Homeದಲಿತ್ ಫೈಲ್ಸ್ಡಿಎಂಕೆ ಕೌನ್ಸಿಲರ್ ಕಾಲಿಗೆ ಬಿದ್ದ ದಲಿತ ಸಮುದಾಯದ ಸರ್ಕಾರಿ ಸಿಬ್ಬಂದಿ; ಐವರ ವಿರುದ್ಧ ಪ್ರಕರಣ ದಾಖಲು

ಡಿಎಂಕೆ ಕೌನ್ಸಿಲರ್ ಕಾಲಿಗೆ ಬಿದ್ದ ದಲಿತ ಸಮುದಾಯದ ಸರ್ಕಾರಿ ಸಿಬ್ಬಂದಿ; ಐವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ತಮಿಳುನಾಡಿನ ವಿಲ್ಲುಪುರಂನ ಟಿಂಡಿವನಂ ಪುರಸಭೆ ಆಯುಕ್ತರ ಕಚೇರಿಯಲ್ಲಿ ಕ್ಷಮೆ ಕೋರುವ ನೆಪದಲ್ಲಿ ‘ಎಂಬಿಸಿ’ ಸಮುದಾಯಕ್ಕೆ ಸೇರಿದ ಡಿಎಂಕೆ ಕೌನ್ಸಿಲರ್ ಆರ್. ರಮ್ಯಾ ಅವರ ಕಾಲಿಗೆ ಬಿದ್ದಿರುವ ದಲಿತ ಕಂದಾಯ ಸಹಾಯಕ ಎಸ್ ಮುನಿಯಪ್ಪನ್ (30) ಅವರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೊ ವೈರಲ್ ಆದ ನಂತರ ವಿವಾದ ಭುಗಿಲೆದ್ದಿದೆ.

ಟಿಂಡಿವನಂ ಪೊಲೀಸರು ರಮ್ಯಾ, ಅವರ ಪತಿ ಮರೂರ್ ರಾಜ, ರವಿಚಂದ್ರನ್ (ಪುರಸಭೆ ಅಧ್ಯಕ್ಷರ ಪತಿ), ಕಾಮರಾಜ್ ಮತ್ತು ಬಿರ್ಲಾ ಸೆಲ್ವಂ ಸೇರಿದಂತೆ ಐದು ಜನರ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಟಿಂಡಿವನಂನ ಉಪ ಪೊಲೀಸ್ ವರಿಷ್ಠಾಧಿಕಾರಿಗೆ ಮುನಿಯಪ್ಪನ್ ನೀಡಿದ ದೂರಿನಲ್ಲಿ, “ಆಗಸ್ಟ್ 29 ರಂದು, ಪುರಸಭೆ ಆಯುಕ್ತರು ಕೇಳಿದ ಫೈಲ್ ಅನ್ನು ನಾನು ಹುಡುಕುತ್ತಿದ್ದಾಗ, ವಾರ್ಡ್ 20ರ ಕೌನ್ಸಿಲರ್ ರಮ್ಯಾ ಕೋಣೆಗೆ ಪ್ರವೇಶಿಸಿ ಫೈಲ್ ಸಿಗದಿದ್ದಕ್ಕೆ ನನ್ನೊಂದಿಗೆ ಕೆಟ್ಟದಾಗಿ ಮಾತನಾಡಿದರು. ನಂತರದ ಇಬ್ಬರ ನಡುವೆ ವಾಗ್ವಾದ ನಡೆದು, ಅವರ ವಿರುದ್ಧ ಮಾತನಾಡಿದ್ದಕ್ಕಾಗಿ ನನಗೆ ಬೆದರಿಕೆ ಹಾಕಿದರು” ಎಂದರು.

ನಂತರ, ರಮ್ಯಾ ಅವರು ಮುನಿಯಪ್ಪನ್ ಅವರ ‘ದುರ್ವರ್ತನೆ’ಯ ಬಗ್ಗೆ ಆಯುಕ್ತರಿಗೆ ದೂರು ನೀಡಿದರು. ಆಯುಕ್ತರು ಅವರ ವಿರುದ್ಧ ಕ್ರಮ ಕೈಗೊಳ್ಳಲು ಲಿಖಿತ ದೂರು ಕೇಳಿದ್ದರು. ಆದರೂ, ಅದೇ ದಿನ ಸಂಜೆ 4 ಗಂಟೆಯ ಹೊತ್ತಿಗೆ, ರಮ್ಯಾ ಮತ್ತು ಅವರ ಪತಿ ಮರೂರ್ ರಾಜ, ರವಿಚಂದ್ರನ್ ಮತ್ತು ಇತರರು ಸಮಸ್ಯೆಯನ್ನು ಇತ್ಯರ್ಥಪಡಿಸಲು ಮುನಿಯಪ್ಪನ್ ಅವರನ್ನು ಆಯುಕ್ತರ ಕೊಠಡಿಗೆ ಕರೆಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಭೆಯಲ್ಲಿ, ರವಿಚಂದ್ರನ್ ಮತ್ತು ರಮ್ಯಾ ಅವರು ಮುನಿಯಪ್ಪನ್ ಅವರನ್ನು ಸೇವೆಯಿಂದ ತೆಗೆದುಹಾಕುವಂತೆ ಬೆದರಿಕೆ ಹಾಕಿದರು, ರಮ್ಯಾ ಅವರ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು.

“ರವಿಚಂದ್ರನ್ ಅವರ ಒತ್ತಡದಿಂದಾಗಿ ನಾನು ಮಂಡಿಯೂರಿ ಕ್ಷಮೆಯಾಚಿಸಬೇಕಾಯಿತು. ಆದ್ದರಿಂದ, ನಾನು ರಮ್ಯಾ ಅವರ ಕಾಲಿಗೆ ಬಿದ್ದು ಕ್ಷಮೆಯಾಚಿಸುವಂತೆ ಒತ್ತಾಯಿಸಿದೆ” ಎಂದು ಮುನಿಯಪ್ಪನ್ ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮಂಗಳವಾರ ಪಕ್ಷಾತೀತವಾಗಿ (ಡಿಎಂಕೆ, ಎಐಎಡಿಎಂಕೆ ಮತ್ತು ವಿಸಿಕೆ) ಆಕ್ರೋಶಗೊಂಡ ಕೌನ್ಸಿಲರ್‌ಗಳ ಗುಂಪು ನಗರಸಭೆ ಅಧಿಕಾರಿಗಳು ಮತ್ತು ತಿಂಡಿವನಂ ಡಿಎಸ್‌ಪಿ ಕೆ ಪ್ರಕಾಶ್ ಅವರಿಗೆ ಜಂಟಿಯಾಗಿ ಮನವಿ ಸಲ್ಲಿಸಿದರು. ಬಳಿಕ ಈ ಘಟನೆ ಮುನ್ನಲೆಗೆ ಬಂದಿದೆ. ಕೌನ್ಸಿಲರ್ ರಮ್ಯಾ ಮತ್ತು ರವಿಚಂದ್ರನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.

“ಅಧ್ಯಕ್ಷೆಯ ಪತಿ ರವಿಚಂದ್ರನ್ ಹೇಗೆ ತಾನೂ ಒಬ್ಬ ಸದಸ್ಯನಂತೆ ವರ್ತಿಸಬಹುದು? ಇದಲ್ಲದೆ, ರಾಜಾ ಅವರ ಪತ್ನಿ ರಮ್ಯಾ ಅವರು ಕಾರ್ಮಿಕರೊಂದಿಗೆ ಗಲಾಟೆ ಮಾಡುವ ಇತಿಹಾಸವನ್ನು ಹೊಂದಿದ್ದಾರೆ. ಆದರೆ ದಂಪತಿಗಳ ರಾಜಕೀಯ ಸಂಪರ್ಕಗಳಿಂದಾಗಿ ಅವರನ್ನು ಎಂದಿಗೂ ಹೊಣೆಗಾರರನ್ನಾಗಿ ಮಾಡಲಾಗಿಲ್ಲ” ಎಂದು ವಿಸಿಕೆ ವಾರ್ಡ್ ಸದಸ್ಯೆ ವಿ.ರಾಜಲಕ್ಷ್ಮಿ ಹೇಳಿದರು.

ಯುಪಿ| ದಲಿತ ಬಾಲಕಿ ಅಪಹರಿಸಿ ಅತ್ಯಾಚಾರ-ಕೊಲೆ; 50 ವರ್ಷದ ವ್ಯಕ್ತಿಗೆ ಮರಣದಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...