Homeದಲಿತ್ ಫೈಲ್ಸ್ಎರಡು ಬಾರಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ನಿರ್ಲಕ್ಷ್ಯ ತಾಳಿದ್ದ ಯುಪಿ ಪೊಲೀಸರು

ಎರಡು ಬಾರಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ನಿರ್ಲಕ್ಷ್ಯ ತಾಳಿದ್ದ ಯುಪಿ ಪೊಲೀಸರು

- Advertisement -
- Advertisement -

2021, ಡಿಸೆಂಬರ್ 31. ಸಂಜೆ 5:30ರ ಸಮಯ. ಬಾಲಕಿಯು ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಗ್ರಾಮದ ನಿವಾಸಿ ಸತೀಶ್ ಅಲ್ಲಿಗೆ ಬಂದನು. “ನಿನ್ನ ತಂದೆ ನಿನ್ನನ್ನು ಅರುಣ್ ಅವರ ಮನೆಗೆ ಬರುವಂತೆ ಕರೆಯುತ್ತಿದ್ದಾರೆ” ಎಂದು ನಂಬಿಸಿ ಕರೆದೊಯ್ದನು ಎಂದು ಎಫ್‌ಐಆರ್‌ ಉಲ್ಲೇಖಿಸುತ್ತದೆ.

ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆದಿರುವ ಭೀಕರ ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಉನ್ನಾವೋದಲ್ಲಿನ ಮೌರವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯು ಸತೀಶ್‌ನ ಮಾತನ್ನು ನಂಬಿ ಅರುಣ್ ಮನೆಗೆ ಹೋದಳು. ಅಲ್ಲಿ ರೋಷನ್, ಸುಖ್ದಿನ್, ಅರುಣ್, ರಂಜಿತ್ ಮತ್ತು ಸತೀಶ್ ಇದ್ದರು. ಮೊದಲು ರೋಷನ್ ಆಕೆಯ ಮೇಲೆ ಅತ್ಯಾಚಾರ ಎಸಗಿದನು. ನಂತರ ಸತೀಶ್. ನಂತರ ಎಲ್ಲರೂ ಸರದಿಯಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದರು ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಬಾಲಕಿಯು ನಿರ್ಜೀವವಾದಾಗ, ಆಕೆಗೆ ಜ್ಯೂಸ್ ಮತ್ತು ಗ್ಲೂಕೋಸ್ ನೀಡಿದರು. ರಂಜಿತ್ ಇಡೀ ಘಟನೆಯನ್ನು ವಿಡಿಯೋ ಮಾಡಿಕೊಂಡನು. ಆಕೆ ಚೇತರಿಸಿಕೊಂಡಿದ್ದನ್ನು ಕಂಡು ಸುಖ್ದಿನ್ ಆಕೆಗೆ ಆಯುಧ ತೋರಿಸಿ, “ಈ ಬಗ್ಗೆ ಯಾರಿಗಾದರೂ ಹೇಳಿದರೆ ನಿನ್ನನ್ನು, ನಿನ್ನ ಮನೆಯವರನ್ನು ಕೊಂದು ಹಾಕುತ್ತೇವೆ. ರಂಜಿತ್ ವಿಡಿಯೋ ಮಾಡಿಕೊಂಡಿದ್ದಾನೆ. ಜಾಲತಾಣಗಳಲ್ಲಿ ಹಾಕಲಾಗುತ್ತದೆ” ಎಂದು ಬೆದರಿಸಿದನು.

2023ರ ಮೇ 2ರಂದು ಉತ್ತರ ಪ್ರದೇಶದ ಪೋಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಘಟನೆ ನಡೆದು ಒಂದು ವರ್ಷ ನಾಲ್ಕು ತಿಂಗಳ ನಂತರ ಎಫ್‌ಐಆರ್‌ ಆಗಿದೆ. ದಲಿತ ಸಮುದಾಯದ ನಾಲ್ವರು ಮತ್ತು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರಿದ ಒಬ್ಬಾತ ದಲಿತ ಬಾಲಕಿ ಮೇಲಿನ ಅತ್ಯಾಚಾರದಲ್ಲಿ ಭಾಗಿಯಾಗಿದ್ದಾರೆ.

ಪ್ರಕರಣ ಬೆಳಕಿಗೆ ಬಂದಾಗ ಮತ್ತಷ್ಟು ವಿವರಗಳು ತಿಳಿದವು. ಇದೇ ಆರೋಪಿಗಳು 2021ರ ಡಿಸೆಂಬರ್‌ ಮತ್ತು 2022ರ ಫೆಬ್ರುವರಿಯಲ್ಲಿ ಸಾಮೂಹಿಕವಾಗಿ ಅತ್ಯಾಚಾರವನ್ನು ಈ ಬಾಲಕಿ ಮೇಲೆ ಎಸಗಿದ್ದರು. ಒಂದು ವರ್ಷದ ಹಿಂದೆ ಮೊದಲ ಬಾರಿಗೆ ಅತ್ಯಾಚಾರವಾದಾಗ ಎಫ್‌ಐಆರ್ ದಾಖಲಿಸಲು ಯುಪಿ ಪೊಲೀಸರ ಬಳಿ ಪುರಾವೆಗಳಿದ್ದರೂ, ಅವರು ನಿರ್ಲಕ್ಷಿಸಿದ್ದಾರೆ ಎಂಬುವುದು ಬೆಳಕಿಗೆ ಬಂದಿದೆ. ಸಂತ್ರಸ್ತ ಕುಟುಂಬವು ನ್ಯಾಯಾಲಯಕ್ಕೆ ಹೋಗುವವರೆಗೂ ಪ್ರಕರಣ ದಾಖಲಾಗಿರಲಿಲ್ಲ.

2022, ಸೆಪ್ಟೆಂಬರ್ 22ರಂದು ಅಪ್ರಾಪ್ತ ಬಾಲಕಿಯು ಮಗುವಿಗೆ ಜನ್ಮ ನೀಡಿದ ಬಳಿಕ ಪ್ರಕರಣ ತೀವ್ರತೆ ಪಡೆದುಕೊಂಡಿತು. ಎರಡನೇ ಬಾರಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ನಲ್ಲಿ ಬಂಧಿತನಾಗಿದ್ದ ವ್ಯಕ್ತಿಯೊಬ್ಬ ಜಾಮೀನಿನ ಮೇಲೆ ಹೊರಬಂದಾಗ 2023ರ ಎಪ್ರಿಲ್‌ನಲ್ಲಿ ಸಂತ್ರಸ್ತಯ ಮನೆಗೆ ಬೆಂಕಿ ಹಚ್ಚಿದ್ದನು.

ಸಂತ್ರಸ್ತೆಯ ಆರು ತಿಂಗಳ ಮಗು (ಮೊದಲ ಬಾರಿಗೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದಾಗ ಗರ್ಭಿಣಿಯಾಗಿದ್ದರಿಂದ ಜನಿಸಿದ ಮಗು) ಮತ್ತು ಆಕೆಯ ಮೂರು ವರ್ಷದ ಸಹೋದರಿಯ ಮೇಲೆ ದಾಳಿ ಮಾಡಲಾಯಿತು. ಸುಟ್ಟ ಗಾಯಗಳಾದವು.

ಪೊಲೀಸ್‌ ನಿರ್ಲಕ್ಷ್ಯ

2021, ಡಿಸೆಂಬರ್ 31ರಂದು ನಡೆದ ಮೊದಲ ಸಾಮೂಹಿಕ ಅತ್ಯಾಚಾರದ ಬಗ್ಗೆ ಅಪ್ರಾಪ್ತ ಬಾಲಕಿ ತನ್ನ ಕುಟುಂಬಕ್ಕೆ ತಿಳಿಸಿರಲಿಲ್ಲ ಎಂದು ಸಂತ್ರಸ್ತೆಯ ಪರ ವಕೀಲ ಸಂಜೀವ್ ತ್ರಿವೇದಿಯವರು ‘ಆರ್ಟಿಕಲ್ 14’ ಜಾಲತಾಣಕ್ಕೆ ತಿಳಿಸಿದ್ದಾರೆ.

ಆದರೆ ಫೆಬ್ರವರಿ 13 ರಂದು ಎರಡನೇ ಬಾರಿಗೆ ಸಾಮೂಹಿಕ ಅತ್ಯಾಚಾರಕ್ಕೊಳಗಾದ ನಂತರ ಫೆಬ್ರವರಿ 14 ರಂದು ಎಫ್‌ಐಆರ್ ದಾಖಲಿಸಲಾಗಿದೆ. ಫೆಬ್ರವರಿ 15ರಂದು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಯಿತು. ಸಂತ್ರಸ್ತೆಯು ಆರು ವಾರಗಳ ಗರ್ಭಿಣಿ ಎಂಬುದು ಬೆಳಕಿಗೆ ಬಂದಿತು.

“ಕುಟುಂಬಕ್ಕೆ ಈ ಮಾಹಿತಿ ಇರಲಿಲ್ಲ…. ಏಪ್ರಿಲ್‌ನಲ್ಲಿ ಸಂತ್ರಸ್ತೆಯ ಹೊಟ್ಟೆ ಉಬ್ಬಲು ಶುರುವಾಯಿತು. ಏನೋ ಅನಾರೋಗ್ಯ ಇರಬಹುದು ಎಂದು ತಿಳಿದ ಕುಟುಂಬ ವೈದ್ಯರ ಬಳಿ ಕರೆದೊಯ್ದರು. ಬಾಲಕಿಗೆ ಆಂತರಿಕ ಊತ ಕಾಣಿಸಿಕೊಂಡಿದೆ ಎಂದು ತಿಳಿಸಿ, ಔಷಧಗಳನ್ನು ನೀಡಿದ್ದರು” ಎನ್ನುತ್ತಾರೆ ತ್ರಿವೇದಿ.

ಆದರೆ ಆಕೆಯ ಹೊಟ್ಟೆ ಬೆಳೆಯಿತು. ಮತ್ತೆ ಜುಲೈ-ಆಗಸ್ಟ್‌ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಏಳರಿಂದ ಎಂಟು ತಿಂಗಳ ಗರ್ಭಿಣಿ ಎಂದು ತಿಳಿದುಕೊಂಡರು. ಅದು ಎರಡನೇ ಸಾಮೂಹಿಕ ಅತ್ಯಾಚಾರದ ಪರಿಣಾಮವಾಗಿರಲಿಲ್ಲ. ಗರ್ಭ ತೆಗೆಸಲು ಸಾಧ್ಯವಿರಲಿಲ್ಲ. ಯಾಕೆಂದರೆ ಸಮಯ ಮೀರಿ ಹೋಗಿತ್ತು.

2021 ಡಿಸೆಂಬರ್ 31ರಂದು ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಬಾಲಕಿ ತನ್ನ ತಾಯಿಗೆ ತಿಳಿಸಿದಳು. ಅವರು ಮತ್ತೊಂದು ಎಫ್‌ಐಆರ್ ದಾಖಲಿಸಲು ಪೊಲೀಸರನ್ನು ಸಂಪರ್ಕಿಸಿದರು. ಆದರೆ ಎರಡನೇ ಬಾರಿ ಸಾಮೂಹಿಕ ಅತ್ಯಾಚಾರಕ್ಕೊಳದಾಗ ದಾಖಲಾಗಿರುವ ಎಫ್‌ಐಆರ್‌ ಒಂದೇ ಸಾಕಾಗುತ್ತದೆ ಎಂದು ಪೊಲೀಸರು ಹೇಳಿದರು.

2023, ಮೇ 2ರಂದು ದಾಖಲಾದ ಎಫ್‌ಐಆರ್‌ನಲ್ಲಿನ ಘಟನೆಗಳ ಸಾರಾಂಶವು ಪೊಲೀಸರು ಮೊದಲ ಸಲದ ಅತ್ಯಾಚಾರದ ಬಗ್ಗೆ ದಾಖಲಿಸಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ. “ದೂರುದಾರರ ಅಪ್ರಾಪ್ತ ಮಗಳು ಮನೆಗೆ ಬಂದಾಗ, ಆಕೆ ಏನನ್ನೂ ಹೇಳಲಿಲ್ಲ. ಕೆಲವು ತಿಂಗಳುಗಳ ನಂತರ, ಕುಟುಂಬಕ್ಕೆ ತಿಳಿಯಿತು. ಅವರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಆದರೆ ಅವರ ದೂರಿನ ಮೇಲೆ ಯಾವುದೇ ತನಿಖೆ ನಡೆಸಲಿಲ್ಲ. ಕುಟುಂಬವು ವೈದ್ಯಕೀಯ ಸಮಸ್ಯೆಗಳಲ್ಲಿ ನಿರತರಾವಾಯಿತು. ಏಕೆಂದರೆ ಮಗಳ ಜೀವವನ್ನು ಉಳಿಸುವುದು ಅವರ ಮುಂದಿನ ಸವಾಲಾಗಿತ್ತು.”

“2022 ಫೆಬ್ರವರಿ 13ರಂದು ಸಂತ್ರಸ್ತೆಯು ಧರಿಸಿದ್ದ ಬಟ್ಟೆಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಿದೆ. ರಕ್ತದ ಕಲೆಗಳು ಬಟ್ಟೆಯಲ್ಲಿ ಕಂಡುಬಂದಿವೆ” ಎಂದು ವಕೀಲ ತ್ರಿವೇದಿ ಹೇಳುತ್ತಾರೆ.

ಇದನ್ನೂ ಓದಿರಿ: ‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

“2021 ಡಿಸೆಂಬರ್ 31  ಮತ್ತು 2022 ಫೆಬ್ರವರಿ, 13ರಂದು ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎನ್ನುತ್ತಾರೆ ತ್ರಿವೇದಿ. ಆದರೂ ಮೊದಲ ಸಲದ ಅತ್ಯಾಚಾರದ ಬಗ್ಗೆ ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ ಎಂದಿದ್ದಾರೆ.

ಮೇ 9 ರಂದು ನಿಗದಿಯಾಗಿದ್ದ ವಿಚಾರಣೆಗೆ ಮೊದಲು, ಯುಪಿ ಪೊಲೀಸರು ಮೇ 2ರಂದು ಎಫ್‌ಐಆರ್ ದಾಖಲಿಸಿದ್ದಾರೆ. “ಪೊಲೀಸರು ಗೊಂದಲಕ್ಕೊಳಗಾದರು ಮತ್ತು ಮೇ 2 ರಂದು ಎಫ್ಐಆರ್ ದಾಖಲಿಸಿದರು” ಎಂದು ತ್ರಿವೇದಿ ಹೇಳಿದರು.

2023ರ ಮೇ 2ರಂದು ದಾಖಲಾದ ಎಫ್‌ಐಆರ್‌ನಲ್ಲಿ ರೋಷನ್ ಲೋಧಿ, ಸುಖ್ದಿನ್, ಅರುಣ್, ರಂಜಿತ್ ಮತ್ತು ಸತೀಶ್ ಎಂಬವರನ್ನು ಆರೋಪಿಗಳೆಂದು ಉಲ್ಲೇಖಿಸಲಾಗಿದೆ. ಸಾಮೂಹಿಕ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಆರೋಪಗಳನ್ನು ಐಪಿಸಿ ಸೆಕ್ಷನ್‌ನ ಅಡಿಯಲ್ಲಿ ಹೊರಿಸಲಾಗಿದೆ. ಪೋಕ್ಸೋ ಮತ್ತು ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾ‌ಯ್ದೆಯಲ್ಲೂ ಪ್ರಕರಣ ದಾಖಲಿಸಲಾಗಿದೆ.

ಅಪ್ರಾಪ್ತರ ಮನೆಗೆ ಬೆಂಕಿ ಹಚ್ಚಿದ ನಂತರ 2023ರ ಏಪ್ರಿಲ್ 17 ರಂದು ಮುರವ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ರೋಷನ್, ಸತೀಶ್, ರಂಜಿತ್, ರಾಜ್ ಬಹದ್ದೂರ್, ಚಂದನ್, ಸುಖದಿನ್ ಮತ್ತು ಅಮನ್ ದೋಮ್ ಆರೋಪಿಗಳಲ್ಲಿ. ಆರೋಪಿಗಳಲ್ಲಿ ಅಪ್ರಾಪ್ತ ಬಾಲಕಿಯ ಅಜ್ಜ ಚಂದನ್, ಆಕೆಯ ಚಿಕ್ಕಪ್ಪ ರಾಜ್ ಬಹದ್ದೂರ್ ಸೇರಿದ್ದಾರೆ.

ವರದಿ ಕೃಪೆ: Article14.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...