Homeಕರ್ನಾಟಕವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ;...

ವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ; ಹೋರಾಟಕ್ಕೆ ಮುಂದಾದ ಡಿಎಚ್‌ಎಸ್

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ದಲಿತ ಸಮುದಾಯದ ಬಾಲಕಿಯೊಬ್ಬರ ಮೇಲೆ ಬಿಜೆಪಿ ಮುಖಂಡ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಪೋಕ್ಸೋ ದಾಖಲಾಗಿದ್ದರೂ ಆರೋಪಿಯನ್ನು ಈ ವರೆಗೆ ಬಂಧಿಸದೆ ಪೊಲೀಸರು ಮೀನಾಮೇಷ ಎಣಿಸುತ್ತಿದ್ದು ಈ ಬಗ್ಗೆ ದಲಿತ ಹಕ್ಕುಗಳ ಸಮಿತಿ (ಡಿಎಚ್‌ಎಸ್) ಆಕ್ರೋಶ ವ್ಯಕ್ತಪಡಿಸಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮಾತ್ರವಲ್ಲದೆ, ಅತ್ಯಾಚಾರ ಕೂಡಾ ಎಸಲಾಗಿದೆ ಎಂಬ ಸಂಶಯವನ್ನು ಡಿಎಚ್‌ಎಸ್ ವ್ಯಕ್ತಪಡಿಸಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಲು, ಕಠಿಣ ಕಾಯ್ದೆಗಳಡಿ ಪ್ರಕರಣ ದಾಖಲಿಸಲು ಆಗ್ರಹಿಸಿ ಏಪ್ರಿಲ್ 3ರಂದು ‘ಆಕ್ರೋಶ ಮೆರವಣಿಗೆ’ ನಡೆಸಿ ಪ್ರತಿಭಟನೆಗೆ ಮುಂದಾಗಿದೆ. ದಲಿತ ಬಾಲಕಿ ಮೇಲೆ ಲೈಂಗಿಕ

ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಪ್ರದೇಶದ ದಲಿತ ಬಾಲಕಿಯ ಮೇಲೆ ಸ್ಥಳೀಯ ಭೂಮಾಲಕ ಮಹೇಶ್ ಭಟ್ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿರುವ ಬಗ್ಗೆ ಮಾರ್ಚ್‌ 26ರಂದು ವರದಿಯಾಗಿತ್ತು. ಆರೋಪಿಯ ಮೇಲೆ ಪೋಕ್ಸೋ ದಾಖಲಾಗಿದ್ದರು ತನ್ನ ಪ್ರಭಾವದ ಕಾರಣಕ್ಕಾಗಿ ಆತನ ಬಂಧನವಾಗಿಲ್ಲ ಎಂದು ಆರೋಪಿಸಲಾಗಿದೆ. ದಲಿತ ಬಾಲಕಿ ಮೇಲೆ ಲೈಂಗಿಕ

ಈ ಬಗ್ಗೆ ದಲಿತ ಹಕ್ಕುಗಳ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ದಲಿತ ಮತ್ತು ಸಮಾನ ಮನಸ್ಕ ಸಂಘಟನೆಗಳು ಹೋರಾಟ ಕೈಗೆತ್ತಿಕೊಂಡಿದ್ದು, ಏಪ್ರಿಲ್ 3ರ ಗುರುವಾರದಂದು ವಿಟ್ಲ ನಾಡ ಕಚೇರಿ ಬಳಿ ಪ್ರತಿಭಟನೆಗೆ ಸಿದ್ಧವಾಗಿದೆ. ಬೆಳಿಗ್ಗೆ 10 ಗಂಟೆಗೆ ವಿಟ್ಲ ಬಸ್‌ ನಿಲ್ದಾಣದಿಂದ ‘ಆಕ್ರೊಶ ಮೆರವಣಿಗೆ’ ಆರಂಭವಾಗಲಿದ್ದು, ವಿಟ್ಲ ನಾಡ ಕಚೇರಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಲಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಡಿವೈಎಫ್‌ಐ ಮುಖಂಡ ಸಂತೋಷ್ ಬಜಾಲ್, “ಪ್ರಕರಣ ದಾಖಲಾಗಿ ಒಂದು ವಾರ ಕಳೆದರೂ ಆರೋಪಿಯ ಬಂಧನವಾಗಿಲ್ಲ. ಅರೋಪಿ ಸಂತ್ರಸ್ತ ಬಾಲಕಿಗೆ ‘ನನ್ನೊಂದಿಗೆ ಗುಡ್ಡಕ್ಕೆ ಬರುತ್ತಿಯ’ ಎಂದು ಅಷ್ಟೆ ಕೇಳಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಆದರೆ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರ ಕೂಡಾ ಎಸಗಿದ್ದಾನೆ ಎಂಬ ಆರೋಪ ಕೂಡಾ ಸ್ಥಳೀಯವಾಗಿ ಕೇಳಿಬರುತ್ತಿದೆ. ಆರೋಪಿ ಸ್ಥಳೀಯ ಬಿಜೆಪಿ ಮುಖಂಡನಾಗಿದ್ದು ಪ್ರಕರಣದಲ್ಲಿ ಪೊಲೀಸರು ಯಾವುದೆ ಆಸಕ್ತಿ ತೋರಿಸುತ್ತಿಲ್ಲ” ಎಂದು ಹೇಳಿದರು.

“ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದ್ದರೂ, ಇಲ್ಲಿವರೆಗೆ ಅವರ ವೈದ್ಯಕೀಯ ಪರೀಕ್ಷೆ ಆಗಿಲ್ಲ. ಆರೋಪಿ ಭೂಮಾಲಕನೂ ಆಗಿದ್ದು, ಸಂತ್ರಸ್ತ ಬಾಲಕಿಯ ತಂದೆ ಅವರ ತೋಟದಲ್ಲಿ ಹಲವಾರು ವರ್ಷಗಳಿಂದ ಕಡಿಮೆ ಕೂಲಿಗೆ ದುಡಿಯುತ್ತಿದ್ದಾರೆ. ಸ್ಥಳೀಯವಾಗಿ ಪ್ರಭಾವ ಹೊಂದಿರುವ ಆರೋಪಿ ತೋಟದಲ್ಲಿ ದುಡಿಯು ಇತರ ಕಾರ್ಮಿಕರ ಮೇಲೆ ಕೂಡಾ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪ ಕೂಡಾ ಕೇಳಿ ಬರುತ್ತಿದೆ. ಹಾಗಾಗಿ ಪ್ರಕರಣದಲ್ಲಿ ಆರೋಪಿಯ ಮೇಲೆ ಕಠಿಣ ಪ್ರಕರಣ ದಾಖಲಿಸಿ ಪ್ರಕರಣವನ್ನು ಸರಿಯಾಗಿ ತನಿಖೆ ಮಾಡಬೇಕಿದೆ. ” ಎಂದು ಸಂತೋಷ್ ಕುಮಾರ್ ಬಜಾಲ್ ಹೇಳಿದರು.

ಈ ಬಗ್ಗೆ ಮಾರ್ಚ್‌ 29ರಂದು ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಡಿಎಚ್‌ಎಸ್ ಮುಖಂಡರು, ಘಟನೆಯಿಂದ ಬಾಲಕಿ ಖಿನ್ನತೆಗೊಳಗಾಗಿದ್ದು, ಅವರನ್ನು ಹೆಚ್ಚಿನ ವೈದ್ಯಕೀಯ ಪರೀಕ್ಷೆಗೊಳಪಡಿಸಿ ಕೌನ್ಸಿಲಿಂಗ್ ನಡೆಸಿ ಮಾನಸಿಕ ಧೈರ್ಯ ತುಂಬುವ ಮೂಲಕ ಸತ್ಯಾಂಶ ತಿಳಿಯಲು ಪ್ರಯತ್ನಿಸಬೇಕು ಎಂದು ಹೇಳಿತ್ತು. ಅಷ್ಟೆ ಅಲ್ಲದೆ, ಸಂತ್ರಸ್ತ ಬಾಲಕಿಯ ಪೋಷಕರಿಗೆ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದರು.

“ಆರೋಪಿ ಮಹೇಶ್ ಭಟ್ ಹಿಂಬಾಲಕ ಹರೀಶ್ ಮಣಿಯಾಣಿ ಎಂಬ ವ್ಯಕ್ತಿ ಸಂತ್ರಸ್ತ ಬಾಲಕಿಯ ಪೋಷಕರಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ಅವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಬೇಕು” ಎಂದು ಪತ್ರಿಕಾಗೋಷ್ಠಿಯಲ್ಲಿ ಡಿಎಚ್‌ಎಸ್ ಮುಖಂಡರು ಒತ್ತಾಯಿಸಿದ್ದರು.

ಆರೋಪಿ ಮಹೇಶ್ ಭಟ್ ಬಂಟ್ವಾಳದ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ನಿರ್ದೇಶಕರಾಗಿದ್ದು, ಜಿಲ್ಲೆಯ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ತನ್ನ ಕೃತ್ಯವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿತ್ತು. ಆರೋಪಿಯ ಕೃತ್ಯದಿಂದ ಬಾಲಕಿ ಮಾನಸಿಕವಾಗಿ ಕುಂದಿದ್ದು, ಎರಡು ತಿಂಗಳಿನಿಂದ ಶಾಲೆಗೆ ಹೋಗಿರಲಿಲ್ಲ ಎನ್ನಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದ್ದರೂ ಬಾಲಕಿ ಬಾರದ ಕಾರಣ ಶಿಕ್ಷಕರು ಆಕೆಯ ಮನೆಗೆ ಭೇಟಿ ನೀಡಿದ್ದರು. ಆದರೆ, ಅವರನ್ನೂ ಒಳಗೆ ಹೋಗಲು ಬಿಟ್ಟಿರಲಿಲ್ಲ ಎಂದು ಹೇಳಲಾಗಿದೆ. ರಾಜಕೀಯ ಪ್ರಭಾವ ಇರುವ ಕಾರಣ ಈ ಪ್ರಕರಣವನ್ನು ಮುಚ್ಚಿ ಹಾಕುವ ಸಾಧ್ಯತೆ ಇದೆ ಎಂಬುದು ಸ್ಥಳೀಯರ ಆತಂಕ ಎಂದಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಸಿಂಹ ನಾಯಿಗಳನ್ನು ಬೇಟೆಯಾಡುವುದಿಲ್ಲ..’; ದಲಿತ ಅಧಿಕಾರಿಯ ವಿರುದ್ಧ ವಿವಾದಾತ್ಮಕ ಹೇಳಿಕೆ ಕೊಟ್ಟ ಮಾಜಿ ಮುಖ್ಯಮಂತ್ರಿ

‘ಸಿಂಹ ನಾಯಿಗಳನ್ನು ಬೇಟೆಯಾಡುವುದಿಲ್ಲ..’; ದಲಿತ ಅಧಿಕಾರಿಯ ವಿರುದ್ಧ ವಿವಾದಾತ್ಮಕ ಹೇಳಿಕೆ ಕೊಟ್ಟ ಮಾಜಿ ಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...