Homeಕರ್ನಾಟಕನೇಣು ಬಿಗಿದ ಸ್ಥಿತಿಯಲ್ಲಿ ದಲಿತ ಬಾಲಕಿಯ ಶವ ಪತ್ತೆ: ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ

ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ಬಾಲಕಿಯ ಶವ ಪತ್ತೆ: ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ

- Advertisement -
- Advertisement -

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬನೋಶಿ ಗ್ರಾಮದ ಹೊಲವೊಂದರಲ್ಲಿ ದಲಿತ ಬಾಲಕಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮದ ಪ್ರಬಲ ಜಾತಿಯ ಯುವಕರು ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಬಾಲಕಿಯ ಪೋಷಕರು ನೀಡಿರುವ ದೂರಿನ ಪ್ರಕಾರ, ಅಕ್ಟೋಬರ್ 13ರಂದು ಸಂಜೆ 5 ಗಂಟೆಯ ಸುಮಾರಿಗೆ ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯ ಶವ, ಮರುದಿನ ಅಕ್ಟೋಬರ್ 14ರಂದು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಗ್ರಾಮದ ನಾಗನಗೌಡ ಎಂಬವರ ಹೊಲದ ಬೃಹತ್ ಗಾತ್ರದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

“ಗ್ರಾಮದ ಪ್ರಬಲ ಜಾತಿಗೆ ಸೇರಿದ (ಕುರುಬ) ಮಾಳಿಂಗರಾಯ ಎಂಬ ಯುವಕ ಕಳೆದ 2-3 ತಿಂಗಳಿನಿಂದ ನಮ್ಮ ಮಗಳ ಹಿಂದೆ ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದ. ಈ ವಿಷಯ ತಿಳಿದು ನಾವು ಆಕೆಯನ್ನು ಮನೆಯಲ್ಲೇ ಇರಿಸಿಕೊಂಡಿದ್ದೆವು. ನಮ್ಮ ಸಂಬಂಧಿ ಹುಡುಗನ ಜೊತೆ ಆಕೆಗೆ ಮದುವೆ ಮಾಡುವ ಬಗ್ಗೆ ತೀರ್ಮಾನಿಸಿದ್ದೆವು. ಈ ವಿಚಾರ ಮಾಳಿಂಗರಾಯನಿಗೆ ಗೊತ್ತಾಗಿತ್ತು. ಆ ಬಳಿಕ “ನನ್ನ ಬಿಟ್ಟು ಬೇರೆಯವರ ಜೊತೆ ನೀನು ಹೇಗೆ ಮದುವೆಯಾಗುತ್ತೀಯಾ ನೋಡುತ್ತೇನೆ, ನೀನು ನನ್ನನ್ನೇ ಪ್ರೀತಿಸಬೇಕು” ಎಂದು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದ. ಇದಕ್ಕೆ ಮಾಳಿಂಗರಾಯನಿಗೆ ಗ್ರಾಮದ ಶಿವನಗೌಡ ಎಂಬಾತ ಕುಮ್ಮಕ್ಕು ನೀಡುತ್ತಿದ್ದ ಎಂದು” ಬಾಲಕಿಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಅಕ್ಟೋಬರ್ 13ರಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಸಂತೆ ಮಾಡಿಕೊಂಡು ಬರುವ ಸಲುವಾಗಿ ನಾವು ಮುದ್ದೇಬಿಹಾಳಕ್ಕೆ ಹೋಗಿದ್ದೆವು. ಈ ವೇಳೆ ಮಗಳು ಮನೆಯಲ್ಲೇ ಇದ್ದಳು. ಸಂತೆ ಮುಗಿಸಿಕೊಂಡು ಸಂಜೆ 5 ಗಂಟೆಯ ಸುಮಾರಿಗೆ ಮನೆಗೆ ಬಂದಾಗ, ಮಗಳು ಮನೆಯಲ್ಲಿ ಇರಲಿಲ್ಲ. ನಾವು ಸುತ್ತಮುತ್ತಲಿನ ಜನರ ಬಳಿ ಮಗಳ ಬಗ್ಗೆ ವಿಚಾರಿಸಿದೆವು, ಊರಿನ ತುಂಬಾ ಆಕೆಗಾಗಿ ಹುಡುಕಾಡಿದೆವು. ಆದರೆ, ಆಕೆಯ ಸುಳಿವು ಸಿಗಲಿಲ್ಲ” ಎಂದು ತಿಳಿಸಿದ್ದಾರೆ.

“ಮರುದಿನ ಅಕ್ಟೋಬರ್ 14ರಂದು ಬೆಳಿಗ್ಗೆ 8.30ರ ಸುಮಾರಿಗೆ ಮನೆಗೆ ಬಂದ ನಮ್ಮ ಅಳಿಯ ನಾಗರಾಜ, ಗ್ರಾಮದ ನಾಗನಗೌಡ ಅವರ ಹೊಲಕ್ಕೆ 8 ಗಂಟೆಯ ಸುಮಾರಿಗೆ ಮೇವು ತರಲು ಹೋದಾಗ ಮಗಳ ಶವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ತಿಳಿಸಿದರು. ನಾವು ಗಾಬರಿಯಿಂದ ಸ್ಥಳಕ್ಕೆ ಹೋಗಿ ನೋಡಿದಾಗ ಮಗಳ ಶವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನೇತಾಡುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ಕೆಳಗಿಳಿಸಿ ಆಂಬ್ಯುಲೆನ್ಸ್‌ನಲ್ಲಿ ವಿಜಯಪುರದ ಬಿಎಲ್‌ಡಿಇ ಆಸ್ಪತ್ರೆಯ ಶವಾಗಾರಕ್ಕೆ ಕಳಿಸಿದರು” ಎಂದು ಬಾಲಕಿಯ ಪೋಷಕರು ದೂರಿನಲ್ಲಿ ವಿವರಿಸಿದ್ದಾರೆ.

“ನಮ್ಮ ಮಗಳಿಗೆ ಪ್ರೀತಿಸುವಂತೆ ಕಿರುಕುಳ ನೀಡಿ ಆಕೆಯ ಸಾವಿಗೆ ಕಾರಣರಾದ ಮಾಳಿಂಗರಾಯ, ಆತನಿಗೆ ಸಹಕಾರ ನೀಡಿದ ಶಿವನಗೌಡ ಮತ್ತು ಜುಮ್ಮಣ್ಣ ದಳವಾಯಿ” ಇವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಶಂಕೆ

ಬಾಲಕಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆಯಿಂದೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ಈ ಕುರಿತು ನಾನುಗೌರಿ ಜೊತೆ ಮಾತನಾಡಿರುವ ದಲಿತ ಸಂಘರ್ಷ ಸಮಿತಿಯ (ಡಿಎಸ್‌ಎಸ್‌) ವಿ ನಾಗರಾಜ್ ಅವರು, ” ನಾವು ಬಾಲಕಿಯ ಮನೆಗೆ ಭೇಟಿ ನೀಡಿದ್ದೇವೆ. ಆಕೆಯ ಶವದ ಮೇಲೆ ಸುಟ್ಟ ಗಾಯಗಳಿತ್ತು. ಅಲ್ಲದೆ, ಕತ್ತಿನಲ್ಲಿ ತಾಳಿಯಿತ್ತು. ಆಕೆಯ ಮೇಲೆ ಮಾಳಿಂಗರಾಯ ಸೇರಿದಂತೆ ಯುವಕರು ಅತ್ಯಾಚಾರವೆಸಗಿ ಕೊಲೆಗೈದು, ಬಳಿಕ ಮರಕ್ಕೆ ನೇತು ಹಾಕಿರುವ ಶಂಕೆಯಿದೆ” ಎಂದಿದ್ದಾರೆ.

“ನಮಗೆ ದೊರೆತ ಮಾಹಿತಿ ಪ್ರಕಾರ ಬಾಲಕಿ ಮತ್ತು ಆರೋಪಿ ಮಾಳಿಂಗರಾಯ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ಗೊತ್ತಾಗಿ ಬಾಲಕಿಯ ಪೋಷಕರು ಆಕೆಗೆ ಎಚ್ಚರಿಕೆ ನೀಡಿದ್ದರು. ಅಲ್ಲದೆ, ಸಂಬಂಧಿ ಯುವಕನ ಜೊತೆ ಮದುವೆ ಮಾಡುವ ನಿರ್ಧಾರ ಮಾಡಿದ್ದರು. ಈ ವಿಚಾರ ಮಾಳಿಂಗರಾಯನಿಗೆ ಗೊತ್ತಾಗಿ ಇಬ್ಬರು ಓಡಿ ಹೋಗುವ ತೀರ್ಮಾನ ಮಾಡಿರಬಹುದು. ಬಾಲಕಿ ಆತನನ್ನು ನಂಬಿ ಮನೆಯಿಂದ ಹೊರ ಹೋಗಿರಬಹುದು. ಆದರೆ, ಬಾಲಕಿ ತನಗೆ ಸಿಗುವುದಿಲ್ಲ ಎಂದು ತಿಳಿದ ಮಾಳಿಂಗರಾಯ, ಆತನ ಸ್ನೇಹಿತರ ಜೊತೆಗೂಡಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು, ಬಳಿಕ ಮರಕ್ಕೆ ನೇತು ಹಾಕಿರಬಹುದು” ಎಂದು ಹೇಳಿದ್ದಾರೆ.

“ದೇವದಾಸಿ ಪದ್ದತಿಯಂತೆ ಯುವಕರು ಅತ್ಯಾಚಾರವೆಸಗುವ ಮುನ್ನ ಮಾಳಿಂಗರಾಯ ಆಕೆಯ ಕತ್ತಿಗೆ ತಾಳಿ ಕಟ್ಟಿರುವ ಶಂಕೆಯಿದೆ. ಬಾಲಕಿ ಪ್ರಿಯತಮ ಮಾಳಿಂಗರಾಯನ ನಂಬಿ ಮನೆಯಿಂದ ಹೋಗಿರಬಹುದು. ಆದರೆ, ಅಲ್ಲಿ ಮಾಳಿಂಗರಾಯ ತನ್ನ ಸ್ನೇಹಿತರ ಜೊತೆ ಸೇರಿ ಆಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಶಂಕೆಯಿದೆ” ಎಂದು ನಾಗರಾಜ್ ವಿವರಿಸಿದ್ದಾರೆ.

ಪೊಲೀಸರು ಎಫ್‌ಐಆರ್ ದಾಖಲಿಸಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಈ ಪ್ರಕರಣವನ್ನು ರಾಜ್ಯ ಮಟ್ಟಕ್ಕೆ ಕೊಂಡೊಯ್ದು ಉಗ್ರ ಹೋರಾಟ ಮಾಡಲಾಗುವುದು ಎಂದು ನಾಗರಾಜ್ ಎಚ್ಚರಿಸಿದ್ದಾರೆ.

ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ: ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ; ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...