Homeಕರ್ನಾಟಕವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ;...

ವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ; ಹೋರಾಟಕ್ಕೆ ಮುಂದಾದ ಡಿಎಚ್‌ಎಸ್

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ದಲಿತ ಸಮುದಾಯದ ಬಾಲಕಿಯೊಬ್ಬರ ಮೇಲೆ ಬಿಜೆಪಿ ಮುಖಂಡ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಪೋಕ್ಸೋ ದಾಖಲಾಗಿದ್ದರೂ ಆರೋಪಿಯನ್ನು ಈ ವರೆಗೆ ಬಂಧಿಸದೆ ಪೊಲೀಸರು ಮೀನಾಮೇಷ ಎಣಿಸುತ್ತಿದ್ದು ಈ ಬಗ್ಗೆ ದಲಿತ ಹಕ್ಕುಗಳ ಸಮಿತಿ (ಡಿಎಚ್‌ಎಸ್) ಆಕ್ರೋಶ ವ್ಯಕ್ತಪಡಿಸಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮಾತ್ರವಲ್ಲದೆ, ಅತ್ಯಾಚಾರ ಕೂಡಾ ಎಸಲಾಗಿದೆ ಎಂಬ ಸಂಶಯವನ್ನು ಡಿಎಚ್‌ಎಸ್ ವ್ಯಕ್ತಪಡಿಸಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಲು, ಕಠಿಣ ಕಾಯ್ದೆಗಳಡಿ ಪ್ರಕರಣ ದಾಖಲಿಸಲು ಆಗ್ರಹಿಸಿ ಏಪ್ರಿಲ್ 3ರಂದು ‘ಆಕ್ರೋಶ ಮೆರವಣಿಗೆ’ ನಡೆಸಿ ಪ್ರತಿಭಟನೆಗೆ ಮುಂದಾಗಿದೆ. ದಲಿತ ಬಾಲಕಿ ಮೇಲೆ ಲೈಂಗಿಕ

ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಪ್ರದೇಶದ ದಲಿತ ಬಾಲಕಿಯ ಮೇಲೆ ಸ್ಥಳೀಯ ಭೂಮಾಲಕ ಮಹೇಶ್ ಭಟ್ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿರುವ ಬಗ್ಗೆ ಮಾರ್ಚ್‌ 26ರಂದು ವರದಿಯಾಗಿತ್ತು. ಆರೋಪಿಯ ಮೇಲೆ ಪೋಕ್ಸೋ ದಾಖಲಾಗಿದ್ದರು ತನ್ನ ಪ್ರಭಾವದ ಕಾರಣಕ್ಕಾಗಿ ಆತನ ಬಂಧನವಾಗಿಲ್ಲ ಎಂದು ಆರೋಪಿಸಲಾಗಿದೆ. ದಲಿತ ಬಾಲಕಿ ಮೇಲೆ ಲೈಂಗಿಕ

ಈ ಬಗ್ಗೆ ದಲಿತ ಹಕ್ಕುಗಳ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ದಲಿತ ಮತ್ತು ಸಮಾನ ಮನಸ್ಕ ಸಂಘಟನೆಗಳು ಹೋರಾಟ ಕೈಗೆತ್ತಿಕೊಂಡಿದ್ದು, ಏಪ್ರಿಲ್ 3ರ ಗುರುವಾರದಂದು ವಿಟ್ಲ ನಾಡ ಕಚೇರಿ ಬಳಿ ಪ್ರತಿಭಟನೆಗೆ ಸಿದ್ಧವಾಗಿದೆ. ಬೆಳಿಗ್ಗೆ 10 ಗಂಟೆಗೆ ವಿಟ್ಲ ಬಸ್‌ ನಿಲ್ದಾಣದಿಂದ ‘ಆಕ್ರೊಶ ಮೆರವಣಿಗೆ’ ಆರಂಭವಾಗಲಿದ್ದು, ವಿಟ್ಲ ನಾಡ ಕಚೇರಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಲಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಡಿವೈಎಫ್‌ಐ ಮುಖಂಡ ಸಂತೋಷ್ ಬಜಾಲ್, “ಪ್ರಕರಣ ದಾಖಲಾಗಿ ಒಂದು ವಾರ ಕಳೆದರೂ ಆರೋಪಿಯ ಬಂಧನವಾಗಿಲ್ಲ. ಅರೋಪಿ ಸಂತ್ರಸ್ತ ಬಾಲಕಿಗೆ ‘ನನ್ನೊಂದಿಗೆ ಗುಡ್ಡಕ್ಕೆ ಬರುತ್ತಿಯ’ ಎಂದು ಅಷ್ಟೆ ಕೇಳಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಆದರೆ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರ ಕೂಡಾ ಎಸಗಿದ್ದಾನೆ ಎಂಬ ಆರೋಪ ಕೂಡಾ ಸ್ಥಳೀಯವಾಗಿ ಕೇಳಿಬರುತ್ತಿದೆ. ಆರೋಪಿ ಸ್ಥಳೀಯ ಬಿಜೆಪಿ ಮುಖಂಡನಾಗಿದ್ದು ಪ್ರಕರಣದಲ್ಲಿ ಪೊಲೀಸರು ಯಾವುದೆ ಆಸಕ್ತಿ ತೋರಿಸುತ್ತಿಲ್ಲ” ಎಂದು ಹೇಳಿದರು.

“ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದ್ದರೂ, ಇಲ್ಲಿವರೆಗೆ ಅವರ ವೈದ್ಯಕೀಯ ಪರೀಕ್ಷೆ ಆಗಿಲ್ಲ. ಆರೋಪಿ ಭೂಮಾಲಕನೂ ಆಗಿದ್ದು, ಸಂತ್ರಸ್ತ ಬಾಲಕಿಯ ತಂದೆ ಅವರ ತೋಟದಲ್ಲಿ ಹಲವಾರು ವರ್ಷಗಳಿಂದ ಕಡಿಮೆ ಕೂಲಿಗೆ ದುಡಿಯುತ್ತಿದ್ದಾರೆ. ಸ್ಥಳೀಯವಾಗಿ ಪ್ರಭಾವ ಹೊಂದಿರುವ ಆರೋಪಿ ತೋಟದಲ್ಲಿ ದುಡಿಯು ಇತರ ಕಾರ್ಮಿಕರ ಮೇಲೆ ಕೂಡಾ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪ ಕೂಡಾ ಕೇಳಿ ಬರುತ್ತಿದೆ. ಹಾಗಾಗಿ ಪ್ರಕರಣದಲ್ಲಿ ಆರೋಪಿಯ ಮೇಲೆ ಕಠಿಣ ಪ್ರಕರಣ ದಾಖಲಿಸಿ ಪ್ರಕರಣವನ್ನು ಸರಿಯಾಗಿ ತನಿಖೆ ಮಾಡಬೇಕಿದೆ. ” ಎಂದು ಸಂತೋಷ್ ಕುಮಾರ್ ಬಜಾಲ್ ಹೇಳಿದರು.

ಈ ಬಗ್ಗೆ ಮಾರ್ಚ್‌ 29ರಂದು ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಡಿಎಚ್‌ಎಸ್ ಮುಖಂಡರು, ಘಟನೆಯಿಂದ ಬಾಲಕಿ ಖಿನ್ನತೆಗೊಳಗಾಗಿದ್ದು, ಅವರನ್ನು ಹೆಚ್ಚಿನ ವೈದ್ಯಕೀಯ ಪರೀಕ್ಷೆಗೊಳಪಡಿಸಿ ಕೌನ್ಸಿಲಿಂಗ್ ನಡೆಸಿ ಮಾನಸಿಕ ಧೈರ್ಯ ತುಂಬುವ ಮೂಲಕ ಸತ್ಯಾಂಶ ತಿಳಿಯಲು ಪ್ರಯತ್ನಿಸಬೇಕು ಎಂದು ಹೇಳಿತ್ತು. ಅಷ್ಟೆ ಅಲ್ಲದೆ, ಸಂತ್ರಸ್ತ ಬಾಲಕಿಯ ಪೋಷಕರಿಗೆ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದರು.

“ಆರೋಪಿ ಮಹೇಶ್ ಭಟ್ ಹಿಂಬಾಲಕ ಹರೀಶ್ ಮಣಿಯಾಣಿ ಎಂಬ ವ್ಯಕ್ತಿ ಸಂತ್ರಸ್ತ ಬಾಲಕಿಯ ಪೋಷಕರಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ಅವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಬೇಕು” ಎಂದು ಪತ್ರಿಕಾಗೋಷ್ಠಿಯಲ್ಲಿ ಡಿಎಚ್‌ಎಸ್ ಮುಖಂಡರು ಒತ್ತಾಯಿಸಿದ್ದರು.

ಆರೋಪಿ ಮಹೇಶ್ ಭಟ್ ಬಂಟ್ವಾಳದ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ನಿರ್ದೇಶಕರಾಗಿದ್ದು, ಜಿಲ್ಲೆಯ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ತನ್ನ ಕೃತ್ಯವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿತ್ತು. ಆರೋಪಿಯ ಕೃತ್ಯದಿಂದ ಬಾಲಕಿ ಮಾನಸಿಕವಾಗಿ ಕುಂದಿದ್ದು, ಎರಡು ತಿಂಗಳಿನಿಂದ ಶಾಲೆಗೆ ಹೋಗಿರಲಿಲ್ಲ ಎನ್ನಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದ್ದರೂ ಬಾಲಕಿ ಬಾರದ ಕಾರಣ ಶಿಕ್ಷಕರು ಆಕೆಯ ಮನೆಗೆ ಭೇಟಿ ನೀಡಿದ್ದರು. ಆದರೆ, ಅವರನ್ನೂ ಒಳಗೆ ಹೋಗಲು ಬಿಟ್ಟಿರಲಿಲ್ಲ ಎಂದು ಹೇಳಲಾಗಿದೆ. ರಾಜಕೀಯ ಪ್ರಭಾವ ಇರುವ ಕಾರಣ ಈ ಪ್ರಕರಣವನ್ನು ಮುಚ್ಚಿ ಹಾಕುವ ಸಾಧ್ಯತೆ ಇದೆ ಎಂಬುದು ಸ್ಥಳೀಯರ ಆತಂಕ ಎಂದಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಸಿಂಹ ನಾಯಿಗಳನ್ನು ಬೇಟೆಯಾಡುವುದಿಲ್ಲ..’; ದಲಿತ ಅಧಿಕಾರಿಯ ವಿರುದ್ಧ ವಿವಾದಾತ್ಮಕ ಹೇಳಿಕೆ ಕೊಟ್ಟ ಮಾಜಿ ಮುಖ್ಯಮಂತ್ರಿ

‘ಸಿಂಹ ನಾಯಿಗಳನ್ನು ಬೇಟೆಯಾಡುವುದಿಲ್ಲ..’; ದಲಿತ ಅಧಿಕಾರಿಯ ವಿರುದ್ಧ ವಿವಾದಾತ್ಮಕ ಹೇಳಿಕೆ ಕೊಟ್ಟ ಮಾಜಿ ಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...