Homeದಲಿತ್ ಫೈಲ್ಸ್ಎರಡು ಬಾರಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ನಿರ್ಲಕ್ಷ್ಯ ತಾಳಿದ್ದ ಯುಪಿ ಪೊಲೀಸರು

ಎರಡು ಬಾರಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ನಿರ್ಲಕ್ಷ್ಯ ತಾಳಿದ್ದ ಯುಪಿ ಪೊಲೀಸರು

- Advertisement -
- Advertisement -

2021, ಡಿಸೆಂಬರ್ 31. ಸಂಜೆ 5:30ರ ಸಮಯ. ಬಾಲಕಿಯು ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಗ್ರಾಮದ ನಿವಾಸಿ ಸತೀಶ್ ಅಲ್ಲಿಗೆ ಬಂದನು. “ನಿನ್ನ ತಂದೆ ನಿನ್ನನ್ನು ಅರುಣ್ ಅವರ ಮನೆಗೆ ಬರುವಂತೆ ಕರೆಯುತ್ತಿದ್ದಾರೆ” ಎಂದು ನಂಬಿಸಿ ಕರೆದೊಯ್ದನು ಎಂದು ಎಫ್‌ಐಆರ್‌ ಉಲ್ಲೇಖಿಸುತ್ತದೆ.

ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆದಿರುವ ಭೀಕರ ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಉನ್ನಾವೋದಲ್ಲಿನ ಮೌರವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯು ಸತೀಶ್‌ನ ಮಾತನ್ನು ನಂಬಿ ಅರುಣ್ ಮನೆಗೆ ಹೋದಳು. ಅಲ್ಲಿ ರೋಷನ್, ಸುಖ್ದಿನ್, ಅರುಣ್, ರಂಜಿತ್ ಮತ್ತು ಸತೀಶ್ ಇದ್ದರು. ಮೊದಲು ರೋಷನ್ ಆಕೆಯ ಮೇಲೆ ಅತ್ಯಾಚಾರ ಎಸಗಿದನು. ನಂತರ ಸತೀಶ್. ನಂತರ ಎಲ್ಲರೂ ಸರದಿಯಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದರು ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಬಾಲಕಿಯು ನಿರ್ಜೀವವಾದಾಗ, ಆಕೆಗೆ ಜ್ಯೂಸ್ ಮತ್ತು ಗ್ಲೂಕೋಸ್ ನೀಡಿದರು. ರಂಜಿತ್ ಇಡೀ ಘಟನೆಯನ್ನು ವಿಡಿಯೋ ಮಾಡಿಕೊಂಡನು. ಆಕೆ ಚೇತರಿಸಿಕೊಂಡಿದ್ದನ್ನು ಕಂಡು ಸುಖ್ದಿನ್ ಆಕೆಗೆ ಆಯುಧ ತೋರಿಸಿ, “ಈ ಬಗ್ಗೆ ಯಾರಿಗಾದರೂ ಹೇಳಿದರೆ ನಿನ್ನನ್ನು, ನಿನ್ನ ಮನೆಯವರನ್ನು ಕೊಂದು ಹಾಕುತ್ತೇವೆ. ರಂಜಿತ್ ವಿಡಿಯೋ ಮಾಡಿಕೊಂಡಿದ್ದಾನೆ. ಜಾಲತಾಣಗಳಲ್ಲಿ ಹಾಕಲಾಗುತ್ತದೆ” ಎಂದು ಬೆದರಿಸಿದನು.

2023ರ ಮೇ 2ರಂದು ಉತ್ತರ ಪ್ರದೇಶದ ಪೋಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಘಟನೆ ನಡೆದು ಒಂದು ವರ್ಷ ನಾಲ್ಕು ತಿಂಗಳ ನಂತರ ಎಫ್‌ಐಆರ್‌ ಆಗಿದೆ. ದಲಿತ ಸಮುದಾಯದ ನಾಲ್ವರು ಮತ್ತು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರಿದ ಒಬ್ಬಾತ ದಲಿತ ಬಾಲಕಿ ಮೇಲಿನ ಅತ್ಯಾಚಾರದಲ್ಲಿ ಭಾಗಿಯಾಗಿದ್ದಾರೆ.

ಪ್ರಕರಣ ಬೆಳಕಿಗೆ ಬಂದಾಗ ಮತ್ತಷ್ಟು ವಿವರಗಳು ತಿಳಿದವು. ಇದೇ ಆರೋಪಿಗಳು 2021ರ ಡಿಸೆಂಬರ್‌ ಮತ್ತು 2022ರ ಫೆಬ್ರುವರಿಯಲ್ಲಿ ಸಾಮೂಹಿಕವಾಗಿ ಅತ್ಯಾಚಾರವನ್ನು ಈ ಬಾಲಕಿ ಮೇಲೆ ಎಸಗಿದ್ದರು. ಒಂದು ವರ್ಷದ ಹಿಂದೆ ಮೊದಲ ಬಾರಿಗೆ ಅತ್ಯಾಚಾರವಾದಾಗ ಎಫ್‌ಐಆರ್ ದಾಖಲಿಸಲು ಯುಪಿ ಪೊಲೀಸರ ಬಳಿ ಪುರಾವೆಗಳಿದ್ದರೂ, ಅವರು ನಿರ್ಲಕ್ಷಿಸಿದ್ದಾರೆ ಎಂಬುವುದು ಬೆಳಕಿಗೆ ಬಂದಿದೆ. ಸಂತ್ರಸ್ತ ಕುಟುಂಬವು ನ್ಯಾಯಾಲಯಕ್ಕೆ ಹೋಗುವವರೆಗೂ ಪ್ರಕರಣ ದಾಖಲಾಗಿರಲಿಲ್ಲ.

2022, ಸೆಪ್ಟೆಂಬರ್ 22ರಂದು ಅಪ್ರಾಪ್ತ ಬಾಲಕಿಯು ಮಗುವಿಗೆ ಜನ್ಮ ನೀಡಿದ ಬಳಿಕ ಪ್ರಕರಣ ತೀವ್ರತೆ ಪಡೆದುಕೊಂಡಿತು. ಎರಡನೇ ಬಾರಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ನಲ್ಲಿ ಬಂಧಿತನಾಗಿದ್ದ ವ್ಯಕ್ತಿಯೊಬ್ಬ ಜಾಮೀನಿನ ಮೇಲೆ ಹೊರಬಂದಾಗ 2023ರ ಎಪ್ರಿಲ್‌ನಲ್ಲಿ ಸಂತ್ರಸ್ತಯ ಮನೆಗೆ ಬೆಂಕಿ ಹಚ್ಚಿದ್ದನು.

ಸಂತ್ರಸ್ತೆಯ ಆರು ತಿಂಗಳ ಮಗು (ಮೊದಲ ಬಾರಿಗೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದಾಗ ಗರ್ಭಿಣಿಯಾಗಿದ್ದರಿಂದ ಜನಿಸಿದ ಮಗು) ಮತ್ತು ಆಕೆಯ ಮೂರು ವರ್ಷದ ಸಹೋದರಿಯ ಮೇಲೆ ದಾಳಿ ಮಾಡಲಾಯಿತು. ಸುಟ್ಟ ಗಾಯಗಳಾದವು.

ಪೊಲೀಸ್‌ ನಿರ್ಲಕ್ಷ್ಯ

2021, ಡಿಸೆಂಬರ್ 31ರಂದು ನಡೆದ ಮೊದಲ ಸಾಮೂಹಿಕ ಅತ್ಯಾಚಾರದ ಬಗ್ಗೆ ಅಪ್ರಾಪ್ತ ಬಾಲಕಿ ತನ್ನ ಕುಟುಂಬಕ್ಕೆ ತಿಳಿಸಿರಲಿಲ್ಲ ಎಂದು ಸಂತ್ರಸ್ತೆಯ ಪರ ವಕೀಲ ಸಂಜೀವ್ ತ್ರಿವೇದಿಯವರು ‘ಆರ್ಟಿಕಲ್ 14’ ಜಾಲತಾಣಕ್ಕೆ ತಿಳಿಸಿದ್ದಾರೆ.

ಆದರೆ ಫೆಬ್ರವರಿ 13 ರಂದು ಎರಡನೇ ಬಾರಿಗೆ ಸಾಮೂಹಿಕ ಅತ್ಯಾಚಾರಕ್ಕೊಳಗಾದ ನಂತರ ಫೆಬ್ರವರಿ 14 ರಂದು ಎಫ್‌ಐಆರ್ ದಾಖಲಿಸಲಾಗಿದೆ. ಫೆಬ್ರವರಿ 15ರಂದು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಯಿತು. ಸಂತ್ರಸ್ತೆಯು ಆರು ವಾರಗಳ ಗರ್ಭಿಣಿ ಎಂಬುದು ಬೆಳಕಿಗೆ ಬಂದಿತು.

“ಕುಟುಂಬಕ್ಕೆ ಈ ಮಾಹಿತಿ ಇರಲಿಲ್ಲ…. ಏಪ್ರಿಲ್‌ನಲ್ಲಿ ಸಂತ್ರಸ್ತೆಯ ಹೊಟ್ಟೆ ಉಬ್ಬಲು ಶುರುವಾಯಿತು. ಏನೋ ಅನಾರೋಗ್ಯ ಇರಬಹುದು ಎಂದು ತಿಳಿದ ಕುಟುಂಬ ವೈದ್ಯರ ಬಳಿ ಕರೆದೊಯ್ದರು. ಬಾಲಕಿಗೆ ಆಂತರಿಕ ಊತ ಕಾಣಿಸಿಕೊಂಡಿದೆ ಎಂದು ತಿಳಿಸಿ, ಔಷಧಗಳನ್ನು ನೀಡಿದ್ದರು” ಎನ್ನುತ್ತಾರೆ ತ್ರಿವೇದಿ.

ಆದರೆ ಆಕೆಯ ಹೊಟ್ಟೆ ಬೆಳೆಯಿತು. ಮತ್ತೆ ಜುಲೈ-ಆಗಸ್ಟ್‌ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಏಳರಿಂದ ಎಂಟು ತಿಂಗಳ ಗರ್ಭಿಣಿ ಎಂದು ತಿಳಿದುಕೊಂಡರು. ಅದು ಎರಡನೇ ಸಾಮೂಹಿಕ ಅತ್ಯಾಚಾರದ ಪರಿಣಾಮವಾಗಿರಲಿಲ್ಲ. ಗರ್ಭ ತೆಗೆಸಲು ಸಾಧ್ಯವಿರಲಿಲ್ಲ. ಯಾಕೆಂದರೆ ಸಮಯ ಮೀರಿ ಹೋಗಿತ್ತು.

2021 ಡಿಸೆಂಬರ್ 31ರಂದು ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಬಾಲಕಿ ತನ್ನ ತಾಯಿಗೆ ತಿಳಿಸಿದಳು. ಅವರು ಮತ್ತೊಂದು ಎಫ್‌ಐಆರ್ ದಾಖಲಿಸಲು ಪೊಲೀಸರನ್ನು ಸಂಪರ್ಕಿಸಿದರು. ಆದರೆ ಎರಡನೇ ಬಾರಿ ಸಾಮೂಹಿಕ ಅತ್ಯಾಚಾರಕ್ಕೊಳದಾಗ ದಾಖಲಾಗಿರುವ ಎಫ್‌ಐಆರ್‌ ಒಂದೇ ಸಾಕಾಗುತ್ತದೆ ಎಂದು ಪೊಲೀಸರು ಹೇಳಿದರು.

2023, ಮೇ 2ರಂದು ದಾಖಲಾದ ಎಫ್‌ಐಆರ್‌ನಲ್ಲಿನ ಘಟನೆಗಳ ಸಾರಾಂಶವು ಪೊಲೀಸರು ಮೊದಲ ಸಲದ ಅತ್ಯಾಚಾರದ ಬಗ್ಗೆ ದಾಖಲಿಸಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ. “ದೂರುದಾರರ ಅಪ್ರಾಪ್ತ ಮಗಳು ಮನೆಗೆ ಬಂದಾಗ, ಆಕೆ ಏನನ್ನೂ ಹೇಳಲಿಲ್ಲ. ಕೆಲವು ತಿಂಗಳುಗಳ ನಂತರ, ಕುಟುಂಬಕ್ಕೆ ತಿಳಿಯಿತು. ಅವರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಆದರೆ ಅವರ ದೂರಿನ ಮೇಲೆ ಯಾವುದೇ ತನಿಖೆ ನಡೆಸಲಿಲ್ಲ. ಕುಟುಂಬವು ವೈದ್ಯಕೀಯ ಸಮಸ್ಯೆಗಳಲ್ಲಿ ನಿರತರಾವಾಯಿತು. ಏಕೆಂದರೆ ಮಗಳ ಜೀವವನ್ನು ಉಳಿಸುವುದು ಅವರ ಮುಂದಿನ ಸವಾಲಾಗಿತ್ತು.”

“2022 ಫೆಬ್ರವರಿ 13ರಂದು ಸಂತ್ರಸ್ತೆಯು ಧರಿಸಿದ್ದ ಬಟ್ಟೆಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಿದೆ. ರಕ್ತದ ಕಲೆಗಳು ಬಟ್ಟೆಯಲ್ಲಿ ಕಂಡುಬಂದಿವೆ” ಎಂದು ವಕೀಲ ತ್ರಿವೇದಿ ಹೇಳುತ್ತಾರೆ.

ಇದನ್ನೂ ಓದಿರಿ: ‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

“2021 ಡಿಸೆಂಬರ್ 31  ಮತ್ತು 2022 ಫೆಬ್ರವರಿ, 13ರಂದು ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎನ್ನುತ್ತಾರೆ ತ್ರಿವೇದಿ. ಆದರೂ ಮೊದಲ ಸಲದ ಅತ್ಯಾಚಾರದ ಬಗ್ಗೆ ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ ಎಂದಿದ್ದಾರೆ.

ಮೇ 9 ರಂದು ನಿಗದಿಯಾಗಿದ್ದ ವಿಚಾರಣೆಗೆ ಮೊದಲು, ಯುಪಿ ಪೊಲೀಸರು ಮೇ 2ರಂದು ಎಫ್‌ಐಆರ್ ದಾಖಲಿಸಿದ್ದಾರೆ. “ಪೊಲೀಸರು ಗೊಂದಲಕ್ಕೊಳಗಾದರು ಮತ್ತು ಮೇ 2 ರಂದು ಎಫ್ಐಆರ್ ದಾಖಲಿಸಿದರು” ಎಂದು ತ್ರಿವೇದಿ ಹೇಳಿದರು.

2023ರ ಮೇ 2ರಂದು ದಾಖಲಾದ ಎಫ್‌ಐಆರ್‌ನಲ್ಲಿ ರೋಷನ್ ಲೋಧಿ, ಸುಖ್ದಿನ್, ಅರುಣ್, ರಂಜಿತ್ ಮತ್ತು ಸತೀಶ್ ಎಂಬವರನ್ನು ಆರೋಪಿಗಳೆಂದು ಉಲ್ಲೇಖಿಸಲಾಗಿದೆ. ಸಾಮೂಹಿಕ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಆರೋಪಗಳನ್ನು ಐಪಿಸಿ ಸೆಕ್ಷನ್‌ನ ಅಡಿಯಲ್ಲಿ ಹೊರಿಸಲಾಗಿದೆ. ಪೋಕ್ಸೋ ಮತ್ತು ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾ‌ಯ್ದೆಯಲ್ಲೂ ಪ್ರಕರಣ ದಾಖಲಿಸಲಾಗಿದೆ.

ಅಪ್ರಾಪ್ತರ ಮನೆಗೆ ಬೆಂಕಿ ಹಚ್ಚಿದ ನಂತರ 2023ರ ಏಪ್ರಿಲ್ 17 ರಂದು ಮುರವ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ರೋಷನ್, ಸತೀಶ್, ರಂಜಿತ್, ರಾಜ್ ಬಹದ್ದೂರ್, ಚಂದನ್, ಸುಖದಿನ್ ಮತ್ತು ಅಮನ್ ದೋಮ್ ಆರೋಪಿಗಳಲ್ಲಿ. ಆರೋಪಿಗಳಲ್ಲಿ ಅಪ್ರಾಪ್ತ ಬಾಲಕಿಯ ಅಜ್ಜ ಚಂದನ್, ಆಕೆಯ ಚಿಕ್ಕಪ್ಪ ರಾಜ್ ಬಹದ್ದೂರ್ ಸೇರಿದ್ದಾರೆ.

ವರದಿ ಕೃಪೆ: Article14.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...