Homeಕರ್ನಾಟಕನೇಣು ಬಿಗಿದ ಸ್ಥಿತಿಯಲ್ಲಿ ದಲಿತ ಬಾಲಕಿಯ ಶವ ಪತ್ತೆ: ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ

ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ಬಾಲಕಿಯ ಶವ ಪತ್ತೆ: ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ

- Advertisement -
- Advertisement -

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬನೋಶಿ ಗ್ರಾಮದ ಹೊಲವೊಂದರಲ್ಲಿ ದಲಿತ ಬಾಲಕಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮದ ಪ್ರಬಲ ಜಾತಿಯ ಯುವಕರು ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಬಾಲಕಿಯ ಪೋಷಕರು ನೀಡಿರುವ ದೂರಿನ ಪ್ರಕಾರ, ಅಕ್ಟೋಬರ್ 13ರಂದು ಸಂಜೆ 5 ಗಂಟೆಯ ಸುಮಾರಿಗೆ ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯ ಶವ, ಮರುದಿನ ಅಕ್ಟೋಬರ್ 14ರಂದು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಗ್ರಾಮದ ನಾಗನಗೌಡ ಎಂಬವರ ಹೊಲದ ಬೃಹತ್ ಗಾತ್ರದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

“ಗ್ರಾಮದ ಪ್ರಬಲ ಜಾತಿಗೆ ಸೇರಿದ (ಕುರುಬ) ಮಾಳಿಂಗರಾಯ ಎಂಬ ಯುವಕ ಕಳೆದ 2-3 ತಿಂಗಳಿನಿಂದ ನಮ್ಮ ಮಗಳ ಹಿಂದೆ ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದ. ಈ ವಿಷಯ ತಿಳಿದು ನಾವು ಆಕೆಯನ್ನು ಮನೆಯಲ್ಲೇ ಇರಿಸಿಕೊಂಡಿದ್ದೆವು. ನಮ್ಮ ಸಂಬಂಧಿ ಹುಡುಗನ ಜೊತೆ ಆಕೆಗೆ ಮದುವೆ ಮಾಡುವ ಬಗ್ಗೆ ತೀರ್ಮಾನಿಸಿದ್ದೆವು. ಈ ವಿಚಾರ ಮಾಳಿಂಗರಾಯನಿಗೆ ಗೊತ್ತಾಗಿತ್ತು. ಆ ಬಳಿಕ “ನನ್ನ ಬಿಟ್ಟು ಬೇರೆಯವರ ಜೊತೆ ನೀನು ಹೇಗೆ ಮದುವೆಯಾಗುತ್ತೀಯಾ ನೋಡುತ್ತೇನೆ, ನೀನು ನನ್ನನ್ನೇ ಪ್ರೀತಿಸಬೇಕು” ಎಂದು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದ. ಇದಕ್ಕೆ ಮಾಳಿಂಗರಾಯನಿಗೆ ಗ್ರಾಮದ ಶಿವನಗೌಡ ಎಂಬಾತ ಕುಮ್ಮಕ್ಕು ನೀಡುತ್ತಿದ್ದ ಎಂದು” ಬಾಲಕಿಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಅಕ್ಟೋಬರ್ 13ರಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಸಂತೆ ಮಾಡಿಕೊಂಡು ಬರುವ ಸಲುವಾಗಿ ನಾವು ಮುದ್ದೇಬಿಹಾಳಕ್ಕೆ ಹೋಗಿದ್ದೆವು. ಈ ವೇಳೆ ಮಗಳು ಮನೆಯಲ್ಲೇ ಇದ್ದಳು. ಸಂತೆ ಮುಗಿಸಿಕೊಂಡು ಸಂಜೆ 5 ಗಂಟೆಯ ಸುಮಾರಿಗೆ ಮನೆಗೆ ಬಂದಾಗ, ಮಗಳು ಮನೆಯಲ್ಲಿ ಇರಲಿಲ್ಲ. ನಾವು ಸುತ್ತಮುತ್ತಲಿನ ಜನರ ಬಳಿ ಮಗಳ ಬಗ್ಗೆ ವಿಚಾರಿಸಿದೆವು, ಊರಿನ ತುಂಬಾ ಆಕೆಗಾಗಿ ಹುಡುಕಾಡಿದೆವು. ಆದರೆ, ಆಕೆಯ ಸುಳಿವು ಸಿಗಲಿಲ್ಲ” ಎಂದು ತಿಳಿಸಿದ್ದಾರೆ.

“ಮರುದಿನ ಅಕ್ಟೋಬರ್ 14ರಂದು ಬೆಳಿಗ್ಗೆ 8.30ರ ಸುಮಾರಿಗೆ ಮನೆಗೆ ಬಂದ ನಮ್ಮ ಅಳಿಯ ನಾಗರಾಜ, ಗ್ರಾಮದ ನಾಗನಗೌಡ ಅವರ ಹೊಲಕ್ಕೆ 8 ಗಂಟೆಯ ಸುಮಾರಿಗೆ ಮೇವು ತರಲು ಹೋದಾಗ ಮಗಳ ಶವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ತಿಳಿಸಿದರು. ನಾವು ಗಾಬರಿಯಿಂದ ಸ್ಥಳಕ್ಕೆ ಹೋಗಿ ನೋಡಿದಾಗ ಮಗಳ ಶವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನೇತಾಡುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ಕೆಳಗಿಳಿಸಿ ಆಂಬ್ಯುಲೆನ್ಸ್‌ನಲ್ಲಿ ವಿಜಯಪುರದ ಬಿಎಲ್‌ಡಿಇ ಆಸ್ಪತ್ರೆಯ ಶವಾಗಾರಕ್ಕೆ ಕಳಿಸಿದರು” ಎಂದು ಬಾಲಕಿಯ ಪೋಷಕರು ದೂರಿನಲ್ಲಿ ವಿವರಿಸಿದ್ದಾರೆ.

“ನಮ್ಮ ಮಗಳಿಗೆ ಪ್ರೀತಿಸುವಂತೆ ಕಿರುಕುಳ ನೀಡಿ ಆಕೆಯ ಸಾವಿಗೆ ಕಾರಣರಾದ ಮಾಳಿಂಗರಾಯ, ಆತನಿಗೆ ಸಹಕಾರ ನೀಡಿದ ಶಿವನಗೌಡ ಮತ್ತು ಜುಮ್ಮಣ್ಣ ದಳವಾಯಿ” ಇವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಶಂಕೆ

ಬಾಲಕಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆಯಿಂದೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ಈ ಕುರಿತು ನಾನುಗೌರಿ ಜೊತೆ ಮಾತನಾಡಿರುವ ದಲಿತ ಸಂಘರ್ಷ ಸಮಿತಿಯ (ಡಿಎಸ್‌ಎಸ್‌) ವಿ ನಾಗರಾಜ್ ಅವರು, ” ನಾವು ಬಾಲಕಿಯ ಮನೆಗೆ ಭೇಟಿ ನೀಡಿದ್ದೇವೆ. ಆಕೆಯ ಶವದ ಮೇಲೆ ಸುಟ್ಟ ಗಾಯಗಳಿತ್ತು. ಅಲ್ಲದೆ, ಕತ್ತಿನಲ್ಲಿ ತಾಳಿಯಿತ್ತು. ಆಕೆಯ ಮೇಲೆ ಮಾಳಿಂಗರಾಯ ಸೇರಿದಂತೆ ಯುವಕರು ಅತ್ಯಾಚಾರವೆಸಗಿ ಕೊಲೆಗೈದು, ಬಳಿಕ ಮರಕ್ಕೆ ನೇತು ಹಾಕಿರುವ ಶಂಕೆಯಿದೆ” ಎಂದಿದ್ದಾರೆ.

“ನಮಗೆ ದೊರೆತ ಮಾಹಿತಿ ಪ್ರಕಾರ ಬಾಲಕಿ ಮತ್ತು ಆರೋಪಿ ಮಾಳಿಂಗರಾಯ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ಗೊತ್ತಾಗಿ ಬಾಲಕಿಯ ಪೋಷಕರು ಆಕೆಗೆ ಎಚ್ಚರಿಕೆ ನೀಡಿದ್ದರು. ಅಲ್ಲದೆ, ಸಂಬಂಧಿ ಯುವಕನ ಜೊತೆ ಮದುವೆ ಮಾಡುವ ನಿರ್ಧಾರ ಮಾಡಿದ್ದರು. ಈ ವಿಚಾರ ಮಾಳಿಂಗರಾಯನಿಗೆ ಗೊತ್ತಾಗಿ ಇಬ್ಬರು ಓಡಿ ಹೋಗುವ ತೀರ್ಮಾನ ಮಾಡಿರಬಹುದು. ಬಾಲಕಿ ಆತನನ್ನು ನಂಬಿ ಮನೆಯಿಂದ ಹೊರ ಹೋಗಿರಬಹುದು. ಆದರೆ, ಬಾಲಕಿ ತನಗೆ ಸಿಗುವುದಿಲ್ಲ ಎಂದು ತಿಳಿದ ಮಾಳಿಂಗರಾಯ, ಆತನ ಸ್ನೇಹಿತರ ಜೊತೆಗೂಡಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು, ಬಳಿಕ ಮರಕ್ಕೆ ನೇತು ಹಾಕಿರಬಹುದು” ಎಂದು ಹೇಳಿದ್ದಾರೆ.

“ದೇವದಾಸಿ ಪದ್ದತಿಯಂತೆ ಯುವಕರು ಅತ್ಯಾಚಾರವೆಸಗುವ ಮುನ್ನ ಮಾಳಿಂಗರಾಯ ಆಕೆಯ ಕತ್ತಿಗೆ ತಾಳಿ ಕಟ್ಟಿರುವ ಶಂಕೆಯಿದೆ. ಬಾಲಕಿ ಪ್ರಿಯತಮ ಮಾಳಿಂಗರಾಯನ ನಂಬಿ ಮನೆಯಿಂದ ಹೋಗಿರಬಹುದು. ಆದರೆ, ಅಲ್ಲಿ ಮಾಳಿಂಗರಾಯ ತನ್ನ ಸ್ನೇಹಿತರ ಜೊತೆ ಸೇರಿ ಆಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಶಂಕೆಯಿದೆ” ಎಂದು ನಾಗರಾಜ್ ವಿವರಿಸಿದ್ದಾರೆ.

ಪೊಲೀಸರು ಎಫ್‌ಐಆರ್ ದಾಖಲಿಸಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಈ ಪ್ರಕರಣವನ್ನು ರಾಜ್ಯ ಮಟ್ಟಕ್ಕೆ ಕೊಂಡೊಯ್ದು ಉಗ್ರ ಹೋರಾಟ ಮಾಡಲಾಗುವುದು ಎಂದು ನಾಗರಾಜ್ ಎಚ್ಚರಿಸಿದ್ದಾರೆ.

ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ: ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ; ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...