. ನ್ಯಾಯಾಲಯ ಏನೆಂದು ತೀರ್ಪಿತ್ತಬಹುದೋ ಊಹಿಸಬಹುದಾಗಿದೆ. ಸೌಮ್ಯ ಮಾತ್ರ ತನ್ನ ಪ್ರಾಮಾಣಿಕ ಪ್ರೀತಿಯನ್ನು ಹೊತ್ತು ನೆಲದೊಳಗೆ ಮಲಗಿದ್ದಾಳೆ. ಅವಳಿಗೆ ಮನಿಷ್ ಮತ್ತೆ ಹಿಂದಿರುಗುವ ಕನಸಾದರೂ ಬೀಳಲಿ. ನಮಗೆ ಮನಿಷ್‌ನನ್ನು ಸೃಷ್ಟಿಸಿದ ಸಮಾಜದ ಬಗ್ಗೆ ಕಿಂಚಿತ್ತಾದರೂ ಕಣ್ಣು ಕೆಂಪಗಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...