Homeಕರ್ನಾಟಕವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ;...

ವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ; ಹೋರಾಟಕ್ಕೆ ಮುಂದಾದ ಡಿಎಚ್‌ಎಸ್

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ದಲಿತ ಸಮುದಾಯದ ಬಾಲಕಿಯೊಬ್ಬರ ಮೇಲೆ ಬಿಜೆಪಿ ಮುಖಂಡ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಪೋಕ್ಸೋ ದಾಖಲಾಗಿದ್ದರೂ ಆರೋಪಿಯನ್ನು ಈ ವರೆಗೆ ಬಂಧಿಸದೆ ಪೊಲೀಸರು ಮೀನಾಮೇಷ ಎಣಿಸುತ್ತಿದ್ದು ಈ ಬಗ್ಗೆ ದಲಿತ ಹಕ್ಕುಗಳ ಸಮಿತಿ (ಡಿಎಚ್‌ಎಸ್) ಆಕ್ರೋಶ ವ್ಯಕ್ತಪಡಿಸಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮಾತ್ರವಲ್ಲದೆ, ಅತ್ಯಾಚಾರ ಕೂಡಾ ಎಸಲಾಗಿದೆ ಎಂಬ ಸಂಶಯವನ್ನು ಡಿಎಚ್‌ಎಸ್ ವ್ಯಕ್ತಪಡಿಸಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಲು, ಕಠಿಣ ಕಾಯ್ದೆಗಳಡಿ ಪ್ರಕರಣ ದಾಖಲಿಸಲು ಆಗ್ರಹಿಸಿ ಏಪ್ರಿಲ್ 3ರಂದು ‘ಆಕ್ರೋಶ ಮೆರವಣಿಗೆ’ ನಡೆಸಿ ಪ್ರತಿಭಟನೆಗೆ ಮುಂದಾಗಿದೆ. ದಲಿತ ಬಾಲಕಿ ಮೇಲೆ ಲೈಂಗಿಕ

ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಪ್ರದೇಶದ ದಲಿತ ಬಾಲಕಿಯ ಮೇಲೆ ಸ್ಥಳೀಯ ಭೂಮಾಲಕ ಮಹೇಶ್ ಭಟ್ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿರುವ ಬಗ್ಗೆ ಮಾರ್ಚ್‌ 26ರಂದು ವರದಿಯಾಗಿತ್ತು. ಆರೋಪಿಯ ಮೇಲೆ ಪೋಕ್ಸೋ ದಾಖಲಾಗಿದ್ದರು ತನ್ನ ಪ್ರಭಾವದ ಕಾರಣಕ್ಕಾಗಿ ಆತನ ಬಂಧನವಾಗಿಲ್ಲ ಎಂದು ಆರೋಪಿಸಲಾಗಿದೆ. ದಲಿತ ಬಾಲಕಿ ಮೇಲೆ ಲೈಂಗಿಕ

ಈ ಬಗ್ಗೆ ದಲಿತ ಹಕ್ಕುಗಳ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ದಲಿತ ಮತ್ತು ಸಮಾನ ಮನಸ್ಕ ಸಂಘಟನೆಗಳು ಹೋರಾಟ ಕೈಗೆತ್ತಿಕೊಂಡಿದ್ದು, ಏಪ್ರಿಲ್ 3ರ ಗುರುವಾರದಂದು ವಿಟ್ಲ ನಾಡ ಕಚೇರಿ ಬಳಿ ಪ್ರತಿಭಟನೆಗೆ ಸಿದ್ಧವಾಗಿದೆ. ಬೆಳಿಗ್ಗೆ 10 ಗಂಟೆಗೆ ವಿಟ್ಲ ಬಸ್‌ ನಿಲ್ದಾಣದಿಂದ ‘ಆಕ್ರೊಶ ಮೆರವಣಿಗೆ’ ಆರಂಭವಾಗಲಿದ್ದು, ವಿಟ್ಲ ನಾಡ ಕಚೇರಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಲಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಡಿವೈಎಫ್‌ಐ ಮುಖಂಡ ಸಂತೋಷ್ ಬಜಾಲ್, “ಪ್ರಕರಣ ದಾಖಲಾಗಿ ಒಂದು ವಾರ ಕಳೆದರೂ ಆರೋಪಿಯ ಬಂಧನವಾಗಿಲ್ಲ. ಅರೋಪಿ ಸಂತ್ರಸ್ತ ಬಾಲಕಿಗೆ ‘ನನ್ನೊಂದಿಗೆ ಗುಡ್ಡಕ್ಕೆ ಬರುತ್ತಿಯ’ ಎಂದು ಅಷ್ಟೆ ಕೇಳಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಆದರೆ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರ ಕೂಡಾ ಎಸಗಿದ್ದಾನೆ ಎಂಬ ಆರೋಪ ಕೂಡಾ ಸ್ಥಳೀಯವಾಗಿ ಕೇಳಿಬರುತ್ತಿದೆ. ಆರೋಪಿ ಸ್ಥಳೀಯ ಬಿಜೆಪಿ ಮುಖಂಡನಾಗಿದ್ದು ಪ್ರಕರಣದಲ್ಲಿ ಪೊಲೀಸರು ಯಾವುದೆ ಆಸಕ್ತಿ ತೋರಿಸುತ್ತಿಲ್ಲ” ಎಂದು ಹೇಳಿದರು.

“ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದ್ದರೂ, ಇಲ್ಲಿವರೆಗೆ ಅವರ ವೈದ್ಯಕೀಯ ಪರೀಕ್ಷೆ ಆಗಿಲ್ಲ. ಆರೋಪಿ ಭೂಮಾಲಕನೂ ಆಗಿದ್ದು, ಸಂತ್ರಸ್ತ ಬಾಲಕಿಯ ತಂದೆ ಅವರ ತೋಟದಲ್ಲಿ ಹಲವಾರು ವರ್ಷಗಳಿಂದ ಕಡಿಮೆ ಕೂಲಿಗೆ ದುಡಿಯುತ್ತಿದ್ದಾರೆ. ಸ್ಥಳೀಯವಾಗಿ ಪ್ರಭಾವ ಹೊಂದಿರುವ ಆರೋಪಿ ತೋಟದಲ್ಲಿ ದುಡಿಯು ಇತರ ಕಾರ್ಮಿಕರ ಮೇಲೆ ಕೂಡಾ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪ ಕೂಡಾ ಕೇಳಿ ಬರುತ್ತಿದೆ. ಹಾಗಾಗಿ ಪ್ರಕರಣದಲ್ಲಿ ಆರೋಪಿಯ ಮೇಲೆ ಕಠಿಣ ಪ್ರಕರಣ ದಾಖಲಿಸಿ ಪ್ರಕರಣವನ್ನು ಸರಿಯಾಗಿ ತನಿಖೆ ಮಾಡಬೇಕಿದೆ. ” ಎಂದು ಸಂತೋಷ್ ಕುಮಾರ್ ಬಜಾಲ್ ಹೇಳಿದರು.

ಈ ಬಗ್ಗೆ ಮಾರ್ಚ್‌ 29ರಂದು ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಡಿಎಚ್‌ಎಸ್ ಮುಖಂಡರು, ಘಟನೆಯಿಂದ ಬಾಲಕಿ ಖಿನ್ನತೆಗೊಳಗಾಗಿದ್ದು, ಅವರನ್ನು ಹೆಚ್ಚಿನ ವೈದ್ಯಕೀಯ ಪರೀಕ್ಷೆಗೊಳಪಡಿಸಿ ಕೌನ್ಸಿಲಿಂಗ್ ನಡೆಸಿ ಮಾನಸಿಕ ಧೈರ್ಯ ತುಂಬುವ ಮೂಲಕ ಸತ್ಯಾಂಶ ತಿಳಿಯಲು ಪ್ರಯತ್ನಿಸಬೇಕು ಎಂದು ಹೇಳಿತ್ತು. ಅಷ್ಟೆ ಅಲ್ಲದೆ, ಸಂತ್ರಸ್ತ ಬಾಲಕಿಯ ಪೋಷಕರಿಗೆ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದರು.

“ಆರೋಪಿ ಮಹೇಶ್ ಭಟ್ ಹಿಂಬಾಲಕ ಹರೀಶ್ ಮಣಿಯಾಣಿ ಎಂಬ ವ್ಯಕ್ತಿ ಸಂತ್ರಸ್ತ ಬಾಲಕಿಯ ಪೋಷಕರಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ಅವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಬೇಕು” ಎಂದು ಪತ್ರಿಕಾಗೋಷ್ಠಿಯಲ್ಲಿ ಡಿಎಚ್‌ಎಸ್ ಮುಖಂಡರು ಒತ್ತಾಯಿಸಿದ್ದರು.

ಆರೋಪಿ ಮಹೇಶ್ ಭಟ್ ಬಂಟ್ವಾಳದ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ನಿರ್ದೇಶಕರಾಗಿದ್ದು, ಜಿಲ್ಲೆಯ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ತನ್ನ ಕೃತ್ಯವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿತ್ತು. ಆರೋಪಿಯ ಕೃತ್ಯದಿಂದ ಬಾಲಕಿ ಮಾನಸಿಕವಾಗಿ ಕುಂದಿದ್ದು, ಎರಡು ತಿಂಗಳಿನಿಂದ ಶಾಲೆಗೆ ಹೋಗಿರಲಿಲ್ಲ ಎನ್ನಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದ್ದರೂ ಬಾಲಕಿ ಬಾರದ ಕಾರಣ ಶಿಕ್ಷಕರು ಆಕೆಯ ಮನೆಗೆ ಭೇಟಿ ನೀಡಿದ್ದರು. ಆದರೆ, ಅವರನ್ನೂ ಒಳಗೆ ಹೋಗಲು ಬಿಟ್ಟಿರಲಿಲ್ಲ ಎಂದು ಹೇಳಲಾಗಿದೆ. ರಾಜಕೀಯ ಪ್ರಭಾವ ಇರುವ ಕಾರಣ ಈ ಪ್ರಕರಣವನ್ನು ಮುಚ್ಚಿ ಹಾಕುವ ಸಾಧ್ಯತೆ ಇದೆ ಎಂಬುದು ಸ್ಥಳೀಯರ ಆತಂಕ ಎಂದಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಸಿಂಹ ನಾಯಿಗಳನ್ನು ಬೇಟೆಯಾಡುವುದಿಲ್ಲ..’; ದಲಿತ ಅಧಿಕಾರಿಯ ವಿರುದ್ಧ ವಿವಾದಾತ್ಮಕ ಹೇಳಿಕೆ ಕೊಟ್ಟ ಮಾಜಿ ಮುಖ್ಯಮಂತ್ರಿ

‘ಸಿಂಹ ನಾಯಿಗಳನ್ನು ಬೇಟೆಯಾಡುವುದಿಲ್ಲ..’; ದಲಿತ ಅಧಿಕಾರಿಯ ವಿರುದ್ಧ ವಿವಾದಾತ್ಮಕ ಹೇಳಿಕೆ ಕೊಟ್ಟ ಮಾಜಿ ಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...