Homeದಲಿತ್ ಫೈಲ್ಸ್ಎರಡು ಬಾರಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ನಿರ್ಲಕ್ಷ್ಯ ತಾಳಿದ್ದ ಯುಪಿ ಪೊಲೀಸರು

ಎರಡು ಬಾರಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ನಿರ್ಲಕ್ಷ್ಯ ತಾಳಿದ್ದ ಯುಪಿ ಪೊಲೀಸರು

- Advertisement -
- Advertisement -

2021, ಡಿಸೆಂಬರ್ 31. ಸಂಜೆ 5:30ರ ಸಮಯ. ಬಾಲಕಿಯು ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಗ್ರಾಮದ ನಿವಾಸಿ ಸತೀಶ್ ಅಲ್ಲಿಗೆ ಬಂದನು. “ನಿನ್ನ ತಂದೆ ನಿನ್ನನ್ನು ಅರುಣ್ ಅವರ ಮನೆಗೆ ಬರುವಂತೆ ಕರೆಯುತ್ತಿದ್ದಾರೆ” ಎಂದು ನಂಬಿಸಿ ಕರೆದೊಯ್ದನು ಎಂದು ಎಫ್‌ಐಆರ್‌ ಉಲ್ಲೇಖಿಸುತ್ತದೆ.

ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆದಿರುವ ಭೀಕರ ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಉನ್ನಾವೋದಲ್ಲಿನ ಮೌರವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯು ಸತೀಶ್‌ನ ಮಾತನ್ನು ನಂಬಿ ಅರುಣ್ ಮನೆಗೆ ಹೋದಳು. ಅಲ್ಲಿ ರೋಷನ್, ಸುಖ್ದಿನ್, ಅರುಣ್, ರಂಜಿತ್ ಮತ್ತು ಸತೀಶ್ ಇದ್ದರು. ಮೊದಲು ರೋಷನ್ ಆಕೆಯ ಮೇಲೆ ಅತ್ಯಾಚಾರ ಎಸಗಿದನು. ನಂತರ ಸತೀಶ್. ನಂತರ ಎಲ್ಲರೂ ಸರದಿಯಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದರು ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಬಾಲಕಿಯು ನಿರ್ಜೀವವಾದಾಗ, ಆಕೆಗೆ ಜ್ಯೂಸ್ ಮತ್ತು ಗ್ಲೂಕೋಸ್ ನೀಡಿದರು. ರಂಜಿತ್ ಇಡೀ ಘಟನೆಯನ್ನು ವಿಡಿಯೋ ಮಾಡಿಕೊಂಡನು. ಆಕೆ ಚೇತರಿಸಿಕೊಂಡಿದ್ದನ್ನು ಕಂಡು ಸುಖ್ದಿನ್ ಆಕೆಗೆ ಆಯುಧ ತೋರಿಸಿ, “ಈ ಬಗ್ಗೆ ಯಾರಿಗಾದರೂ ಹೇಳಿದರೆ ನಿನ್ನನ್ನು, ನಿನ್ನ ಮನೆಯವರನ್ನು ಕೊಂದು ಹಾಕುತ್ತೇವೆ. ರಂಜಿತ್ ವಿಡಿಯೋ ಮಾಡಿಕೊಂಡಿದ್ದಾನೆ. ಜಾಲತಾಣಗಳಲ್ಲಿ ಹಾಕಲಾಗುತ್ತದೆ” ಎಂದು ಬೆದರಿಸಿದನು.

2023ರ ಮೇ 2ರಂದು ಉತ್ತರ ಪ್ರದೇಶದ ಪೋಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಘಟನೆ ನಡೆದು ಒಂದು ವರ್ಷ ನಾಲ್ಕು ತಿಂಗಳ ನಂತರ ಎಫ್‌ಐಆರ್‌ ಆಗಿದೆ. ದಲಿತ ಸಮುದಾಯದ ನಾಲ್ವರು ಮತ್ತು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರಿದ ಒಬ್ಬಾತ ದಲಿತ ಬಾಲಕಿ ಮೇಲಿನ ಅತ್ಯಾಚಾರದಲ್ಲಿ ಭಾಗಿಯಾಗಿದ್ದಾರೆ.

ಪ್ರಕರಣ ಬೆಳಕಿಗೆ ಬಂದಾಗ ಮತ್ತಷ್ಟು ವಿವರಗಳು ತಿಳಿದವು. ಇದೇ ಆರೋಪಿಗಳು 2021ರ ಡಿಸೆಂಬರ್‌ ಮತ್ತು 2022ರ ಫೆಬ್ರುವರಿಯಲ್ಲಿ ಸಾಮೂಹಿಕವಾಗಿ ಅತ್ಯಾಚಾರವನ್ನು ಈ ಬಾಲಕಿ ಮೇಲೆ ಎಸಗಿದ್ದರು. ಒಂದು ವರ್ಷದ ಹಿಂದೆ ಮೊದಲ ಬಾರಿಗೆ ಅತ್ಯಾಚಾರವಾದಾಗ ಎಫ್‌ಐಆರ್ ದಾಖಲಿಸಲು ಯುಪಿ ಪೊಲೀಸರ ಬಳಿ ಪುರಾವೆಗಳಿದ್ದರೂ, ಅವರು ನಿರ್ಲಕ್ಷಿಸಿದ್ದಾರೆ ಎಂಬುವುದು ಬೆಳಕಿಗೆ ಬಂದಿದೆ. ಸಂತ್ರಸ್ತ ಕುಟುಂಬವು ನ್ಯಾಯಾಲಯಕ್ಕೆ ಹೋಗುವವರೆಗೂ ಪ್ರಕರಣ ದಾಖಲಾಗಿರಲಿಲ್ಲ.

2022, ಸೆಪ್ಟೆಂಬರ್ 22ರಂದು ಅಪ್ರಾಪ್ತ ಬಾಲಕಿಯು ಮಗುವಿಗೆ ಜನ್ಮ ನೀಡಿದ ಬಳಿಕ ಪ್ರಕರಣ ತೀವ್ರತೆ ಪಡೆದುಕೊಂಡಿತು. ಎರಡನೇ ಬಾರಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ನಲ್ಲಿ ಬಂಧಿತನಾಗಿದ್ದ ವ್ಯಕ್ತಿಯೊಬ್ಬ ಜಾಮೀನಿನ ಮೇಲೆ ಹೊರಬಂದಾಗ 2023ರ ಎಪ್ರಿಲ್‌ನಲ್ಲಿ ಸಂತ್ರಸ್ತಯ ಮನೆಗೆ ಬೆಂಕಿ ಹಚ್ಚಿದ್ದನು.

ಸಂತ್ರಸ್ತೆಯ ಆರು ತಿಂಗಳ ಮಗು (ಮೊದಲ ಬಾರಿಗೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದಾಗ ಗರ್ಭಿಣಿಯಾಗಿದ್ದರಿಂದ ಜನಿಸಿದ ಮಗು) ಮತ್ತು ಆಕೆಯ ಮೂರು ವರ್ಷದ ಸಹೋದರಿಯ ಮೇಲೆ ದಾಳಿ ಮಾಡಲಾಯಿತು. ಸುಟ್ಟ ಗಾಯಗಳಾದವು.

ಪೊಲೀಸ್‌ ನಿರ್ಲಕ್ಷ್ಯ

2021, ಡಿಸೆಂಬರ್ 31ರಂದು ನಡೆದ ಮೊದಲ ಸಾಮೂಹಿಕ ಅತ್ಯಾಚಾರದ ಬಗ್ಗೆ ಅಪ್ರಾಪ್ತ ಬಾಲಕಿ ತನ್ನ ಕುಟುಂಬಕ್ಕೆ ತಿಳಿಸಿರಲಿಲ್ಲ ಎಂದು ಸಂತ್ರಸ್ತೆಯ ಪರ ವಕೀಲ ಸಂಜೀವ್ ತ್ರಿವೇದಿಯವರು ‘ಆರ್ಟಿಕಲ್ 14’ ಜಾಲತಾಣಕ್ಕೆ ತಿಳಿಸಿದ್ದಾರೆ.

ಆದರೆ ಫೆಬ್ರವರಿ 13 ರಂದು ಎರಡನೇ ಬಾರಿಗೆ ಸಾಮೂಹಿಕ ಅತ್ಯಾಚಾರಕ್ಕೊಳಗಾದ ನಂತರ ಫೆಬ್ರವರಿ 14 ರಂದು ಎಫ್‌ಐಆರ್ ದಾಖಲಿಸಲಾಗಿದೆ. ಫೆಬ್ರವರಿ 15ರಂದು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಯಿತು. ಸಂತ್ರಸ್ತೆಯು ಆರು ವಾರಗಳ ಗರ್ಭಿಣಿ ಎಂಬುದು ಬೆಳಕಿಗೆ ಬಂದಿತು.

“ಕುಟುಂಬಕ್ಕೆ ಈ ಮಾಹಿತಿ ಇರಲಿಲ್ಲ…. ಏಪ್ರಿಲ್‌ನಲ್ಲಿ ಸಂತ್ರಸ್ತೆಯ ಹೊಟ್ಟೆ ಉಬ್ಬಲು ಶುರುವಾಯಿತು. ಏನೋ ಅನಾರೋಗ್ಯ ಇರಬಹುದು ಎಂದು ತಿಳಿದ ಕುಟುಂಬ ವೈದ್ಯರ ಬಳಿ ಕರೆದೊಯ್ದರು. ಬಾಲಕಿಗೆ ಆಂತರಿಕ ಊತ ಕಾಣಿಸಿಕೊಂಡಿದೆ ಎಂದು ತಿಳಿಸಿ, ಔಷಧಗಳನ್ನು ನೀಡಿದ್ದರು” ಎನ್ನುತ್ತಾರೆ ತ್ರಿವೇದಿ.

ಆದರೆ ಆಕೆಯ ಹೊಟ್ಟೆ ಬೆಳೆಯಿತು. ಮತ್ತೆ ಜುಲೈ-ಆಗಸ್ಟ್‌ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಏಳರಿಂದ ಎಂಟು ತಿಂಗಳ ಗರ್ಭಿಣಿ ಎಂದು ತಿಳಿದುಕೊಂಡರು. ಅದು ಎರಡನೇ ಸಾಮೂಹಿಕ ಅತ್ಯಾಚಾರದ ಪರಿಣಾಮವಾಗಿರಲಿಲ್ಲ. ಗರ್ಭ ತೆಗೆಸಲು ಸಾಧ್ಯವಿರಲಿಲ್ಲ. ಯಾಕೆಂದರೆ ಸಮಯ ಮೀರಿ ಹೋಗಿತ್ತು.

2021 ಡಿಸೆಂಬರ್ 31ರಂದು ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಬಾಲಕಿ ತನ್ನ ತಾಯಿಗೆ ತಿಳಿಸಿದಳು. ಅವರು ಮತ್ತೊಂದು ಎಫ್‌ಐಆರ್ ದಾಖಲಿಸಲು ಪೊಲೀಸರನ್ನು ಸಂಪರ್ಕಿಸಿದರು. ಆದರೆ ಎರಡನೇ ಬಾರಿ ಸಾಮೂಹಿಕ ಅತ್ಯಾಚಾರಕ್ಕೊಳದಾಗ ದಾಖಲಾಗಿರುವ ಎಫ್‌ಐಆರ್‌ ಒಂದೇ ಸಾಕಾಗುತ್ತದೆ ಎಂದು ಪೊಲೀಸರು ಹೇಳಿದರು.

2023, ಮೇ 2ರಂದು ದಾಖಲಾದ ಎಫ್‌ಐಆರ್‌ನಲ್ಲಿನ ಘಟನೆಗಳ ಸಾರಾಂಶವು ಪೊಲೀಸರು ಮೊದಲ ಸಲದ ಅತ್ಯಾಚಾರದ ಬಗ್ಗೆ ದಾಖಲಿಸಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ. “ದೂರುದಾರರ ಅಪ್ರಾಪ್ತ ಮಗಳು ಮನೆಗೆ ಬಂದಾಗ, ಆಕೆ ಏನನ್ನೂ ಹೇಳಲಿಲ್ಲ. ಕೆಲವು ತಿಂಗಳುಗಳ ನಂತರ, ಕುಟುಂಬಕ್ಕೆ ತಿಳಿಯಿತು. ಅವರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಆದರೆ ಅವರ ದೂರಿನ ಮೇಲೆ ಯಾವುದೇ ತನಿಖೆ ನಡೆಸಲಿಲ್ಲ. ಕುಟುಂಬವು ವೈದ್ಯಕೀಯ ಸಮಸ್ಯೆಗಳಲ್ಲಿ ನಿರತರಾವಾಯಿತು. ಏಕೆಂದರೆ ಮಗಳ ಜೀವವನ್ನು ಉಳಿಸುವುದು ಅವರ ಮುಂದಿನ ಸವಾಲಾಗಿತ್ತು.”

“2022 ಫೆಬ್ರವರಿ 13ರಂದು ಸಂತ್ರಸ್ತೆಯು ಧರಿಸಿದ್ದ ಬಟ್ಟೆಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಿದೆ. ರಕ್ತದ ಕಲೆಗಳು ಬಟ್ಟೆಯಲ್ಲಿ ಕಂಡುಬಂದಿವೆ” ಎಂದು ವಕೀಲ ತ್ರಿವೇದಿ ಹೇಳುತ್ತಾರೆ.

ಇದನ್ನೂ ಓದಿರಿ: ‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

“2021 ಡಿಸೆಂಬರ್ 31  ಮತ್ತು 2022 ಫೆಬ್ರವರಿ, 13ರಂದು ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎನ್ನುತ್ತಾರೆ ತ್ರಿವೇದಿ. ಆದರೂ ಮೊದಲ ಸಲದ ಅತ್ಯಾಚಾರದ ಬಗ್ಗೆ ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ ಎಂದಿದ್ದಾರೆ.

ಮೇ 9 ರಂದು ನಿಗದಿಯಾಗಿದ್ದ ವಿಚಾರಣೆಗೆ ಮೊದಲು, ಯುಪಿ ಪೊಲೀಸರು ಮೇ 2ರಂದು ಎಫ್‌ಐಆರ್ ದಾಖಲಿಸಿದ್ದಾರೆ. “ಪೊಲೀಸರು ಗೊಂದಲಕ್ಕೊಳಗಾದರು ಮತ್ತು ಮೇ 2 ರಂದು ಎಫ್ಐಆರ್ ದಾಖಲಿಸಿದರು” ಎಂದು ತ್ರಿವೇದಿ ಹೇಳಿದರು.

2023ರ ಮೇ 2ರಂದು ದಾಖಲಾದ ಎಫ್‌ಐಆರ್‌ನಲ್ಲಿ ರೋಷನ್ ಲೋಧಿ, ಸುಖ್ದಿನ್, ಅರುಣ್, ರಂಜಿತ್ ಮತ್ತು ಸತೀಶ್ ಎಂಬವರನ್ನು ಆರೋಪಿಗಳೆಂದು ಉಲ್ಲೇಖಿಸಲಾಗಿದೆ. ಸಾಮೂಹಿಕ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಆರೋಪಗಳನ್ನು ಐಪಿಸಿ ಸೆಕ್ಷನ್‌ನ ಅಡಿಯಲ್ಲಿ ಹೊರಿಸಲಾಗಿದೆ. ಪೋಕ್ಸೋ ಮತ್ತು ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾ‌ಯ್ದೆಯಲ್ಲೂ ಪ್ರಕರಣ ದಾಖಲಿಸಲಾಗಿದೆ.

ಅಪ್ರಾಪ್ತರ ಮನೆಗೆ ಬೆಂಕಿ ಹಚ್ಚಿದ ನಂತರ 2023ರ ಏಪ್ರಿಲ್ 17 ರಂದು ಮುರವ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ರೋಷನ್, ಸತೀಶ್, ರಂಜಿತ್, ರಾಜ್ ಬಹದ್ದೂರ್, ಚಂದನ್, ಸುಖದಿನ್ ಮತ್ತು ಅಮನ್ ದೋಮ್ ಆರೋಪಿಗಳಲ್ಲಿ. ಆರೋಪಿಗಳಲ್ಲಿ ಅಪ್ರಾಪ್ತ ಬಾಲಕಿಯ ಅಜ್ಜ ಚಂದನ್, ಆಕೆಯ ಚಿಕ್ಕಪ್ಪ ರಾಜ್ ಬಹದ್ದೂರ್ ಸೇರಿದ್ದಾರೆ.

ವರದಿ ಕೃಪೆ: Article14.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...