Homeಕರ್ನಾಟಕದಲಿತ ಬಾಲಕಿಯ ಅತ್ಯಾಚಾರ ಪ್ರಕರಣ: ಸಂಘಪರಿವಾರದ ಮೂವರು ಕಾರ್ಯಕರ್ತರ ಬಂಧನ

ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ: ಸಂಘಪರಿವಾರದ ಮೂವರು ಕಾರ್ಯಕರ್ತರ ಬಂಧನ

- Advertisement -
- Advertisement -

ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಂಘಪರಿವಾರದ ಕಾರ್ಯಕರ್ತರನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಮೂಡುಬಿದರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ ಅಕ್ಷಯ್ ದೇವಾಡಿಗ (24), ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಚಾಡ (30), ಬೆರಿಪದವು ನಿವಾಸಿ ಸುಕುಮಾರ ಬೆಳ್ಚಾಡ (28) ಎಂದು ಪೊಲೀಸರು ಹೇಳಿದ್ದಾರೆ..

ಆರೋಪಿಗಳಾದ ಅಕ್ಷಯ್ ಬೆರಿಪದವಿನಲ್ಲಿ ಅಣ್ಣನ ಮನೆಯಲ್ಲಿದ್ದುಕೊಂಡು ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದರೆ, ಕಮಲಾಕ್ಷ ಗಾರೆ ಕೆಲಸ ಹಾಗೂ ಸುಕುಮಾರ ಚಾಲಕ ವೃತ್ತಿಯನ್ನು ನಡೆಸಿಕೊಂಡಿದ್ದರು. ಬಂಧಿತ ಆರೋಪಿಗಳೆಲ್ಲ ಸಂಘಪರಿವಾರದ ಕಾರ್ಯಕರ್ತರು ಎಂದು ಪೊಲೀಸರು ತಿಳಿಸಿದ್ದಾರೆ.

2019ರಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಬಾಲಕಿಯನ್ನು ಸಂಬಂಧಿಕರ ಮನೆಯಲ್ಲಿ ಜಯಪ್ರಕಾಶ್‌ ಎಂಬಾತ ಅತ್ಯಾಚಾರ ನಡೆಸಿದ್ದಾನೆ.‌ ಕಳೆದ ಜನವರಿಯಲ್ಲಿ ಅಚ್ಚು ಯಾನೆ ಅಕ್ಷಯ್‌ ಎಂಬಾತ ಬೆರಿಪದವು ಶಾಲೆಯ ಬಳಿಗೆ ಬಂದು ಬೇರೆ ಬೇರೆ ದಿನಗಳಲ್ಲಿ 3 ಬಾರಿ ಅತ್ಯಾಚಾರ ನಡೆಸಿದ್ದಾನೆ.

ಕಳೆದ ಮೇ ತಿಂಗಳಿನಲ್ಲಿ ಬೆರಿಪದವು ರಾಜ ಎಂಬಾತ ಬಾಲಕಿಗೆ ಕರೆ ಮಾಡಿ ಮಾತನಾಡಿಕೊಂಡಿದ್ದು, ಬೆರಿಪದವು ವಿದ್ಯಾರಣ್ಯ ಶಾಲೆಯ ಗುಡ್ಡ ಜಾಗಕ್ಕೆ ಬರಲು ಹೇಳಿ, ಬಾಲಕಿಯನ್ನು ಮದುವೆಯಾಗುತ್ತೇನೆಂದು ಪುಸಲಾಯಿಸಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ನಡೆಸಿರುತ್ತಾನೆ.

ಕಳೆದ ಜೂನ್‌ ತಿಂಗಳಿನ ಮೊದಲ ವಾರದಲ್ಲಿ ಅಚ್ಚು ಯಾನೆ ಅಕ್ಷಯ್‌ ಎಂಬಾತನ ಮುಖಾಂತರ ಸುಕುಮಾರ ಪರಿಚಯಿಸಿಕೊಂಡು ಮುದುವೆಯಾಗುತ್ತೇನೆಂದು ಬೆರಿಪದವು ಎಂಬಲ್ಲಿಗೆ ಬರಲು ಹೇಳಿ ಅಲ್ಲಿನ ವಿದ್ಯಾರಣ್ಯ ಶಾಲೆಯ ಗುಡ್ಡ ಜಾಗದಲ್ಲಿ ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ನಡೆಸಿರುತ್ತಾನೆ. ಅಲ್ಲದೆ ದಿನಾಂಕ 28.07.2023 ರಂದು ರಾತ್ರಿ ವೇಳೆ ಕಮಾಲಾಕ್ಷ ಬೆಳ್ಚಡನು ಮದುವೆಯಾಗುತ್ತೇನೆಂದು ಭರವಸೆ ನೀಡಿ, ಆತನ ಮನೆಯಾದ ಬಾಯಾರು ಗ್ರಾಮದಲ್ಲಿರುವ ಅವರ ಸಂಬಂಧಿಯವರ ಖಾಲಿ ಮನೆಗೆ ಬರಲು ಹೇಳಿ ಬಾಲಕಿಯು ಹೋದಾಗ ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ಮಾಡಿರುತ್ತಾನೆ. ಈ ಎಲ್ಲ ಘಟನೆಗಳನ್ನು ಬಾಲಕಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದು ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪೊಕ್ಸೋ ಹಾಗೂ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಬಾಲಕಿ ನೀಡಿದ ಮಾಹಿತಿಯಂತೆ ಪ್ರಕರಣ ದಾಖಲಾಗಿದೆ.

ಆರೋಪಿಗಳ ವಿರುದ್ಧ ಪೋಸ್ಕೋ, ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕೇರಳ: ಐದು ವರ್ಷದ ಬಾಲಕಿ ಮೇಲೆ ಅಮಾನುಷವಾಗಿ ಅತ್ಯಾಚಾರವೆಸಗಿ, ಕತ್ತು ಹಿಸುಕಿ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...