Homeದಲಿತ್ ಫೈಲ್ಸ್ಸಹೋದರ, ಚಿಕ್ಕಪ್ಪ ಹತ್ಯೆಗೀಡಾದ ಬಳಿಕ ಆಂಬ್ಯುಲೆನ್ಸ್‌ನಿಂದ ಬಿದ್ದು ದಲಿತ ಯುವತಿ ಮೃತ್ಯು: ಸಾವಿನ ಸುತ್ತ ಹಲವು...

ಸಹೋದರ, ಚಿಕ್ಕಪ್ಪ ಹತ್ಯೆಗೀಡಾದ ಬಳಿಕ ಆಂಬ್ಯುಲೆನ್ಸ್‌ನಿಂದ ಬಿದ್ದು ದಲಿತ ಯುವತಿ ಮೃತ್ಯು: ಸಾವಿನ ಸುತ್ತ ಹಲವು ಅನುಮಾನ!

- Advertisement -
- Advertisement -

ಚಲಿಸುತ್ತಿದ್ದ ಆಂಬ್ಯುಲೆನ್ಸ್‌ನಿಂದ ಬಿದ್ದು ದಲಿತ ಯುವತಿ ಸಾವನ್ನಪ್ಪಿದ ಘಟನೆ ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದ್ದು, ಸಾವಿನ ಸುತ್ತ ಹಲವು ರೀತಿಯ ಅನುಮಾನ ವ್ಯಕ್ತವಾಗಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಯುವತಿಯ ಸಹೋದರನನ್ನು ಥಳಿಸಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಅಂಜನಾ ಅಹಿರ್ವಾರ್ ಮೃತ ಯುವತಿ. ಈಕೆ, ಭಾನುವಾರ (ಮೇ 26) ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಹಲ್ಲೆಗೀಡಾಗಿ ಸಾವನ್ನಪ್ಪಿದ ಚಿಕ್ಕಪ್ಪನ ಶವವನ್ನು ಆಂಬ್ಯುಲೆನ್ಸ್‌ನಲ್ಲಿ ಸಾಗಿಸುತ್ತಿದ್ದಳು. ಮಾರ್ಗಮಧ್ಯೆ ಆಂಬ್ಯುಲೆನ್ಸ್‌ನಿಂದ ಬಿದ್ದು ನಿಗೂಢವಾಗಿ ಸಾವನ್ನಪ್ಪಿದ್ದಾಳೆ ಎಂದು ವರದಿ ಹೇಳಿದೆ.

ಮೃತಳ ಸಹೋದರನನ್ನು ಹೊಡೆದು ಸಾಯಿಸಲಾಗಿತ್ತು!

ಕಿರುಕುಳ ಪ್ರಕರಣದಲ್ಲಿ ರಾಜಿ ಮಾಡಿಕೊಳ್ಳುವಂತೆ ಒತ್ತಡ ಹೇರುತ್ತಿದ್ದ ಕೆಲವರು ತನ್ನ ಸಹೋದರನನ್ನು ಹೊಡೆದು ಸಾಯಿಸಿದ್ದಾರೆ ಎಂದು ಮೃತ ಅಂಜನಾ ಕಳೆದ ವರ್ಷ ಆಗಸ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಅಂಜನಾ ಅವರ ಚಿಕ್ಕಪ್ಪ ರಾಜೇಂದ್ರ ಅಹಿರ್ವಾರ್ ಅವರನ್ನು ಕೆಲವರು ಹೊಡೆದು ಕೊಂದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಚಿಕ್ಕಪ್ಪನಿಗೂ ಥಳಿಸಿ ಹತ್ಯೆ

ಸಾಗರ್ ಜಿಲ್ಲೆಯ ಖುರೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಯುವತಿಯ ಚಿಕ್ಕಪ್ಪ 24 ವರ್ಷದ ರಾಜೇಂದ್ರ ಅಹಿರ್ವಾರ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಸಿನ್ಹಾ ತಿಳಿಸಿದ್ದಾರೆ.

ತನಗೆ ಕಿರುಕುಳ ನೀಡುತ್ತಿದ್ದ ಕೆಲವರು ಆಗಸ್ಟ್ 24, 2023ರಂದು ತನ್ನ ಸಹೋದರ ನಿತಿನ್ ಅಹಿರ್ವಾರ್ ಅಲಿಯಾಸ್ ಲಾಲು ಅವರನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಅಂಜನಾ ಆರೋಪಿಸಿದ್ದರು. ಘಟನೆ ಬೆಳಕಿಗೆ ಬಂದ ನಂತರ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಬರೋಡಿಯಾ ನೊನಾಗಿರ್ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ್ದರು.

ಮೃತ ಅಂಜನಾ ಚಿಕ್ಕಪ್ಪ ರಾಜೇಂದ್ರ ಅಹಿರ್ವಾರ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆಯ ನಂತರ ಅವರ ಗ್ರಾಮಕ್ಕೆ ಕೊಂಡೊಯ್ಯುತ್ತಿದ್ದರು. ಈ ವೇಳೆ ಆಂಬ್ಯುಲೆನ್ಸ್‌ನಿಂದ ಬಿದ್ದು ಸಾವನ್ನಪ್ಪಿದ್ದಾರೆ. ಘಟನೆ ನಡೆಯುವಾಗ ಅಂಬ್ಯುಲೆನ್ಸ್ ಚಾಲಕ ಮತ್ತು ರಾಜೇಂದ್ರ ಅಹಿರ್ವಾರ್ ಅವರ ಕುಟುಂಬದ ಸದಸ್ಯರು ಮೃತದೇಹದ ಜೊತೆಗಿದ್ದರು ಎಂದು ಎಸಿಪಿ ಸಿನ್ಹಾ ಹೇಳಿದ್ದಾರೆ.

ಹಳೆಯ ಪ್ರಕರಣವನ್ನು ಇತ್ಯರ್ಥಪಡಿಸಲು ಒತ್ತಾಯಿಸಿ ರಾಜೇಂದ್ರ ಅಹಿರ್ವಾರ್ ಅವರನ್ನು ಕೊಲೆ ಮಾಡಲಾಗಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಎಸಿಪಿ, ತನಿಖೆಯಿಂದ ಎಲ್ಲಾ ಸತ್ಯಗಳು ಬಹಿರಂಗಗೊಳ್ಳಲಿವೆ ಎಂದು ಹೇಳಿದ್ದಾರೆ.

ರಾಜೇಂದ್ರ ಅಹಿರ್ವಾರ್ ಮೇಲೆ ಐವರು ದಾಳಿ ನಡೆಸಿದ್ದಾರೆ ಎಂದ ಕಾಂಗ್ರೆಸ್ ರಾಜ್ಯಾಧ್ಯಕ್ಷ

ಘಟನೆಯ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಿತೇಂದ್ರ ಪಟ್ವಾರಿ, “ರಾಜೇಂದ್ರ ಅಹಿರ್ವಾರ್ ಮೇಲೆ ಹಳೆಯ ಪ್ರಕರಣವನ್ನು ಇತ್ಯರ್ಥಕ್ಕೆ ಒತ್ತಾಯಿಸಿ ಐವರು ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ. ಬಾಲಕಿ ಅಂಜನಾ ಅಂಬ್ಯುಲೆನ್ಸ್‌ನಿಂದ ಬೀಳುವಾಗ ಅದರಲ್ಲಿ ಚಾಲಕ, ಅಂಜನಾ ಅಹಿರ್ವಾರ್ ಮತ್ತು ರಾಜೇಂದ್ರ ಅವರ ಪೋಷಕರು ಇದ್ದರು ಎಂದು ತಿಳಿಸಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ಬರೋಡಿಯಾ ನೊನಾಗಿರ್‌ನಲ್ಲಿ ಅಂಜನಾಳ ಸಹೋದರನನ್ನು ಸಾರ್ವಜನಿಕವಾಗಿ ಹತ್ಯೆ ಮಾಡಲಾಗಿತ್ತು. ಆಕೆಯ ಕುಟುಂಬ ಇನ್ನೂ ನ್ಯಾಯಕ್ಕಾಗಿ ಕಾಯುತ್ತಿದೆ ಎಂದಿರುವ ಜಿತೇಂದ್ರ ಪಟ್ವಾರಿ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅವರೇ ಗೃಹ ಇಲಾಖೆ ಜವಾಬ್ದಾರಿಯನ್ನೂ ನಿಭಾಯಿಸುತ್ತಿದ್ದಾರೆ ಎಂದಿದ್ದಾರೆ.

ಮಧ್ಯಪ್ರದೇಶದಲ್ಲಿ ದಲಿತನಾಗಿರುವುದು ಈಗ ಅಪರಾಧವಾಗಿದೆಯೇ? ಬುಡಕಟ್ಟು ಜನಾಂಗದ ದೌರ್ಜನ್ಯದಲ್ಲಿ ಮೊದಲ ಸ್ಥಾನದಲ್ಲಿರುವ ರಾಜ್ಯ, ದಲಿತ ದೌರ್ಜನ್ಯದಲ್ಲೂ ಉದಾಹರಣೆಯಾಗಬೇಕೆ? ಎಂದು ಪ್ರಶ್ನಿಸಿದ್ದಾರೆ.

ಖುರೈ ಬೈಪಾಸ್‌ನಲ್ಲಿ ಅಂಬ್ಯುಲೆನ್ಸ್‌ನಿಂದ ಬಿದ್ದು ಅಂಜನಾ ಅಹಿರ್ವಾರ್ ಸಾವು

ಚಿಕ್ಕಪ್ಪ ರಾಜೇಂದ್ರ ಅಹಿರ್ವಾರ್ ಹತ್ಯೆಗೀಡಾದ ಖುರೈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ಅಂಜನಾ ಅಂಬ್ಯುಲೆನ್ಸ್‌ನಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ. ಅಂಜನಾಳದ್ದು ಆಕಸ್ಮಿಕ ಸಾವ? ಇಲ್ಲ ಆಕೆಯನ್ನೂ ಹತ್ಯೆ ಮಾಡಲಾಗಿದೆಯಾ? ಎಂಬುವುದು ತನಿಖೆಯಿಂದ ಬಯಲಾಗಬೇಕಿದೆ.

ಇದನ್ನೂ ಓದಿ : ಪೋರ್ಶೆ ಕಾರು ಅಪಘಾತ ಪ್ರಕರಣ: ಆರೋಪಿಯ ರಕ್ತ ಪರೀಕ್ಷೆ ವರದಿ ತಿರುಚಿದ್ದ ಇಬ್ಬರು ವೈದ್ಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...