Homeಮುಖಪುಟಕೋಲಾರದಲ್ಲಿ ದಲಿತ ಹೆಣ್ಣುಮಕ್ಕಳಿಗೆ ನಿತ್ಯ ಕಿರುಕುಳ: ಪ್ರಶ್ನಿಸಿದ್ದಕ್ಕೆ ತೀವ್ರ ಹಲ್ಲೆ - ದಸಸಂ ಖಂಡನೆ

ಕೋಲಾರದಲ್ಲಿ ದಲಿತ ಹೆಣ್ಣುಮಕ್ಕಳಿಗೆ ನಿತ್ಯ ಕಿರುಕುಳ: ಪ್ರಶ್ನಿಸಿದ್ದಕ್ಕೆ ತೀವ್ರ ಹಲ್ಲೆ – ದಸಸಂ ಖಂಡನೆ

ದಸಂಸ ರಾಜ್ಯ ಮುಖಂಡರಾದ ಎನ್.ವೆಂಕಟೇಶ್‌ರವರ ನೇತೃತ್ವದಲ್ಲಿ ಶ್ರೀನಿವಾಸಪುರ ತಹಶೀಲ್ದಾರ್ ಮೂಲಕ ಗೃಹ ಮಂತ್ರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದು, ಆರೋಪಿಗಳ ಮೇಲೆ ಪೋಕ್ಸೋ ಕಾಯ್ದೆ ದಾಖಲಿಸಬೇಕೆಂದು ಒತ್ತಾಯಿಸಿದೆ.

- Advertisement -
- Advertisement -

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೊಳ್ ಮತ್ತು ನಾಗಿರೆಡ್ಡಿಗಾರಿ ಪಾಳ್ಯದ ಗ್ರಾಮದ ದಲಿತ ಹೆಣ್ಣುಮಕ್ಕಳು ಬಸ್ಸಿನಲ್ಲಿ ಶಾಲೆ, ಕಾಲೇಜಿಗೆ ಹೋಗುವಾಗ ಕೆಲ ಪುಂಡರು ನಿತ್ಯವೂ ಕಿರುಕುಳ ನೀಡುತ್ತಿದ್ದದು ಇದನ್ನು ಪ್ರಶ್ನಿಸಿದ ಹೆಣ್ಣುಮಕ್ಕಳು ಮತ್ತು ಅವರ ಪೋಷಕರ ಮೇಲೆ  ಗುಂಪೊಂದು ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಸೆಪ್ಟಂಬರ್ 04 ರಂದು ನಡೆದಿದೆ.

ಟಿ.ಎನ್ ಗೌರಿ, ಟಿ.ಎಂ ಯಶಸ್ವಿನಿ ಹಾಗೂ ಭಾವನ ಎಂಬ ಹೆಣ್ಣು ಮಕ್ಕಳು ಚಿಂತಾಮಣಿ ಕಾಲೇಜಿಗೆ ಬಸ್ಸಿನಲ್ಲಿ ಹೋಗುವಾಗ ನಾಯಕ ಸಮುದಾಯದಕ್ಕೆ ಸೇರಿದ ಗೌನಿಪಲ್ಲಿಯ ಪವನ್ ಮತ್ತು ಕೊಂಡಾಮುರಿಯ ಬಾಬೂ ನಾಯಕ್ ಎಂಬುವರು ಪ್ರತಿದಿನ ಚುಡಾಯಿಸುವುದು, ಮಾನಸಿಕ ಕಿರುಕುಳ ನೀಡಿವುದು ಮಾಡುತ್ತಿದ್ದರು. ಈ ಕುರಿತು ಆ ಯುವಕರಿಗೆ ಹೆಣ್ಣುಮಕ್ಕಳ ಪೋಷಕರು ಬುದ್ದಿವಾದ ಹೇಳಿದ್ದರು. ಈ ಕುರಿತು ಮಾತಿಗೆ ಮಾತು ಬೆಳೆದಿತ್ತು. ಅದಕ್ಕೆ ಕುಪಿತಗೊಂಡ ಯುವಕರು ಮತ್ತು ಅವರ ಪೋಷಕರು ಸೇರಿ ಸೆಪ್ಟಂಬರ್ ನಾಲ್ಕರಂದು ಕೊಂಡಾಮುರಿ ಗೇಟ್ ಬಳಿ ಆ ಹೆಣ್ಣು ಮಕ್ಕಳ ಮೇಲೆ ಅಮಾನುಷ ಹಲ್ಲೆ ನಡೆಸಿದ್ದಾರೆ. ತಾಡಿಗೋಳ್ ಕ್ರಾಸ್‌ನಲ್ಲಿ ಗಿರೀಶ್ ಮತ್ತು ರೌಡಿ ಶೀಟರ್ ಜಿಮ್ ಅನಿಲ್ ಕುಮಾರ್ ಎಂಬುವವರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ. ಇದೆಲ್ಲವೂ ವಿಡಿಯೋ ಆಗಿದ್ದು ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದೌರ್ಜನ್ಯ ನಡೆಯುತ್ತಿದ್ದ ಸ್ಥಳಕ್ಕೆ ಬಂದು ಪ್ರಶ್ನಿಸಿದ ಅಭಿಷೇಕ್, ನವೀನ್ ಮತ್ತು ಶ್ರೀನಾಥ್ ಎಂಬುವವರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಊರಿನವರೆಲ್ಲಾ ಸೇರಿಕೊಂಡು ಅಶ್ಲೀಲವಾಗಿ ಬೈದು ಮನಬಂದಂತೆ ಥಳಿಸಿದ್ದಾರೆ. ಹೆಣ್ಣು ಮಕ್ಕಳು ಸೇರಿದಂತೆ ಗಾಯಗೊಂಡ ಜನರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿ ದೂರು ದಾಖಲಾಗಿದ್ದು, ಎರಡೂ ಕಡೆಯವರ ಮೇಲೂ FIR ದಾಖಲಾಗಿದೆ.

ಘಟನೆಯನ್ನು ಖಂಡಿಸಿರುವ ಶ್ರೀನಿವಾಸಪುರ ತಾಲ್ಲುಕು ದಲಿತ ಸಂಘರ್ಷ ಸಮಿತಿಯು ವಿದ್ಯಾರ್ಥಿನಿಯರು ಮತ್ತು ಅವರ ಪೋಷಕರ ಮೇಲೆ ದೌರ್ಜನ್ಯವೆಸಗಿದ ಆರೋಪಿಗಳನ್ನು ಬಂಧಿಸಿಬೇಕು, ಸಂತ್ರಸ್ತರ ಮೇಲಿನ FIR ರದ್ದುಗೊಳಿಸಬೇಕು ಮತ್ತು ಸಂತ್ರಸ್ತರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದೆ.

ಇದೊಂದು ಪೂರ್ವನಿಯೋಜಿತ ದಾಳಿಯಾಗಿದೆ. ಮೂರು ಹೆಣ್ಣು ಮಕ್ಕಳು ಸೇರಿದಂತೆ ಆರು ಜನರು ಪೆಟ್ಟು ತಿಂದು ಆಸ್ಪತ್ರೆಯಲ್ಲಿದ್ದಾರೆ. ಪೊಲೀಸರು ಸಂತ್ರಸ್ತರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಇದರಲ್ಲಿ ಪೊಲೀಸರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಈಗಲಾದರೂ ಪೊಲೀಸರು ಸಮರ್ಪಕ ಕ್ರಮ ತೆಗೆದುಕೊಳ್ಳದಿದ್ದರೆ ಸೆಪ್ಟಂಬರ್ 14 ರಂದು ಬೃಹತ್ ಜಾಥಾ ನಡೆಸಲಾಗುವುದು ಎಂದು ದಸಂಸ ರಾಜ್ಯ ಮುಖಂಡರಾದ ಎನ್.ವೆಂಕಟೇಶ್‌ ತಿಳಿಸಿದ್ದಾರೆ.

ಇಂದು ಅವರ ನೇತೃತ್ವದಲ್ಲಿ ದಸಸಂ ಸಂಘಟನೆಯು ಶ್ರೀನಿವಾಸಪುರ ತಹಶೀಲ್ದಾರ್ ಮೂಲಕ ಗೃಹ ಮಂತ್ರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದು, ಆರೋಪಿಗಳ ಮೇಲೆ ಪೋಕ್ಸೋ ಕಾಯ್ದೆ ದಾಖಲಿಸಬೇಕೆಂದು ಒತ್ತಾಯಿಸಿದೆ. ಅಲ್ಲದೇ ಪ್ರಕರಣದಲ್ಲಿ ಮುಖ್ಯ ಆರೋಪಿಯಾದ ಅನಿಲ್‌ ಕುಮಾರ್ ಎಂಬಾತನನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದೆ.

ದಸಸಂ ತಂಡವು ಜಿಲ್ಲಾಸ್ಪತ್ರೆಗೆ ತೆರಳಿ ಸಂತ್ರಸ್ತರನ್ನು ಭೇಟಿ ಮಾಡಿ ಧೈರ್ಯ ತುಂಬಲಾಗಿದೆ. ಈ ಸಂದರ್ಭದಲ್ಲಿ ದಲಿತ ಸಂಘ‍ರ್ಷ ಸಮಿತಿಯ ವಿ.ಮುನಿಯಪ್ಪ, ಪಿ. ವಾಸು, ಬಿ.ವೆಂಕಟೇಶ್, ನರಸಿಂಹ ವಿ, ಎಂ ಮೂರ್ತಿ ಸೇರಿದಂತೆ ಇತರರು ಇದ್ದರು.


ಇದನ್ನೂ ಓದಿ: ಮುಸ್ಲಿಂ ಬಾಲಕಿಯ ಅಪಹರಣ; ಆರ್‌ಎಸ್ಎಸ್‌ ಮುಖಂಡ ಸೇರಿ ಐವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಲಿತ ಹೆಣ್ಣುಮಕ್ಕಳ ಮೇಲಿನ ಈ ಹಲ್ಲೆ ಕಂಡನಾರ್ಹ. ಆರೋಪಿಗಳಿಗೆ ಕಟಿಣ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...