Homeಕರ್ನಾಟಕನೇಣು ಬಿಗಿದ ಸ್ಥಿತಿಯಲ್ಲಿ ದಲಿತ ಬಾಲಕಿಯ ಶವ ಪತ್ತೆ: ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ

ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ಬಾಲಕಿಯ ಶವ ಪತ್ತೆ: ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ

- Advertisement -
- Advertisement -

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬನೋಶಿ ಗ್ರಾಮದ ಹೊಲವೊಂದರಲ್ಲಿ ದಲಿತ ಬಾಲಕಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮದ ಪ್ರಬಲ ಜಾತಿಯ ಯುವಕರು ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಬಾಲಕಿಯ ಪೋಷಕರು ನೀಡಿರುವ ದೂರಿನ ಪ್ರಕಾರ, ಅಕ್ಟೋಬರ್ 13ರಂದು ಸಂಜೆ 5 ಗಂಟೆಯ ಸುಮಾರಿಗೆ ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯ ಶವ, ಮರುದಿನ ಅಕ್ಟೋಬರ್ 14ರಂದು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಗ್ರಾಮದ ನಾಗನಗೌಡ ಎಂಬವರ ಹೊಲದ ಬೃಹತ್ ಗಾತ್ರದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

“ಗ್ರಾಮದ ಪ್ರಬಲ ಜಾತಿಗೆ ಸೇರಿದ (ಕುರುಬ) ಮಾಳಿಂಗರಾಯ ಎಂಬ ಯುವಕ ಕಳೆದ 2-3 ತಿಂಗಳಿನಿಂದ ನಮ್ಮ ಮಗಳ ಹಿಂದೆ ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದ. ಈ ವಿಷಯ ತಿಳಿದು ನಾವು ಆಕೆಯನ್ನು ಮನೆಯಲ್ಲೇ ಇರಿಸಿಕೊಂಡಿದ್ದೆವು. ನಮ್ಮ ಸಂಬಂಧಿ ಹುಡುಗನ ಜೊತೆ ಆಕೆಗೆ ಮದುವೆ ಮಾಡುವ ಬಗ್ಗೆ ತೀರ್ಮಾನಿಸಿದ್ದೆವು. ಈ ವಿಚಾರ ಮಾಳಿಂಗರಾಯನಿಗೆ ಗೊತ್ತಾಗಿತ್ತು. ಆ ಬಳಿಕ “ನನ್ನ ಬಿಟ್ಟು ಬೇರೆಯವರ ಜೊತೆ ನೀನು ಹೇಗೆ ಮದುವೆಯಾಗುತ್ತೀಯಾ ನೋಡುತ್ತೇನೆ, ನೀನು ನನ್ನನ್ನೇ ಪ್ರೀತಿಸಬೇಕು” ಎಂದು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದ. ಇದಕ್ಕೆ ಮಾಳಿಂಗರಾಯನಿಗೆ ಗ್ರಾಮದ ಶಿವನಗೌಡ ಎಂಬಾತ ಕುಮ್ಮಕ್ಕು ನೀಡುತ್ತಿದ್ದ ಎಂದು” ಬಾಲಕಿಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಅಕ್ಟೋಬರ್ 13ರಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಸಂತೆ ಮಾಡಿಕೊಂಡು ಬರುವ ಸಲುವಾಗಿ ನಾವು ಮುದ್ದೇಬಿಹಾಳಕ್ಕೆ ಹೋಗಿದ್ದೆವು. ಈ ವೇಳೆ ಮಗಳು ಮನೆಯಲ್ಲೇ ಇದ್ದಳು. ಸಂತೆ ಮುಗಿಸಿಕೊಂಡು ಸಂಜೆ 5 ಗಂಟೆಯ ಸುಮಾರಿಗೆ ಮನೆಗೆ ಬಂದಾಗ, ಮಗಳು ಮನೆಯಲ್ಲಿ ಇರಲಿಲ್ಲ. ನಾವು ಸುತ್ತಮುತ್ತಲಿನ ಜನರ ಬಳಿ ಮಗಳ ಬಗ್ಗೆ ವಿಚಾರಿಸಿದೆವು, ಊರಿನ ತುಂಬಾ ಆಕೆಗಾಗಿ ಹುಡುಕಾಡಿದೆವು. ಆದರೆ, ಆಕೆಯ ಸುಳಿವು ಸಿಗಲಿಲ್ಲ” ಎಂದು ತಿಳಿಸಿದ್ದಾರೆ.

“ಮರುದಿನ ಅಕ್ಟೋಬರ್ 14ರಂದು ಬೆಳಿಗ್ಗೆ 8.30ರ ಸುಮಾರಿಗೆ ಮನೆಗೆ ಬಂದ ನಮ್ಮ ಅಳಿಯ ನಾಗರಾಜ, ಗ್ರಾಮದ ನಾಗನಗೌಡ ಅವರ ಹೊಲಕ್ಕೆ 8 ಗಂಟೆಯ ಸುಮಾರಿಗೆ ಮೇವು ತರಲು ಹೋದಾಗ ಮಗಳ ಶವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ತಿಳಿಸಿದರು. ನಾವು ಗಾಬರಿಯಿಂದ ಸ್ಥಳಕ್ಕೆ ಹೋಗಿ ನೋಡಿದಾಗ ಮಗಳ ಶವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನೇತಾಡುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ಕೆಳಗಿಳಿಸಿ ಆಂಬ್ಯುಲೆನ್ಸ್‌ನಲ್ಲಿ ವಿಜಯಪುರದ ಬಿಎಲ್‌ಡಿಇ ಆಸ್ಪತ್ರೆಯ ಶವಾಗಾರಕ್ಕೆ ಕಳಿಸಿದರು” ಎಂದು ಬಾಲಕಿಯ ಪೋಷಕರು ದೂರಿನಲ್ಲಿ ವಿವರಿಸಿದ್ದಾರೆ.

“ನಮ್ಮ ಮಗಳಿಗೆ ಪ್ರೀತಿಸುವಂತೆ ಕಿರುಕುಳ ನೀಡಿ ಆಕೆಯ ಸಾವಿಗೆ ಕಾರಣರಾದ ಮಾಳಿಂಗರಾಯ, ಆತನಿಗೆ ಸಹಕಾರ ನೀಡಿದ ಶಿವನಗೌಡ ಮತ್ತು ಜುಮ್ಮಣ್ಣ ದಳವಾಯಿ” ಇವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಶಂಕೆ

ಬಾಲಕಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆಯಿಂದೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ಈ ಕುರಿತು ನಾನುಗೌರಿ ಜೊತೆ ಮಾತನಾಡಿರುವ ದಲಿತ ಸಂಘರ್ಷ ಸಮಿತಿಯ (ಡಿಎಸ್‌ಎಸ್‌) ವಿ ನಾಗರಾಜ್ ಅವರು, ” ನಾವು ಬಾಲಕಿಯ ಮನೆಗೆ ಭೇಟಿ ನೀಡಿದ್ದೇವೆ. ಆಕೆಯ ಶವದ ಮೇಲೆ ಸುಟ್ಟ ಗಾಯಗಳಿತ್ತು. ಅಲ್ಲದೆ, ಕತ್ತಿನಲ್ಲಿ ತಾಳಿಯಿತ್ತು. ಆಕೆಯ ಮೇಲೆ ಮಾಳಿಂಗರಾಯ ಸೇರಿದಂತೆ ಯುವಕರು ಅತ್ಯಾಚಾರವೆಸಗಿ ಕೊಲೆಗೈದು, ಬಳಿಕ ಮರಕ್ಕೆ ನೇತು ಹಾಕಿರುವ ಶಂಕೆಯಿದೆ” ಎಂದಿದ್ದಾರೆ.

“ನಮಗೆ ದೊರೆತ ಮಾಹಿತಿ ಪ್ರಕಾರ ಬಾಲಕಿ ಮತ್ತು ಆರೋಪಿ ಮಾಳಿಂಗರಾಯ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ಗೊತ್ತಾಗಿ ಬಾಲಕಿಯ ಪೋಷಕರು ಆಕೆಗೆ ಎಚ್ಚರಿಕೆ ನೀಡಿದ್ದರು. ಅಲ್ಲದೆ, ಸಂಬಂಧಿ ಯುವಕನ ಜೊತೆ ಮದುವೆ ಮಾಡುವ ನಿರ್ಧಾರ ಮಾಡಿದ್ದರು. ಈ ವಿಚಾರ ಮಾಳಿಂಗರಾಯನಿಗೆ ಗೊತ್ತಾಗಿ ಇಬ್ಬರು ಓಡಿ ಹೋಗುವ ತೀರ್ಮಾನ ಮಾಡಿರಬಹುದು. ಬಾಲಕಿ ಆತನನ್ನು ನಂಬಿ ಮನೆಯಿಂದ ಹೊರ ಹೋಗಿರಬಹುದು. ಆದರೆ, ಬಾಲಕಿ ತನಗೆ ಸಿಗುವುದಿಲ್ಲ ಎಂದು ತಿಳಿದ ಮಾಳಿಂಗರಾಯ, ಆತನ ಸ್ನೇಹಿತರ ಜೊತೆಗೂಡಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು, ಬಳಿಕ ಮರಕ್ಕೆ ನೇತು ಹಾಕಿರಬಹುದು” ಎಂದು ಹೇಳಿದ್ದಾರೆ.

“ದೇವದಾಸಿ ಪದ್ದತಿಯಂತೆ ಯುವಕರು ಅತ್ಯಾಚಾರವೆಸಗುವ ಮುನ್ನ ಮಾಳಿಂಗರಾಯ ಆಕೆಯ ಕತ್ತಿಗೆ ತಾಳಿ ಕಟ್ಟಿರುವ ಶಂಕೆಯಿದೆ. ಬಾಲಕಿ ಪ್ರಿಯತಮ ಮಾಳಿಂಗರಾಯನ ನಂಬಿ ಮನೆಯಿಂದ ಹೋಗಿರಬಹುದು. ಆದರೆ, ಅಲ್ಲಿ ಮಾಳಿಂಗರಾಯ ತನ್ನ ಸ್ನೇಹಿತರ ಜೊತೆ ಸೇರಿ ಆಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಶಂಕೆಯಿದೆ” ಎಂದು ನಾಗರಾಜ್ ವಿವರಿಸಿದ್ದಾರೆ.

ಪೊಲೀಸರು ಎಫ್‌ಐಆರ್ ದಾಖಲಿಸಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಈ ಪ್ರಕರಣವನ್ನು ರಾಜ್ಯ ಮಟ್ಟಕ್ಕೆ ಕೊಂಡೊಯ್ದು ಉಗ್ರ ಹೋರಾಟ ಮಾಡಲಾಗುವುದು ಎಂದು ನಾಗರಾಜ್ ಎಚ್ಚರಿಸಿದ್ದಾರೆ.

ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ: ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ; ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ’ ಎಂದು ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಗುಡುಗಿದ್ದಾರೆ.  ರಾಜ್ಯದ ಗಮನ‌ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ...

“ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ”: ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ದೆಹಲಿಯ ವಾಯುಮಾಲಿನ್ಯ 'ಗಂಭೀರ ಮಟ್ಟ' ತಲುಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಮಾಸ್ಕ್‌ ಧರಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ವಕೀಲರು ವರ್ಚುವಲ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರೆ ಸಾಕು ಎಂದು ಹೇಳಿದೆ. ವಿವಿಧ ಪ್ರಕರಣಗಳಲ್ಲಿ...

ಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನವೆಂಬರ್ 11 ರಂದು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಆರು ಮಾವೋವಾದಿಗಳಲ್ಲಿ ಮಾವೋವಾದಿ ನಾಯಕಿ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಊರ್ಮಿಳಾ ಮತ್ತು ಬುಚಣ್ಣ...

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.  ನವೆಂಬರ್...

ಗಾಜಾದಲ್ಲಿ ಮುಂದುವರೆದ ಪ್ಯಾಲೆಸ್ತೀನಿಯನ್ ಮಕ್ಕಳ ಕಾಣೆ ಪ್ರಕರಣ: ಮಕ್ಕಳ ಹಕ್ಕುಗಳ ಗುಂಪು

ಬುಧವಾರ ಪ್ಯಾಲೆಸ್ತೀನಿಯನ್ ಹಕ್ಕುಗಳ ಗುಂಪಿನ ವರದಿಯ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಗಾಜಾದಿಂದ ಕನಿಷ್ಠ ಆರು ಮಕ್ಕಳು ಕಣ್ಮರೆಯಾಗಿದ್ದಾರೆ ಎಂದು 'ಮಕ್ತೂಬ್‌ ಮೀಡಿಯಾ' ವರದಿ ಮಾಡಿದೆ. ಕಾಣೆಯಾದ ಮಕ್ಕಳ ಕುಟುಂಬಗಳು ಈ ಪ್ರದೇಶದಲ್ಲಿನ ತನ್ನ ಮಿಲಿಟರಿ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್...

ಅಲಿಘರ್| ಶಾಲೆಯಲ್ಲಿ ‘ವಂದೇ ಮಾತರಂ’ ಹಾಡುವುದಕ್ಕೆ ಆಕ್ಷೇಪಿಸಿದ ಶಿಕ್ಷಕನ ಅಮಾನತು

ಉತ್ತರ ಪ್ರದೇಶದ ಶಾಹಪುರ್ ಕುತುಬ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಆಕ್ಷೇಪಿಸಿದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರಾಷ್ಟ್ರಗೀತೆಯ ನಂತರ ವಂದೇಮಾತರಂ...

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ದಿನಾಂಕ ನಿಗದಿಯಾಗಿದೆ. ನವೆಂಬರ್ 16ರ‌ ಭಾನುವಾರ...

ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ...

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

ಗುಜರಾತ್‌ನ ಅಮ್ರೇಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು, ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಕುಟುಂಬಕ್ಕೆ ಸೇರಿದ ಪ್ರಾಣಿಗಳ ಹತ್ಯೆಯನ್ನು ಕಾನೂನು...