Homeಮುಖಪುಟಡಿಎಂಕೆ ಶಾಸಕನ ಪುತ್ರನ ನಿವಾಸದಲ್ಲಿ ಸಿಗರೇಟಿನಿಂದ ಸುಟ್ಟು ದೌರ್ಜನ್ಯ: ದಲಿತ ಬಾಲಕಿ ಆರೋಪ

ಡಿಎಂಕೆ ಶಾಸಕನ ಪುತ್ರನ ನಿವಾಸದಲ್ಲಿ ಸಿಗರೇಟಿನಿಂದ ಸುಟ್ಟು ದೌರ್ಜನ್ಯ: ದಲಿತ ಬಾಲಕಿ ಆರೋಪ

- Advertisement -
- Advertisement -

ತಮಿಳುನಾಡಿನ ಡಿಎಂಕೆ ಶಾಸಕ ಐ ಕರುಣಾನಿತಿ ಪುತ್ರ ಮತ್ತು ಸೋಸೆ, ದಲಿತ ಯುವತಿಗೆ ದೌರ್ಜನ್ಯ ನಡೆಸಿದ್ದಾರೆ. ಯುವತಿ ಉಲುಂದೂರ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಾದಾಗ ಪ್ರಕರಣ ಬಯಲಿಗೆ ಬಂದಿದ್ದು, ಯುವತಿಯ ಮೈಮೇಲೆ ಸಿಗರೇಟ್‌ನಿಂದ ಸುಟ್ಟ ಗಾಯಗಳು ಕಂಡುಬಂದಿದೆ.

ಪಲ್ಲವರಂ ಕ್ಷೇತ್ರದ ಡಿಎಂಕೆ ಶಾಸಕ ಐ ಕರುಣಾನಿತಿ ಅವರ ಮಗ ಆಂಟೊ ಮನೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಯುವತಿ ಕೆಲಸ ಮಾಡುತ್ತಿದ್ದಳು. ಬಾಲಕಿಯ ಮುಖ ಮತ್ತು ದೇಹದ ಮೇಲೆ ಸಿಗರೇಟ್‌ನಿಂದ ಸುಟ್ಟಗಾಯಗಳಿದ್ದು,  ಶಾಸಕರ ಮಗ ಮತ್ತು ಸೊಸೆ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ಪೊಂಗಲ್ ಹಬ್ಬಕ್ಕೆ ತಾಯಿಯ ಮನೆಗೆ ಯುವತಿ ತೆರಳಿದಾಗ ಮಗಳ ಮೇಲೆ ಗಾಯವಾಗಿರುವುದನ್ನು ತಾಯಿ ಗಮನಿಸಿದ್ದಾರೆ. ಯುವತಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಯುವತಿಯಿಂದ ದೂರು ಸ್ವೀಕರಿಸಬೇಕಿದೆ. ಈ ಬಗ್ಗೆ ಉಲುಂದೂರ್‌ಪೇಟೆ ಪೊಲೀಸರಿಂದ ಮಾಹಿತಿ ಪಡೆದಿದ್ದೇವೆ. ಅದರ ಆಧಾರದಲ್ಲಿ ಹೆಚ್ಚಿನ ತನಿಖೆಯನ್ನು ನಡೆಸಲಾಗುವುದು ಎಂದು ನೀಲಂಕರೈ ಸಹಾಯಕ ಪೊಲೀಸ್‌ ಆಯುಕ್ತರ ಕಚೇರಿ ತಿಳಿಸಿದೆ.

ಕರುಣಾನಿತಿ ಅವರ ಮಗ ಆಂಟೊ ಹಾಗೂ ಸೊಸೆ ಮೆರ್ಲಿನಾ ಅವರು ಚೆನ್ನೈನ ತಿರುವನ್ಮಿಯೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಥಳಿಸಿದ್ದಾರೆ ಎಂದು ಸಂತ್ರಸ್ತ ಯುವತಿ ಆರೋಪಿಸಿದ್ದಾರೆ. ಕಲ್ಲಾಕುರಿಚಿ ಜಿಲ್ಲೆಯ ಉಲುಂದೂರುಪೇಟೆ ಮೂಲದ ಅನು(ಹೆಸರು ಬದಲಿಸಲಾಗಿದೆ) ಅವರು ಎಂಟು ತಿಂಗಳ ಹಿಂದೆ ಅಂದರೆ 12ನೇ ತರಗತಿ ಪರೀಕ್ಷೆಯನ್ನು ಪೂರ್ಣಗೊಳಿಸಿದ ನಂತರ ಆಂಟೊ ಅವರ ನಿವಾಸದಲ್ಲಿ ಮನೆ ಕೆಲಸಕ್ಕೆ ಸೇರಿಕೊಂಡಿದ್ದರು.

ಸಂತ್ರಸ್ತೆ ಅನು(ಹೆಸರು ಬದಲಿಸಲಾಗಿದೆ) ಅವರ ತಾಯಿ ಚೆನ್ನೈನ ಕೋಲಪಾಕ್ಕಂನಲ್ಲಿ ಮನೆ ಕೆಲಸ ಮಾಡುತ್ತಿದ್ದಾರೆ. ಹಣಕಾಸಿನ ಸಮಸ್ಯೆಯಿಂದ ಆಂಟೊ ಅವರ ನಿವಾಸದಲ್ಲಿ ಮನೆ ಸಹಾಯಕರಾಗಿ ಕೆಲಸ ಮಾಡಲು ತಾಯಿ ಅನು ಅವರನ್ನು ಕಳುಹಿಸಿದ್ದರು. ಕಳೆದ ಎಂಟು ತಿಂಗಳಲ್ಲಿ ಮೆರ್ಲಿನಾ ಆಕೆಯನ್ನು ಥಳಿಸಿದ್ದಾಳೆ, ಸಿಗರೇಟ್‌ನಿಂದ ಚರ್ಮವನ್ನು ಸುಟ್ಟುಹಾಕಿದ್ದಾಳೆ ಮತ್ತು ಅವಳ ಕೂದಲನ್ನು ಚಿಕ್ಕದಾಗಿ ಕತ್ತರಿಸಿದ್ದಾಳೆ. ಇದಲ್ಲದೆ ದೌರ್ಜನ್ಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಉಲುಂದೂರುಪೇಟೆ ಆಸ್ಪತ್ರೆಯ ದಾಖಲಾತಿಯಲ್ಲಿ ಅನು ಅವರ ಮೇಲೆ ಕೋಲು ಮತ್ತು ಹೇರ್ ಸ್ಟ್ರೈಟ್ನರ್ ಬಳಸಿ ಹಲ್ಲೆ ನಡೆಸಲಾಗಿದೆ ಎಂದು ದಾಖಲಿಸಲಾಗಿದೆ. ಆಸ್ಪತ್ರೆಯ ಅಧಿಕಾರಿಗಳಿಗೆ ನೀಡಿದ ಹೇಳಿಕೆಯ ಪ್ರಕಾರ, ಆಕೆಯ ಉದ್ಯೋಗ ಸ್ಥಳದಲ್ಲಿ ಆಕೆಯ ಮೇಲೆ ಒದೆಯಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಹಣೆ, ಗಲ್ಲದ ಮೇಲೆ ಗಾಯ ಮತ್ತು ಎರಡೂ ಮುಂಗೈಗಳಲ್ಲಿ ಸುಟ್ಟ ಗಾಯಗಳಿರುವುದು ಕಂಡುಬಂದಿದೆ. ಆಕೆಯ ದೇಹದಲ್ಲಿ ಹಲವು ಗಾಯಗಳು ಕಂಡು ಬಂದಿರುವುದರಿಂದ ಆಸ್ಪತ್ರೆಯ ಆಡಳಿತವು ಪೊಲೀಸರಿಗೆ ಮಾಹಿತಿ ನೀಡಿದೆ. ಚೆನ್ನೈನಲ್ಲಿ ಘಟನೆಗಳು ನಡೆದಿದ್ದರಿಂದ ಉಲುಂದೂರ್‌ಪೇಟೆ ಪೊಲೀಸರು ತಿರುವನ್ಮಿಯೂರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಅವರು ನನ್ನ ಫೋನ್‌ನ್ನು ಕಸಿದುಕೊಂಡರು, ಆದ್ದರಿಂದ ನಾನು ನನ್ನ ತಾಯಿಯೊಂದಿಗೆ ಮಾತನಾಡಲು ನಡೆಸಲು ಸಾಧ್ಯವಾಗಲಿಲ್ಲ. ಅವರು ಮೇ 2023ರಲ್ಲಿ ಆರು ತಿಂಗಳ ಕಾಲ ಇಲ್ಲಿ ಕೆಲಸ ಮಾಡಲು ನನ್ನ ತಾಯಿಯ ಸಮ್ಮುಖದಲ್ಲಿ ಬಾಂಡ್ ಪೇಪರ್‌ಗೆ ಸಹಿ ಹಾಕುವಂತೆ ಒತ್ತಾಯಿಸಿದರು. ಆ ಸಮಯದಲ್ಲಿ ಮೆರ್ಲಿನಾ ನನ್ನ ಫೋನ್‌ನ್ನು ನನ್ನ ತಾಯಿಗೆ ಹಸ್ತಾಂತರಿಸಿದ್ದಾರೆ. 12ನೇ ತರಗತಿ ಪರೀಕ್ಷೆಯಲ್ಲಿ 433 ಅಂಕ ಪಡೆದಿರುವ ನಾನು ಮೆಡಿಕಲ್ ಓದಲು ಬಯಸಿದ್ದೆ. NEET ಕೋಚಿಂಗ್‌ಗಾಗಿ ಹಣಕ್ಕೆ ಕೆಲಸಕ್ಕೆ ಸೇರ್ಪಡೆಯಾಗಿದ್ದೆ. ನಾನು ಓದಲು ಹಣ ಸಂಪಾದಿಸಲು ಇಲ್ಲಿದ್ದೇನೆ ಎಂದು ನಾನು ಅವರಿಗೆ ಹೇಳಿದೆ ಮತ್ತು ಅವರು ನನ್ನನ್ನು ಆರ್ಥಿಕವಾಗಿ ಬೆಂಬಲಿಸುತ್ತಾರೆ ಎಂದು ಹೇಳಿದ್ದರು. ಆಗಸ್ಟ್ 2023ರಲ್ಲಿ ನಾನು ನನ್ನ ವರ್ಗಾವಣೆ ಪ್ರಮಾಣಪತ್ರವನ್ನು ಪಡೆಯಲು ಹೋಗುವಾಗ ಮೆರ್ಲಿನಾ ನನ್ನೊಂದಿಗೆ ಶಾಲೆಗೆ ಬಂದಿದ್ದರು. ಕೆಲವು ದಿನಗಳ ನಂತರ ಅವರು ನನ್ನನ್ನು ಆನ್‌ಲೈನ್ ಶಿಕ್ಷಣವನ್ನು ಪಡೆಯುವ ಸಂಸ್ಥೆಗೆ ಸೇರಿಸುವುದಾಗಿ ಹೇಳಿದ್ದರು. ಅವಳು ಕೋರ್ಸ್‌ಗೆ 2 ಲಕ್ಷ ರೂ.ಕೊಟ್ಟಿರುವುದಾಗಿ ಹೇಳಿದ್ದಾರೆ. ಆದರೆ ನಾನು ಆನ್‌ಲೈನ್‌ನಲ್ಲಿ ಯಾವುದೇ ತರಗತಿಗಳಿಗೆ ಹಾಜರಾಗಲಿಲ್ಲ.  ಮೆರ್ಲಿನಾಗೆ ಮನೆಗೆ ಮರಳಲು ಅವಕಾಶ ನೀಡುವಂತೆ ಹಲವಾರು ಬಾರಿ ವಿನಂತಿಸಿದ್ದೆ. ಅವರು 10 ಮತ್ತು 12ನೇ ತರಗತಿಯ ಅಂಕಪಟ್ಟಿಗಳನ್ನು ವರ್ಗಾವಣೆ ಪ್ರಮಾಣಪತ್ರದೊಂದಿಗೆ ಇಟ್ಟುಕೊಂಡಿದ್ದರು. ಅವಳು  ಕೆಲಸಕ್ಕೆ ಸಂಬಳ ನೀಡಲಿಲ್ಲ. ಒಪ್ಪಂದದಂತೆ ತಿಂಗಳಿಗೆ 16,000 ರೂ.ಗಳನ್ನು ನೀಡಬೇಕಿತ್ತು. ಆದರೆ ಕೇವಲ 5,000 ರೂ.ನೀಡಲಾಗಿದೆ ಎಂದು ಸಂತ್ರಸ್ತ ಬಾಲಕಿ ಆರೋಪಿಸಿದ್ದಾಳೆ.

ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಐ ಕರುಣಾನಿತಿ, ಮಗ ಮತ್ತು ಸೊಸೆ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಮಗನ ಮನೆಯಲ್ಲಿ ಏನಾಯಿತು ಎಂಬುದು ತನಗೆ ತಿಳಿದಿಲ್ಲ, ಆದರೆ ಮನೆಮಂದಿ ಯಾವತ್ತೂ ತಮ್ಮ ಉದ್ಯೋಗಿಗಳನ್ನು ಈ ರೀತಿ ನಡೆಸಿಕೊಂಡಿಲ್ಲ. ಅವರು ಅವಳ 18ನೇ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಈ ದೂರಿನ ಹಿಂದೆ ವೈಯಕ್ತಿಕ ಪ್ರೇರಣೆ ಇರಬಹುದು. ನಾವು ಅವಳನ್ನು ನಮ್ಮ ಕುಟುಂಬದ ಸದಸ್ಯರಂತೆ ನೋಡಿಕೊಂಡೆವು ಮತ್ತು ಶಿಕ್ಷಣ ಪಡೆಯಲು ಅವಳನ್ನು ಬೆಂಬಲಿಸಿದೆವು. ಇವು ಸುಳ್ಳು ಆರೋಪಗಳು ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿ: ಮಣಿಪುರದಲ್ಲಿ ಮತ್ತೆ ಉದ್ವಿಗ್ನ: ಪೊಲೀಸ್ ಪ್ರಧಾನ ಕಚೇರಿ ಮೇಲೆ ದಾಳಿ, ಮನೆಗಳ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...