Homeದಲಿತ್ ಫೈಲ್ಸ್ಸಹೋದರ, ಚಿಕ್ಕಪ್ಪ ಹತ್ಯೆಗೀಡಾದ ಬಳಿಕ ಆಂಬ್ಯುಲೆನ್ಸ್‌ನಿಂದ ಬಿದ್ದು ದಲಿತ ಯುವತಿ ಮೃತ್ಯು: ಸಾವಿನ ಸುತ್ತ ಹಲವು...

ಸಹೋದರ, ಚಿಕ್ಕಪ್ಪ ಹತ್ಯೆಗೀಡಾದ ಬಳಿಕ ಆಂಬ್ಯುಲೆನ್ಸ್‌ನಿಂದ ಬಿದ್ದು ದಲಿತ ಯುವತಿ ಮೃತ್ಯು: ಸಾವಿನ ಸುತ್ತ ಹಲವು ಅನುಮಾನ!

- Advertisement -
- Advertisement -

ಚಲಿಸುತ್ತಿದ್ದ ಆಂಬ್ಯುಲೆನ್ಸ್‌ನಿಂದ ಬಿದ್ದು ದಲಿತ ಯುವತಿ ಸಾವನ್ನಪ್ಪಿದ ಘಟನೆ ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದ್ದು, ಸಾವಿನ ಸುತ್ತ ಹಲವು ರೀತಿಯ ಅನುಮಾನ ವ್ಯಕ್ತವಾಗಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಯುವತಿಯ ಸಹೋದರನನ್ನು ಥಳಿಸಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಅಂಜನಾ ಅಹಿರ್ವಾರ್ ಮೃತ ಯುವತಿ. ಈಕೆ, ಭಾನುವಾರ (ಮೇ 26) ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಹಲ್ಲೆಗೀಡಾಗಿ ಸಾವನ್ನಪ್ಪಿದ ಚಿಕ್ಕಪ್ಪನ ಶವವನ್ನು ಆಂಬ್ಯುಲೆನ್ಸ್‌ನಲ್ಲಿ ಸಾಗಿಸುತ್ತಿದ್ದಳು. ಮಾರ್ಗಮಧ್ಯೆ ಆಂಬ್ಯುಲೆನ್ಸ್‌ನಿಂದ ಬಿದ್ದು ನಿಗೂಢವಾಗಿ ಸಾವನ್ನಪ್ಪಿದ್ದಾಳೆ ಎಂದು ವರದಿ ಹೇಳಿದೆ.

ಮೃತಳ ಸಹೋದರನನ್ನು ಹೊಡೆದು ಸಾಯಿಸಲಾಗಿತ್ತು!

ಕಿರುಕುಳ ಪ್ರಕರಣದಲ್ಲಿ ರಾಜಿ ಮಾಡಿಕೊಳ್ಳುವಂತೆ ಒತ್ತಡ ಹೇರುತ್ತಿದ್ದ ಕೆಲವರು ತನ್ನ ಸಹೋದರನನ್ನು ಹೊಡೆದು ಸಾಯಿಸಿದ್ದಾರೆ ಎಂದು ಮೃತ ಅಂಜನಾ ಕಳೆದ ವರ್ಷ ಆಗಸ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಅಂಜನಾ ಅವರ ಚಿಕ್ಕಪ್ಪ ರಾಜೇಂದ್ರ ಅಹಿರ್ವಾರ್ ಅವರನ್ನು ಕೆಲವರು ಹೊಡೆದು ಕೊಂದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಚಿಕ್ಕಪ್ಪನಿಗೂ ಥಳಿಸಿ ಹತ್ಯೆ

ಸಾಗರ್ ಜಿಲ್ಲೆಯ ಖುರೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಯುವತಿಯ ಚಿಕ್ಕಪ್ಪ 24 ವರ್ಷದ ರಾಜೇಂದ್ರ ಅಹಿರ್ವಾರ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಸಿನ್ಹಾ ತಿಳಿಸಿದ್ದಾರೆ.

ತನಗೆ ಕಿರುಕುಳ ನೀಡುತ್ತಿದ್ದ ಕೆಲವರು ಆಗಸ್ಟ್ 24, 2023ರಂದು ತನ್ನ ಸಹೋದರ ನಿತಿನ್ ಅಹಿರ್ವಾರ್ ಅಲಿಯಾಸ್ ಲಾಲು ಅವರನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಅಂಜನಾ ಆರೋಪಿಸಿದ್ದರು. ಘಟನೆ ಬೆಳಕಿಗೆ ಬಂದ ನಂತರ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಬರೋಡಿಯಾ ನೊನಾಗಿರ್ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ್ದರು.

ಮೃತ ಅಂಜನಾ ಚಿಕ್ಕಪ್ಪ ರಾಜೇಂದ್ರ ಅಹಿರ್ವಾರ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆಯ ನಂತರ ಅವರ ಗ್ರಾಮಕ್ಕೆ ಕೊಂಡೊಯ್ಯುತ್ತಿದ್ದರು. ಈ ವೇಳೆ ಆಂಬ್ಯುಲೆನ್ಸ್‌ನಿಂದ ಬಿದ್ದು ಸಾವನ್ನಪ್ಪಿದ್ದಾರೆ. ಘಟನೆ ನಡೆಯುವಾಗ ಅಂಬ್ಯುಲೆನ್ಸ್ ಚಾಲಕ ಮತ್ತು ರಾಜೇಂದ್ರ ಅಹಿರ್ವಾರ್ ಅವರ ಕುಟುಂಬದ ಸದಸ್ಯರು ಮೃತದೇಹದ ಜೊತೆಗಿದ್ದರು ಎಂದು ಎಸಿಪಿ ಸಿನ್ಹಾ ಹೇಳಿದ್ದಾರೆ.

ಹಳೆಯ ಪ್ರಕರಣವನ್ನು ಇತ್ಯರ್ಥಪಡಿಸಲು ಒತ್ತಾಯಿಸಿ ರಾಜೇಂದ್ರ ಅಹಿರ್ವಾರ್ ಅವರನ್ನು ಕೊಲೆ ಮಾಡಲಾಗಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಎಸಿಪಿ, ತನಿಖೆಯಿಂದ ಎಲ್ಲಾ ಸತ್ಯಗಳು ಬಹಿರಂಗಗೊಳ್ಳಲಿವೆ ಎಂದು ಹೇಳಿದ್ದಾರೆ.

ರಾಜೇಂದ್ರ ಅಹಿರ್ವಾರ್ ಮೇಲೆ ಐವರು ದಾಳಿ ನಡೆಸಿದ್ದಾರೆ ಎಂದ ಕಾಂಗ್ರೆಸ್ ರಾಜ್ಯಾಧ್ಯಕ್ಷ

ಘಟನೆಯ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಿತೇಂದ್ರ ಪಟ್ವಾರಿ, “ರಾಜೇಂದ್ರ ಅಹಿರ್ವಾರ್ ಮೇಲೆ ಹಳೆಯ ಪ್ರಕರಣವನ್ನು ಇತ್ಯರ್ಥಕ್ಕೆ ಒತ್ತಾಯಿಸಿ ಐವರು ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ. ಬಾಲಕಿ ಅಂಜನಾ ಅಂಬ್ಯುಲೆನ್ಸ್‌ನಿಂದ ಬೀಳುವಾಗ ಅದರಲ್ಲಿ ಚಾಲಕ, ಅಂಜನಾ ಅಹಿರ್ವಾರ್ ಮತ್ತು ರಾಜೇಂದ್ರ ಅವರ ಪೋಷಕರು ಇದ್ದರು ಎಂದು ತಿಳಿಸಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ಬರೋಡಿಯಾ ನೊನಾಗಿರ್‌ನಲ್ಲಿ ಅಂಜನಾಳ ಸಹೋದರನನ್ನು ಸಾರ್ವಜನಿಕವಾಗಿ ಹತ್ಯೆ ಮಾಡಲಾಗಿತ್ತು. ಆಕೆಯ ಕುಟುಂಬ ಇನ್ನೂ ನ್ಯಾಯಕ್ಕಾಗಿ ಕಾಯುತ್ತಿದೆ ಎಂದಿರುವ ಜಿತೇಂದ್ರ ಪಟ್ವಾರಿ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅವರೇ ಗೃಹ ಇಲಾಖೆ ಜವಾಬ್ದಾರಿಯನ್ನೂ ನಿಭಾಯಿಸುತ್ತಿದ್ದಾರೆ ಎಂದಿದ್ದಾರೆ.

ಮಧ್ಯಪ್ರದೇಶದಲ್ಲಿ ದಲಿತನಾಗಿರುವುದು ಈಗ ಅಪರಾಧವಾಗಿದೆಯೇ? ಬುಡಕಟ್ಟು ಜನಾಂಗದ ದೌರ್ಜನ್ಯದಲ್ಲಿ ಮೊದಲ ಸ್ಥಾನದಲ್ಲಿರುವ ರಾಜ್ಯ, ದಲಿತ ದೌರ್ಜನ್ಯದಲ್ಲೂ ಉದಾಹರಣೆಯಾಗಬೇಕೆ? ಎಂದು ಪ್ರಶ್ನಿಸಿದ್ದಾರೆ.

ಖುರೈ ಬೈಪಾಸ್‌ನಲ್ಲಿ ಅಂಬ್ಯುಲೆನ್ಸ್‌ನಿಂದ ಬಿದ್ದು ಅಂಜನಾ ಅಹಿರ್ವಾರ್ ಸಾವು

ಚಿಕ್ಕಪ್ಪ ರಾಜೇಂದ್ರ ಅಹಿರ್ವಾರ್ ಹತ್ಯೆಗೀಡಾದ ಖುರೈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ಅಂಜನಾ ಅಂಬ್ಯುಲೆನ್ಸ್‌ನಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ. ಅಂಜನಾಳದ್ದು ಆಕಸ್ಮಿಕ ಸಾವ? ಇಲ್ಲ ಆಕೆಯನ್ನೂ ಹತ್ಯೆ ಮಾಡಲಾಗಿದೆಯಾ? ಎಂಬುವುದು ತನಿಖೆಯಿಂದ ಬಯಲಾಗಬೇಕಿದೆ.

ಇದನ್ನೂ ಓದಿ : ಪೋರ್ಶೆ ಕಾರು ಅಪಘಾತ ಪ್ರಕರಣ: ಆರೋಪಿಯ ರಕ್ತ ಪರೀಕ್ಷೆ ವರದಿ ತಿರುಚಿದ್ದ ಇಬ್ಬರು ವೈದ್ಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...