Homeದಲಿತ್ ಫೈಲ್ಸ್ಎರಡು ಬಾರಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ನಿರ್ಲಕ್ಷ್ಯ ತಾಳಿದ್ದ ಯುಪಿ ಪೊಲೀಸರು

ಎರಡು ಬಾರಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ನಿರ್ಲಕ್ಷ್ಯ ತಾಳಿದ್ದ ಯುಪಿ ಪೊಲೀಸರು

- Advertisement -
- Advertisement -

2021, ಡಿಸೆಂಬರ್ 31. ಸಂಜೆ 5:30ರ ಸಮಯ. ಬಾಲಕಿಯು ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಗ್ರಾಮದ ನಿವಾಸಿ ಸತೀಶ್ ಅಲ್ಲಿಗೆ ಬಂದನು. “ನಿನ್ನ ತಂದೆ ನಿನ್ನನ್ನು ಅರುಣ್ ಅವರ ಮನೆಗೆ ಬರುವಂತೆ ಕರೆಯುತ್ತಿದ್ದಾರೆ” ಎಂದು ನಂಬಿಸಿ ಕರೆದೊಯ್ದನು ಎಂದು ಎಫ್‌ಐಆರ್‌ ಉಲ್ಲೇಖಿಸುತ್ತದೆ.

ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆದಿರುವ ಭೀಕರ ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಉನ್ನಾವೋದಲ್ಲಿನ ಮೌರವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯು ಸತೀಶ್‌ನ ಮಾತನ್ನು ನಂಬಿ ಅರುಣ್ ಮನೆಗೆ ಹೋದಳು. ಅಲ್ಲಿ ರೋಷನ್, ಸುಖ್ದಿನ್, ಅರುಣ್, ರಂಜಿತ್ ಮತ್ತು ಸತೀಶ್ ಇದ್ದರು. ಮೊದಲು ರೋಷನ್ ಆಕೆಯ ಮೇಲೆ ಅತ್ಯಾಚಾರ ಎಸಗಿದನು. ನಂತರ ಸತೀಶ್. ನಂತರ ಎಲ್ಲರೂ ಸರದಿಯಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದರು ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಬಾಲಕಿಯು ನಿರ್ಜೀವವಾದಾಗ, ಆಕೆಗೆ ಜ್ಯೂಸ್ ಮತ್ತು ಗ್ಲೂಕೋಸ್ ನೀಡಿದರು. ರಂಜಿತ್ ಇಡೀ ಘಟನೆಯನ್ನು ವಿಡಿಯೋ ಮಾಡಿಕೊಂಡನು. ಆಕೆ ಚೇತರಿಸಿಕೊಂಡಿದ್ದನ್ನು ಕಂಡು ಸುಖ್ದಿನ್ ಆಕೆಗೆ ಆಯುಧ ತೋರಿಸಿ, “ಈ ಬಗ್ಗೆ ಯಾರಿಗಾದರೂ ಹೇಳಿದರೆ ನಿನ್ನನ್ನು, ನಿನ್ನ ಮನೆಯವರನ್ನು ಕೊಂದು ಹಾಕುತ್ತೇವೆ. ರಂಜಿತ್ ವಿಡಿಯೋ ಮಾಡಿಕೊಂಡಿದ್ದಾನೆ. ಜಾಲತಾಣಗಳಲ್ಲಿ ಹಾಕಲಾಗುತ್ತದೆ” ಎಂದು ಬೆದರಿಸಿದನು.

2023ರ ಮೇ 2ರಂದು ಉತ್ತರ ಪ್ರದೇಶದ ಪೋಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಘಟನೆ ನಡೆದು ಒಂದು ವರ್ಷ ನಾಲ್ಕು ತಿಂಗಳ ನಂತರ ಎಫ್‌ಐಆರ್‌ ಆಗಿದೆ. ದಲಿತ ಸಮುದಾಯದ ನಾಲ್ವರು ಮತ್ತು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರಿದ ಒಬ್ಬಾತ ದಲಿತ ಬಾಲಕಿ ಮೇಲಿನ ಅತ್ಯಾಚಾರದಲ್ಲಿ ಭಾಗಿಯಾಗಿದ್ದಾರೆ.

ಪ್ರಕರಣ ಬೆಳಕಿಗೆ ಬಂದಾಗ ಮತ್ತಷ್ಟು ವಿವರಗಳು ತಿಳಿದವು. ಇದೇ ಆರೋಪಿಗಳು 2021ರ ಡಿಸೆಂಬರ್‌ ಮತ್ತು 2022ರ ಫೆಬ್ರುವರಿಯಲ್ಲಿ ಸಾಮೂಹಿಕವಾಗಿ ಅತ್ಯಾಚಾರವನ್ನು ಈ ಬಾಲಕಿ ಮೇಲೆ ಎಸಗಿದ್ದರು. ಒಂದು ವರ್ಷದ ಹಿಂದೆ ಮೊದಲ ಬಾರಿಗೆ ಅತ್ಯಾಚಾರವಾದಾಗ ಎಫ್‌ಐಆರ್ ದಾಖಲಿಸಲು ಯುಪಿ ಪೊಲೀಸರ ಬಳಿ ಪುರಾವೆಗಳಿದ್ದರೂ, ಅವರು ನಿರ್ಲಕ್ಷಿಸಿದ್ದಾರೆ ಎಂಬುವುದು ಬೆಳಕಿಗೆ ಬಂದಿದೆ. ಸಂತ್ರಸ್ತ ಕುಟುಂಬವು ನ್ಯಾಯಾಲಯಕ್ಕೆ ಹೋಗುವವರೆಗೂ ಪ್ರಕರಣ ದಾಖಲಾಗಿರಲಿಲ್ಲ.

2022, ಸೆಪ್ಟೆಂಬರ್ 22ರಂದು ಅಪ್ರಾಪ್ತ ಬಾಲಕಿಯು ಮಗುವಿಗೆ ಜನ್ಮ ನೀಡಿದ ಬಳಿಕ ಪ್ರಕರಣ ತೀವ್ರತೆ ಪಡೆದುಕೊಂಡಿತು. ಎರಡನೇ ಬಾರಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ನಲ್ಲಿ ಬಂಧಿತನಾಗಿದ್ದ ವ್ಯಕ್ತಿಯೊಬ್ಬ ಜಾಮೀನಿನ ಮೇಲೆ ಹೊರಬಂದಾಗ 2023ರ ಎಪ್ರಿಲ್‌ನಲ್ಲಿ ಸಂತ್ರಸ್ತಯ ಮನೆಗೆ ಬೆಂಕಿ ಹಚ್ಚಿದ್ದನು.

ಸಂತ್ರಸ್ತೆಯ ಆರು ತಿಂಗಳ ಮಗು (ಮೊದಲ ಬಾರಿಗೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದಾಗ ಗರ್ಭಿಣಿಯಾಗಿದ್ದರಿಂದ ಜನಿಸಿದ ಮಗು) ಮತ್ತು ಆಕೆಯ ಮೂರು ವರ್ಷದ ಸಹೋದರಿಯ ಮೇಲೆ ದಾಳಿ ಮಾಡಲಾಯಿತು. ಸುಟ್ಟ ಗಾಯಗಳಾದವು.

ಪೊಲೀಸ್‌ ನಿರ್ಲಕ್ಷ್ಯ

2021, ಡಿಸೆಂಬರ್ 31ರಂದು ನಡೆದ ಮೊದಲ ಸಾಮೂಹಿಕ ಅತ್ಯಾಚಾರದ ಬಗ್ಗೆ ಅಪ್ರಾಪ್ತ ಬಾಲಕಿ ತನ್ನ ಕುಟುಂಬಕ್ಕೆ ತಿಳಿಸಿರಲಿಲ್ಲ ಎಂದು ಸಂತ್ರಸ್ತೆಯ ಪರ ವಕೀಲ ಸಂಜೀವ್ ತ್ರಿವೇದಿಯವರು ‘ಆರ್ಟಿಕಲ್ 14’ ಜಾಲತಾಣಕ್ಕೆ ತಿಳಿಸಿದ್ದಾರೆ.

ಆದರೆ ಫೆಬ್ರವರಿ 13 ರಂದು ಎರಡನೇ ಬಾರಿಗೆ ಸಾಮೂಹಿಕ ಅತ್ಯಾಚಾರಕ್ಕೊಳಗಾದ ನಂತರ ಫೆಬ್ರವರಿ 14 ರಂದು ಎಫ್‌ಐಆರ್ ದಾಖಲಿಸಲಾಗಿದೆ. ಫೆಬ್ರವರಿ 15ರಂದು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಯಿತು. ಸಂತ್ರಸ್ತೆಯು ಆರು ವಾರಗಳ ಗರ್ಭಿಣಿ ಎಂಬುದು ಬೆಳಕಿಗೆ ಬಂದಿತು.

“ಕುಟುಂಬಕ್ಕೆ ಈ ಮಾಹಿತಿ ಇರಲಿಲ್ಲ…. ಏಪ್ರಿಲ್‌ನಲ್ಲಿ ಸಂತ್ರಸ್ತೆಯ ಹೊಟ್ಟೆ ಉಬ್ಬಲು ಶುರುವಾಯಿತು. ಏನೋ ಅನಾರೋಗ್ಯ ಇರಬಹುದು ಎಂದು ತಿಳಿದ ಕುಟುಂಬ ವೈದ್ಯರ ಬಳಿ ಕರೆದೊಯ್ದರು. ಬಾಲಕಿಗೆ ಆಂತರಿಕ ಊತ ಕಾಣಿಸಿಕೊಂಡಿದೆ ಎಂದು ತಿಳಿಸಿ, ಔಷಧಗಳನ್ನು ನೀಡಿದ್ದರು” ಎನ್ನುತ್ತಾರೆ ತ್ರಿವೇದಿ.

ಆದರೆ ಆಕೆಯ ಹೊಟ್ಟೆ ಬೆಳೆಯಿತು. ಮತ್ತೆ ಜುಲೈ-ಆಗಸ್ಟ್‌ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಏಳರಿಂದ ಎಂಟು ತಿಂಗಳ ಗರ್ಭಿಣಿ ಎಂದು ತಿಳಿದುಕೊಂಡರು. ಅದು ಎರಡನೇ ಸಾಮೂಹಿಕ ಅತ್ಯಾಚಾರದ ಪರಿಣಾಮವಾಗಿರಲಿಲ್ಲ. ಗರ್ಭ ತೆಗೆಸಲು ಸಾಧ್ಯವಿರಲಿಲ್ಲ. ಯಾಕೆಂದರೆ ಸಮಯ ಮೀರಿ ಹೋಗಿತ್ತು.

2021 ಡಿಸೆಂಬರ್ 31ರಂದು ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಬಾಲಕಿ ತನ್ನ ತಾಯಿಗೆ ತಿಳಿಸಿದಳು. ಅವರು ಮತ್ತೊಂದು ಎಫ್‌ಐಆರ್ ದಾಖಲಿಸಲು ಪೊಲೀಸರನ್ನು ಸಂಪರ್ಕಿಸಿದರು. ಆದರೆ ಎರಡನೇ ಬಾರಿ ಸಾಮೂಹಿಕ ಅತ್ಯಾಚಾರಕ್ಕೊಳದಾಗ ದಾಖಲಾಗಿರುವ ಎಫ್‌ಐಆರ್‌ ಒಂದೇ ಸಾಕಾಗುತ್ತದೆ ಎಂದು ಪೊಲೀಸರು ಹೇಳಿದರು.

2023, ಮೇ 2ರಂದು ದಾಖಲಾದ ಎಫ್‌ಐಆರ್‌ನಲ್ಲಿನ ಘಟನೆಗಳ ಸಾರಾಂಶವು ಪೊಲೀಸರು ಮೊದಲ ಸಲದ ಅತ್ಯಾಚಾರದ ಬಗ್ಗೆ ದಾಖಲಿಸಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ. “ದೂರುದಾರರ ಅಪ್ರಾಪ್ತ ಮಗಳು ಮನೆಗೆ ಬಂದಾಗ, ಆಕೆ ಏನನ್ನೂ ಹೇಳಲಿಲ್ಲ. ಕೆಲವು ತಿಂಗಳುಗಳ ನಂತರ, ಕುಟುಂಬಕ್ಕೆ ತಿಳಿಯಿತು. ಅವರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಆದರೆ ಅವರ ದೂರಿನ ಮೇಲೆ ಯಾವುದೇ ತನಿಖೆ ನಡೆಸಲಿಲ್ಲ. ಕುಟುಂಬವು ವೈದ್ಯಕೀಯ ಸಮಸ್ಯೆಗಳಲ್ಲಿ ನಿರತರಾವಾಯಿತು. ಏಕೆಂದರೆ ಮಗಳ ಜೀವವನ್ನು ಉಳಿಸುವುದು ಅವರ ಮುಂದಿನ ಸವಾಲಾಗಿತ್ತು.”

“2022 ಫೆಬ್ರವರಿ 13ರಂದು ಸಂತ್ರಸ್ತೆಯು ಧರಿಸಿದ್ದ ಬಟ್ಟೆಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಿದೆ. ರಕ್ತದ ಕಲೆಗಳು ಬಟ್ಟೆಯಲ್ಲಿ ಕಂಡುಬಂದಿವೆ” ಎಂದು ವಕೀಲ ತ್ರಿವೇದಿ ಹೇಳುತ್ತಾರೆ.

ಇದನ್ನೂ ಓದಿರಿ: ‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

“2021 ಡಿಸೆಂಬರ್ 31  ಮತ್ತು 2022 ಫೆಬ್ರವರಿ, 13ರಂದು ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎನ್ನುತ್ತಾರೆ ತ್ರಿವೇದಿ. ಆದರೂ ಮೊದಲ ಸಲದ ಅತ್ಯಾಚಾರದ ಬಗ್ಗೆ ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ ಎಂದಿದ್ದಾರೆ.

ಮೇ 9 ರಂದು ನಿಗದಿಯಾಗಿದ್ದ ವಿಚಾರಣೆಗೆ ಮೊದಲು, ಯುಪಿ ಪೊಲೀಸರು ಮೇ 2ರಂದು ಎಫ್‌ಐಆರ್ ದಾಖಲಿಸಿದ್ದಾರೆ. “ಪೊಲೀಸರು ಗೊಂದಲಕ್ಕೊಳಗಾದರು ಮತ್ತು ಮೇ 2 ರಂದು ಎಫ್ಐಆರ್ ದಾಖಲಿಸಿದರು” ಎಂದು ತ್ರಿವೇದಿ ಹೇಳಿದರು.

2023ರ ಮೇ 2ರಂದು ದಾಖಲಾದ ಎಫ್‌ಐಆರ್‌ನಲ್ಲಿ ರೋಷನ್ ಲೋಧಿ, ಸುಖ್ದಿನ್, ಅರುಣ್, ರಂಜಿತ್ ಮತ್ತು ಸತೀಶ್ ಎಂಬವರನ್ನು ಆರೋಪಿಗಳೆಂದು ಉಲ್ಲೇಖಿಸಲಾಗಿದೆ. ಸಾಮೂಹಿಕ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಆರೋಪಗಳನ್ನು ಐಪಿಸಿ ಸೆಕ್ಷನ್‌ನ ಅಡಿಯಲ್ಲಿ ಹೊರಿಸಲಾಗಿದೆ. ಪೋಕ್ಸೋ ಮತ್ತು ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾ‌ಯ್ದೆಯಲ್ಲೂ ಪ್ರಕರಣ ದಾಖಲಿಸಲಾಗಿದೆ.

ಅಪ್ರಾಪ್ತರ ಮನೆಗೆ ಬೆಂಕಿ ಹಚ್ಚಿದ ನಂತರ 2023ರ ಏಪ್ರಿಲ್ 17 ರಂದು ಮುರವ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ರೋಷನ್, ಸತೀಶ್, ರಂಜಿತ್, ರಾಜ್ ಬಹದ್ದೂರ್, ಚಂದನ್, ಸುಖದಿನ್ ಮತ್ತು ಅಮನ್ ದೋಮ್ ಆರೋಪಿಗಳಲ್ಲಿ. ಆರೋಪಿಗಳಲ್ಲಿ ಅಪ್ರಾಪ್ತ ಬಾಲಕಿಯ ಅಜ್ಜ ಚಂದನ್, ಆಕೆಯ ಚಿಕ್ಕಪ್ಪ ರಾಜ್ ಬಹದ್ದೂರ್ ಸೇರಿದ್ದಾರೆ.

ವರದಿ ಕೃಪೆ: Article14.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...