Homeಮುಖಪುಟಡಿಎಂಕೆ ಶಾಸಕನ ಪುತ್ರನ ನಿವಾಸದಲ್ಲಿ ಸಿಗರೇಟಿನಿಂದ ಸುಟ್ಟು ದೌರ್ಜನ್ಯ: ದಲಿತ ಬಾಲಕಿ ಆರೋಪ

ಡಿಎಂಕೆ ಶಾಸಕನ ಪುತ್ರನ ನಿವಾಸದಲ್ಲಿ ಸಿಗರೇಟಿನಿಂದ ಸುಟ್ಟು ದೌರ್ಜನ್ಯ: ದಲಿತ ಬಾಲಕಿ ಆರೋಪ

- Advertisement -
- Advertisement -

ತಮಿಳುನಾಡಿನ ಡಿಎಂಕೆ ಶಾಸಕ ಐ ಕರುಣಾನಿತಿ ಪುತ್ರ ಮತ್ತು ಸೋಸೆ, ದಲಿತ ಯುವತಿಗೆ ದೌರ್ಜನ್ಯ ನಡೆಸಿದ್ದಾರೆ. ಯುವತಿ ಉಲುಂದೂರ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಾದಾಗ ಪ್ರಕರಣ ಬಯಲಿಗೆ ಬಂದಿದ್ದು, ಯುವತಿಯ ಮೈಮೇಲೆ ಸಿಗರೇಟ್‌ನಿಂದ ಸುಟ್ಟ ಗಾಯಗಳು ಕಂಡುಬಂದಿದೆ.

ಪಲ್ಲವರಂ ಕ್ಷೇತ್ರದ ಡಿಎಂಕೆ ಶಾಸಕ ಐ ಕರುಣಾನಿತಿ ಅವರ ಮಗ ಆಂಟೊ ಮನೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಯುವತಿ ಕೆಲಸ ಮಾಡುತ್ತಿದ್ದಳು. ಬಾಲಕಿಯ ಮುಖ ಮತ್ತು ದೇಹದ ಮೇಲೆ ಸಿಗರೇಟ್‌ನಿಂದ ಸುಟ್ಟಗಾಯಗಳಿದ್ದು,  ಶಾಸಕರ ಮಗ ಮತ್ತು ಸೊಸೆ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ಪೊಂಗಲ್ ಹಬ್ಬಕ್ಕೆ ತಾಯಿಯ ಮನೆಗೆ ಯುವತಿ ತೆರಳಿದಾಗ ಮಗಳ ಮೇಲೆ ಗಾಯವಾಗಿರುವುದನ್ನು ತಾಯಿ ಗಮನಿಸಿದ್ದಾರೆ. ಯುವತಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಯುವತಿಯಿಂದ ದೂರು ಸ್ವೀಕರಿಸಬೇಕಿದೆ. ಈ ಬಗ್ಗೆ ಉಲುಂದೂರ್‌ಪೇಟೆ ಪೊಲೀಸರಿಂದ ಮಾಹಿತಿ ಪಡೆದಿದ್ದೇವೆ. ಅದರ ಆಧಾರದಲ್ಲಿ ಹೆಚ್ಚಿನ ತನಿಖೆಯನ್ನು ನಡೆಸಲಾಗುವುದು ಎಂದು ನೀಲಂಕರೈ ಸಹಾಯಕ ಪೊಲೀಸ್‌ ಆಯುಕ್ತರ ಕಚೇರಿ ತಿಳಿಸಿದೆ.

ಕರುಣಾನಿತಿ ಅವರ ಮಗ ಆಂಟೊ ಹಾಗೂ ಸೊಸೆ ಮೆರ್ಲಿನಾ ಅವರು ಚೆನ್ನೈನ ತಿರುವನ್ಮಿಯೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಥಳಿಸಿದ್ದಾರೆ ಎಂದು ಸಂತ್ರಸ್ತ ಯುವತಿ ಆರೋಪಿಸಿದ್ದಾರೆ. ಕಲ್ಲಾಕುರಿಚಿ ಜಿಲ್ಲೆಯ ಉಲುಂದೂರುಪೇಟೆ ಮೂಲದ ಅನು(ಹೆಸರು ಬದಲಿಸಲಾಗಿದೆ) ಅವರು ಎಂಟು ತಿಂಗಳ ಹಿಂದೆ ಅಂದರೆ 12ನೇ ತರಗತಿ ಪರೀಕ್ಷೆಯನ್ನು ಪೂರ್ಣಗೊಳಿಸಿದ ನಂತರ ಆಂಟೊ ಅವರ ನಿವಾಸದಲ್ಲಿ ಮನೆ ಕೆಲಸಕ್ಕೆ ಸೇರಿಕೊಂಡಿದ್ದರು.

ಸಂತ್ರಸ್ತೆ ಅನು(ಹೆಸರು ಬದಲಿಸಲಾಗಿದೆ) ಅವರ ತಾಯಿ ಚೆನ್ನೈನ ಕೋಲಪಾಕ್ಕಂನಲ್ಲಿ ಮನೆ ಕೆಲಸ ಮಾಡುತ್ತಿದ್ದಾರೆ. ಹಣಕಾಸಿನ ಸಮಸ್ಯೆಯಿಂದ ಆಂಟೊ ಅವರ ನಿವಾಸದಲ್ಲಿ ಮನೆ ಸಹಾಯಕರಾಗಿ ಕೆಲಸ ಮಾಡಲು ತಾಯಿ ಅನು ಅವರನ್ನು ಕಳುಹಿಸಿದ್ದರು. ಕಳೆದ ಎಂಟು ತಿಂಗಳಲ್ಲಿ ಮೆರ್ಲಿನಾ ಆಕೆಯನ್ನು ಥಳಿಸಿದ್ದಾಳೆ, ಸಿಗರೇಟ್‌ನಿಂದ ಚರ್ಮವನ್ನು ಸುಟ್ಟುಹಾಕಿದ್ದಾಳೆ ಮತ್ತು ಅವಳ ಕೂದಲನ್ನು ಚಿಕ್ಕದಾಗಿ ಕತ್ತರಿಸಿದ್ದಾಳೆ. ಇದಲ್ಲದೆ ದೌರ್ಜನ್ಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಉಲುಂದೂರುಪೇಟೆ ಆಸ್ಪತ್ರೆಯ ದಾಖಲಾತಿಯಲ್ಲಿ ಅನು ಅವರ ಮೇಲೆ ಕೋಲು ಮತ್ತು ಹೇರ್ ಸ್ಟ್ರೈಟ್ನರ್ ಬಳಸಿ ಹಲ್ಲೆ ನಡೆಸಲಾಗಿದೆ ಎಂದು ದಾಖಲಿಸಲಾಗಿದೆ. ಆಸ್ಪತ್ರೆಯ ಅಧಿಕಾರಿಗಳಿಗೆ ನೀಡಿದ ಹೇಳಿಕೆಯ ಪ್ರಕಾರ, ಆಕೆಯ ಉದ್ಯೋಗ ಸ್ಥಳದಲ್ಲಿ ಆಕೆಯ ಮೇಲೆ ಒದೆಯಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಹಣೆ, ಗಲ್ಲದ ಮೇಲೆ ಗಾಯ ಮತ್ತು ಎರಡೂ ಮುಂಗೈಗಳಲ್ಲಿ ಸುಟ್ಟ ಗಾಯಗಳಿರುವುದು ಕಂಡುಬಂದಿದೆ. ಆಕೆಯ ದೇಹದಲ್ಲಿ ಹಲವು ಗಾಯಗಳು ಕಂಡು ಬಂದಿರುವುದರಿಂದ ಆಸ್ಪತ್ರೆಯ ಆಡಳಿತವು ಪೊಲೀಸರಿಗೆ ಮಾಹಿತಿ ನೀಡಿದೆ. ಚೆನ್ನೈನಲ್ಲಿ ಘಟನೆಗಳು ನಡೆದಿದ್ದರಿಂದ ಉಲುಂದೂರ್‌ಪೇಟೆ ಪೊಲೀಸರು ತಿರುವನ್ಮಿಯೂರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಅವರು ನನ್ನ ಫೋನ್‌ನ್ನು ಕಸಿದುಕೊಂಡರು, ಆದ್ದರಿಂದ ನಾನು ನನ್ನ ತಾಯಿಯೊಂದಿಗೆ ಮಾತನಾಡಲು ನಡೆಸಲು ಸಾಧ್ಯವಾಗಲಿಲ್ಲ. ಅವರು ಮೇ 2023ರಲ್ಲಿ ಆರು ತಿಂಗಳ ಕಾಲ ಇಲ್ಲಿ ಕೆಲಸ ಮಾಡಲು ನನ್ನ ತಾಯಿಯ ಸಮ್ಮುಖದಲ್ಲಿ ಬಾಂಡ್ ಪೇಪರ್‌ಗೆ ಸಹಿ ಹಾಕುವಂತೆ ಒತ್ತಾಯಿಸಿದರು. ಆ ಸಮಯದಲ್ಲಿ ಮೆರ್ಲಿನಾ ನನ್ನ ಫೋನ್‌ನ್ನು ನನ್ನ ತಾಯಿಗೆ ಹಸ್ತಾಂತರಿಸಿದ್ದಾರೆ. 12ನೇ ತರಗತಿ ಪರೀಕ್ಷೆಯಲ್ಲಿ 433 ಅಂಕ ಪಡೆದಿರುವ ನಾನು ಮೆಡಿಕಲ್ ಓದಲು ಬಯಸಿದ್ದೆ. NEET ಕೋಚಿಂಗ್‌ಗಾಗಿ ಹಣಕ್ಕೆ ಕೆಲಸಕ್ಕೆ ಸೇರ್ಪಡೆಯಾಗಿದ್ದೆ. ನಾನು ಓದಲು ಹಣ ಸಂಪಾದಿಸಲು ಇಲ್ಲಿದ್ದೇನೆ ಎಂದು ನಾನು ಅವರಿಗೆ ಹೇಳಿದೆ ಮತ್ತು ಅವರು ನನ್ನನ್ನು ಆರ್ಥಿಕವಾಗಿ ಬೆಂಬಲಿಸುತ್ತಾರೆ ಎಂದು ಹೇಳಿದ್ದರು. ಆಗಸ್ಟ್ 2023ರಲ್ಲಿ ನಾನು ನನ್ನ ವರ್ಗಾವಣೆ ಪ್ರಮಾಣಪತ್ರವನ್ನು ಪಡೆಯಲು ಹೋಗುವಾಗ ಮೆರ್ಲಿನಾ ನನ್ನೊಂದಿಗೆ ಶಾಲೆಗೆ ಬಂದಿದ್ದರು. ಕೆಲವು ದಿನಗಳ ನಂತರ ಅವರು ನನ್ನನ್ನು ಆನ್‌ಲೈನ್ ಶಿಕ್ಷಣವನ್ನು ಪಡೆಯುವ ಸಂಸ್ಥೆಗೆ ಸೇರಿಸುವುದಾಗಿ ಹೇಳಿದ್ದರು. ಅವಳು ಕೋರ್ಸ್‌ಗೆ 2 ಲಕ್ಷ ರೂ.ಕೊಟ್ಟಿರುವುದಾಗಿ ಹೇಳಿದ್ದಾರೆ. ಆದರೆ ನಾನು ಆನ್‌ಲೈನ್‌ನಲ್ಲಿ ಯಾವುದೇ ತರಗತಿಗಳಿಗೆ ಹಾಜರಾಗಲಿಲ್ಲ.  ಮೆರ್ಲಿನಾಗೆ ಮನೆಗೆ ಮರಳಲು ಅವಕಾಶ ನೀಡುವಂತೆ ಹಲವಾರು ಬಾರಿ ವಿನಂತಿಸಿದ್ದೆ. ಅವರು 10 ಮತ್ತು 12ನೇ ತರಗತಿಯ ಅಂಕಪಟ್ಟಿಗಳನ್ನು ವರ್ಗಾವಣೆ ಪ್ರಮಾಣಪತ್ರದೊಂದಿಗೆ ಇಟ್ಟುಕೊಂಡಿದ್ದರು. ಅವಳು  ಕೆಲಸಕ್ಕೆ ಸಂಬಳ ನೀಡಲಿಲ್ಲ. ಒಪ್ಪಂದದಂತೆ ತಿಂಗಳಿಗೆ 16,000 ರೂ.ಗಳನ್ನು ನೀಡಬೇಕಿತ್ತು. ಆದರೆ ಕೇವಲ 5,000 ರೂ.ನೀಡಲಾಗಿದೆ ಎಂದು ಸಂತ್ರಸ್ತ ಬಾಲಕಿ ಆರೋಪಿಸಿದ್ದಾಳೆ.

ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಐ ಕರುಣಾನಿತಿ, ಮಗ ಮತ್ತು ಸೊಸೆ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಮಗನ ಮನೆಯಲ್ಲಿ ಏನಾಯಿತು ಎಂಬುದು ತನಗೆ ತಿಳಿದಿಲ್ಲ, ಆದರೆ ಮನೆಮಂದಿ ಯಾವತ್ತೂ ತಮ್ಮ ಉದ್ಯೋಗಿಗಳನ್ನು ಈ ರೀತಿ ನಡೆಸಿಕೊಂಡಿಲ್ಲ. ಅವರು ಅವಳ 18ನೇ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಈ ದೂರಿನ ಹಿಂದೆ ವೈಯಕ್ತಿಕ ಪ್ರೇರಣೆ ಇರಬಹುದು. ನಾವು ಅವಳನ್ನು ನಮ್ಮ ಕುಟುಂಬದ ಸದಸ್ಯರಂತೆ ನೋಡಿಕೊಂಡೆವು ಮತ್ತು ಶಿಕ್ಷಣ ಪಡೆಯಲು ಅವಳನ್ನು ಬೆಂಬಲಿಸಿದೆವು. ಇವು ಸುಳ್ಳು ಆರೋಪಗಳು ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿ: ಮಣಿಪುರದಲ್ಲಿ ಮತ್ತೆ ಉದ್ವಿಗ್ನ: ಪೊಲೀಸ್ ಪ್ರಧಾನ ಕಚೇರಿ ಮೇಲೆ ದಾಳಿ, ಮನೆಗಳ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...