Homeಮುಖಪುಟಕೋಲಾರದಲ್ಲಿ ದಲಿತ ಹೆಣ್ಣುಮಕ್ಕಳಿಗೆ ನಿತ್ಯ ಕಿರುಕುಳ: ಪ್ರಶ್ನಿಸಿದ್ದಕ್ಕೆ ತೀವ್ರ ಹಲ್ಲೆ - ದಸಸಂ ಖಂಡನೆ

ಕೋಲಾರದಲ್ಲಿ ದಲಿತ ಹೆಣ್ಣುಮಕ್ಕಳಿಗೆ ನಿತ್ಯ ಕಿರುಕುಳ: ಪ್ರಶ್ನಿಸಿದ್ದಕ್ಕೆ ತೀವ್ರ ಹಲ್ಲೆ – ದಸಸಂ ಖಂಡನೆ

ದಸಂಸ ರಾಜ್ಯ ಮುಖಂಡರಾದ ಎನ್.ವೆಂಕಟೇಶ್‌ರವರ ನೇತೃತ್ವದಲ್ಲಿ ಶ್ರೀನಿವಾಸಪುರ ತಹಶೀಲ್ದಾರ್ ಮೂಲಕ ಗೃಹ ಮಂತ್ರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದು, ಆರೋಪಿಗಳ ಮೇಲೆ ಪೋಕ್ಸೋ ಕಾಯ್ದೆ ದಾಖಲಿಸಬೇಕೆಂದು ಒತ್ತಾಯಿಸಿದೆ.

- Advertisement -
- Advertisement -

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೊಳ್ ಮತ್ತು ನಾಗಿರೆಡ್ಡಿಗಾರಿ ಪಾಳ್ಯದ ಗ್ರಾಮದ ದಲಿತ ಹೆಣ್ಣುಮಕ್ಕಳು ಬಸ್ಸಿನಲ್ಲಿ ಶಾಲೆ, ಕಾಲೇಜಿಗೆ ಹೋಗುವಾಗ ಕೆಲ ಪುಂಡರು ನಿತ್ಯವೂ ಕಿರುಕುಳ ನೀಡುತ್ತಿದ್ದದು ಇದನ್ನು ಪ್ರಶ್ನಿಸಿದ ಹೆಣ್ಣುಮಕ್ಕಳು ಮತ್ತು ಅವರ ಪೋಷಕರ ಮೇಲೆ  ಗುಂಪೊಂದು ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಸೆಪ್ಟಂಬರ್ 04 ರಂದು ನಡೆದಿದೆ.

ಟಿ.ಎನ್ ಗೌರಿ, ಟಿ.ಎಂ ಯಶಸ್ವಿನಿ ಹಾಗೂ ಭಾವನ ಎಂಬ ಹೆಣ್ಣು ಮಕ್ಕಳು ಚಿಂತಾಮಣಿ ಕಾಲೇಜಿಗೆ ಬಸ್ಸಿನಲ್ಲಿ ಹೋಗುವಾಗ ನಾಯಕ ಸಮುದಾಯದಕ್ಕೆ ಸೇರಿದ ಗೌನಿಪಲ್ಲಿಯ ಪವನ್ ಮತ್ತು ಕೊಂಡಾಮುರಿಯ ಬಾಬೂ ನಾಯಕ್ ಎಂಬುವರು ಪ್ರತಿದಿನ ಚುಡಾಯಿಸುವುದು, ಮಾನಸಿಕ ಕಿರುಕುಳ ನೀಡಿವುದು ಮಾಡುತ್ತಿದ್ದರು. ಈ ಕುರಿತು ಆ ಯುವಕರಿಗೆ ಹೆಣ್ಣುಮಕ್ಕಳ ಪೋಷಕರು ಬುದ್ದಿವಾದ ಹೇಳಿದ್ದರು. ಈ ಕುರಿತು ಮಾತಿಗೆ ಮಾತು ಬೆಳೆದಿತ್ತು. ಅದಕ್ಕೆ ಕುಪಿತಗೊಂಡ ಯುವಕರು ಮತ್ತು ಅವರ ಪೋಷಕರು ಸೇರಿ ಸೆಪ್ಟಂಬರ್ ನಾಲ್ಕರಂದು ಕೊಂಡಾಮುರಿ ಗೇಟ್ ಬಳಿ ಆ ಹೆಣ್ಣು ಮಕ್ಕಳ ಮೇಲೆ ಅಮಾನುಷ ಹಲ್ಲೆ ನಡೆಸಿದ್ದಾರೆ. ತಾಡಿಗೋಳ್ ಕ್ರಾಸ್‌ನಲ್ಲಿ ಗಿರೀಶ್ ಮತ್ತು ರೌಡಿ ಶೀಟರ್ ಜಿಮ್ ಅನಿಲ್ ಕುಮಾರ್ ಎಂಬುವವರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ. ಇದೆಲ್ಲವೂ ವಿಡಿಯೋ ಆಗಿದ್ದು ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದೌರ್ಜನ್ಯ ನಡೆಯುತ್ತಿದ್ದ ಸ್ಥಳಕ್ಕೆ ಬಂದು ಪ್ರಶ್ನಿಸಿದ ಅಭಿಷೇಕ್, ನವೀನ್ ಮತ್ತು ಶ್ರೀನಾಥ್ ಎಂಬುವವರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಊರಿನವರೆಲ್ಲಾ ಸೇರಿಕೊಂಡು ಅಶ್ಲೀಲವಾಗಿ ಬೈದು ಮನಬಂದಂತೆ ಥಳಿಸಿದ್ದಾರೆ. ಹೆಣ್ಣು ಮಕ್ಕಳು ಸೇರಿದಂತೆ ಗಾಯಗೊಂಡ ಜನರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿ ದೂರು ದಾಖಲಾಗಿದ್ದು, ಎರಡೂ ಕಡೆಯವರ ಮೇಲೂ FIR ದಾಖಲಾಗಿದೆ.

ಘಟನೆಯನ್ನು ಖಂಡಿಸಿರುವ ಶ್ರೀನಿವಾಸಪುರ ತಾಲ್ಲುಕು ದಲಿತ ಸಂಘರ್ಷ ಸಮಿತಿಯು ವಿದ್ಯಾರ್ಥಿನಿಯರು ಮತ್ತು ಅವರ ಪೋಷಕರ ಮೇಲೆ ದೌರ್ಜನ್ಯವೆಸಗಿದ ಆರೋಪಿಗಳನ್ನು ಬಂಧಿಸಿಬೇಕು, ಸಂತ್ರಸ್ತರ ಮೇಲಿನ FIR ರದ್ದುಗೊಳಿಸಬೇಕು ಮತ್ತು ಸಂತ್ರಸ್ತರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದೆ.

ಇದೊಂದು ಪೂರ್ವನಿಯೋಜಿತ ದಾಳಿಯಾಗಿದೆ. ಮೂರು ಹೆಣ್ಣು ಮಕ್ಕಳು ಸೇರಿದಂತೆ ಆರು ಜನರು ಪೆಟ್ಟು ತಿಂದು ಆಸ್ಪತ್ರೆಯಲ್ಲಿದ್ದಾರೆ. ಪೊಲೀಸರು ಸಂತ್ರಸ್ತರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಇದರಲ್ಲಿ ಪೊಲೀಸರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಈಗಲಾದರೂ ಪೊಲೀಸರು ಸಮರ್ಪಕ ಕ್ರಮ ತೆಗೆದುಕೊಳ್ಳದಿದ್ದರೆ ಸೆಪ್ಟಂಬರ್ 14 ರಂದು ಬೃಹತ್ ಜಾಥಾ ನಡೆಸಲಾಗುವುದು ಎಂದು ದಸಂಸ ರಾಜ್ಯ ಮುಖಂಡರಾದ ಎನ್.ವೆಂಕಟೇಶ್‌ ತಿಳಿಸಿದ್ದಾರೆ.

ಇಂದು ಅವರ ನೇತೃತ್ವದಲ್ಲಿ ದಸಸಂ ಸಂಘಟನೆಯು ಶ್ರೀನಿವಾಸಪುರ ತಹಶೀಲ್ದಾರ್ ಮೂಲಕ ಗೃಹ ಮಂತ್ರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದು, ಆರೋಪಿಗಳ ಮೇಲೆ ಪೋಕ್ಸೋ ಕಾಯ್ದೆ ದಾಖಲಿಸಬೇಕೆಂದು ಒತ್ತಾಯಿಸಿದೆ. ಅಲ್ಲದೇ ಪ್ರಕರಣದಲ್ಲಿ ಮುಖ್ಯ ಆರೋಪಿಯಾದ ಅನಿಲ್‌ ಕುಮಾರ್ ಎಂಬಾತನನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದೆ.

ದಸಸಂ ತಂಡವು ಜಿಲ್ಲಾಸ್ಪತ್ರೆಗೆ ತೆರಳಿ ಸಂತ್ರಸ್ತರನ್ನು ಭೇಟಿ ಮಾಡಿ ಧೈರ್ಯ ತುಂಬಲಾಗಿದೆ. ಈ ಸಂದರ್ಭದಲ್ಲಿ ದಲಿತ ಸಂಘ‍ರ್ಷ ಸಮಿತಿಯ ವಿ.ಮುನಿಯಪ್ಪ, ಪಿ. ವಾಸು, ಬಿ.ವೆಂಕಟೇಶ್, ನರಸಿಂಹ ವಿ, ಎಂ ಮೂರ್ತಿ ಸೇರಿದಂತೆ ಇತರರು ಇದ್ದರು.


ಇದನ್ನೂ ಓದಿ: ಮುಸ್ಲಿಂ ಬಾಲಕಿಯ ಅಪಹರಣ; ಆರ್‌ಎಸ್ಎಸ್‌ ಮುಖಂಡ ಸೇರಿ ಐವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಲಿತ ಹೆಣ್ಣುಮಕ್ಕಳ ಮೇಲಿನ ಈ ಹಲ್ಲೆ ಕಂಡನಾರ್ಹ. ಆರೋಪಿಗಳಿಗೆ ಕಟಿಣ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...