Homeದಲಿತ್ ಫೈಲ್ಸ್ಎರಡು ಬಾರಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ನಿರ್ಲಕ್ಷ್ಯ ತಾಳಿದ್ದ ಯುಪಿ ಪೊಲೀಸರು

ಎರಡು ಬಾರಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ನಿರ್ಲಕ್ಷ್ಯ ತಾಳಿದ್ದ ಯುಪಿ ಪೊಲೀಸರು

- Advertisement -
- Advertisement -

2021, ಡಿಸೆಂಬರ್ 31. ಸಂಜೆ 5:30ರ ಸಮಯ. ಬಾಲಕಿಯು ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಗ್ರಾಮದ ನಿವಾಸಿ ಸತೀಶ್ ಅಲ್ಲಿಗೆ ಬಂದನು. “ನಿನ್ನ ತಂದೆ ನಿನ್ನನ್ನು ಅರುಣ್ ಅವರ ಮನೆಗೆ ಬರುವಂತೆ ಕರೆಯುತ್ತಿದ್ದಾರೆ” ಎಂದು ನಂಬಿಸಿ ಕರೆದೊಯ್ದನು ಎಂದು ಎಫ್‌ಐಆರ್‌ ಉಲ್ಲೇಖಿಸುತ್ತದೆ.

ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆದಿರುವ ಭೀಕರ ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಉನ್ನಾವೋದಲ್ಲಿನ ಮೌರವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯು ಸತೀಶ್‌ನ ಮಾತನ್ನು ನಂಬಿ ಅರುಣ್ ಮನೆಗೆ ಹೋದಳು. ಅಲ್ಲಿ ರೋಷನ್, ಸುಖ್ದಿನ್, ಅರುಣ್, ರಂಜಿತ್ ಮತ್ತು ಸತೀಶ್ ಇದ್ದರು. ಮೊದಲು ರೋಷನ್ ಆಕೆಯ ಮೇಲೆ ಅತ್ಯಾಚಾರ ಎಸಗಿದನು. ನಂತರ ಸತೀಶ್. ನಂತರ ಎಲ್ಲರೂ ಸರದಿಯಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದರು ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಬಾಲಕಿಯು ನಿರ್ಜೀವವಾದಾಗ, ಆಕೆಗೆ ಜ್ಯೂಸ್ ಮತ್ತು ಗ್ಲೂಕೋಸ್ ನೀಡಿದರು. ರಂಜಿತ್ ಇಡೀ ಘಟನೆಯನ್ನು ವಿಡಿಯೋ ಮಾಡಿಕೊಂಡನು. ಆಕೆ ಚೇತರಿಸಿಕೊಂಡಿದ್ದನ್ನು ಕಂಡು ಸುಖ್ದಿನ್ ಆಕೆಗೆ ಆಯುಧ ತೋರಿಸಿ, “ಈ ಬಗ್ಗೆ ಯಾರಿಗಾದರೂ ಹೇಳಿದರೆ ನಿನ್ನನ್ನು, ನಿನ್ನ ಮನೆಯವರನ್ನು ಕೊಂದು ಹಾಕುತ್ತೇವೆ. ರಂಜಿತ್ ವಿಡಿಯೋ ಮಾಡಿಕೊಂಡಿದ್ದಾನೆ. ಜಾಲತಾಣಗಳಲ್ಲಿ ಹಾಕಲಾಗುತ್ತದೆ” ಎಂದು ಬೆದರಿಸಿದನು.

2023ರ ಮೇ 2ರಂದು ಉತ್ತರ ಪ್ರದೇಶದ ಪೋಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಘಟನೆ ನಡೆದು ಒಂದು ವರ್ಷ ನಾಲ್ಕು ತಿಂಗಳ ನಂತರ ಎಫ್‌ಐಆರ್‌ ಆಗಿದೆ. ದಲಿತ ಸಮುದಾಯದ ನಾಲ್ವರು ಮತ್ತು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರಿದ ಒಬ್ಬಾತ ದಲಿತ ಬಾಲಕಿ ಮೇಲಿನ ಅತ್ಯಾಚಾರದಲ್ಲಿ ಭಾಗಿಯಾಗಿದ್ದಾರೆ.

ಪ್ರಕರಣ ಬೆಳಕಿಗೆ ಬಂದಾಗ ಮತ್ತಷ್ಟು ವಿವರಗಳು ತಿಳಿದವು. ಇದೇ ಆರೋಪಿಗಳು 2021ರ ಡಿಸೆಂಬರ್‌ ಮತ್ತು 2022ರ ಫೆಬ್ರುವರಿಯಲ್ಲಿ ಸಾಮೂಹಿಕವಾಗಿ ಅತ್ಯಾಚಾರವನ್ನು ಈ ಬಾಲಕಿ ಮೇಲೆ ಎಸಗಿದ್ದರು. ಒಂದು ವರ್ಷದ ಹಿಂದೆ ಮೊದಲ ಬಾರಿಗೆ ಅತ್ಯಾಚಾರವಾದಾಗ ಎಫ್‌ಐಆರ್ ದಾಖಲಿಸಲು ಯುಪಿ ಪೊಲೀಸರ ಬಳಿ ಪುರಾವೆಗಳಿದ್ದರೂ, ಅವರು ನಿರ್ಲಕ್ಷಿಸಿದ್ದಾರೆ ಎಂಬುವುದು ಬೆಳಕಿಗೆ ಬಂದಿದೆ. ಸಂತ್ರಸ್ತ ಕುಟುಂಬವು ನ್ಯಾಯಾಲಯಕ್ಕೆ ಹೋಗುವವರೆಗೂ ಪ್ರಕರಣ ದಾಖಲಾಗಿರಲಿಲ್ಲ.

2022, ಸೆಪ್ಟೆಂಬರ್ 22ರಂದು ಅಪ್ರಾಪ್ತ ಬಾಲಕಿಯು ಮಗುವಿಗೆ ಜನ್ಮ ನೀಡಿದ ಬಳಿಕ ಪ್ರಕರಣ ತೀವ್ರತೆ ಪಡೆದುಕೊಂಡಿತು. ಎರಡನೇ ಬಾರಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ನಲ್ಲಿ ಬಂಧಿತನಾಗಿದ್ದ ವ್ಯಕ್ತಿಯೊಬ್ಬ ಜಾಮೀನಿನ ಮೇಲೆ ಹೊರಬಂದಾಗ 2023ರ ಎಪ್ರಿಲ್‌ನಲ್ಲಿ ಸಂತ್ರಸ್ತಯ ಮನೆಗೆ ಬೆಂಕಿ ಹಚ್ಚಿದ್ದನು.

ಸಂತ್ರಸ್ತೆಯ ಆರು ತಿಂಗಳ ಮಗು (ಮೊದಲ ಬಾರಿಗೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದಾಗ ಗರ್ಭಿಣಿಯಾಗಿದ್ದರಿಂದ ಜನಿಸಿದ ಮಗು) ಮತ್ತು ಆಕೆಯ ಮೂರು ವರ್ಷದ ಸಹೋದರಿಯ ಮೇಲೆ ದಾಳಿ ಮಾಡಲಾಯಿತು. ಸುಟ್ಟ ಗಾಯಗಳಾದವು.

ಪೊಲೀಸ್‌ ನಿರ್ಲಕ್ಷ್ಯ

2021, ಡಿಸೆಂಬರ್ 31ರಂದು ನಡೆದ ಮೊದಲ ಸಾಮೂಹಿಕ ಅತ್ಯಾಚಾರದ ಬಗ್ಗೆ ಅಪ್ರಾಪ್ತ ಬಾಲಕಿ ತನ್ನ ಕುಟುಂಬಕ್ಕೆ ತಿಳಿಸಿರಲಿಲ್ಲ ಎಂದು ಸಂತ್ರಸ್ತೆಯ ಪರ ವಕೀಲ ಸಂಜೀವ್ ತ್ರಿವೇದಿಯವರು ‘ಆರ್ಟಿಕಲ್ 14’ ಜಾಲತಾಣಕ್ಕೆ ತಿಳಿಸಿದ್ದಾರೆ.

ಆದರೆ ಫೆಬ್ರವರಿ 13 ರಂದು ಎರಡನೇ ಬಾರಿಗೆ ಸಾಮೂಹಿಕ ಅತ್ಯಾಚಾರಕ್ಕೊಳಗಾದ ನಂತರ ಫೆಬ್ರವರಿ 14 ರಂದು ಎಫ್‌ಐಆರ್ ದಾಖಲಿಸಲಾಗಿದೆ. ಫೆಬ್ರವರಿ 15ರಂದು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಯಿತು. ಸಂತ್ರಸ್ತೆಯು ಆರು ವಾರಗಳ ಗರ್ಭಿಣಿ ಎಂಬುದು ಬೆಳಕಿಗೆ ಬಂದಿತು.

“ಕುಟುಂಬಕ್ಕೆ ಈ ಮಾಹಿತಿ ಇರಲಿಲ್ಲ…. ಏಪ್ರಿಲ್‌ನಲ್ಲಿ ಸಂತ್ರಸ್ತೆಯ ಹೊಟ್ಟೆ ಉಬ್ಬಲು ಶುರುವಾಯಿತು. ಏನೋ ಅನಾರೋಗ್ಯ ಇರಬಹುದು ಎಂದು ತಿಳಿದ ಕುಟುಂಬ ವೈದ್ಯರ ಬಳಿ ಕರೆದೊಯ್ದರು. ಬಾಲಕಿಗೆ ಆಂತರಿಕ ಊತ ಕಾಣಿಸಿಕೊಂಡಿದೆ ಎಂದು ತಿಳಿಸಿ, ಔಷಧಗಳನ್ನು ನೀಡಿದ್ದರು” ಎನ್ನುತ್ತಾರೆ ತ್ರಿವೇದಿ.

ಆದರೆ ಆಕೆಯ ಹೊಟ್ಟೆ ಬೆಳೆಯಿತು. ಮತ್ತೆ ಜುಲೈ-ಆಗಸ್ಟ್‌ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಏಳರಿಂದ ಎಂಟು ತಿಂಗಳ ಗರ್ಭಿಣಿ ಎಂದು ತಿಳಿದುಕೊಂಡರು. ಅದು ಎರಡನೇ ಸಾಮೂಹಿಕ ಅತ್ಯಾಚಾರದ ಪರಿಣಾಮವಾಗಿರಲಿಲ್ಲ. ಗರ್ಭ ತೆಗೆಸಲು ಸಾಧ್ಯವಿರಲಿಲ್ಲ. ಯಾಕೆಂದರೆ ಸಮಯ ಮೀರಿ ಹೋಗಿತ್ತು.

2021 ಡಿಸೆಂಬರ್ 31ರಂದು ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಬಾಲಕಿ ತನ್ನ ತಾಯಿಗೆ ತಿಳಿಸಿದಳು. ಅವರು ಮತ್ತೊಂದು ಎಫ್‌ಐಆರ್ ದಾಖಲಿಸಲು ಪೊಲೀಸರನ್ನು ಸಂಪರ್ಕಿಸಿದರು. ಆದರೆ ಎರಡನೇ ಬಾರಿ ಸಾಮೂಹಿಕ ಅತ್ಯಾಚಾರಕ್ಕೊಳದಾಗ ದಾಖಲಾಗಿರುವ ಎಫ್‌ಐಆರ್‌ ಒಂದೇ ಸಾಕಾಗುತ್ತದೆ ಎಂದು ಪೊಲೀಸರು ಹೇಳಿದರು.

2023, ಮೇ 2ರಂದು ದಾಖಲಾದ ಎಫ್‌ಐಆರ್‌ನಲ್ಲಿನ ಘಟನೆಗಳ ಸಾರಾಂಶವು ಪೊಲೀಸರು ಮೊದಲ ಸಲದ ಅತ್ಯಾಚಾರದ ಬಗ್ಗೆ ದಾಖಲಿಸಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ. “ದೂರುದಾರರ ಅಪ್ರಾಪ್ತ ಮಗಳು ಮನೆಗೆ ಬಂದಾಗ, ಆಕೆ ಏನನ್ನೂ ಹೇಳಲಿಲ್ಲ. ಕೆಲವು ತಿಂಗಳುಗಳ ನಂತರ, ಕುಟುಂಬಕ್ಕೆ ತಿಳಿಯಿತು. ಅವರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಆದರೆ ಅವರ ದೂರಿನ ಮೇಲೆ ಯಾವುದೇ ತನಿಖೆ ನಡೆಸಲಿಲ್ಲ. ಕುಟುಂಬವು ವೈದ್ಯಕೀಯ ಸಮಸ್ಯೆಗಳಲ್ಲಿ ನಿರತರಾವಾಯಿತು. ಏಕೆಂದರೆ ಮಗಳ ಜೀವವನ್ನು ಉಳಿಸುವುದು ಅವರ ಮುಂದಿನ ಸವಾಲಾಗಿತ್ತು.”

“2022 ಫೆಬ್ರವರಿ 13ರಂದು ಸಂತ್ರಸ್ತೆಯು ಧರಿಸಿದ್ದ ಬಟ್ಟೆಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಿದೆ. ರಕ್ತದ ಕಲೆಗಳು ಬಟ್ಟೆಯಲ್ಲಿ ಕಂಡುಬಂದಿವೆ” ಎಂದು ವಕೀಲ ತ್ರಿವೇದಿ ಹೇಳುತ್ತಾರೆ.

ಇದನ್ನೂ ಓದಿರಿ: ‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

“2021 ಡಿಸೆಂಬರ್ 31  ಮತ್ತು 2022 ಫೆಬ್ರವರಿ, 13ರಂದು ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎನ್ನುತ್ತಾರೆ ತ್ರಿವೇದಿ. ಆದರೂ ಮೊದಲ ಸಲದ ಅತ್ಯಾಚಾರದ ಬಗ್ಗೆ ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ ಎಂದಿದ್ದಾರೆ.

ಮೇ 9 ರಂದು ನಿಗದಿಯಾಗಿದ್ದ ವಿಚಾರಣೆಗೆ ಮೊದಲು, ಯುಪಿ ಪೊಲೀಸರು ಮೇ 2ರಂದು ಎಫ್‌ಐಆರ್ ದಾಖಲಿಸಿದ್ದಾರೆ. “ಪೊಲೀಸರು ಗೊಂದಲಕ್ಕೊಳಗಾದರು ಮತ್ತು ಮೇ 2 ರಂದು ಎಫ್ಐಆರ್ ದಾಖಲಿಸಿದರು” ಎಂದು ತ್ರಿವೇದಿ ಹೇಳಿದರು.

2023ರ ಮೇ 2ರಂದು ದಾಖಲಾದ ಎಫ್‌ಐಆರ್‌ನಲ್ಲಿ ರೋಷನ್ ಲೋಧಿ, ಸುಖ್ದಿನ್, ಅರುಣ್, ರಂಜಿತ್ ಮತ್ತು ಸತೀಶ್ ಎಂಬವರನ್ನು ಆರೋಪಿಗಳೆಂದು ಉಲ್ಲೇಖಿಸಲಾಗಿದೆ. ಸಾಮೂಹಿಕ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಆರೋಪಗಳನ್ನು ಐಪಿಸಿ ಸೆಕ್ಷನ್‌ನ ಅಡಿಯಲ್ಲಿ ಹೊರಿಸಲಾಗಿದೆ. ಪೋಕ್ಸೋ ಮತ್ತು ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾ‌ಯ್ದೆಯಲ್ಲೂ ಪ್ರಕರಣ ದಾಖಲಿಸಲಾಗಿದೆ.

ಅಪ್ರಾಪ್ತರ ಮನೆಗೆ ಬೆಂಕಿ ಹಚ್ಚಿದ ನಂತರ 2023ರ ಏಪ್ರಿಲ್ 17 ರಂದು ಮುರವ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ರೋಷನ್, ಸತೀಶ್, ರಂಜಿತ್, ರಾಜ್ ಬಹದ್ದೂರ್, ಚಂದನ್, ಸುಖದಿನ್ ಮತ್ತು ಅಮನ್ ದೋಮ್ ಆರೋಪಿಗಳಲ್ಲಿ. ಆರೋಪಿಗಳಲ್ಲಿ ಅಪ್ರಾಪ್ತ ಬಾಲಕಿಯ ಅಜ್ಜ ಚಂದನ್, ಆಕೆಯ ಚಿಕ್ಕಪ್ಪ ರಾಜ್ ಬಹದ್ದೂರ್ ಸೇರಿದ್ದಾರೆ.

ವರದಿ ಕೃಪೆ: Article14.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...