Homeಕರ್ನಾಟಕವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ;...

ವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ; ಹೋರಾಟಕ್ಕೆ ಮುಂದಾದ ಡಿಎಚ್‌ಎಸ್

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ದಲಿತ ಸಮುದಾಯದ ಬಾಲಕಿಯೊಬ್ಬರ ಮೇಲೆ ಬಿಜೆಪಿ ಮುಖಂಡ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಪೋಕ್ಸೋ ದಾಖಲಾಗಿದ್ದರೂ ಆರೋಪಿಯನ್ನು ಈ ವರೆಗೆ ಬಂಧಿಸದೆ ಪೊಲೀಸರು ಮೀನಾಮೇಷ ಎಣಿಸುತ್ತಿದ್ದು ಈ ಬಗ್ಗೆ ದಲಿತ ಹಕ್ಕುಗಳ ಸಮಿತಿ (ಡಿಎಚ್‌ಎಸ್) ಆಕ್ರೋಶ ವ್ಯಕ್ತಪಡಿಸಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮಾತ್ರವಲ್ಲದೆ, ಅತ್ಯಾಚಾರ ಕೂಡಾ ಎಸಲಾಗಿದೆ ಎಂಬ ಸಂಶಯವನ್ನು ಡಿಎಚ್‌ಎಸ್ ವ್ಯಕ್ತಪಡಿಸಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಲು, ಕಠಿಣ ಕಾಯ್ದೆಗಳಡಿ ಪ್ರಕರಣ ದಾಖಲಿಸಲು ಆಗ್ರಹಿಸಿ ಏಪ್ರಿಲ್ 3ರಂದು ‘ಆಕ್ರೋಶ ಮೆರವಣಿಗೆ’ ನಡೆಸಿ ಪ್ರತಿಭಟನೆಗೆ ಮುಂದಾಗಿದೆ. ದಲಿತ ಬಾಲಕಿ ಮೇಲೆ ಲೈಂಗಿಕ

ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಪ್ರದೇಶದ ದಲಿತ ಬಾಲಕಿಯ ಮೇಲೆ ಸ್ಥಳೀಯ ಭೂಮಾಲಕ ಮಹೇಶ್ ಭಟ್ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿರುವ ಬಗ್ಗೆ ಮಾರ್ಚ್‌ 26ರಂದು ವರದಿಯಾಗಿತ್ತು. ಆರೋಪಿಯ ಮೇಲೆ ಪೋಕ್ಸೋ ದಾಖಲಾಗಿದ್ದರು ತನ್ನ ಪ್ರಭಾವದ ಕಾರಣಕ್ಕಾಗಿ ಆತನ ಬಂಧನವಾಗಿಲ್ಲ ಎಂದು ಆರೋಪಿಸಲಾಗಿದೆ. ದಲಿತ ಬಾಲಕಿ ಮೇಲೆ ಲೈಂಗಿಕ

ಈ ಬಗ್ಗೆ ದಲಿತ ಹಕ್ಕುಗಳ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ದಲಿತ ಮತ್ತು ಸಮಾನ ಮನಸ್ಕ ಸಂಘಟನೆಗಳು ಹೋರಾಟ ಕೈಗೆತ್ತಿಕೊಂಡಿದ್ದು, ಏಪ್ರಿಲ್ 3ರ ಗುರುವಾರದಂದು ವಿಟ್ಲ ನಾಡ ಕಚೇರಿ ಬಳಿ ಪ್ರತಿಭಟನೆಗೆ ಸಿದ್ಧವಾಗಿದೆ. ಬೆಳಿಗ್ಗೆ 10 ಗಂಟೆಗೆ ವಿಟ್ಲ ಬಸ್‌ ನಿಲ್ದಾಣದಿಂದ ‘ಆಕ್ರೊಶ ಮೆರವಣಿಗೆ’ ಆರಂಭವಾಗಲಿದ್ದು, ವಿಟ್ಲ ನಾಡ ಕಚೇರಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಲಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಡಿವೈಎಫ್‌ಐ ಮುಖಂಡ ಸಂತೋಷ್ ಬಜಾಲ್, “ಪ್ರಕರಣ ದಾಖಲಾಗಿ ಒಂದು ವಾರ ಕಳೆದರೂ ಆರೋಪಿಯ ಬಂಧನವಾಗಿಲ್ಲ. ಅರೋಪಿ ಸಂತ್ರಸ್ತ ಬಾಲಕಿಗೆ ‘ನನ್ನೊಂದಿಗೆ ಗುಡ್ಡಕ್ಕೆ ಬರುತ್ತಿಯ’ ಎಂದು ಅಷ್ಟೆ ಕೇಳಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಆದರೆ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರ ಕೂಡಾ ಎಸಗಿದ್ದಾನೆ ಎಂಬ ಆರೋಪ ಕೂಡಾ ಸ್ಥಳೀಯವಾಗಿ ಕೇಳಿಬರುತ್ತಿದೆ. ಆರೋಪಿ ಸ್ಥಳೀಯ ಬಿಜೆಪಿ ಮುಖಂಡನಾಗಿದ್ದು ಪ್ರಕರಣದಲ್ಲಿ ಪೊಲೀಸರು ಯಾವುದೆ ಆಸಕ್ತಿ ತೋರಿಸುತ್ತಿಲ್ಲ” ಎಂದು ಹೇಳಿದರು.

“ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದ್ದರೂ, ಇಲ್ಲಿವರೆಗೆ ಅವರ ವೈದ್ಯಕೀಯ ಪರೀಕ್ಷೆ ಆಗಿಲ್ಲ. ಆರೋಪಿ ಭೂಮಾಲಕನೂ ಆಗಿದ್ದು, ಸಂತ್ರಸ್ತ ಬಾಲಕಿಯ ತಂದೆ ಅವರ ತೋಟದಲ್ಲಿ ಹಲವಾರು ವರ್ಷಗಳಿಂದ ಕಡಿಮೆ ಕೂಲಿಗೆ ದುಡಿಯುತ್ತಿದ್ದಾರೆ. ಸ್ಥಳೀಯವಾಗಿ ಪ್ರಭಾವ ಹೊಂದಿರುವ ಆರೋಪಿ ತೋಟದಲ್ಲಿ ದುಡಿಯು ಇತರ ಕಾರ್ಮಿಕರ ಮೇಲೆ ಕೂಡಾ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪ ಕೂಡಾ ಕೇಳಿ ಬರುತ್ತಿದೆ. ಹಾಗಾಗಿ ಪ್ರಕರಣದಲ್ಲಿ ಆರೋಪಿಯ ಮೇಲೆ ಕಠಿಣ ಪ್ರಕರಣ ದಾಖಲಿಸಿ ಪ್ರಕರಣವನ್ನು ಸರಿಯಾಗಿ ತನಿಖೆ ಮಾಡಬೇಕಿದೆ. ” ಎಂದು ಸಂತೋಷ್ ಕುಮಾರ್ ಬಜಾಲ್ ಹೇಳಿದರು.

ಈ ಬಗ್ಗೆ ಮಾರ್ಚ್‌ 29ರಂದು ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಡಿಎಚ್‌ಎಸ್ ಮುಖಂಡರು, ಘಟನೆಯಿಂದ ಬಾಲಕಿ ಖಿನ್ನತೆಗೊಳಗಾಗಿದ್ದು, ಅವರನ್ನು ಹೆಚ್ಚಿನ ವೈದ್ಯಕೀಯ ಪರೀಕ್ಷೆಗೊಳಪಡಿಸಿ ಕೌನ್ಸಿಲಿಂಗ್ ನಡೆಸಿ ಮಾನಸಿಕ ಧೈರ್ಯ ತುಂಬುವ ಮೂಲಕ ಸತ್ಯಾಂಶ ತಿಳಿಯಲು ಪ್ರಯತ್ನಿಸಬೇಕು ಎಂದು ಹೇಳಿತ್ತು. ಅಷ್ಟೆ ಅಲ್ಲದೆ, ಸಂತ್ರಸ್ತ ಬಾಲಕಿಯ ಪೋಷಕರಿಗೆ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದರು.

“ಆರೋಪಿ ಮಹೇಶ್ ಭಟ್ ಹಿಂಬಾಲಕ ಹರೀಶ್ ಮಣಿಯಾಣಿ ಎಂಬ ವ್ಯಕ್ತಿ ಸಂತ್ರಸ್ತ ಬಾಲಕಿಯ ಪೋಷಕರಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ಅವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಬೇಕು” ಎಂದು ಪತ್ರಿಕಾಗೋಷ್ಠಿಯಲ್ಲಿ ಡಿಎಚ್‌ಎಸ್ ಮುಖಂಡರು ಒತ್ತಾಯಿಸಿದ್ದರು.

ಆರೋಪಿ ಮಹೇಶ್ ಭಟ್ ಬಂಟ್ವಾಳದ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ನಿರ್ದೇಶಕರಾಗಿದ್ದು, ಜಿಲ್ಲೆಯ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ತನ್ನ ಕೃತ್ಯವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿತ್ತು. ಆರೋಪಿಯ ಕೃತ್ಯದಿಂದ ಬಾಲಕಿ ಮಾನಸಿಕವಾಗಿ ಕುಂದಿದ್ದು, ಎರಡು ತಿಂಗಳಿನಿಂದ ಶಾಲೆಗೆ ಹೋಗಿರಲಿಲ್ಲ ಎನ್ನಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದ್ದರೂ ಬಾಲಕಿ ಬಾರದ ಕಾರಣ ಶಿಕ್ಷಕರು ಆಕೆಯ ಮನೆಗೆ ಭೇಟಿ ನೀಡಿದ್ದರು. ಆದರೆ, ಅವರನ್ನೂ ಒಳಗೆ ಹೋಗಲು ಬಿಟ್ಟಿರಲಿಲ್ಲ ಎಂದು ಹೇಳಲಾಗಿದೆ. ರಾಜಕೀಯ ಪ್ರಭಾವ ಇರುವ ಕಾರಣ ಈ ಪ್ರಕರಣವನ್ನು ಮುಚ್ಚಿ ಹಾಕುವ ಸಾಧ್ಯತೆ ಇದೆ ಎಂಬುದು ಸ್ಥಳೀಯರ ಆತಂಕ ಎಂದಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಸಿಂಹ ನಾಯಿಗಳನ್ನು ಬೇಟೆಯಾಡುವುದಿಲ್ಲ..’; ದಲಿತ ಅಧಿಕಾರಿಯ ವಿರುದ್ಧ ವಿವಾದಾತ್ಮಕ ಹೇಳಿಕೆ ಕೊಟ್ಟ ಮಾಜಿ ಮುಖ್ಯಮಂತ್ರಿ

‘ಸಿಂಹ ನಾಯಿಗಳನ್ನು ಬೇಟೆಯಾಡುವುದಿಲ್ಲ..’; ದಲಿತ ಅಧಿಕಾರಿಯ ವಿರುದ್ಧ ವಿವಾದಾತ್ಮಕ ಹೇಳಿಕೆ ಕೊಟ್ಟ ಮಾಜಿ ಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...