Homeಕರ್ನಾಟಕವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ;...

ವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ; ಹೋರಾಟಕ್ಕೆ ಮುಂದಾದ ಡಿಎಚ್‌ಎಸ್

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ದಲಿತ ಸಮುದಾಯದ ಬಾಲಕಿಯೊಬ್ಬರ ಮೇಲೆ ಬಿಜೆಪಿ ಮುಖಂಡ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಪೋಕ್ಸೋ ದಾಖಲಾಗಿದ್ದರೂ ಆರೋಪಿಯನ್ನು ಈ ವರೆಗೆ ಬಂಧಿಸದೆ ಪೊಲೀಸರು ಮೀನಾಮೇಷ ಎಣಿಸುತ್ತಿದ್ದು ಈ ಬಗ್ಗೆ ದಲಿತ ಹಕ್ಕುಗಳ ಸಮಿತಿ (ಡಿಎಚ್‌ಎಸ್) ಆಕ್ರೋಶ ವ್ಯಕ್ತಪಡಿಸಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮಾತ್ರವಲ್ಲದೆ, ಅತ್ಯಾಚಾರ ಕೂಡಾ ಎಸಲಾಗಿದೆ ಎಂಬ ಸಂಶಯವನ್ನು ಡಿಎಚ್‌ಎಸ್ ವ್ಯಕ್ತಪಡಿಸಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಲು, ಕಠಿಣ ಕಾಯ್ದೆಗಳಡಿ ಪ್ರಕರಣ ದಾಖಲಿಸಲು ಆಗ್ರಹಿಸಿ ಏಪ್ರಿಲ್ 3ರಂದು ‘ಆಕ್ರೋಶ ಮೆರವಣಿಗೆ’ ನಡೆಸಿ ಪ್ರತಿಭಟನೆಗೆ ಮುಂದಾಗಿದೆ. ದಲಿತ ಬಾಲಕಿ ಮೇಲೆ ಲೈಂಗಿಕ

ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಪ್ರದೇಶದ ದಲಿತ ಬಾಲಕಿಯ ಮೇಲೆ ಸ್ಥಳೀಯ ಭೂಮಾಲಕ ಮಹೇಶ್ ಭಟ್ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿರುವ ಬಗ್ಗೆ ಮಾರ್ಚ್‌ 26ರಂದು ವರದಿಯಾಗಿತ್ತು. ಆರೋಪಿಯ ಮೇಲೆ ಪೋಕ್ಸೋ ದಾಖಲಾಗಿದ್ದರು ತನ್ನ ಪ್ರಭಾವದ ಕಾರಣಕ್ಕಾಗಿ ಆತನ ಬಂಧನವಾಗಿಲ್ಲ ಎಂದು ಆರೋಪಿಸಲಾಗಿದೆ. ದಲಿತ ಬಾಲಕಿ ಮೇಲೆ ಲೈಂಗಿಕ

ಈ ಬಗ್ಗೆ ದಲಿತ ಹಕ್ಕುಗಳ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ದಲಿತ ಮತ್ತು ಸಮಾನ ಮನಸ್ಕ ಸಂಘಟನೆಗಳು ಹೋರಾಟ ಕೈಗೆತ್ತಿಕೊಂಡಿದ್ದು, ಏಪ್ರಿಲ್ 3ರ ಗುರುವಾರದಂದು ವಿಟ್ಲ ನಾಡ ಕಚೇರಿ ಬಳಿ ಪ್ರತಿಭಟನೆಗೆ ಸಿದ್ಧವಾಗಿದೆ. ಬೆಳಿಗ್ಗೆ 10 ಗಂಟೆಗೆ ವಿಟ್ಲ ಬಸ್‌ ನಿಲ್ದಾಣದಿಂದ ‘ಆಕ್ರೊಶ ಮೆರವಣಿಗೆ’ ಆರಂಭವಾಗಲಿದ್ದು, ವಿಟ್ಲ ನಾಡ ಕಚೇರಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಲಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಡಿವೈಎಫ್‌ಐ ಮುಖಂಡ ಸಂತೋಷ್ ಬಜಾಲ್, “ಪ್ರಕರಣ ದಾಖಲಾಗಿ ಒಂದು ವಾರ ಕಳೆದರೂ ಆರೋಪಿಯ ಬಂಧನವಾಗಿಲ್ಲ. ಅರೋಪಿ ಸಂತ್ರಸ್ತ ಬಾಲಕಿಗೆ ‘ನನ್ನೊಂದಿಗೆ ಗುಡ್ಡಕ್ಕೆ ಬರುತ್ತಿಯ’ ಎಂದು ಅಷ್ಟೆ ಕೇಳಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಆದರೆ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರ ಕೂಡಾ ಎಸಗಿದ್ದಾನೆ ಎಂಬ ಆರೋಪ ಕೂಡಾ ಸ್ಥಳೀಯವಾಗಿ ಕೇಳಿಬರುತ್ತಿದೆ. ಆರೋಪಿ ಸ್ಥಳೀಯ ಬಿಜೆಪಿ ಮುಖಂಡನಾಗಿದ್ದು ಪ್ರಕರಣದಲ್ಲಿ ಪೊಲೀಸರು ಯಾವುದೆ ಆಸಕ್ತಿ ತೋರಿಸುತ್ತಿಲ್ಲ” ಎಂದು ಹೇಳಿದರು.

“ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದ್ದರೂ, ಇಲ್ಲಿವರೆಗೆ ಅವರ ವೈದ್ಯಕೀಯ ಪರೀಕ್ಷೆ ಆಗಿಲ್ಲ. ಆರೋಪಿ ಭೂಮಾಲಕನೂ ಆಗಿದ್ದು, ಸಂತ್ರಸ್ತ ಬಾಲಕಿಯ ತಂದೆ ಅವರ ತೋಟದಲ್ಲಿ ಹಲವಾರು ವರ್ಷಗಳಿಂದ ಕಡಿಮೆ ಕೂಲಿಗೆ ದುಡಿಯುತ್ತಿದ್ದಾರೆ. ಸ್ಥಳೀಯವಾಗಿ ಪ್ರಭಾವ ಹೊಂದಿರುವ ಆರೋಪಿ ತೋಟದಲ್ಲಿ ದುಡಿಯು ಇತರ ಕಾರ್ಮಿಕರ ಮೇಲೆ ಕೂಡಾ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪ ಕೂಡಾ ಕೇಳಿ ಬರುತ್ತಿದೆ. ಹಾಗಾಗಿ ಪ್ರಕರಣದಲ್ಲಿ ಆರೋಪಿಯ ಮೇಲೆ ಕಠಿಣ ಪ್ರಕರಣ ದಾಖಲಿಸಿ ಪ್ರಕರಣವನ್ನು ಸರಿಯಾಗಿ ತನಿಖೆ ಮಾಡಬೇಕಿದೆ. ” ಎಂದು ಸಂತೋಷ್ ಕುಮಾರ್ ಬಜಾಲ್ ಹೇಳಿದರು.

ಈ ಬಗ್ಗೆ ಮಾರ್ಚ್‌ 29ರಂದು ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಡಿಎಚ್‌ಎಸ್ ಮುಖಂಡರು, ಘಟನೆಯಿಂದ ಬಾಲಕಿ ಖಿನ್ನತೆಗೊಳಗಾಗಿದ್ದು, ಅವರನ್ನು ಹೆಚ್ಚಿನ ವೈದ್ಯಕೀಯ ಪರೀಕ್ಷೆಗೊಳಪಡಿಸಿ ಕೌನ್ಸಿಲಿಂಗ್ ನಡೆಸಿ ಮಾನಸಿಕ ಧೈರ್ಯ ತುಂಬುವ ಮೂಲಕ ಸತ್ಯಾಂಶ ತಿಳಿಯಲು ಪ್ರಯತ್ನಿಸಬೇಕು ಎಂದು ಹೇಳಿತ್ತು. ಅಷ್ಟೆ ಅಲ್ಲದೆ, ಸಂತ್ರಸ್ತ ಬಾಲಕಿಯ ಪೋಷಕರಿಗೆ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದರು.

“ಆರೋಪಿ ಮಹೇಶ್ ಭಟ್ ಹಿಂಬಾಲಕ ಹರೀಶ್ ಮಣಿಯಾಣಿ ಎಂಬ ವ್ಯಕ್ತಿ ಸಂತ್ರಸ್ತ ಬಾಲಕಿಯ ಪೋಷಕರಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ಅವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಬೇಕು” ಎಂದು ಪತ್ರಿಕಾಗೋಷ್ಠಿಯಲ್ಲಿ ಡಿಎಚ್‌ಎಸ್ ಮುಖಂಡರು ಒತ್ತಾಯಿಸಿದ್ದರು.

ಆರೋಪಿ ಮಹೇಶ್ ಭಟ್ ಬಂಟ್ವಾಳದ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ನಿರ್ದೇಶಕರಾಗಿದ್ದು, ಜಿಲ್ಲೆಯ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ತನ್ನ ಕೃತ್ಯವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿತ್ತು. ಆರೋಪಿಯ ಕೃತ್ಯದಿಂದ ಬಾಲಕಿ ಮಾನಸಿಕವಾಗಿ ಕುಂದಿದ್ದು, ಎರಡು ತಿಂಗಳಿನಿಂದ ಶಾಲೆಗೆ ಹೋಗಿರಲಿಲ್ಲ ಎನ್ನಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದ್ದರೂ ಬಾಲಕಿ ಬಾರದ ಕಾರಣ ಶಿಕ್ಷಕರು ಆಕೆಯ ಮನೆಗೆ ಭೇಟಿ ನೀಡಿದ್ದರು. ಆದರೆ, ಅವರನ್ನೂ ಒಳಗೆ ಹೋಗಲು ಬಿಟ್ಟಿರಲಿಲ್ಲ ಎಂದು ಹೇಳಲಾಗಿದೆ. ರಾಜಕೀಯ ಪ್ರಭಾವ ಇರುವ ಕಾರಣ ಈ ಪ್ರಕರಣವನ್ನು ಮುಚ್ಚಿ ಹಾಕುವ ಸಾಧ್ಯತೆ ಇದೆ ಎಂಬುದು ಸ್ಥಳೀಯರ ಆತಂಕ ಎಂದಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಸಿಂಹ ನಾಯಿಗಳನ್ನು ಬೇಟೆಯಾಡುವುದಿಲ್ಲ..’; ದಲಿತ ಅಧಿಕಾರಿಯ ವಿರುದ್ಧ ವಿವಾದಾತ್ಮಕ ಹೇಳಿಕೆ ಕೊಟ್ಟ ಮಾಜಿ ಮುಖ್ಯಮಂತ್ರಿ

‘ಸಿಂಹ ನಾಯಿಗಳನ್ನು ಬೇಟೆಯಾಡುವುದಿಲ್ಲ..’; ದಲಿತ ಅಧಿಕಾರಿಯ ವಿರುದ್ಧ ವಿವಾದಾತ್ಮಕ ಹೇಳಿಕೆ ಕೊಟ್ಟ ಮಾಜಿ ಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...