Homeಕರ್ನಾಟಕನೇಣು ಬಿಗಿದ ಸ್ಥಿತಿಯಲ್ಲಿ ದಲಿತ ಬಾಲಕಿಯ ಶವ ಪತ್ತೆ: ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ

ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ಬಾಲಕಿಯ ಶವ ಪತ್ತೆ: ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ

- Advertisement -
- Advertisement -

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬನೋಶಿ ಗ್ರಾಮದ ಹೊಲವೊಂದರಲ್ಲಿ ದಲಿತ ಬಾಲಕಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮದ ಪ್ರಬಲ ಜಾತಿಯ ಯುವಕರು ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಬಾಲಕಿಯ ಪೋಷಕರು ನೀಡಿರುವ ದೂರಿನ ಪ್ರಕಾರ, ಅಕ್ಟೋಬರ್ 13ರಂದು ಸಂಜೆ 5 ಗಂಟೆಯ ಸುಮಾರಿಗೆ ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯ ಶವ, ಮರುದಿನ ಅಕ್ಟೋಬರ್ 14ರಂದು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಗ್ರಾಮದ ನಾಗನಗೌಡ ಎಂಬವರ ಹೊಲದ ಬೃಹತ್ ಗಾತ್ರದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

“ಗ್ರಾಮದ ಪ್ರಬಲ ಜಾತಿಗೆ ಸೇರಿದ (ಕುರುಬ) ಮಾಳಿಂಗರಾಯ ಎಂಬ ಯುವಕ ಕಳೆದ 2-3 ತಿಂಗಳಿನಿಂದ ನಮ್ಮ ಮಗಳ ಹಿಂದೆ ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದ. ಈ ವಿಷಯ ತಿಳಿದು ನಾವು ಆಕೆಯನ್ನು ಮನೆಯಲ್ಲೇ ಇರಿಸಿಕೊಂಡಿದ್ದೆವು. ನಮ್ಮ ಸಂಬಂಧಿ ಹುಡುಗನ ಜೊತೆ ಆಕೆಗೆ ಮದುವೆ ಮಾಡುವ ಬಗ್ಗೆ ತೀರ್ಮಾನಿಸಿದ್ದೆವು. ಈ ವಿಚಾರ ಮಾಳಿಂಗರಾಯನಿಗೆ ಗೊತ್ತಾಗಿತ್ತು. ಆ ಬಳಿಕ “ನನ್ನ ಬಿಟ್ಟು ಬೇರೆಯವರ ಜೊತೆ ನೀನು ಹೇಗೆ ಮದುವೆಯಾಗುತ್ತೀಯಾ ನೋಡುತ್ತೇನೆ, ನೀನು ನನ್ನನ್ನೇ ಪ್ರೀತಿಸಬೇಕು” ಎಂದು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದ. ಇದಕ್ಕೆ ಮಾಳಿಂಗರಾಯನಿಗೆ ಗ್ರಾಮದ ಶಿವನಗೌಡ ಎಂಬಾತ ಕುಮ್ಮಕ್ಕು ನೀಡುತ್ತಿದ್ದ ಎಂದು” ಬಾಲಕಿಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಅಕ್ಟೋಬರ್ 13ರಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಸಂತೆ ಮಾಡಿಕೊಂಡು ಬರುವ ಸಲುವಾಗಿ ನಾವು ಮುದ್ದೇಬಿಹಾಳಕ್ಕೆ ಹೋಗಿದ್ದೆವು. ಈ ವೇಳೆ ಮಗಳು ಮನೆಯಲ್ಲೇ ಇದ್ದಳು. ಸಂತೆ ಮುಗಿಸಿಕೊಂಡು ಸಂಜೆ 5 ಗಂಟೆಯ ಸುಮಾರಿಗೆ ಮನೆಗೆ ಬಂದಾಗ, ಮಗಳು ಮನೆಯಲ್ಲಿ ಇರಲಿಲ್ಲ. ನಾವು ಸುತ್ತಮುತ್ತಲಿನ ಜನರ ಬಳಿ ಮಗಳ ಬಗ್ಗೆ ವಿಚಾರಿಸಿದೆವು, ಊರಿನ ತುಂಬಾ ಆಕೆಗಾಗಿ ಹುಡುಕಾಡಿದೆವು. ಆದರೆ, ಆಕೆಯ ಸುಳಿವು ಸಿಗಲಿಲ್ಲ” ಎಂದು ತಿಳಿಸಿದ್ದಾರೆ.

“ಮರುದಿನ ಅಕ್ಟೋಬರ್ 14ರಂದು ಬೆಳಿಗ್ಗೆ 8.30ರ ಸುಮಾರಿಗೆ ಮನೆಗೆ ಬಂದ ನಮ್ಮ ಅಳಿಯ ನಾಗರಾಜ, ಗ್ರಾಮದ ನಾಗನಗೌಡ ಅವರ ಹೊಲಕ್ಕೆ 8 ಗಂಟೆಯ ಸುಮಾರಿಗೆ ಮೇವು ತರಲು ಹೋದಾಗ ಮಗಳ ಶವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ತಿಳಿಸಿದರು. ನಾವು ಗಾಬರಿಯಿಂದ ಸ್ಥಳಕ್ಕೆ ಹೋಗಿ ನೋಡಿದಾಗ ಮಗಳ ಶವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನೇತಾಡುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ಕೆಳಗಿಳಿಸಿ ಆಂಬ್ಯುಲೆನ್ಸ್‌ನಲ್ಲಿ ವಿಜಯಪುರದ ಬಿಎಲ್‌ಡಿಇ ಆಸ್ಪತ್ರೆಯ ಶವಾಗಾರಕ್ಕೆ ಕಳಿಸಿದರು” ಎಂದು ಬಾಲಕಿಯ ಪೋಷಕರು ದೂರಿನಲ್ಲಿ ವಿವರಿಸಿದ್ದಾರೆ.

“ನಮ್ಮ ಮಗಳಿಗೆ ಪ್ರೀತಿಸುವಂತೆ ಕಿರುಕುಳ ನೀಡಿ ಆಕೆಯ ಸಾವಿಗೆ ಕಾರಣರಾದ ಮಾಳಿಂಗರಾಯ, ಆತನಿಗೆ ಸಹಕಾರ ನೀಡಿದ ಶಿವನಗೌಡ ಮತ್ತು ಜುಮ್ಮಣ್ಣ ದಳವಾಯಿ” ಇವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಶಂಕೆ

ಬಾಲಕಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆಯಿಂದೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ಈ ಕುರಿತು ನಾನುಗೌರಿ ಜೊತೆ ಮಾತನಾಡಿರುವ ದಲಿತ ಸಂಘರ್ಷ ಸಮಿತಿಯ (ಡಿಎಸ್‌ಎಸ್‌) ವಿ ನಾಗರಾಜ್ ಅವರು, ” ನಾವು ಬಾಲಕಿಯ ಮನೆಗೆ ಭೇಟಿ ನೀಡಿದ್ದೇವೆ. ಆಕೆಯ ಶವದ ಮೇಲೆ ಸುಟ್ಟ ಗಾಯಗಳಿತ್ತು. ಅಲ್ಲದೆ, ಕತ್ತಿನಲ್ಲಿ ತಾಳಿಯಿತ್ತು. ಆಕೆಯ ಮೇಲೆ ಮಾಳಿಂಗರಾಯ ಸೇರಿದಂತೆ ಯುವಕರು ಅತ್ಯಾಚಾರವೆಸಗಿ ಕೊಲೆಗೈದು, ಬಳಿಕ ಮರಕ್ಕೆ ನೇತು ಹಾಕಿರುವ ಶಂಕೆಯಿದೆ” ಎಂದಿದ್ದಾರೆ.

“ನಮಗೆ ದೊರೆತ ಮಾಹಿತಿ ಪ್ರಕಾರ ಬಾಲಕಿ ಮತ್ತು ಆರೋಪಿ ಮಾಳಿಂಗರಾಯ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ಗೊತ್ತಾಗಿ ಬಾಲಕಿಯ ಪೋಷಕರು ಆಕೆಗೆ ಎಚ್ಚರಿಕೆ ನೀಡಿದ್ದರು. ಅಲ್ಲದೆ, ಸಂಬಂಧಿ ಯುವಕನ ಜೊತೆ ಮದುವೆ ಮಾಡುವ ನಿರ್ಧಾರ ಮಾಡಿದ್ದರು. ಈ ವಿಚಾರ ಮಾಳಿಂಗರಾಯನಿಗೆ ಗೊತ್ತಾಗಿ ಇಬ್ಬರು ಓಡಿ ಹೋಗುವ ತೀರ್ಮಾನ ಮಾಡಿರಬಹುದು. ಬಾಲಕಿ ಆತನನ್ನು ನಂಬಿ ಮನೆಯಿಂದ ಹೊರ ಹೋಗಿರಬಹುದು. ಆದರೆ, ಬಾಲಕಿ ತನಗೆ ಸಿಗುವುದಿಲ್ಲ ಎಂದು ತಿಳಿದ ಮಾಳಿಂಗರಾಯ, ಆತನ ಸ್ನೇಹಿತರ ಜೊತೆಗೂಡಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು, ಬಳಿಕ ಮರಕ್ಕೆ ನೇತು ಹಾಕಿರಬಹುದು” ಎಂದು ಹೇಳಿದ್ದಾರೆ.

“ದೇವದಾಸಿ ಪದ್ದತಿಯಂತೆ ಯುವಕರು ಅತ್ಯಾಚಾರವೆಸಗುವ ಮುನ್ನ ಮಾಳಿಂಗರಾಯ ಆಕೆಯ ಕತ್ತಿಗೆ ತಾಳಿ ಕಟ್ಟಿರುವ ಶಂಕೆಯಿದೆ. ಬಾಲಕಿ ಪ್ರಿಯತಮ ಮಾಳಿಂಗರಾಯನ ನಂಬಿ ಮನೆಯಿಂದ ಹೋಗಿರಬಹುದು. ಆದರೆ, ಅಲ್ಲಿ ಮಾಳಿಂಗರಾಯ ತನ್ನ ಸ್ನೇಹಿತರ ಜೊತೆ ಸೇರಿ ಆಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಶಂಕೆಯಿದೆ” ಎಂದು ನಾಗರಾಜ್ ವಿವರಿಸಿದ್ದಾರೆ.

ಪೊಲೀಸರು ಎಫ್‌ಐಆರ್ ದಾಖಲಿಸಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಈ ಪ್ರಕರಣವನ್ನು ರಾಜ್ಯ ಮಟ್ಟಕ್ಕೆ ಕೊಂಡೊಯ್ದು ಉಗ್ರ ಹೋರಾಟ ಮಾಡಲಾಗುವುದು ಎಂದು ನಾಗರಾಜ್ ಎಚ್ಚರಿಸಿದ್ದಾರೆ.

ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ: ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ; ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...