Homeಮುಖಪುಟಆಗ್ರಾದಲ್ಲಿ ಮದುವೆ ಮೆರವಣಿಗೆಯ ವೇಳೆ ದಲಿತ ವರನ ಮೇಲೆ 40 ಸವರ್ಣೀಯರಿಂದ ಹಲ್ಲೆ: ಹಲವರಿಗೆ ಗಾಯ

ಆಗ್ರಾದಲ್ಲಿ ಮದುವೆ ಮೆರವಣಿಗೆಯ ವೇಳೆ ದಲಿತ ವರನ ಮೇಲೆ 40 ಸವರ್ಣೀಯರಿಂದ ಹಲ್ಲೆ: ಹಲವರಿಗೆ ಗಾಯ

- Advertisement -
- Advertisement -

ಆಗ್ರಾ: ಆಗ್ರಾದ ನಾಗ್ಲಾ ತಾಲ್ಫಿ ಪ್ರದೇಶದಲ್ಲಿ ಮದುವೆ ಮೆರವಣಿಗೆಯ ವೇಳೆ ಸುಮಾರು 40  “ಮೇಲ್ಜಾತಿಯ” ಜನರ ಗುಂಪಿನಿಂದ ದಲಿತ ವರನ ಮೇಲೆ ಹಲ್ಲೆ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಈ ಘಟನೆ ಆಗ್ರಾ ಜಿಲ್ಲೆಯ ಖಂಡೌಲಿ ಪ್ರದೇಶದ ಗರ್ಹಿ ರಮ್ಮಿ ಗ್ರಾಮದಲ್ಲಿ ನಡೆದಿದೆ. 22 ವರ್ಷದ ವರ ರೋಹಿತ್ ಕುಮಾರ್ ಎಂಬಾತನನ್ನು ಕುದುರೆಯಿಂದ ಎಳೆದು, ನಿಂದಿಸಿ, ಥಳಿಸಿ, ಅವನ ಚಿನ್ನದ ಸರವನ್ನು ಬಲವಂತವಾಗಿ ಕಿತ್ತುಕೊಂಡಿದ್ದಾರೆ.

ಈ ಘಟನೆಯಿಂದ ಮದುವೆ ತಂಡದ ಹಲವಾರು ಸದಸ್ಯರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಆರೋಪಿಗಳು ದೊಣ್ಣೆಗಳು ಮತ್ತು ಹರಿತವಾದ ವಸ್ತುಗಳೊಂದಿಗೆ ಮನೆಗಳಿಂದ ಹೊರಬಂದಿದ್ದು, ವರನ ಕುಟುಂಬ ಮತ್ತು ಅತಿಥಿಗಳಲ್ಲಿ ಭಯಭೀತಿ ಮೂಡಿಸಿದೆ. ಕೆಲವು ಅತಿಥಿಗಳು ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ದಾಳಿಯ ನಂತರ ಸಂಗೀತ ಮತ್ತು ದೀಪಗಳನ್ನು ತ್ವರಿತವಾಗಿ ಆಫ್ ಮಾಡಿ ಭಯದಿಂದ ಮದುವೆ ಮಂಟಪಕ್ಕೆ ಧಾವಿಸಿದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಇಲ್ಲಿಯವರೆಗೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ.

ನಾಗ್ಲಾ ತಾಲ್ಫಿ ನಿವಾಸಿ ಅನಿತಾ ನೀಡಿದ ದೂರಿನ ಪ್ರಕಾರ, ಬುಧವಾರ ಸಂಜೆ ಮಥುರಾದಿಂದ ಅವರ ಮಗಳ ಮದುವೆ ಮೆರವಣಿಗೆ ಬಂದಾಗ ಈ ಘಟನೆ ನಡೆದಿದೆ. ನಂತರ ಮದುವೆ ಗ್ರಾಮದಿಂದ ಸ್ವಲ್ಪ ದೂರದಲ್ಲಿರುವ ಮದುವೆ ಮನೆಯಲ್ಲಿ ನಡೆಯಬೇಕಿತ್ತು ಎಂದು ದೂರಿನಲ್ಲಿ ಹೇಳಿದೆ.

ಡಿಜೆ ಸಂಗೀತದೊಂದಿಗೆ ಮೆರವಣಿಗೆ ರಸ್ತೆಯಲ್ಲಿ ಸಾಗುತ್ತಿದ್ದಂತೆ, “ಮೇಲ್ಜಾತಿಯ” ಸುಮಾರು 40 ಜನರ ಗುಂಪು ಕೋಲು ಮತ್ತು ಲಾಠಿಗಳೊಂದಿಗೆ ಬಂದು ವರ ಮತ್ತು ಇತರ ಹಲವರ ಮೇಲೆ ಹಲ್ಲೆ ನಡೆಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದಾಳಿಕೋರರು ವರ ಮತ್ತು ಮದುವೆಯ ಕಡೆಯ ಹಲವಾರು ಸದಸ್ಯರನ್ನು ಥಳಿಸಿದ್ದಾರೆ. ಹಲ್ಲೆಯಿಂದಾಗಿ, ಮದುವೆ ಸ್ಥಳದಲ್ಲಿ ಯಾವುದೇ ಆಚರಣೆಗಳನ್ನು ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.

ಇಡೀ ಸಮಾರಂಭವನ್ನು ಸ್ಥಳಾಂತರಿಸಿ, ನಮ್ಮ ಮನೆಯಲ್ಲಿ ನಡೆಸಬೇಕಾಯಿತು ಎಂದು ಅನಿತಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ದಾಳಿಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಪಿ.ಕೆ. ರೈ ಹೇಳಿದ್ದಾರೆ.

ವಧುವಿನ ತಾಯಿ ನೀಡಿದ ದೂರಿನ ಮೇರೆಗೆ ಬಿಎನ್‌ಎಸ್ ಸೆಕ್ಷನ್ 191-3 (ಆಯುಧಗಳಿಂದ ಗಲಭೆ), 190 (ಕಾನೂನುಬಾಹಿರ ಸಭೆ), 115-1 (ಗಾಯ ಉಂಟುಮಾಡುವುದು), 127 (ಅಕ್ರಮವಾಗಿ ಬಂಧಿಸುವುದು), 74 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲವಂತ), 352 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಜಿತ್ ತೋಮರ್, ಅಜಯ್ ತೋಮರ್, ಸೌರಭ್ ತೋಮರ್ ಮತ್ತು ಪ್ರದೀಪ್ ತೋಮರ್ ಮತ್ತು ಅವರ ಸಹಾಯಕರು ಮತ್ತು 20 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ” ಎಂದು ಎಸ್‌ಎಚ್‌ಒ ಆನಂದ್ ವೀರ್ ತಿಳಿಸಿದ್ದಾರೆ.

ದಾಳಿಗೆ ಸಂಬಂಧಿಸಿದಂತೆ ಅಜಿತ್ ತೋಮರ್, ಅಜಯ್ ತೋಮರ್, ಸೌರಭ್ ತೋಮರ್ ಮತ್ತು ಪ್ರದೀಪ್ ತೋಮರ್ ಮತ್ತು ಅವರ ಸಹಾಯಕರು ಸೇರಿದಂತೆ 29 ಮಂದಿಗಳ ವಿರುದ್ಧ ದೂರು ನೀಡಲಾಗಿದೆ. ಇದರಲ್ಲಿ  20 ಅಪರಿಚಿತ ವ್ಯಕ್ತಿಗಳು ಸೇರಿದ್ದಾರೆ ಎಂದು ಅವರು ಹೇಳಿದರು.

ಮಾಂಸಾಹಾರಿಗಳು “ಕೊಳಕರು” ಎಂದು ಕರೆದಿದ್ದಕ್ಕೆ ಅಪಾರ್ಟ್‌ಮೆಂಟ್ ನಲ್ಲಿ ಉದ್ವಿಗ್ನತೆ: ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...