Homeದಲಿತ್ ಫೈಲ್ಸ್ಮೊದಲ ಬೆಂಚ್‌ನಲ್ಲಿ ಕುಳಿತ ಕಾರಣ ದಲಿತ ಬಾಲಕಿಗೆ ಶಿಕ್ಷಕಿಯಿಂದ ಥಳಿತ; ಎಫ್‌ಐಆರ್‌

ಮೊದಲ ಬೆಂಚ್‌ನಲ್ಲಿ ಕುಳಿತ ಕಾರಣ ದಲಿತ ಬಾಲಕಿಗೆ ಶಿಕ್ಷಕಿಯಿಂದ ಥಳಿತ; ಎಫ್‌ಐಆರ್‌

ಮಧ್ಯಪ್ರದೇಶ: ದಲಿತ ಬಾಲಕಿ ಮೊದಲ ಸಾಲಿನಲ್ಲಿ ಕುಳಿತ್ತಿದ್ದಕ್ಕೆ ಪ್ರಜ್ಞೆ ತಪ್ಪುವಂತೆ ಹೊಡೆದು, ಜಾತಿ ನಿಂದನೆ ಮಾಡಿರುವ ಶಿಕ್ಷಕಿ

- Advertisement -
- Advertisement -

16 ವರ್ಷದ ದಲಿತ ಬಾಲಕಿಯು ತರಗತಿ ವೇಳೆ ಮುಂದಿನ ಸಾಲಿನಲ್ಲಿ ಕುಳಿತಿದ್ದಕ್ಕಾಗಿ ಥಳಿಸಿದ್ದಲ್ಲದೆ ಜಾತಿ ನಿಂದನೆ ಮಾಡಿರುವ ಸರ್ಕಾರಿ ಶಿಕ್ಷಕಿಯೊಬ್ಬರ ಮೇಲೆ ಮಧ್ಯಪ್ರದೇಶ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಆಗಸ್ಟ್ 2ರಂದು ರಾಜ್ಯ ರಾಜಧಾನಿಯಿಂದ 700 ಕಿಮೀ ದೂರದಲ್ಲಿರುವ ಸಿಂಗ್ರೌಲಿ ಜಿಲ್ಲೆಯ ಬೈಧಾನ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಬಾಲಕಿಯರ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಂದು 12ನೇ ತರಗತಿಯ ವಿದ್ಯಾರ್ಥಿನಿ ಅಂಜನಾ ಸಾಕೇತ್ (ಹೆಸರು ಬದಲಾಯಿಸಲಾಗಿದೆ), ಶಿಕ್ಷಕಿ ಜಾಗೃತಿ ಸಿಂಗ್ ತರಗತಿಗೆ ಪ್ರವೇಶಿಸಿದಾಗ ತರಗತಿಯ ಮುಂಭಾಗದ ಬೆಂಚ್‌ನಲ್ಲಿ ಕುಳಿತ್ತಿದ್ದರು. ಇದನ್ನು ನೋಡಿದ ಶಿಕ್ಷಕಿ ಕೋಪಗೊಂಡಳು. ತರುವಾಯ ವಿದ್ಯಾರ್ಥಿನಿಯ ಜಾತಿ ನಿಂದನೆ ಮಾಡಿದಳು. ವಿದ್ಯಾರ್ಥಿನಿ ಅಂಜನಾ ತಲೆಗೆ ಪುಸ್ತಕದಿಂದ ಹಲವು ಬಾರಿ ಹೊಡೆದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ಶಿಕ್ಷಕಿ ನನ್ನ ತಲೆಯ ಮೇಲೆ ಪುಸ್ತಕದಿಂದ ಹೊಡೆದ ನಂತರ ನಾನು ಕೆಲವು ಸಮಯ ಪ್ರಜ್ಞೆ ತಪ್ಪಿದೆ” ಎಂದು ವಿದ್ಯಾರ್ಥಿನಿ ಹೇಳಿರುವುದನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಶಿಕ್ಷಕಿ ಜಾಗೃತಿ ಸಿಂಗ್ ವಿರುದ್ಧ ಆಗಸ್ಟ್ 17ರಂದು ಸಿಂಗ್ರೌಲಿಯ ಬೈರಾನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

“ದಲಿತ ಬಾಲಕಿಯ ದೂರಿನ ಮೇರೆಗೆ ಪೊಲೀಸರು ಶಿಕ್ಷಕಿ ಜಾಗೃತಿ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್ 294, 323, 506 ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಎರಡು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ಮುಂದುವರಿದಿದೆ” ಎಂದು ಬೈರಾನ್ ಪೊಲೀಸ್ ಪಟ್ಟಣ ನಿರೀಕ್ಷಕ ಅರುಣ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ರೋಹಿಣಿ ಪ್ರಸಾದ್ ಪಾಂಡೆ ಅವರು ಶಿಕ್ಷಕಿಯ ವಿರುದ್ಧ ಕ್ರಮ ಜರುಗಿಸಿದ್ದಾರೆ ಎಂದು ಎಫ್‌ಐಆರ್‌ ದಾಖಲಾದ ಒಂದು ದಿನದ ನಂತರ ಜಿಲ್ಲಾಧಿಕಾರಿಗಳು ಹೊರಡಿಸಿರುವ ಅಧಿಕೃತ ಪ್ರಕಟಣೆ ತಿಳಿಸಿದೆ. ರಾಜೀವ್ ರಂಜನ್ ಮೀನಾ ಅವರು ಪ್ರಕರಣದ ತನಿಖೆ ನಡೆಸಲಿದ್ದಾರೆ.

ಘಟನೆ ನಡೆದ ಒಂದು ದಿನದ ನಂತರ ಸಂತ್ರಸ್ತ ವಿದ್ಯಾರ್ಥಿನಿ ತನ್ನ ಪೋಷಕರೊಂದಿಗೆ ಶಿಕ್ಷಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿದ್ದರು.

ಹಲ್ಲೆ ಹಾಗೂ ತಾರತಮ್ಯ ಎಸಗಿರುವ ಬಗ್ಗೆ ತನಿಖೆಯ ವೇಳೆ ಸಾಕ್ಷ್ಯ ಸಿಕ್ಕಿದ್ದು, ಜಿಲ್ಲಾಧಿಕಾರಿಯವರಿಗೆ ಡಿಇಒ ಬುಧವಾರ ವರದಿ ಸಲ್ಲಿಸಿದ್ದಾರೆ. ವರದಿಯ ಮೇರೆಗೆ ಶಿಕ್ಷಕಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆಗಸ್ಟ್ 18ರಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ದಲಿತ ಬಾಲಕನನ್ನು ಥಳಿಸಿ ಕೊಂದ ಶಿಕ್ಷಕನ ಪರ ಪ್ರತಿಭಟನೆಯಲ್ಲಿ ಚಪ್ಪಾಳೆ ತಟ್ಟಿದ ಜಲೋರ್ ಜಿಲ್ಲಾಧಿಕಾರಿ, ಎಸ್‌ಪಿ?

ಸದರಿ ಶಿಕ್ಷಕಿಯ ವಿರುದ್ಧ ಬಂದಿರುವ ಆರೋಪಗಳು ನಿಜವೆಂದು ಅನೇಕ ವಿದ್ಯಾರ್ಥಿಗಳು, ಸಹ ಶಿಕ್ಷಕರು ಹೇಳುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಧ್ಯಪ್ರದೇಶ ಸಿವಿಲ್ ಸರ್ವಿಸ್ (ನಡತೆ) 1995ರ ಸೆಕ್ಷನ್‌ಗಳನ್ನು ಉಲ್ಲಂಘಿಸಿರುವುದರಿಂದ ಶಿಕ್ಷಕಿಯ ವಿರುದ್ಧ ಇಲಾಖಾ ತನಿಖೆಯನ್ನು ಪ್ರಾರಂಭಿಸುವಂತೆ ಸೂಚಿಸಿ ಜಿಲ್ಲಾಧಿಕಾರಿಯವರು ರೇವಾ ಆಯುಕ್ತರಿಗೆ ಪತ್ರವನ್ನು ಬರೆದಿದ್ದಾರೆ.

ಅಮಾನತು ಪ್ರಕ್ರಿಯೆಯನ್ನು ಪ್ರಾರಂಭಿಸಲು ನಾವು ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆದಿದ್ದೇವೆ ಎಂದು ರಾಜೀವ್ ರಂಜನ್ ಮೀನಾ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರತಿ ವರ್ಷ, ಕನಿಷ್ಠ 6-12 ಪ್ರಮುಖ ಅಪರಾಧಗಳಾದ ದಲಿತರ ಮನೆಗಳನ್ನು ಸುಡುವುದು, ಅತ್ಯಾಚಾರ, ಮುಸ್ಲಿಮರಿಂದ ದಲಿತರ ಹತ್ಯೆಗಳು ನಮ್ಮ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ನಿಯಮಿತವಾಗಿ ನಡೆಯುತ್ತಿವೆ! ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ದಲಿತರ ವಿರುದ್ಧದ ಪ್ರಮುಖ ಅಪರಾಧಗಳ ವಿರುದ್ಧ ನಿಮ್ಮ ಮಾಧ್ಯಮವು ಹೇಗೆ ದೊಡ್ಡ ವಿಷಯವಾಗಿದೆ ಆದರೆ ನಿಶ್ಚೇಷ್ಟಿತವಾಗಿದೆ ಮತ್ತು ಮೂಕರಾಗುತ್ತಿದೆ ಎಂದು ನನಗೆ ಆಶ್ಚರ್ಯವಾಗುತ್ತದೆ !!!

  2. After completion of 75 years still this is persist. Where this country heading.
    We talk about gandhi and ambedkar all big things.
    Teacher should hanged without any mercy.

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...