Homeಅಂಕಣಗಳುಮಾತು ಮರೆತ ಭಾರತ-32; ಲಾಕ್‌ಡೌನ್ ಫೈಲ್ಸ್: ಪ್ರೀತಿಯನ್ನು ಮಣಿಸಿದ ಜಾತಿ

ಮಾತು ಮರೆತ ಭಾರತ-32; ಲಾಕ್‌ಡೌನ್ ಫೈಲ್ಸ್: ಪ್ರೀತಿಯನ್ನು ಮಣಿಸಿದ ಜಾತಿ

- Advertisement -
- Advertisement -

(ಭಾರತದ Dalit Human Rights Defenders Network ಎಂಬ ಸಂಸ್ಥೆಯು No lockdown on Caste Atrocities’ ಎಂಬ ಪುಸ್ತಕದಲ್ಲಿ ನೈಜ ಘಟನೆಗಳನ್ನು ವರದಿ ಮಾಡಿದೆ. ಇದರಲ್ಲಿ ’ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಭಾರತದ ಏಳು ರಾಜ್ಯಗಳಲ್ಲಿ ದಲಿತರ ಮೇಲೆ ನಡೆದ 60 ದೌರ್ಜನ್ಯಗಳನ್ನು ಪಟ್ಟಿ ಮಾಡಿದೆ. ಒಂದೊಂದೂ ಭೀಕರ ಮತ್ತು ಹಿಂದೂ ಮೇಲ್ಜಾತಿಗಳು ದಲಿತರ ಮೇಲೆ ನಡೆಸಿರುವ ಕ್ರೂರ ಕೃತ್ಯಗಳನ್ನು ಬಯಲುಗೊಳಿಸುತ್ತದೆ. ಆ ದಲಿತರ ಮೇಲಿನ ದೌರ್ಜನ್ಯಗಳ ಘಟನೆಗಳಲ್ಲಿ ಇದೂ ಒಂದು. ಇದನ್ನು ವರದಿ ಮಾಡುವ ಉದ್ದೇಶ ಖಂಡಿತವಾಗಿಯೂ ಹಿಂದೂ ಮೇಲ್ಜಾತಿಗಳ ಮನ ಪರಿವರ್ತಿಸುವುದಲ್ಲ. ಬದಲಾಗಿ ’ಹಿಂದೂ ನಾವೆಲ್ಲ ಒಂದೂ’ ಎನ್ನುತ್ತಿರುವ ದಲಿತರ ಅಂಧಕಾರವನ್ನು ಕಳಚುವುದಾಗಿದೆ.)

ಅದು 2020ರ ಅಕ್ಟೋಬರ್ 2. ಗಾಂಧಿ ಜಯಂತಿಯ ದಿನ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಆಸ್ಪತ್ರೆಯಲ್ಲಿ ಸೌಮ್ಯ ಎಂಬ ದಲಿತ ಹುಡುಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಳು.

ಸೌಮ್ಯ 10 ವರ್ಷದವಳಿದ್ದಾಗಲೇ ತಾಯಿ ಪಳನಿ ಅಮ್ಮಾಳನ್ನು ಕಳೆದುಕೊಂಡಿದ್ದಳು. ತಂದೆ ಇದ್ದಕ್ಕಿದ್ದಂತೆ ಕಾಣೆಯಾಗಿದ್ದರು. ಆಗ ಅವಳ ತಾತ ಮತ್ತು ಇಬ್ಬರು ಅಜ್ಜಿಯಂದಿರು ಆಕೆಯನ್ನು ಸಾಕಿ ಸಲಹಿದ್ದರು. ಕರಿಮಂಗಲಮ್ ಎಂಬ ಹಳ್ಳಿಯಲ್ಲಿ ವಾಸವಿದ್ದ ಈ ಕುಟುಂಬವು ದಲಿತ ಪರಯ್ಯಾ ಜಾತಿಗೆ ಸೇರಿತ್ತು. ಈ ಧರ್ಮಪುರಿ ಜಿಲ್ಲೆಯು ಇಂದಿಗೂ ಬಲಾಢ್ಯ ಮೇಲ್ಜಾತಿ ವಣ್ಣಿಯಾರ್ ಸಮುದಾಯದ ಹಿಡಿತದಲ್ಲಿದೆ.

ಕರಿಮಂಗಲಮ್ ಗ್ರಾಮದ ಬಹುಸಂಖ್ಯಾತರು ದಲಿತರೇ ಆಗಿದ್ದಾರೆ. ಇಲ್ಲಿನ ದಲಿತರ ಬಳಿ ಎಕರೆಗಟ್ಟಲೆ ಭೂಮಿ ಇದೆ. ಆದರೂ ಸೌಮ್ಯಳ ತಾತನ ಕುಟುಂಬ ಇಂದಿಗೂ ಕೂಲಿಯನ್ನೇ ನಂಬಿಕೊಂಡು ಜೀವಿಸುತ್ತಿದೆ. ಊರಿನ ಕಸ ಗುಡಿಸುವ ಹಾಗೂ ಮಲ ಬಾಚುವ ಕೆಲಸ ಈ ಕುಟುಂಬದ್ದಾಗಿದೆ.

ಇಂತಹ ಪರಿಸ್ಥಿತಿಯಲ್ಲಿಯೂ ಸೌಮ್ಯ 10ನೇ ತರಗತಿಯವರೆಗೆ ಓದಿದಳು. ಓದುತ್ತಲೇ ಸಾಧ್ಯವಾಗುವ ಕೂಲಿ ಕೆಲಸಕ್ಕೂ ಹೋಗಿ ಕುಟುಂಬಕ್ಕೆ ಸಹಾಯ ಮಾಡುತ್ತಿದ್ದಳು. ಆದರೆ ದೂರದೂರಿಗೆ ಹೋಗಿ ಓದಲಾಗದ ಶಕ್ತಿ ಇಲ್ಲದ ಕಾರಣ ಓದನ್ನು ಅರ್ಧಕ್ಕೆ ನಿಲ್ಲಿಸಿದಳು. ಇಲ್ಲಿನ ದಲಿತರು ಭೂಮಿ ಹೊಂದಿದ್ದರೂ ಬಹುತೇಕ ಎಲ್ಲಾ ತೀರ್ಮಾನವೂ ವಣ್ಣಿಯಾರರದ್ದೇ ಆಗಿತ್ತು. 2012ರಲ್ಲಿ ಅಂತರ್ಜಾತಿ ವಿವಾಹವಾದ ಕಾರಣಕ್ಕೆ 300 ದಲಿತರ ಮನೆಗಳನ್ನು ಸುಟ್ಟು ಕರಕಲಾಗಿಸಿದ್ದು ಇದೇ ಜಿಲ್ಲೆಯಲ್ಲಿಯೇ. ಈ ಗಲಭೆಯನ್ನು ಸಾವಿರ ಪೊಲೀಸರಿಗೂ ನಿಯಂತ್ರಿಸಲು ಆಗಿರಲಿಲ್ಲ.

ಹೀಗಿದ್ದ ಧರ್ಮಪುರಿ ಜಿಲ್ಲೆಯ ಕರಿಮಂಗಲಮ್ ಗ್ರಾಮದಲ್ಲಿ 19 ವರ್ಷದ ದಲಿತೆ ಸೌಮ್ಯಳಿಗೆ 17 ವರ್ಷದ ವಣ್ಣಿಯಾರ್ ಯುವಕ ಮನಿಷ್ ಕುಮಾರ್‌ನೊಂದಿಗೆ ಪ್ರೀತಿಯುಂಟಾಗುತ್ತದೆ. ಸನಾತನಿ ಧರ್ಮದ ಕಾನೂನಿನ ಪ್ರಕಾರ ಇದು ಸಾಧುವಲ್ಲದ ಪ್ರೇಮವಾಗಿದ್ದರೂ ಹೃದಯಕ್ಕೆ ಯಾವ ಜಾತಿ ಇದೆ ಹೇಳಿ? ದೇಶದ ಕಾನೂನಿನ ಪ್ರಕಾರವೂ ವಯಸ್ಸಿನ ತೊಡಕ್ಕಿತ್ತು! ಆದರೂ, ಇಬ್ಬರೂ ಒಬ್ಬರಿಗೊಬ್ಬರು ಬಹಳ ಹಚ್ಚಿಕೊಂಡುಬಿಟ್ಟಿದ್ದರು. ಇದೆಲ್ಲವನ್ನೂ ತಿಳಿಯದ ಜೋಡಿ ಊರುಬಿಟ್ಟು ದೂರ ತೆರಳಿ ಮದುವೆ ಆಗಿಬಿಟ್ಟರು. ಮನಿಷ್ ಕುಟುಂಬದ ಕಣ್ಣಿಗೆ ಬೀಳದಂತೆ ಅಲ್ಲಿಯೇ ಸುತ್ತಾಮುತ್ತಾ ಹಲವು ದಿನಗಳ ಕಾಲ ಜೀವನ ಸಾಗಿಸಿದರು. ಆದರೆ ವಣ್ಣಿಯಾರ್ ಕುಲದಲ್ಲಿ ಅಷ್ಟು ಸುಲಭಕ್ಕೆ ಬಿಡುವ ಮಾತೇ ಇಲ್ಲವಲ್ಲ! ತನ್ನ ಜಾತಿ ನೆಟ್‌ವರ್ಕ್ ಬಳಸಿಕೊಂಡು ಇಬ್ಬರನ್ನೂ ಹುಡುಕಲು ಹಚ್ಚಿತು. 90 ದಿನಗಳ ನಂತರ ಮನಿಷ್ ಮತ್ತು ಸೌಮ್ಯರನ್ನು ವಣ್ಣಿಯಾರ್ ಯುವಕರು ಪತ್ತೆ ಹಚ್ಚಿಬಿಟ್ಟರು. ಅದೂ ಪೊಲೀಸರ ನೆರವಿನಿಂದ ಮತ್ತು ಒಂದು ದೂರನ್ನೂ ದಾಖಲಿಸದಂತೆ!

ಬಲಾಢ್ಯ ವಣ್ಣಿಯಾರ್ ಕುಟುಂಬ ಸೌಮ್ಯಳಿಂದ ಮನಿಷನನ್ನು ದೂರ ಮಾಡುವುದರಲ್ಲಿ ಯಶಸ್ವಿಯಾಗುತ್ತದೆ. ಬಹುಶಃ ಮನಿಷ್ ಅಪ್ಪನ ಒಂದು ನೋಟಕ್ಕೆ ಸೌಮ್ಯ ತಣ್ಣಗಾಗಿರಬಹುದು. ಸೌಮ್ಯ ವಿಧಿ ಇಲ್ಲದೆ ತನ್ನ ತಾತನ ಬಳಿಗೆ ಮರಳುತ್ತಾಳೆ. ಆದರೆ ಪ್ರೀತಿ ಎಂಬುದು ಮಾತ್ರ ಮರಳುವುದಿಲ್ಲವಲ್ಲ! ಕೆಲವು ದಿನಗಳ ನಂತರ ಗಟ್ಟಿ ಮನಸ್ಸು ಮಾಡಿಕೊಂಡ ಸೌಮ್ಯ ಮನಿಷ್ ಮನೆಗೆ ಹೊರಟೇಬಿಡುತ್ತಾಳೆ. ’ನನ್ನ ಗಂಡ ನನಗೆ ಬೇಕು’ ಎಂದು ಅಂಗಲಾಚುತ್ತಾಳೆ. ’ಅವನನ್ನು ಒಮ್ಮೆ ಮಾತನಾಡಿಸಲು ಅವಕಾಶ ಕೊಡಿ’ ಎಂದು ಬೇಡಿಕೊಳ್ಳುತ್ತಾಳೆ. ಪಾಪ, ಸೌಮ್ಯಳ ಪ್ರೀತಿಗೆ ಪ್ರಪಂಚದ ಪರಿವೆಯೇ ಇರಲಿಲ್ಲ. ಮನೆಯೊಳಗಿಂದ ಹೊರಗಡೆ ಬಂದ ಮನಿಷ್‌ನನ್ನು ನೋಡಿ ಹರ್ಷಗೊಂಡ ಸೌಮ್ಯ ಇನ್ನೆಲ್ಲ ಕಷ್ಟವೂ ಕೊನೆಯಾಯಿತು ಎಂದುಕೊಳ್ಳುವಷ್ಟರಲ್ಲಿ, ಸ್ವತಃ ಮನಿಷ್ ’ನಿನಗೂ ನನಗೂ ಸಂಬಂಧವಿಲ್ಲ. ನಿನ್ನೊಂದಿಗೆ ಬಾಳಲು ನನಗಿಷ್ಟವಿಲ್ಲ’ ಎಂದುಬಿಡುತ್ತಾನೆ. ಅಲ್ಲಿಗೆ ಸೌಮ್ಯಳ ಕ್ಷಣದ ನಗು ಮಾಯವಾಗುತ್ತದೆ. ಹೌದು, ಅಲ್ಲಾಗಿದ್ದು ಅದೇ. ಕುಟುಂಬದ ಒತ್ತಡಕ್ಕೆ ಮಣಿದು ಮನಿಷ್ ಆ ಮಾತುಗಳನ್ನಾಡುತ್ತಿರಬಹುದು ಎಂದು ಭಾವಿಸಿದ ಸೌಮ್ಯ ಪೊಲೀಸ್ ಠಾಣೆಗೆ ಓಡಿಹೋಗುತ್ತಾಳೆ. ’ವಿಡುದಲೈ ಚಿರುತೈಗಳ್ ಕಚ್ಚಿ’ ರಾಜಕೀಯ ಪಕ್ಷ ಅವಳ ಬೆನ್ನಿಗೆ ನಿಲ್ಲುತ್ತದೆ. ಪೊಲೀಸರ ಬಳಿ ದೂರು ನೀಡಿದಾಗ, ಅವರು ’ಪಂಚಾಯ್ತಿ ಕಟ್ಟೆಯಲ್ಲಿ ತೀರ್ಮಾನ ಮಾಡ್ಕಳಮ್ಮ’ ಎನ್ನುತ್ತಾರೆ! ಆದರೆ ಅಪ್ರಾಪ್ತ ವಯಸ್ಕರಿಗೆ ಸಂಬಂಧಿಸಿದಂತೆ ಕಾನೂನು ಬೇರೆಯೇ ಹೇಳುತ್ತಿದೆ. ಎಪೆಕ್ಸ್ ಕೋರ್ಟ್ ಈ ವಿಷಯದಲ್ಲಿ ಸ್ಪಷ್ಟವಾಗಿ ತೀರ್ಪಿತ್ತಿದೆ. ಇಬ್ಬರನ್ನೂ ಪೊಲೀಸ್ ಕಸ್ಟಡಿಗೆ ತೆಗದುಕೊಂಡು ರಕ್ಷಣೆ ನೀಡಿ ರಿಮ್ಯಾಂಡ್ ರೂಮಿನಲ್ಲಿರಿಸಬೇಕೆಂಬ ಸ್ಪಷ್ಟ ಆದೇಶವಿದೆ. ಆದರೆ ಪೊಲೀಸರು ಈ ಜಾತಿವಾದಿ ನೆಲದವರಲ್ಲವೇ? ಸೌಮ್ಯಳ ಮಾತಿಗೆ ಬೆಲೆ ಕೊಡುವುದೇ ಇಲ್ಲ.

ಇದನ್ನೂ ಓದಿ: ಮಾತು ಮರೆತ ಭಾರತ-31; ಲಾಕ್‌ಡೌನ್ ಫೈಲ್ಸ್ : ಅಂಬೇಡ್ಕರ್ ಟಿ-ಶರ್ಟ್ ಜಾತಿ ಹೇಳಿತು

ಪಂಚಾಯ್ತಿ ಕಟ್ಟೆಗೆ ಸೌಮ್ಯಳ ಪ್ರೇಮ ಬಂದು ನಿಲ್ಲುತ್ತದೆ. ಫಲಿತಾಂಶ ಯಥಾವತ್ ಆಗುತ್ತದೆ. ಬಡವರ ಮಕ್ಕಳನ್ನು ದುಡ್ಡುಕೊಟ್ಟು ಸರಿ ಮಾಡಿಬಿಡುವ ಕುತಂತ್ರ ನಡೆಯುತ್ತದೆ. ಸೌಮ್ಯಳಿಗೆ ಇಂತಿಷ್ಟು ಹಣ ನೀಡಿಬಿಡುತ್ತೇವೆ ನಮ್ಮ ಮಗನ ತಂಟೆಗೆ ಬರಬಾರದು ಎಂಬ ತೀರ್ಮಾನವಾಗುತ್ತದೆ. ಇದರ ಪರವಾಗಿ ಮನಿಷ್ ಸಹ ನಿಂತುಬಿಡುತ್ತಾನೆ. ಹೆಣ್ಣುಜೀವ, ಅದು ಹೇಗೆ ತಡೆಯಬಲ್ಲದು? ಆಕಾಶವೇ ತಲೆ ಮೇಲೆ ಬಿದ್ದಂತಾಗುತ್ತದೆ. ಹಿಂದೆಮುಂದೆ ಯೋಚಿಸದೇ ಸೌಮ್ಯ ವಿಷ ಸೇವಿಸುತ್ತಾಳೆ. ಸತತವಾಗಿ 22 ದಿನಗಳ ಹೋರಾಟದಲ್ಲಿ ಸಾವು ಗೆಲ್ಲುತ್ತದೆ. ಪ್ರಾಮಾಣಿಕ ಪ್ರೀತಿ ಸೋಲುತ್ತದೆ.

ಇಂದು ಮನಿಷ್ ಕುಮಾರ್ ಮತ್ತು ಆತನ ಕುಟುಂಬದ ಮೇಲೆ ಕೇಸು ದಾಖಲಾಗಿದೆ. ನ್ಯಾಯಾಲಯ ಏನೆಂದು ತೀರ್ಪಿತ್ತಬಹುದೋ ಊಹಿಸಬಹುದಾಗಿದೆ. ಸೌಮ್ಯ ಮಾತ್ರ ತನ್ನ ಪ್ರಾಮಾಣಿಕ ಪ್ರೀತಿಯನ್ನು ಹೊತ್ತು ನೆಲದೊಳಗೆ ಮಲಗಿದ್ದಾಳೆ. ಅವಳಿಗೆ ಮನಿಷ್ ಮತ್ತೆ ಹಿಂದಿರುಗುವ ಕನಸಾದರೂ ಬೀಳಲಿ. ನಮಗೆ ಮನಿಷ್‌ನನ್ನು ಸೃಷ್ಟಿಸಿದ ಸಮಾಜದ ಬಗ್ಗೆ ಕಿಂಚಿತ್ತಾದರೂ ಕಣ್ಣು ಕೆಂಪಗಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...