Homeದಲಿತ್ ಫೈಲ್ಸ್ಸಹೋದರ, ಚಿಕ್ಕಪ್ಪ ಹತ್ಯೆಗೀಡಾದ ಬಳಿಕ ಆಂಬ್ಯುಲೆನ್ಸ್‌ನಿಂದ ಬಿದ್ದು ದಲಿತ ಯುವತಿ ಮೃತ್ಯು: ಸಾವಿನ ಸುತ್ತ ಹಲವು...

ಸಹೋದರ, ಚಿಕ್ಕಪ್ಪ ಹತ್ಯೆಗೀಡಾದ ಬಳಿಕ ಆಂಬ್ಯುಲೆನ್ಸ್‌ನಿಂದ ಬಿದ್ದು ದಲಿತ ಯುವತಿ ಮೃತ್ಯು: ಸಾವಿನ ಸುತ್ತ ಹಲವು ಅನುಮಾನ!

- Advertisement -
- Advertisement -

ಚಲಿಸುತ್ತಿದ್ದ ಆಂಬ್ಯುಲೆನ್ಸ್‌ನಿಂದ ಬಿದ್ದು ದಲಿತ ಯುವತಿ ಸಾವನ್ನಪ್ಪಿದ ಘಟನೆ ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದ್ದು, ಸಾವಿನ ಸುತ್ತ ಹಲವು ರೀತಿಯ ಅನುಮಾನ ವ್ಯಕ್ತವಾಗಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಯುವತಿಯ ಸಹೋದರನನ್ನು ಥಳಿಸಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಅಂಜನಾ ಅಹಿರ್ವಾರ್ ಮೃತ ಯುವತಿ. ಈಕೆ, ಭಾನುವಾರ (ಮೇ 26) ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಹಲ್ಲೆಗೀಡಾಗಿ ಸಾವನ್ನಪ್ಪಿದ ಚಿಕ್ಕಪ್ಪನ ಶವವನ್ನು ಆಂಬ್ಯುಲೆನ್ಸ್‌ನಲ್ಲಿ ಸಾಗಿಸುತ್ತಿದ್ದಳು. ಮಾರ್ಗಮಧ್ಯೆ ಆಂಬ್ಯುಲೆನ್ಸ್‌ನಿಂದ ಬಿದ್ದು ನಿಗೂಢವಾಗಿ ಸಾವನ್ನಪ್ಪಿದ್ದಾಳೆ ಎಂದು ವರದಿ ಹೇಳಿದೆ.

ಮೃತಳ ಸಹೋದರನನ್ನು ಹೊಡೆದು ಸಾಯಿಸಲಾಗಿತ್ತು!

ಕಿರುಕುಳ ಪ್ರಕರಣದಲ್ಲಿ ರಾಜಿ ಮಾಡಿಕೊಳ್ಳುವಂತೆ ಒತ್ತಡ ಹೇರುತ್ತಿದ್ದ ಕೆಲವರು ತನ್ನ ಸಹೋದರನನ್ನು ಹೊಡೆದು ಸಾಯಿಸಿದ್ದಾರೆ ಎಂದು ಮೃತ ಅಂಜನಾ ಕಳೆದ ವರ್ಷ ಆಗಸ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಅಂಜನಾ ಅವರ ಚಿಕ್ಕಪ್ಪ ರಾಜೇಂದ್ರ ಅಹಿರ್ವಾರ್ ಅವರನ್ನು ಕೆಲವರು ಹೊಡೆದು ಕೊಂದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಚಿಕ್ಕಪ್ಪನಿಗೂ ಥಳಿಸಿ ಹತ್ಯೆ

ಸಾಗರ್ ಜಿಲ್ಲೆಯ ಖುರೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಯುವತಿಯ ಚಿಕ್ಕಪ್ಪ 24 ವರ್ಷದ ರಾಜೇಂದ್ರ ಅಹಿರ್ವಾರ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಸಿನ್ಹಾ ತಿಳಿಸಿದ್ದಾರೆ.

ತನಗೆ ಕಿರುಕುಳ ನೀಡುತ್ತಿದ್ದ ಕೆಲವರು ಆಗಸ್ಟ್ 24, 2023ರಂದು ತನ್ನ ಸಹೋದರ ನಿತಿನ್ ಅಹಿರ್ವಾರ್ ಅಲಿಯಾಸ್ ಲಾಲು ಅವರನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಅಂಜನಾ ಆರೋಪಿಸಿದ್ದರು. ಘಟನೆ ಬೆಳಕಿಗೆ ಬಂದ ನಂತರ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಬರೋಡಿಯಾ ನೊನಾಗಿರ್ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ್ದರು.

ಮೃತ ಅಂಜನಾ ಚಿಕ್ಕಪ್ಪ ರಾಜೇಂದ್ರ ಅಹಿರ್ವಾರ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆಯ ನಂತರ ಅವರ ಗ್ರಾಮಕ್ಕೆ ಕೊಂಡೊಯ್ಯುತ್ತಿದ್ದರು. ಈ ವೇಳೆ ಆಂಬ್ಯುಲೆನ್ಸ್‌ನಿಂದ ಬಿದ್ದು ಸಾವನ್ನಪ್ಪಿದ್ದಾರೆ. ಘಟನೆ ನಡೆಯುವಾಗ ಅಂಬ್ಯುಲೆನ್ಸ್ ಚಾಲಕ ಮತ್ತು ರಾಜೇಂದ್ರ ಅಹಿರ್ವಾರ್ ಅವರ ಕುಟುಂಬದ ಸದಸ್ಯರು ಮೃತದೇಹದ ಜೊತೆಗಿದ್ದರು ಎಂದು ಎಸಿಪಿ ಸಿನ್ಹಾ ಹೇಳಿದ್ದಾರೆ.

ಹಳೆಯ ಪ್ರಕರಣವನ್ನು ಇತ್ಯರ್ಥಪಡಿಸಲು ಒತ್ತಾಯಿಸಿ ರಾಜೇಂದ್ರ ಅಹಿರ್ವಾರ್ ಅವರನ್ನು ಕೊಲೆ ಮಾಡಲಾಗಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಎಸಿಪಿ, ತನಿಖೆಯಿಂದ ಎಲ್ಲಾ ಸತ್ಯಗಳು ಬಹಿರಂಗಗೊಳ್ಳಲಿವೆ ಎಂದು ಹೇಳಿದ್ದಾರೆ.

ರಾಜೇಂದ್ರ ಅಹಿರ್ವಾರ್ ಮೇಲೆ ಐವರು ದಾಳಿ ನಡೆಸಿದ್ದಾರೆ ಎಂದ ಕಾಂಗ್ರೆಸ್ ರಾಜ್ಯಾಧ್ಯಕ್ಷ

ಘಟನೆಯ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಿತೇಂದ್ರ ಪಟ್ವಾರಿ, “ರಾಜೇಂದ್ರ ಅಹಿರ್ವಾರ್ ಮೇಲೆ ಹಳೆಯ ಪ್ರಕರಣವನ್ನು ಇತ್ಯರ್ಥಕ್ಕೆ ಒತ್ತಾಯಿಸಿ ಐವರು ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ. ಬಾಲಕಿ ಅಂಜನಾ ಅಂಬ್ಯುಲೆನ್ಸ್‌ನಿಂದ ಬೀಳುವಾಗ ಅದರಲ್ಲಿ ಚಾಲಕ, ಅಂಜನಾ ಅಹಿರ್ವಾರ್ ಮತ್ತು ರಾಜೇಂದ್ರ ಅವರ ಪೋಷಕರು ಇದ್ದರು ಎಂದು ತಿಳಿಸಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ಬರೋಡಿಯಾ ನೊನಾಗಿರ್‌ನಲ್ಲಿ ಅಂಜನಾಳ ಸಹೋದರನನ್ನು ಸಾರ್ವಜನಿಕವಾಗಿ ಹತ್ಯೆ ಮಾಡಲಾಗಿತ್ತು. ಆಕೆಯ ಕುಟುಂಬ ಇನ್ನೂ ನ್ಯಾಯಕ್ಕಾಗಿ ಕಾಯುತ್ತಿದೆ ಎಂದಿರುವ ಜಿತೇಂದ್ರ ಪಟ್ವಾರಿ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅವರೇ ಗೃಹ ಇಲಾಖೆ ಜವಾಬ್ದಾರಿಯನ್ನೂ ನಿಭಾಯಿಸುತ್ತಿದ್ದಾರೆ ಎಂದಿದ್ದಾರೆ.

ಮಧ್ಯಪ್ರದೇಶದಲ್ಲಿ ದಲಿತನಾಗಿರುವುದು ಈಗ ಅಪರಾಧವಾಗಿದೆಯೇ? ಬುಡಕಟ್ಟು ಜನಾಂಗದ ದೌರ್ಜನ್ಯದಲ್ಲಿ ಮೊದಲ ಸ್ಥಾನದಲ್ಲಿರುವ ರಾಜ್ಯ, ದಲಿತ ದೌರ್ಜನ್ಯದಲ್ಲೂ ಉದಾಹರಣೆಯಾಗಬೇಕೆ? ಎಂದು ಪ್ರಶ್ನಿಸಿದ್ದಾರೆ.

ಖುರೈ ಬೈಪಾಸ್‌ನಲ್ಲಿ ಅಂಬ್ಯುಲೆನ್ಸ್‌ನಿಂದ ಬಿದ್ದು ಅಂಜನಾ ಅಹಿರ್ವಾರ್ ಸಾವು

ಚಿಕ್ಕಪ್ಪ ರಾಜೇಂದ್ರ ಅಹಿರ್ವಾರ್ ಹತ್ಯೆಗೀಡಾದ ಖುರೈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ಅಂಜನಾ ಅಂಬ್ಯುಲೆನ್ಸ್‌ನಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ. ಅಂಜನಾಳದ್ದು ಆಕಸ್ಮಿಕ ಸಾವ? ಇಲ್ಲ ಆಕೆಯನ್ನೂ ಹತ್ಯೆ ಮಾಡಲಾಗಿದೆಯಾ? ಎಂಬುವುದು ತನಿಖೆಯಿಂದ ಬಯಲಾಗಬೇಕಿದೆ.

ಇದನ್ನೂ ಓದಿ : ಪೋರ್ಶೆ ಕಾರು ಅಪಘಾತ ಪ್ರಕರಣ: ಆರೋಪಿಯ ರಕ್ತ ಪರೀಕ್ಷೆ ವರದಿ ತಿರುಚಿದ್ದ ಇಬ್ಬರು ವೈದ್ಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...