Homeಮುಖಪುಟಬಿಹಾರದ ದಲಿತ ಬಾಲಕಿ, ಉತ್ತರ ಪ್ರದೇಶದಲ್ಲಿ ನರ್ಸ್‌ ಮೇಲೆ ಸಾಮೂಹಿಕ ಅತ್ಯಾಚಾರ

ಬಿಹಾರದ ದಲಿತ ಬಾಲಕಿ, ಉತ್ತರ ಪ್ರದೇಶದಲ್ಲಿ ನರ್ಸ್‌ ಮೇಲೆ ಸಾಮೂಹಿಕ ಅತ್ಯಾಚಾರ

- Advertisement -
- Advertisement -

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣವೂ ಸೇರಿದಂತೆ ದೇಶದಾದ್ಯಂತ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿರುವುದು ಆತಂಕ ಮೂಡಿಸಿದೆ. ಪ್ರತ್ಯೇಕ ಪ್ರಕರಣಗಳಲ್ಲಿ ಬಿಹಾರದಲ್ಲಿ ದಲಿತ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರದ ನಂತರ ಕೊಲೆ ಮಾಡಲಾಗಿದ್ದು, ಉತ್ತರ ಪ್ರದೇಶದಲ್ಲಿ ನರ್ಸ್‌ ಒಬ್ಬರನ್ನು ಕೂಡಿಹಾಕಿ ವೈದ್ಯರೊಬ್ಬರು ಅತ್ಯಾಚಾರ ನಡೆಸಿದ್ದಾರೆ.

14 ವರ್ಷದ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಂಜಯ್ ರೈ ಅವರನ್ನು ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸುಳಿವಿನ ಮೇರೆಗೆ ಪೊಲೀಸ್ ತಂಡವು ಭಾನುವಾರ ಮುಜಾಫರ್‌ಪುರ ಜಿಲ್ಲೆಯ ಸರೈಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ಬಳಸುತ್ತಿದ್ದ ಆತನ ಮೊಬೈಲ್ ಫೋನ್ ಅನ್ನು ಪತ್ತೆಹಚ್ಚಿದ ನಂತರ, ಆತನ ಶಂಕಿತ ಅಡಗುತಾಣದಲ್ಲಿ ದಾಳಿ ನಡೆಸಿತು. ಆರೋಪಿ ಮತ್ತು ಆತನ ಸಹಚರರ ವಿರುದ್ಧ ಎಫ್‌ಐಆರ್ ದಾಖಲಾದಾಗಿನಿಂದ ತಲೆಮರೆಸಿಕೊಂಡಿದ್ದ.

ಮುಜಾಫರ್‌ಪುರದ ಹಿರಿಯ ಪೊಲೀಸ್ ಅಧೀಕ್ಷಕ ರಾಕೇಶ್ ಕುಮಾರ್ ಅವರು ರೈ ಅವರನ್ನು ವಿಶೇಷ ಪೊಲೀಸ್ ತಂಡವು ವಿಚಾರಣೆ ನಡೆಸುತ್ತಿದೆ. ಅವರ ಸಹಚರರಲ್ಲಿ ಒಬ್ಬನನ್ನು ಮೊದಲೇ ಬಂಧಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ.

ಆರೋಪಿಯನ್ನು ನಂತರ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು ಮತ್ತು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಸಂಜಯ್ ರೈ ಮತ್ತು ಆತನ ಇಬ್ಬರು ಸಹಚರರನ್ನು ವಿಚಾರಣೆಗೆ ಕರೆದೊಯ್ಯಲಾಗಿದೆ ಎಂದು ದೃಢೀಕರಿಸದ ವರದಿಗಳು ತಿಳಿಸಿವೆ. ನ್ಯಾಯಾಲಯದ ನಿರ್ದೇಶನದ ನಂತರ ಅವರ ಆಸ್ತಿಯನ್ನು ಬುಲ್ಡೋಜರ್‌ಗಳನ್ನು ಬಳಸಿ ಮನೆಯನ್ನು ನೆಲಸಮಗೊಳಿಸಲಾಯಿತು.

ಎಫ್‌ಐಆರ್‌ನಲ್ಲಿ, ಮೂರು ಮದುವೆಯಾಗಿರುವ ರೈ ತನ್ನ ಹದಿಹರೆಯದ ಮಗಳನ್ನು ಮದುವೆಯಾಗಲು ಬಯಸಿದ್ದರು ಎಂದು ಹುಡುಗಿಯ ತಾಯಿ ಆರೋಪಿಸಿದ್ದಾರೆ. ಅಪರಾಧದ ಒಂದು ದಿನದ ಮೊದಲು, ಅವನು ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ಘೋರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಕುಟುಂಬಕ್ಕೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

“ಆಗಸ್ಟ್ 11 ರಂದು ಸಂಭವಿಸಿದ ಅಹಿತಕರ ಘಟನೆಯಿಂದ ನಾವು ಭಯಭೀತರಾಗಿದ್ದೇವೆ” ಎಂದು ಸಂತ್ರಸ್ತೆಯ ತಾಯಿ ಹೇಳಿದರು.

ಮರುದಿನ, ಬಲಿಪಶುವಿನ ದೇಹವು ಅವಳ ಗ್ರಾಮದ ಬಳಿಯ ಕೊಳದಲ್ಲಿ ಪತ್ತೆಯಾಗಿದೆ. ಸಂತ್ರಸ್ತೆಯ ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿದ್ದು, ಆಕೆಯ ಕುತ್ತಿಗೆ, ತಲೆ ಮತ್ತು ತೋಳುಗಳ ಮೇಲೆ ಕತ್ತರಿಸಿದ ಗುರುತುಗಳು ಕಂಡುಬಂದಿವೆ. ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರದ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಬಲಿಪಶುವಿನ ಮುಖ, ಕುತ್ತಿಗೆ ಮತ್ತು ಎಡಗೈಯಲ್ಲಿ ಗಾಯಗಳ ಚಿಹ್ನೆಗಳು ಕಂಡುಬಂದಿವೆ ಎಂದು ಒಪ್ಪಿಕೊಂಡರು.

ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾದ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ಭಾನುವಾರ ರೈ ಅವರ ಸಹಾಯಕರ ಮನೆಗಳಿಗೆ ಧಾವಿಸಿದರು. ಇದು ಗ್ರಾಮದಲ್ಲಿ ಎರಡು ಪ್ರತಿಸ್ಪರ್ಧಿ ಜಾತಿಗೆ ಸೇರಿದ ಜನರ ನಡುವೆ ಉದ್ವಿಗ್ನತೆಗೆ ಕಾರಣವಾಯಿತು ಎಂದು ನಿವಾಸಿಯೊಬ್ಬರು ಹೇಳಿದರು.

ಯುಪಿ ಆಸ್ಪತ್ರೆಯಲ್ಲಿ ವೈದ್ಯರಿಂದ ದಲಿತ ನರ್ಸ್ ಅತ್ಯಾಚಾರ, ಮೂವರ ಬಂಧನ

ಖಾಸಗಿ ಆಸ್ಪತ್ರೆಯೊಂದರಲ್ಲಿ ಒತ್ತೆಯಾಳಾಗಿ ಇರಿಸಿಕೊಂಡು ದಲಿತ ನರ್ಸ್ ಮೇಲೆ ವೈದ್ಯರೊಬ್ಬರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಸಂತ್ರಸ್ತೆಯ ತಂದೆ ನೀಡಿರುವ ದೂರಿನ ಪ್ರಕಾರ ಭಾನುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಸಂದೀಪ್ ಕುಮಾರ್ ಮೀನಾ ತಿಳಿಸಿದ್ದಾರೆ.

ಶನಿವಾರ ಸಂಜೆ, ಸಂತ್ರಸ್ತೆ (20) ರಾತ್ರಿ 7 ಗಂಟೆಗೆ ತನ್ನ ಕರ್ತವ್ಯಕ್ಕಾಗಿ ಆಸ್ಪತ್ರೆಗೆ ಹೋಗಿದ್ದಳು. ಕಳೆದ ಏಳು ತಿಂಗಳಿಂದ ಅಲ್ಲಿ ಕೆಲಸ ಮಾಡುತ್ತಿದ್ದರು. ತಡರಾತ್ರಿ, ಮತ್ತೊಬ್ಬ ನರ್ಸ್ ಮೆಹನಾಜ್, ಡಾ. ಶಾನವಾಜ್ ಅವರನ್ನು ಅವರ ಕೋಣೆಯಲ್ಲಿ ಭೇಟಿಯಾಗುವಂತೆ ಕೇಳಿಕೊಂಡರು.

ಆಕೆ ನಿರಾಕರಿಸಿದಾಗ, ಮೆಹನಾಜ್ ಮತ್ತು ವಾರ್ಡ್ ಬಾಯ್ ಜುನೈದ್ ಆಕೆಯನ್ನು ಬಲವಂತವಾಗಿ ಆಸ್ಪತ್ರೆಯ ಮೇಲಿನ ಮಹಡಿಯಲ್ಲಿರುವ ಕೋಣೆಗೆ ಕರೆದೊಯ್ದು ಹೊರಗಿನಿಂದ ಬೀಗ ಹಾಕಿದರು ಎಂದು ಮೀನಾ ಹೇಳಿದ್ದಾರೆ.

ನಂತರ, ಡಾ ಶಹನವಾಜ್ ಕೋಣೆಗೆ ಪ್ರವೇಶಿಸಿ ಅವಳನ್ನು ಒತ್ತೆಯಾಳಾಗಿ ಇಟ್ಟುಕೊಂಡು ಅತ್ಯಾಚಾರವೆಸಗಿದ್ದಾನೆ ಎಂದು ಮೀನಾ ಹೇಳಿದರು. ಅಲ್ಲದೆ, ಆಕೆಗೆ ಕೊಲೆ ಬೆದರಿಕೆ ಹಾಕಿದ್ದಲ್ಲದೆ ಜಾತಿ ನಿಂದನೆ ಮಾಡಿದ್ದಾನೆ.

ಮುಖ್ಯ ವೈದ್ಯಾಧಿಕಾರಿ ಡಾ.ಕುಲದೀಪ್ ಸಿಂಗ್ ಅವರ ಸೂಚನೆಯ ಮೇರೆಗೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಭಾನುವಾರ ಸಂಜೆ ಆರೋಗ್ಯ ಇಲಾಖೆಯ ತಂಡವು ತಪಾಸಣೆ ನಡೆಸಿದ ನಂತರ ಆಸ್ಪತ್ರೆಯನ್ನು ಸೀಲ್ ಮಾಡಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಇದನ್ನೂ ಓದಿ; ಕೋಲ್ಕತ್ತಾ ಮೃತ ವೈದ್ಯೆ ಫೋಟೋ ಶೇರ್ ಮಾಡಿ ಮಮತಾಗೆ ಬೆದರಿಕೆ; ಒಬ್ಬನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...