Homeಮುಖಪುಟಡಿಎಂಕೆ ಶಾಸಕನ ಪುತ್ರನ ನಿವಾಸದಲ್ಲಿ ಸಿಗರೇಟಿನಿಂದ ಸುಟ್ಟು ದೌರ್ಜನ್ಯ: ದಲಿತ ಬಾಲಕಿ ಆರೋಪ

ಡಿಎಂಕೆ ಶಾಸಕನ ಪುತ್ರನ ನಿವಾಸದಲ್ಲಿ ಸಿಗರೇಟಿನಿಂದ ಸುಟ್ಟು ದೌರ್ಜನ್ಯ: ದಲಿತ ಬಾಲಕಿ ಆರೋಪ

- Advertisement -
- Advertisement -

ತಮಿಳುನಾಡಿನ ಡಿಎಂಕೆ ಶಾಸಕ ಐ ಕರುಣಾನಿತಿ ಪುತ್ರ ಮತ್ತು ಸೋಸೆ, ದಲಿತ ಯುವತಿಗೆ ದೌರ್ಜನ್ಯ ನಡೆಸಿದ್ದಾರೆ. ಯುವತಿ ಉಲುಂದೂರ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಾದಾಗ ಪ್ರಕರಣ ಬಯಲಿಗೆ ಬಂದಿದ್ದು, ಯುವತಿಯ ಮೈಮೇಲೆ ಸಿಗರೇಟ್‌ನಿಂದ ಸುಟ್ಟ ಗಾಯಗಳು ಕಂಡುಬಂದಿದೆ.

ಪಲ್ಲವರಂ ಕ್ಷೇತ್ರದ ಡಿಎಂಕೆ ಶಾಸಕ ಐ ಕರುಣಾನಿತಿ ಅವರ ಮಗ ಆಂಟೊ ಮನೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಯುವತಿ ಕೆಲಸ ಮಾಡುತ್ತಿದ್ದಳು. ಬಾಲಕಿಯ ಮುಖ ಮತ್ತು ದೇಹದ ಮೇಲೆ ಸಿಗರೇಟ್‌ನಿಂದ ಸುಟ್ಟಗಾಯಗಳಿದ್ದು,  ಶಾಸಕರ ಮಗ ಮತ್ತು ಸೊಸೆ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ಪೊಂಗಲ್ ಹಬ್ಬಕ್ಕೆ ತಾಯಿಯ ಮನೆಗೆ ಯುವತಿ ತೆರಳಿದಾಗ ಮಗಳ ಮೇಲೆ ಗಾಯವಾಗಿರುವುದನ್ನು ತಾಯಿ ಗಮನಿಸಿದ್ದಾರೆ. ಯುವತಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಯುವತಿಯಿಂದ ದೂರು ಸ್ವೀಕರಿಸಬೇಕಿದೆ. ಈ ಬಗ್ಗೆ ಉಲುಂದೂರ್‌ಪೇಟೆ ಪೊಲೀಸರಿಂದ ಮಾಹಿತಿ ಪಡೆದಿದ್ದೇವೆ. ಅದರ ಆಧಾರದಲ್ಲಿ ಹೆಚ್ಚಿನ ತನಿಖೆಯನ್ನು ನಡೆಸಲಾಗುವುದು ಎಂದು ನೀಲಂಕರೈ ಸಹಾಯಕ ಪೊಲೀಸ್‌ ಆಯುಕ್ತರ ಕಚೇರಿ ತಿಳಿಸಿದೆ.

ಕರುಣಾನಿತಿ ಅವರ ಮಗ ಆಂಟೊ ಹಾಗೂ ಸೊಸೆ ಮೆರ್ಲಿನಾ ಅವರು ಚೆನ್ನೈನ ತಿರುವನ್ಮಿಯೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಥಳಿಸಿದ್ದಾರೆ ಎಂದು ಸಂತ್ರಸ್ತ ಯುವತಿ ಆರೋಪಿಸಿದ್ದಾರೆ. ಕಲ್ಲಾಕುರಿಚಿ ಜಿಲ್ಲೆಯ ಉಲುಂದೂರುಪೇಟೆ ಮೂಲದ ಅನು(ಹೆಸರು ಬದಲಿಸಲಾಗಿದೆ) ಅವರು ಎಂಟು ತಿಂಗಳ ಹಿಂದೆ ಅಂದರೆ 12ನೇ ತರಗತಿ ಪರೀಕ್ಷೆಯನ್ನು ಪೂರ್ಣಗೊಳಿಸಿದ ನಂತರ ಆಂಟೊ ಅವರ ನಿವಾಸದಲ್ಲಿ ಮನೆ ಕೆಲಸಕ್ಕೆ ಸೇರಿಕೊಂಡಿದ್ದರು.

ಸಂತ್ರಸ್ತೆ ಅನು(ಹೆಸರು ಬದಲಿಸಲಾಗಿದೆ) ಅವರ ತಾಯಿ ಚೆನ್ನೈನ ಕೋಲಪಾಕ್ಕಂನಲ್ಲಿ ಮನೆ ಕೆಲಸ ಮಾಡುತ್ತಿದ್ದಾರೆ. ಹಣಕಾಸಿನ ಸಮಸ್ಯೆಯಿಂದ ಆಂಟೊ ಅವರ ನಿವಾಸದಲ್ಲಿ ಮನೆ ಸಹಾಯಕರಾಗಿ ಕೆಲಸ ಮಾಡಲು ತಾಯಿ ಅನು ಅವರನ್ನು ಕಳುಹಿಸಿದ್ದರು. ಕಳೆದ ಎಂಟು ತಿಂಗಳಲ್ಲಿ ಮೆರ್ಲಿನಾ ಆಕೆಯನ್ನು ಥಳಿಸಿದ್ದಾಳೆ, ಸಿಗರೇಟ್‌ನಿಂದ ಚರ್ಮವನ್ನು ಸುಟ್ಟುಹಾಕಿದ್ದಾಳೆ ಮತ್ತು ಅವಳ ಕೂದಲನ್ನು ಚಿಕ್ಕದಾಗಿ ಕತ್ತರಿಸಿದ್ದಾಳೆ. ಇದಲ್ಲದೆ ದೌರ್ಜನ್ಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಉಲುಂದೂರುಪೇಟೆ ಆಸ್ಪತ್ರೆಯ ದಾಖಲಾತಿಯಲ್ಲಿ ಅನು ಅವರ ಮೇಲೆ ಕೋಲು ಮತ್ತು ಹೇರ್ ಸ್ಟ್ರೈಟ್ನರ್ ಬಳಸಿ ಹಲ್ಲೆ ನಡೆಸಲಾಗಿದೆ ಎಂದು ದಾಖಲಿಸಲಾಗಿದೆ. ಆಸ್ಪತ್ರೆಯ ಅಧಿಕಾರಿಗಳಿಗೆ ನೀಡಿದ ಹೇಳಿಕೆಯ ಪ್ರಕಾರ, ಆಕೆಯ ಉದ್ಯೋಗ ಸ್ಥಳದಲ್ಲಿ ಆಕೆಯ ಮೇಲೆ ಒದೆಯಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಹಣೆ, ಗಲ್ಲದ ಮೇಲೆ ಗಾಯ ಮತ್ತು ಎರಡೂ ಮುಂಗೈಗಳಲ್ಲಿ ಸುಟ್ಟ ಗಾಯಗಳಿರುವುದು ಕಂಡುಬಂದಿದೆ. ಆಕೆಯ ದೇಹದಲ್ಲಿ ಹಲವು ಗಾಯಗಳು ಕಂಡು ಬಂದಿರುವುದರಿಂದ ಆಸ್ಪತ್ರೆಯ ಆಡಳಿತವು ಪೊಲೀಸರಿಗೆ ಮಾಹಿತಿ ನೀಡಿದೆ. ಚೆನ್ನೈನಲ್ಲಿ ಘಟನೆಗಳು ನಡೆದಿದ್ದರಿಂದ ಉಲುಂದೂರ್‌ಪೇಟೆ ಪೊಲೀಸರು ತಿರುವನ್ಮಿಯೂರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಅವರು ನನ್ನ ಫೋನ್‌ನ್ನು ಕಸಿದುಕೊಂಡರು, ಆದ್ದರಿಂದ ನಾನು ನನ್ನ ತಾಯಿಯೊಂದಿಗೆ ಮಾತನಾಡಲು ನಡೆಸಲು ಸಾಧ್ಯವಾಗಲಿಲ್ಲ. ಅವರು ಮೇ 2023ರಲ್ಲಿ ಆರು ತಿಂಗಳ ಕಾಲ ಇಲ್ಲಿ ಕೆಲಸ ಮಾಡಲು ನನ್ನ ತಾಯಿಯ ಸಮ್ಮುಖದಲ್ಲಿ ಬಾಂಡ್ ಪೇಪರ್‌ಗೆ ಸಹಿ ಹಾಕುವಂತೆ ಒತ್ತಾಯಿಸಿದರು. ಆ ಸಮಯದಲ್ಲಿ ಮೆರ್ಲಿನಾ ನನ್ನ ಫೋನ್‌ನ್ನು ನನ್ನ ತಾಯಿಗೆ ಹಸ್ತಾಂತರಿಸಿದ್ದಾರೆ. 12ನೇ ತರಗತಿ ಪರೀಕ್ಷೆಯಲ್ಲಿ 433 ಅಂಕ ಪಡೆದಿರುವ ನಾನು ಮೆಡಿಕಲ್ ಓದಲು ಬಯಸಿದ್ದೆ. NEET ಕೋಚಿಂಗ್‌ಗಾಗಿ ಹಣಕ್ಕೆ ಕೆಲಸಕ್ಕೆ ಸೇರ್ಪಡೆಯಾಗಿದ್ದೆ. ನಾನು ಓದಲು ಹಣ ಸಂಪಾದಿಸಲು ಇಲ್ಲಿದ್ದೇನೆ ಎಂದು ನಾನು ಅವರಿಗೆ ಹೇಳಿದೆ ಮತ್ತು ಅವರು ನನ್ನನ್ನು ಆರ್ಥಿಕವಾಗಿ ಬೆಂಬಲಿಸುತ್ತಾರೆ ಎಂದು ಹೇಳಿದ್ದರು. ಆಗಸ್ಟ್ 2023ರಲ್ಲಿ ನಾನು ನನ್ನ ವರ್ಗಾವಣೆ ಪ್ರಮಾಣಪತ್ರವನ್ನು ಪಡೆಯಲು ಹೋಗುವಾಗ ಮೆರ್ಲಿನಾ ನನ್ನೊಂದಿಗೆ ಶಾಲೆಗೆ ಬಂದಿದ್ದರು. ಕೆಲವು ದಿನಗಳ ನಂತರ ಅವರು ನನ್ನನ್ನು ಆನ್‌ಲೈನ್ ಶಿಕ್ಷಣವನ್ನು ಪಡೆಯುವ ಸಂಸ್ಥೆಗೆ ಸೇರಿಸುವುದಾಗಿ ಹೇಳಿದ್ದರು. ಅವಳು ಕೋರ್ಸ್‌ಗೆ 2 ಲಕ್ಷ ರೂ.ಕೊಟ್ಟಿರುವುದಾಗಿ ಹೇಳಿದ್ದಾರೆ. ಆದರೆ ನಾನು ಆನ್‌ಲೈನ್‌ನಲ್ಲಿ ಯಾವುದೇ ತರಗತಿಗಳಿಗೆ ಹಾಜರಾಗಲಿಲ್ಲ.  ಮೆರ್ಲಿನಾಗೆ ಮನೆಗೆ ಮರಳಲು ಅವಕಾಶ ನೀಡುವಂತೆ ಹಲವಾರು ಬಾರಿ ವಿನಂತಿಸಿದ್ದೆ. ಅವರು 10 ಮತ್ತು 12ನೇ ತರಗತಿಯ ಅಂಕಪಟ್ಟಿಗಳನ್ನು ವರ್ಗಾವಣೆ ಪ್ರಮಾಣಪತ್ರದೊಂದಿಗೆ ಇಟ್ಟುಕೊಂಡಿದ್ದರು. ಅವಳು  ಕೆಲಸಕ್ಕೆ ಸಂಬಳ ನೀಡಲಿಲ್ಲ. ಒಪ್ಪಂದದಂತೆ ತಿಂಗಳಿಗೆ 16,000 ರೂ.ಗಳನ್ನು ನೀಡಬೇಕಿತ್ತು. ಆದರೆ ಕೇವಲ 5,000 ರೂ.ನೀಡಲಾಗಿದೆ ಎಂದು ಸಂತ್ರಸ್ತ ಬಾಲಕಿ ಆರೋಪಿಸಿದ್ದಾಳೆ.

ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಐ ಕರುಣಾನಿತಿ, ಮಗ ಮತ್ತು ಸೊಸೆ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಮಗನ ಮನೆಯಲ್ಲಿ ಏನಾಯಿತು ಎಂಬುದು ತನಗೆ ತಿಳಿದಿಲ್ಲ, ಆದರೆ ಮನೆಮಂದಿ ಯಾವತ್ತೂ ತಮ್ಮ ಉದ್ಯೋಗಿಗಳನ್ನು ಈ ರೀತಿ ನಡೆಸಿಕೊಂಡಿಲ್ಲ. ಅವರು ಅವಳ 18ನೇ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಈ ದೂರಿನ ಹಿಂದೆ ವೈಯಕ್ತಿಕ ಪ್ರೇರಣೆ ಇರಬಹುದು. ನಾವು ಅವಳನ್ನು ನಮ್ಮ ಕುಟುಂಬದ ಸದಸ್ಯರಂತೆ ನೋಡಿಕೊಂಡೆವು ಮತ್ತು ಶಿಕ್ಷಣ ಪಡೆಯಲು ಅವಳನ್ನು ಬೆಂಬಲಿಸಿದೆವು. ಇವು ಸುಳ್ಳು ಆರೋಪಗಳು ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿ: ಮಣಿಪುರದಲ್ಲಿ ಮತ್ತೆ ಉದ್ವಿಗ್ನ: ಪೊಲೀಸ್ ಪ್ರಧಾನ ಕಚೇರಿ ಮೇಲೆ ದಾಳಿ, ಮನೆಗಳ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...