Homeಮುಖಪುಟಡಿಎಂಕೆ ಶಾಸಕನ ಪುತ್ರನ ನಿವಾಸದಲ್ಲಿ ಸಿಗರೇಟಿನಿಂದ ಸುಟ್ಟು ದೌರ್ಜನ್ಯ: ದಲಿತ ಬಾಲಕಿ ಆರೋಪ

ಡಿಎಂಕೆ ಶಾಸಕನ ಪುತ್ರನ ನಿವಾಸದಲ್ಲಿ ಸಿಗರೇಟಿನಿಂದ ಸುಟ್ಟು ದೌರ್ಜನ್ಯ: ದಲಿತ ಬಾಲಕಿ ಆರೋಪ

- Advertisement -
- Advertisement -

ತಮಿಳುನಾಡಿನ ಡಿಎಂಕೆ ಶಾಸಕ ಐ ಕರುಣಾನಿತಿ ಪುತ್ರ ಮತ್ತು ಸೋಸೆ, ದಲಿತ ಯುವತಿಗೆ ದೌರ್ಜನ್ಯ ನಡೆಸಿದ್ದಾರೆ. ಯುವತಿ ಉಲುಂದೂರ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಾದಾಗ ಪ್ರಕರಣ ಬಯಲಿಗೆ ಬಂದಿದ್ದು, ಯುವತಿಯ ಮೈಮೇಲೆ ಸಿಗರೇಟ್‌ನಿಂದ ಸುಟ್ಟ ಗಾಯಗಳು ಕಂಡುಬಂದಿದೆ.

ಪಲ್ಲವರಂ ಕ್ಷೇತ್ರದ ಡಿಎಂಕೆ ಶಾಸಕ ಐ ಕರುಣಾನಿತಿ ಅವರ ಮಗ ಆಂಟೊ ಮನೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಯುವತಿ ಕೆಲಸ ಮಾಡುತ್ತಿದ್ದಳು. ಬಾಲಕಿಯ ಮುಖ ಮತ್ತು ದೇಹದ ಮೇಲೆ ಸಿಗರೇಟ್‌ನಿಂದ ಸುಟ್ಟಗಾಯಗಳಿದ್ದು,  ಶಾಸಕರ ಮಗ ಮತ್ತು ಸೊಸೆ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ಪೊಂಗಲ್ ಹಬ್ಬಕ್ಕೆ ತಾಯಿಯ ಮನೆಗೆ ಯುವತಿ ತೆರಳಿದಾಗ ಮಗಳ ಮೇಲೆ ಗಾಯವಾಗಿರುವುದನ್ನು ತಾಯಿ ಗಮನಿಸಿದ್ದಾರೆ. ಯುವತಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಯುವತಿಯಿಂದ ದೂರು ಸ್ವೀಕರಿಸಬೇಕಿದೆ. ಈ ಬಗ್ಗೆ ಉಲುಂದೂರ್‌ಪೇಟೆ ಪೊಲೀಸರಿಂದ ಮಾಹಿತಿ ಪಡೆದಿದ್ದೇವೆ. ಅದರ ಆಧಾರದಲ್ಲಿ ಹೆಚ್ಚಿನ ತನಿಖೆಯನ್ನು ನಡೆಸಲಾಗುವುದು ಎಂದು ನೀಲಂಕರೈ ಸಹಾಯಕ ಪೊಲೀಸ್‌ ಆಯುಕ್ತರ ಕಚೇರಿ ತಿಳಿಸಿದೆ.

ಕರುಣಾನಿತಿ ಅವರ ಮಗ ಆಂಟೊ ಹಾಗೂ ಸೊಸೆ ಮೆರ್ಲಿನಾ ಅವರು ಚೆನ್ನೈನ ತಿರುವನ್ಮಿಯೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಥಳಿಸಿದ್ದಾರೆ ಎಂದು ಸಂತ್ರಸ್ತ ಯುವತಿ ಆರೋಪಿಸಿದ್ದಾರೆ. ಕಲ್ಲಾಕುರಿಚಿ ಜಿಲ್ಲೆಯ ಉಲುಂದೂರುಪೇಟೆ ಮೂಲದ ಅನು(ಹೆಸರು ಬದಲಿಸಲಾಗಿದೆ) ಅವರು ಎಂಟು ತಿಂಗಳ ಹಿಂದೆ ಅಂದರೆ 12ನೇ ತರಗತಿ ಪರೀಕ್ಷೆಯನ್ನು ಪೂರ್ಣಗೊಳಿಸಿದ ನಂತರ ಆಂಟೊ ಅವರ ನಿವಾಸದಲ್ಲಿ ಮನೆ ಕೆಲಸಕ್ಕೆ ಸೇರಿಕೊಂಡಿದ್ದರು.

ಸಂತ್ರಸ್ತೆ ಅನು(ಹೆಸರು ಬದಲಿಸಲಾಗಿದೆ) ಅವರ ತಾಯಿ ಚೆನ್ನೈನ ಕೋಲಪಾಕ್ಕಂನಲ್ಲಿ ಮನೆ ಕೆಲಸ ಮಾಡುತ್ತಿದ್ದಾರೆ. ಹಣಕಾಸಿನ ಸಮಸ್ಯೆಯಿಂದ ಆಂಟೊ ಅವರ ನಿವಾಸದಲ್ಲಿ ಮನೆ ಸಹಾಯಕರಾಗಿ ಕೆಲಸ ಮಾಡಲು ತಾಯಿ ಅನು ಅವರನ್ನು ಕಳುಹಿಸಿದ್ದರು. ಕಳೆದ ಎಂಟು ತಿಂಗಳಲ್ಲಿ ಮೆರ್ಲಿನಾ ಆಕೆಯನ್ನು ಥಳಿಸಿದ್ದಾಳೆ, ಸಿಗರೇಟ್‌ನಿಂದ ಚರ್ಮವನ್ನು ಸುಟ್ಟುಹಾಕಿದ್ದಾಳೆ ಮತ್ತು ಅವಳ ಕೂದಲನ್ನು ಚಿಕ್ಕದಾಗಿ ಕತ್ತರಿಸಿದ್ದಾಳೆ. ಇದಲ್ಲದೆ ದೌರ್ಜನ್ಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಉಲುಂದೂರುಪೇಟೆ ಆಸ್ಪತ್ರೆಯ ದಾಖಲಾತಿಯಲ್ಲಿ ಅನು ಅವರ ಮೇಲೆ ಕೋಲು ಮತ್ತು ಹೇರ್ ಸ್ಟ್ರೈಟ್ನರ್ ಬಳಸಿ ಹಲ್ಲೆ ನಡೆಸಲಾಗಿದೆ ಎಂದು ದಾಖಲಿಸಲಾಗಿದೆ. ಆಸ್ಪತ್ರೆಯ ಅಧಿಕಾರಿಗಳಿಗೆ ನೀಡಿದ ಹೇಳಿಕೆಯ ಪ್ರಕಾರ, ಆಕೆಯ ಉದ್ಯೋಗ ಸ್ಥಳದಲ್ಲಿ ಆಕೆಯ ಮೇಲೆ ಒದೆಯಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಹಣೆ, ಗಲ್ಲದ ಮೇಲೆ ಗಾಯ ಮತ್ತು ಎರಡೂ ಮುಂಗೈಗಳಲ್ಲಿ ಸುಟ್ಟ ಗಾಯಗಳಿರುವುದು ಕಂಡುಬಂದಿದೆ. ಆಕೆಯ ದೇಹದಲ್ಲಿ ಹಲವು ಗಾಯಗಳು ಕಂಡು ಬಂದಿರುವುದರಿಂದ ಆಸ್ಪತ್ರೆಯ ಆಡಳಿತವು ಪೊಲೀಸರಿಗೆ ಮಾಹಿತಿ ನೀಡಿದೆ. ಚೆನ್ನೈನಲ್ಲಿ ಘಟನೆಗಳು ನಡೆದಿದ್ದರಿಂದ ಉಲುಂದೂರ್‌ಪೇಟೆ ಪೊಲೀಸರು ತಿರುವನ್ಮಿಯೂರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಅವರು ನನ್ನ ಫೋನ್‌ನ್ನು ಕಸಿದುಕೊಂಡರು, ಆದ್ದರಿಂದ ನಾನು ನನ್ನ ತಾಯಿಯೊಂದಿಗೆ ಮಾತನಾಡಲು ನಡೆಸಲು ಸಾಧ್ಯವಾಗಲಿಲ್ಲ. ಅವರು ಮೇ 2023ರಲ್ಲಿ ಆರು ತಿಂಗಳ ಕಾಲ ಇಲ್ಲಿ ಕೆಲಸ ಮಾಡಲು ನನ್ನ ತಾಯಿಯ ಸಮ್ಮುಖದಲ್ಲಿ ಬಾಂಡ್ ಪೇಪರ್‌ಗೆ ಸಹಿ ಹಾಕುವಂತೆ ಒತ್ತಾಯಿಸಿದರು. ಆ ಸಮಯದಲ್ಲಿ ಮೆರ್ಲಿನಾ ನನ್ನ ಫೋನ್‌ನ್ನು ನನ್ನ ತಾಯಿಗೆ ಹಸ್ತಾಂತರಿಸಿದ್ದಾರೆ. 12ನೇ ತರಗತಿ ಪರೀಕ್ಷೆಯಲ್ಲಿ 433 ಅಂಕ ಪಡೆದಿರುವ ನಾನು ಮೆಡಿಕಲ್ ಓದಲು ಬಯಸಿದ್ದೆ. NEET ಕೋಚಿಂಗ್‌ಗಾಗಿ ಹಣಕ್ಕೆ ಕೆಲಸಕ್ಕೆ ಸೇರ್ಪಡೆಯಾಗಿದ್ದೆ. ನಾನು ಓದಲು ಹಣ ಸಂಪಾದಿಸಲು ಇಲ್ಲಿದ್ದೇನೆ ಎಂದು ನಾನು ಅವರಿಗೆ ಹೇಳಿದೆ ಮತ್ತು ಅವರು ನನ್ನನ್ನು ಆರ್ಥಿಕವಾಗಿ ಬೆಂಬಲಿಸುತ್ತಾರೆ ಎಂದು ಹೇಳಿದ್ದರು. ಆಗಸ್ಟ್ 2023ರಲ್ಲಿ ನಾನು ನನ್ನ ವರ್ಗಾವಣೆ ಪ್ರಮಾಣಪತ್ರವನ್ನು ಪಡೆಯಲು ಹೋಗುವಾಗ ಮೆರ್ಲಿನಾ ನನ್ನೊಂದಿಗೆ ಶಾಲೆಗೆ ಬಂದಿದ್ದರು. ಕೆಲವು ದಿನಗಳ ನಂತರ ಅವರು ನನ್ನನ್ನು ಆನ್‌ಲೈನ್ ಶಿಕ್ಷಣವನ್ನು ಪಡೆಯುವ ಸಂಸ್ಥೆಗೆ ಸೇರಿಸುವುದಾಗಿ ಹೇಳಿದ್ದರು. ಅವಳು ಕೋರ್ಸ್‌ಗೆ 2 ಲಕ್ಷ ರೂ.ಕೊಟ್ಟಿರುವುದಾಗಿ ಹೇಳಿದ್ದಾರೆ. ಆದರೆ ನಾನು ಆನ್‌ಲೈನ್‌ನಲ್ಲಿ ಯಾವುದೇ ತರಗತಿಗಳಿಗೆ ಹಾಜರಾಗಲಿಲ್ಲ.  ಮೆರ್ಲಿನಾಗೆ ಮನೆಗೆ ಮರಳಲು ಅವಕಾಶ ನೀಡುವಂತೆ ಹಲವಾರು ಬಾರಿ ವಿನಂತಿಸಿದ್ದೆ. ಅವರು 10 ಮತ್ತು 12ನೇ ತರಗತಿಯ ಅಂಕಪಟ್ಟಿಗಳನ್ನು ವರ್ಗಾವಣೆ ಪ್ರಮಾಣಪತ್ರದೊಂದಿಗೆ ಇಟ್ಟುಕೊಂಡಿದ್ದರು. ಅವಳು  ಕೆಲಸಕ್ಕೆ ಸಂಬಳ ನೀಡಲಿಲ್ಲ. ಒಪ್ಪಂದದಂತೆ ತಿಂಗಳಿಗೆ 16,000 ರೂ.ಗಳನ್ನು ನೀಡಬೇಕಿತ್ತು. ಆದರೆ ಕೇವಲ 5,000 ರೂ.ನೀಡಲಾಗಿದೆ ಎಂದು ಸಂತ್ರಸ್ತ ಬಾಲಕಿ ಆರೋಪಿಸಿದ್ದಾಳೆ.

ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಐ ಕರುಣಾನಿತಿ, ಮಗ ಮತ್ತು ಸೊಸೆ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಮಗನ ಮನೆಯಲ್ಲಿ ಏನಾಯಿತು ಎಂಬುದು ತನಗೆ ತಿಳಿದಿಲ್ಲ, ಆದರೆ ಮನೆಮಂದಿ ಯಾವತ್ತೂ ತಮ್ಮ ಉದ್ಯೋಗಿಗಳನ್ನು ಈ ರೀತಿ ನಡೆಸಿಕೊಂಡಿಲ್ಲ. ಅವರು ಅವಳ 18ನೇ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಈ ದೂರಿನ ಹಿಂದೆ ವೈಯಕ್ತಿಕ ಪ್ರೇರಣೆ ಇರಬಹುದು. ನಾವು ಅವಳನ್ನು ನಮ್ಮ ಕುಟುಂಬದ ಸದಸ್ಯರಂತೆ ನೋಡಿಕೊಂಡೆವು ಮತ್ತು ಶಿಕ್ಷಣ ಪಡೆಯಲು ಅವಳನ್ನು ಬೆಂಬಲಿಸಿದೆವು. ಇವು ಸುಳ್ಳು ಆರೋಪಗಳು ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿ: ಮಣಿಪುರದಲ್ಲಿ ಮತ್ತೆ ಉದ್ವಿಗ್ನ: ಪೊಲೀಸ್ ಪ್ರಧಾನ ಕಚೇರಿ ಮೇಲೆ ದಾಳಿ, ಮನೆಗಳ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...