Homeದಲಿತ್ ಫೈಲ್ಸ್ಡಿಎಂಕೆ ಕೌನ್ಸಿಲರ್ ಕಾಲಿಗೆ ಬಿದ್ದ ದಲಿತ ಸಮುದಾಯದ ಸರ್ಕಾರಿ ಸಿಬ್ಬಂದಿ; ಐವರ ವಿರುದ್ಧ ಪ್ರಕರಣ ದಾಖಲು

ಡಿಎಂಕೆ ಕೌನ್ಸಿಲರ್ ಕಾಲಿಗೆ ಬಿದ್ದ ದಲಿತ ಸಮುದಾಯದ ಸರ್ಕಾರಿ ಸಿಬ್ಬಂದಿ; ಐವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ತಮಿಳುನಾಡಿನ ವಿಲ್ಲುಪುರಂನ ಟಿಂಡಿವನಂ ಪುರಸಭೆ ಆಯುಕ್ತರ ಕಚೇರಿಯಲ್ಲಿ ಕ್ಷಮೆ ಕೋರುವ ನೆಪದಲ್ಲಿ ‘ಎಂಬಿಸಿ’ ಸಮುದಾಯಕ್ಕೆ ಸೇರಿದ ಡಿಎಂಕೆ ಕೌನ್ಸಿಲರ್ ಆರ್. ರಮ್ಯಾ ಅವರ ಕಾಲಿಗೆ ಬಿದ್ದಿರುವ ದಲಿತ ಕಂದಾಯ ಸಹಾಯಕ ಎಸ್ ಮುನಿಯಪ್ಪನ್ (30) ಅವರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೊ ವೈರಲ್ ಆದ ನಂತರ ವಿವಾದ ಭುಗಿಲೆದ್ದಿದೆ.

ಟಿಂಡಿವನಂ ಪೊಲೀಸರು ರಮ್ಯಾ, ಅವರ ಪತಿ ಮರೂರ್ ರಾಜ, ರವಿಚಂದ್ರನ್ (ಪುರಸಭೆ ಅಧ್ಯಕ್ಷರ ಪತಿ), ಕಾಮರಾಜ್ ಮತ್ತು ಬಿರ್ಲಾ ಸೆಲ್ವಂ ಸೇರಿದಂತೆ ಐದು ಜನರ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಟಿಂಡಿವನಂನ ಉಪ ಪೊಲೀಸ್ ವರಿಷ್ಠಾಧಿಕಾರಿಗೆ ಮುನಿಯಪ್ಪನ್ ನೀಡಿದ ದೂರಿನಲ್ಲಿ, “ಆಗಸ್ಟ್ 29 ರಂದು, ಪುರಸಭೆ ಆಯುಕ್ತರು ಕೇಳಿದ ಫೈಲ್ ಅನ್ನು ನಾನು ಹುಡುಕುತ್ತಿದ್ದಾಗ, ವಾರ್ಡ್ 20ರ ಕೌನ್ಸಿಲರ್ ರಮ್ಯಾ ಕೋಣೆಗೆ ಪ್ರವೇಶಿಸಿ ಫೈಲ್ ಸಿಗದಿದ್ದಕ್ಕೆ ನನ್ನೊಂದಿಗೆ ಕೆಟ್ಟದಾಗಿ ಮಾತನಾಡಿದರು. ನಂತರದ ಇಬ್ಬರ ನಡುವೆ ವಾಗ್ವಾದ ನಡೆದು, ಅವರ ವಿರುದ್ಧ ಮಾತನಾಡಿದ್ದಕ್ಕಾಗಿ ನನಗೆ ಬೆದರಿಕೆ ಹಾಕಿದರು” ಎಂದರು.

ನಂತರ, ರಮ್ಯಾ ಅವರು ಮುನಿಯಪ್ಪನ್ ಅವರ ‘ದುರ್ವರ್ತನೆ’ಯ ಬಗ್ಗೆ ಆಯುಕ್ತರಿಗೆ ದೂರು ನೀಡಿದರು. ಆಯುಕ್ತರು ಅವರ ವಿರುದ್ಧ ಕ್ರಮ ಕೈಗೊಳ್ಳಲು ಲಿಖಿತ ದೂರು ಕೇಳಿದ್ದರು. ಆದರೂ, ಅದೇ ದಿನ ಸಂಜೆ 4 ಗಂಟೆಯ ಹೊತ್ತಿಗೆ, ರಮ್ಯಾ ಮತ್ತು ಅವರ ಪತಿ ಮರೂರ್ ರಾಜ, ರವಿಚಂದ್ರನ್ ಮತ್ತು ಇತರರು ಸಮಸ್ಯೆಯನ್ನು ಇತ್ಯರ್ಥಪಡಿಸಲು ಮುನಿಯಪ್ಪನ್ ಅವರನ್ನು ಆಯುಕ್ತರ ಕೊಠಡಿಗೆ ಕರೆಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಭೆಯಲ್ಲಿ, ರವಿಚಂದ್ರನ್ ಮತ್ತು ರಮ್ಯಾ ಅವರು ಮುನಿಯಪ್ಪನ್ ಅವರನ್ನು ಸೇವೆಯಿಂದ ತೆಗೆದುಹಾಕುವಂತೆ ಬೆದರಿಕೆ ಹಾಕಿದರು, ರಮ್ಯಾ ಅವರ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು.

“ರವಿಚಂದ್ರನ್ ಅವರ ಒತ್ತಡದಿಂದಾಗಿ ನಾನು ಮಂಡಿಯೂರಿ ಕ್ಷಮೆಯಾಚಿಸಬೇಕಾಯಿತು. ಆದ್ದರಿಂದ, ನಾನು ರಮ್ಯಾ ಅವರ ಕಾಲಿಗೆ ಬಿದ್ದು ಕ್ಷಮೆಯಾಚಿಸುವಂತೆ ಒತ್ತಾಯಿಸಿದೆ” ಎಂದು ಮುನಿಯಪ್ಪನ್ ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮಂಗಳವಾರ ಪಕ್ಷಾತೀತವಾಗಿ (ಡಿಎಂಕೆ, ಎಐಎಡಿಎಂಕೆ ಮತ್ತು ವಿಸಿಕೆ) ಆಕ್ರೋಶಗೊಂಡ ಕೌನ್ಸಿಲರ್‌ಗಳ ಗುಂಪು ನಗರಸಭೆ ಅಧಿಕಾರಿಗಳು ಮತ್ತು ತಿಂಡಿವನಂ ಡಿಎಸ್‌ಪಿ ಕೆ ಪ್ರಕಾಶ್ ಅವರಿಗೆ ಜಂಟಿಯಾಗಿ ಮನವಿ ಸಲ್ಲಿಸಿದರು. ಬಳಿಕ ಈ ಘಟನೆ ಮುನ್ನಲೆಗೆ ಬಂದಿದೆ. ಕೌನ್ಸಿಲರ್ ರಮ್ಯಾ ಮತ್ತು ರವಿಚಂದ್ರನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.

“ಅಧ್ಯಕ್ಷೆಯ ಪತಿ ರವಿಚಂದ್ರನ್ ಹೇಗೆ ತಾನೂ ಒಬ್ಬ ಸದಸ್ಯನಂತೆ ವರ್ತಿಸಬಹುದು? ಇದಲ್ಲದೆ, ರಾಜಾ ಅವರ ಪತ್ನಿ ರಮ್ಯಾ ಅವರು ಕಾರ್ಮಿಕರೊಂದಿಗೆ ಗಲಾಟೆ ಮಾಡುವ ಇತಿಹಾಸವನ್ನು ಹೊಂದಿದ್ದಾರೆ. ಆದರೆ ದಂಪತಿಗಳ ರಾಜಕೀಯ ಸಂಪರ್ಕಗಳಿಂದಾಗಿ ಅವರನ್ನು ಎಂದಿಗೂ ಹೊಣೆಗಾರರನ್ನಾಗಿ ಮಾಡಲಾಗಿಲ್ಲ” ಎಂದು ವಿಸಿಕೆ ವಾರ್ಡ್ ಸದಸ್ಯೆ ವಿ.ರಾಜಲಕ್ಷ್ಮಿ ಹೇಳಿದರು.

ಯುಪಿ| ದಲಿತ ಬಾಲಕಿ ಅಪಹರಿಸಿ ಅತ್ಯಾಚಾರ-ಕೊಲೆ; 50 ವರ್ಷದ ವ್ಯಕ್ತಿಗೆ ಮರಣದಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...