Homeಕರ್ನಾಟಕವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ;...

ವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ; ಹೋರಾಟಕ್ಕೆ ಮುಂದಾದ ಡಿಎಚ್‌ಎಸ್

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ದಲಿತ ಸಮುದಾಯದ ಬಾಲಕಿಯೊಬ್ಬರ ಮೇಲೆ ಬಿಜೆಪಿ ಮುಖಂಡ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಪೋಕ್ಸೋ ದಾಖಲಾಗಿದ್ದರೂ ಆರೋಪಿಯನ್ನು ಈ ವರೆಗೆ ಬಂಧಿಸದೆ ಪೊಲೀಸರು ಮೀನಾಮೇಷ ಎಣಿಸುತ್ತಿದ್ದು ಈ ಬಗ್ಗೆ ದಲಿತ ಹಕ್ಕುಗಳ ಸಮಿತಿ (ಡಿಎಚ್‌ಎಸ್) ಆಕ್ರೋಶ ವ್ಯಕ್ತಪಡಿಸಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮಾತ್ರವಲ್ಲದೆ, ಅತ್ಯಾಚಾರ ಕೂಡಾ ಎಸಲಾಗಿದೆ ಎಂಬ ಸಂಶಯವನ್ನು ಡಿಎಚ್‌ಎಸ್ ವ್ಯಕ್ತಪಡಿಸಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಲು, ಕಠಿಣ ಕಾಯ್ದೆಗಳಡಿ ಪ್ರಕರಣ ದಾಖಲಿಸಲು ಆಗ್ರಹಿಸಿ ಏಪ್ರಿಲ್ 3ರಂದು ‘ಆಕ್ರೋಶ ಮೆರವಣಿಗೆ’ ನಡೆಸಿ ಪ್ರತಿಭಟನೆಗೆ ಮುಂದಾಗಿದೆ. ದಲಿತ ಬಾಲಕಿ ಮೇಲೆ ಲೈಂಗಿಕ

ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಪ್ರದೇಶದ ದಲಿತ ಬಾಲಕಿಯ ಮೇಲೆ ಸ್ಥಳೀಯ ಭೂಮಾಲಕ ಮಹೇಶ್ ಭಟ್ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿರುವ ಬಗ್ಗೆ ಮಾರ್ಚ್‌ 26ರಂದು ವರದಿಯಾಗಿತ್ತು. ಆರೋಪಿಯ ಮೇಲೆ ಪೋಕ್ಸೋ ದಾಖಲಾಗಿದ್ದರು ತನ್ನ ಪ್ರಭಾವದ ಕಾರಣಕ್ಕಾಗಿ ಆತನ ಬಂಧನವಾಗಿಲ್ಲ ಎಂದು ಆರೋಪಿಸಲಾಗಿದೆ. ದಲಿತ ಬಾಲಕಿ ಮೇಲೆ ಲೈಂಗಿಕ

ಈ ಬಗ್ಗೆ ದಲಿತ ಹಕ್ಕುಗಳ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ದಲಿತ ಮತ್ತು ಸಮಾನ ಮನಸ್ಕ ಸಂಘಟನೆಗಳು ಹೋರಾಟ ಕೈಗೆತ್ತಿಕೊಂಡಿದ್ದು, ಏಪ್ರಿಲ್ 3ರ ಗುರುವಾರದಂದು ವಿಟ್ಲ ನಾಡ ಕಚೇರಿ ಬಳಿ ಪ್ರತಿಭಟನೆಗೆ ಸಿದ್ಧವಾಗಿದೆ. ಬೆಳಿಗ್ಗೆ 10 ಗಂಟೆಗೆ ವಿಟ್ಲ ಬಸ್‌ ನಿಲ್ದಾಣದಿಂದ ‘ಆಕ್ರೊಶ ಮೆರವಣಿಗೆ’ ಆರಂಭವಾಗಲಿದ್ದು, ವಿಟ್ಲ ನಾಡ ಕಚೇರಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಲಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಡಿವೈಎಫ್‌ಐ ಮುಖಂಡ ಸಂತೋಷ್ ಬಜಾಲ್, “ಪ್ರಕರಣ ದಾಖಲಾಗಿ ಒಂದು ವಾರ ಕಳೆದರೂ ಆರೋಪಿಯ ಬಂಧನವಾಗಿಲ್ಲ. ಅರೋಪಿ ಸಂತ್ರಸ್ತ ಬಾಲಕಿಗೆ ‘ನನ್ನೊಂದಿಗೆ ಗುಡ್ಡಕ್ಕೆ ಬರುತ್ತಿಯ’ ಎಂದು ಅಷ್ಟೆ ಕೇಳಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಆದರೆ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರ ಕೂಡಾ ಎಸಗಿದ್ದಾನೆ ಎಂಬ ಆರೋಪ ಕೂಡಾ ಸ್ಥಳೀಯವಾಗಿ ಕೇಳಿಬರುತ್ತಿದೆ. ಆರೋಪಿ ಸ್ಥಳೀಯ ಬಿಜೆಪಿ ಮುಖಂಡನಾಗಿದ್ದು ಪ್ರಕರಣದಲ್ಲಿ ಪೊಲೀಸರು ಯಾವುದೆ ಆಸಕ್ತಿ ತೋರಿಸುತ್ತಿಲ್ಲ” ಎಂದು ಹೇಳಿದರು.

“ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದ್ದರೂ, ಇಲ್ಲಿವರೆಗೆ ಅವರ ವೈದ್ಯಕೀಯ ಪರೀಕ್ಷೆ ಆಗಿಲ್ಲ. ಆರೋಪಿ ಭೂಮಾಲಕನೂ ಆಗಿದ್ದು, ಸಂತ್ರಸ್ತ ಬಾಲಕಿಯ ತಂದೆ ಅವರ ತೋಟದಲ್ಲಿ ಹಲವಾರು ವರ್ಷಗಳಿಂದ ಕಡಿಮೆ ಕೂಲಿಗೆ ದುಡಿಯುತ್ತಿದ್ದಾರೆ. ಸ್ಥಳೀಯವಾಗಿ ಪ್ರಭಾವ ಹೊಂದಿರುವ ಆರೋಪಿ ತೋಟದಲ್ಲಿ ದುಡಿಯು ಇತರ ಕಾರ್ಮಿಕರ ಮೇಲೆ ಕೂಡಾ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪ ಕೂಡಾ ಕೇಳಿ ಬರುತ್ತಿದೆ. ಹಾಗಾಗಿ ಪ್ರಕರಣದಲ್ಲಿ ಆರೋಪಿಯ ಮೇಲೆ ಕಠಿಣ ಪ್ರಕರಣ ದಾಖಲಿಸಿ ಪ್ರಕರಣವನ್ನು ಸರಿಯಾಗಿ ತನಿಖೆ ಮಾಡಬೇಕಿದೆ. ” ಎಂದು ಸಂತೋಷ್ ಕುಮಾರ್ ಬಜಾಲ್ ಹೇಳಿದರು.

ಈ ಬಗ್ಗೆ ಮಾರ್ಚ್‌ 29ರಂದು ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಡಿಎಚ್‌ಎಸ್ ಮುಖಂಡರು, ಘಟನೆಯಿಂದ ಬಾಲಕಿ ಖಿನ್ನತೆಗೊಳಗಾಗಿದ್ದು, ಅವರನ್ನು ಹೆಚ್ಚಿನ ವೈದ್ಯಕೀಯ ಪರೀಕ್ಷೆಗೊಳಪಡಿಸಿ ಕೌನ್ಸಿಲಿಂಗ್ ನಡೆಸಿ ಮಾನಸಿಕ ಧೈರ್ಯ ತುಂಬುವ ಮೂಲಕ ಸತ್ಯಾಂಶ ತಿಳಿಯಲು ಪ್ರಯತ್ನಿಸಬೇಕು ಎಂದು ಹೇಳಿತ್ತು. ಅಷ್ಟೆ ಅಲ್ಲದೆ, ಸಂತ್ರಸ್ತ ಬಾಲಕಿಯ ಪೋಷಕರಿಗೆ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದರು.

“ಆರೋಪಿ ಮಹೇಶ್ ಭಟ್ ಹಿಂಬಾಲಕ ಹರೀಶ್ ಮಣಿಯಾಣಿ ಎಂಬ ವ್ಯಕ್ತಿ ಸಂತ್ರಸ್ತ ಬಾಲಕಿಯ ಪೋಷಕರಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ಅವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಬೇಕು” ಎಂದು ಪತ್ರಿಕಾಗೋಷ್ಠಿಯಲ್ಲಿ ಡಿಎಚ್‌ಎಸ್ ಮುಖಂಡರು ಒತ್ತಾಯಿಸಿದ್ದರು.

ಆರೋಪಿ ಮಹೇಶ್ ಭಟ್ ಬಂಟ್ವಾಳದ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ನಿರ್ದೇಶಕರಾಗಿದ್ದು, ಜಿಲ್ಲೆಯ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ತನ್ನ ಕೃತ್ಯವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿತ್ತು. ಆರೋಪಿಯ ಕೃತ್ಯದಿಂದ ಬಾಲಕಿ ಮಾನಸಿಕವಾಗಿ ಕುಂದಿದ್ದು, ಎರಡು ತಿಂಗಳಿನಿಂದ ಶಾಲೆಗೆ ಹೋಗಿರಲಿಲ್ಲ ಎನ್ನಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದ್ದರೂ ಬಾಲಕಿ ಬಾರದ ಕಾರಣ ಶಿಕ್ಷಕರು ಆಕೆಯ ಮನೆಗೆ ಭೇಟಿ ನೀಡಿದ್ದರು. ಆದರೆ, ಅವರನ್ನೂ ಒಳಗೆ ಹೋಗಲು ಬಿಟ್ಟಿರಲಿಲ್ಲ ಎಂದು ಹೇಳಲಾಗಿದೆ. ರಾಜಕೀಯ ಪ್ರಭಾವ ಇರುವ ಕಾರಣ ಈ ಪ್ರಕರಣವನ್ನು ಮುಚ್ಚಿ ಹಾಕುವ ಸಾಧ್ಯತೆ ಇದೆ ಎಂಬುದು ಸ್ಥಳೀಯರ ಆತಂಕ ಎಂದಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಸಿಂಹ ನಾಯಿಗಳನ್ನು ಬೇಟೆಯಾಡುವುದಿಲ್ಲ..’; ದಲಿತ ಅಧಿಕಾರಿಯ ವಿರುದ್ಧ ವಿವಾದಾತ್ಮಕ ಹೇಳಿಕೆ ಕೊಟ್ಟ ಮಾಜಿ ಮುಖ್ಯಮಂತ್ರಿ

‘ಸಿಂಹ ನಾಯಿಗಳನ್ನು ಬೇಟೆಯಾಡುವುದಿಲ್ಲ..’; ದಲಿತ ಅಧಿಕಾರಿಯ ವಿರುದ್ಧ ವಿವಾದಾತ್ಮಕ ಹೇಳಿಕೆ ಕೊಟ್ಟ ಮಾಜಿ ಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...