Homeದಲಿತ್ ಫೈಲ್ಸ್ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

- Advertisement -
- Advertisement -

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.

ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ ಕರಸುವಾ ಗ್ರಾಮದ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 10 ವರ್ಷದ ದಲಿತ ಬಾಲಕಿಗೆ ಶಾಲಾ ಶೌಚಾಲಯ ತೊಳೆಯುವಂತೆ ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ ದಾಖಲಾತಿಯಿಂದ ಆಕೆಯ ಹೆಸರನ್ನು ತೆಗೆದು ಹಾಕುವುದಾಗಿ ಬೆದರಿಸಿದ್ದಾರೆ. ಆದರೂ, ಅನಾರೋಗ್ಯ ಮತ್ತು ತಂದೆಯ ಆಕ್ಷೇಪಣೆಯನ್ನು ಉಲ್ಲೇಖಿಸಿ ಬಾಲಕಿ ಶೌಚಾಲಯ ತೊಳೆಯಲು ನಿರಾಕರಿಸಿದ್ದಾಳೆ. ಇದರಿಂದ ಕುಪಿತಗೊಂಡ ಶಿಕ್ಷಕಿ, ಆಕೆಗೆ ಥಳಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಶಿಕ್ಷಕಿಯ ದೌರ್ಜನ್ಯದ ಕುರಿತು ಬಾಲಕಿ ಹೇಳಿಕೊಂಡ ವಿಡಿಯೋವನ್ನು ಸ್ಥಳೀಯರೊಬ್ಬರು ಇಂಟರ್‌ನೆಟ್‌ನಲ್ಲಿ ಅಪ್ಲೋಡ್ ಮಾಡಿದ್ದರು. ಇದನ್ನು ಗಮನಿಸಿದ ಗ್ರಾಮಸ್ಥರು ಶಿಕ್ಷಕಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಈ ಕುರಿತು ಪೊಲೀಸರಿಗೆ ಮಾಹಿತಿ ದೊರೆತಿದೆ ಎಂದು ವರದಿ ಉಲ್ಲೇಖಿಸಿದೆ.

“ಶಿಕ್ಷಕಿ ತನಗೆ ಶೌಚಾಲಯವನ್ನು ಸ್ವಚ್ಛಗೊಳಿಸಲು ಮತ್ತು ಬಕೆಟ್‌ಗಳಿಗೆ ನೀರು ತುಂಬಿಸಲು ಹೇಳಿದ್ದರು. ತಾನು ಅದಕ್ಕೆ ನಿರಾಕರಿಸಿದಾಗ ಆಕೆ ಕೋಪಗೊಂಡು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಶಿಕ್ಷಕರು ಶಾಲೆಯ ಇತರ ಮಕ್ಕಳಿಗೂ ನಿಯಮಿತವಾಗಿ ಪೀಠೋಪಕರಣಗಳನ್ನು ಸ್ವಚ್ಛಗೊಳಿಸಲು ಮತ್ತು ಇತರ ಕೆಲಸಗಳನ್ನು ಮಾಡಲು ಒತ್ತಾಯಿಸುತ್ತಾರೆ. ಕೆಲವೊಮ್ಮೆ ಶಿಕ್ಷಕರು ವಿದ್ಯಾರ್ಥಿಗಳಿಂದ ತಮ್ಮ ಕಾಲುಗಳನ್ನು ಒತ್ತಿಸಿಕೊಳ್ಳುತ್ತಾರೆ (ಮಸಾಜ್ ಮಾಡಿಸಿಕೊಳ್ಳುತ್ತಾರೆ)” ಎಂದು ವಿದ್ಯಾರ್ಥಿನಿ ಹೇಳಿರುವುದು ವಿಡಿಯೋ ಕ್ಲಿಪ್‌ನಲ್ಲಿ ಇದೆ ಎಂದು ವರದಿ ತಿಳಿಸಿದೆ.

ಮಗಳ ಮೇಲಿನ ದೌರ್ಜನ್ಯದ ಕುರಿತು, ದಿನಗೂಲಿ ನೌಕರರಾದ ಬಾಲಕಿಯ ತಂದೆ ಜೋಗಿಂದರ್ ಸಿಂಗ್ ಶಿಕ್ಷಕಿಯನ್ನು ಪ್ರಶ್ನಿಸಿದಾಗ, ಆಕೆ ತನ್ನ ಸಹೋದರನಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಸಹೋದರ ಶಾಲೆಯ ಆವರಣದಲ್ಲೇ ಜೋಗಿಂದರ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

“ಶಿಕ್ಷಕಿ ನನ್ನ ಮಗಳಿಗೆ ಥಳಿಸಿದರು, ಆಕೆಯ ಸಹೋದರ ನನಗೆ ಥಳಿಸಿದ. ಆದ್ದರಿಂದ ನಾನು ಪೊಲೀಸರಿಗೆ ದೂರು ನೀಡಿದೆ. ನಂತರ ಗ್ರಾಮದ ಕೆಲ ಹಿರಿಯರು ದೂರು ಹಿಂಪಡೆಯಲು ಕೇಳಿಕೊಂಡಾಗ, ನಾನು ನನ್ನ ಮೇಲಿನ ಹಲ್ಲೆಯ ದೂರನ್ನು ಮಾತ್ರ ಹಿಂಪಡೆಯಲು ಒಪ್ಪಿಕೊಂಡೆ. ನನ್ನ ಮಗಳ ವಿಷಯದಲ್ಲಿ ನಾನು ರಾಜಿ ಮಾಡಿಕೊಳ್ಳುವುದಿಲ್ಲ. ಶನಿವಾರ ನಮ್ಮ ಮನೆಗೆ ಸಬ್‌ ಇನ್‌ಸ್ಪೆಕ್ಟರ್ ಭೇಟಿ ನೀಡಿ ಹೊಸ ಪೊಲೀಸ್ ದೂರು ದಾಖಲಿಸುವಂತೆ ಕೇಳಿಕೊಂಡಿದ್ದಾರೆ”ಎಂದು ಬಾಲಕಿಯ ತಂದೆ ಜೋಗಿಂದರ್ ಸಿಂಗ್ ಹೇಳಿರುವುದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ವಿವರಿಸಿದೆ.

“ನಾವು ವಿಡಿಯೋವನ್ನು ಗಮನಿಸಿದ್ದೇವೆ ಮತ್ತು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕುಟುಂಬದೊಂದಿಗೆ ಪೊಲೀಸರು ಸಂಪರ್ಕದಲ್ಲಿದ್ದಾರೆ ಎಂದು ಡಿಎಸ್ಪಿ (ಗಭಾನ) ಧನಂಜಯ್ ಸಿಂಗ್ ಹೇಳಿದ್ದಾರೆ. ಈ ವಿಷಯದಲ್ಲಿ ನಾವು ಅಗತ್ಯವಾದ ಕಾನೂನು ಕ್ರಮಗಳನ್ನು ಅನ್ವೇಷಿಸುತ್ತಿದ್ದೇವೆ. ನಾವು ಶಿಕ್ಷಣ ಇಲಾಖೆಯೊಂದಿಗೆ ಸಹ ಪತ್ರವ್ಯವಹಾರ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಲಿಖಿತ ದೂರು ಸ್ವೀಕರಿಸಿದ ನಂತರ ಸಂಬಂಧಿತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಸ್‌ಎಚ್‌ಒ (ಲೋಧಾ) ಹೇಮಂತ್ ಮಾವಿ ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...