Homeಮುಖಪುಟಆಗ್ರಾದಲ್ಲಿ ಮದುವೆ ಮೆರವಣಿಗೆಯ ವೇಳೆ ದಲಿತ ವರನ ಮೇಲೆ 40 ಸವರ್ಣೀಯರಿಂದ ಹಲ್ಲೆ: ಹಲವರಿಗೆ ಗಾಯ

ಆಗ್ರಾದಲ್ಲಿ ಮದುವೆ ಮೆರವಣಿಗೆಯ ವೇಳೆ ದಲಿತ ವರನ ಮೇಲೆ 40 ಸವರ್ಣೀಯರಿಂದ ಹಲ್ಲೆ: ಹಲವರಿಗೆ ಗಾಯ

- Advertisement -
- Advertisement -

ಆಗ್ರಾ: ಆಗ್ರಾದ ನಾಗ್ಲಾ ತಾಲ್ಫಿ ಪ್ರದೇಶದಲ್ಲಿ ಮದುವೆ ಮೆರವಣಿಗೆಯ ವೇಳೆ ಸುಮಾರು 40  “ಮೇಲ್ಜಾತಿಯ” ಜನರ ಗುಂಪಿನಿಂದ ದಲಿತ ವರನ ಮೇಲೆ ಹಲ್ಲೆ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಈ ಘಟನೆ ಆಗ್ರಾ ಜಿಲ್ಲೆಯ ಖಂಡೌಲಿ ಪ್ರದೇಶದ ಗರ್ಹಿ ರಮ್ಮಿ ಗ್ರಾಮದಲ್ಲಿ ನಡೆದಿದೆ. 22 ವರ್ಷದ ವರ ರೋಹಿತ್ ಕುಮಾರ್ ಎಂಬಾತನನ್ನು ಕುದುರೆಯಿಂದ ಎಳೆದು, ನಿಂದಿಸಿ, ಥಳಿಸಿ, ಅವನ ಚಿನ್ನದ ಸರವನ್ನು ಬಲವಂತವಾಗಿ ಕಿತ್ತುಕೊಂಡಿದ್ದಾರೆ.

ಈ ಘಟನೆಯಿಂದ ಮದುವೆ ತಂಡದ ಹಲವಾರು ಸದಸ್ಯರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಆರೋಪಿಗಳು ದೊಣ್ಣೆಗಳು ಮತ್ತು ಹರಿತವಾದ ವಸ್ತುಗಳೊಂದಿಗೆ ಮನೆಗಳಿಂದ ಹೊರಬಂದಿದ್ದು, ವರನ ಕುಟುಂಬ ಮತ್ತು ಅತಿಥಿಗಳಲ್ಲಿ ಭಯಭೀತಿ ಮೂಡಿಸಿದೆ. ಕೆಲವು ಅತಿಥಿಗಳು ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ದಾಳಿಯ ನಂತರ ಸಂಗೀತ ಮತ್ತು ದೀಪಗಳನ್ನು ತ್ವರಿತವಾಗಿ ಆಫ್ ಮಾಡಿ ಭಯದಿಂದ ಮದುವೆ ಮಂಟಪಕ್ಕೆ ಧಾವಿಸಿದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಇಲ್ಲಿಯವರೆಗೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ.

ನಾಗ್ಲಾ ತಾಲ್ಫಿ ನಿವಾಸಿ ಅನಿತಾ ನೀಡಿದ ದೂರಿನ ಪ್ರಕಾರ, ಬುಧವಾರ ಸಂಜೆ ಮಥುರಾದಿಂದ ಅವರ ಮಗಳ ಮದುವೆ ಮೆರವಣಿಗೆ ಬಂದಾಗ ಈ ಘಟನೆ ನಡೆದಿದೆ. ನಂತರ ಮದುವೆ ಗ್ರಾಮದಿಂದ ಸ್ವಲ್ಪ ದೂರದಲ್ಲಿರುವ ಮದುವೆ ಮನೆಯಲ್ಲಿ ನಡೆಯಬೇಕಿತ್ತು ಎಂದು ದೂರಿನಲ್ಲಿ ಹೇಳಿದೆ.

ಡಿಜೆ ಸಂಗೀತದೊಂದಿಗೆ ಮೆರವಣಿಗೆ ರಸ್ತೆಯಲ್ಲಿ ಸಾಗುತ್ತಿದ್ದಂತೆ, “ಮೇಲ್ಜಾತಿಯ” ಸುಮಾರು 40 ಜನರ ಗುಂಪು ಕೋಲು ಮತ್ತು ಲಾಠಿಗಳೊಂದಿಗೆ ಬಂದು ವರ ಮತ್ತು ಇತರ ಹಲವರ ಮೇಲೆ ಹಲ್ಲೆ ನಡೆಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದಾಳಿಕೋರರು ವರ ಮತ್ತು ಮದುವೆಯ ಕಡೆಯ ಹಲವಾರು ಸದಸ್ಯರನ್ನು ಥಳಿಸಿದ್ದಾರೆ. ಹಲ್ಲೆಯಿಂದಾಗಿ, ಮದುವೆ ಸ್ಥಳದಲ್ಲಿ ಯಾವುದೇ ಆಚರಣೆಗಳನ್ನು ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.

ಇಡೀ ಸಮಾರಂಭವನ್ನು ಸ್ಥಳಾಂತರಿಸಿ, ನಮ್ಮ ಮನೆಯಲ್ಲಿ ನಡೆಸಬೇಕಾಯಿತು ಎಂದು ಅನಿತಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ದಾಳಿಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಪಿ.ಕೆ. ರೈ ಹೇಳಿದ್ದಾರೆ.

ವಧುವಿನ ತಾಯಿ ನೀಡಿದ ದೂರಿನ ಮೇರೆಗೆ ಬಿಎನ್‌ಎಸ್ ಸೆಕ್ಷನ್ 191-3 (ಆಯುಧಗಳಿಂದ ಗಲಭೆ), 190 (ಕಾನೂನುಬಾಹಿರ ಸಭೆ), 115-1 (ಗಾಯ ಉಂಟುಮಾಡುವುದು), 127 (ಅಕ್ರಮವಾಗಿ ಬಂಧಿಸುವುದು), 74 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲವಂತ), 352 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಜಿತ್ ತೋಮರ್, ಅಜಯ್ ತೋಮರ್, ಸೌರಭ್ ತೋಮರ್ ಮತ್ತು ಪ್ರದೀಪ್ ತೋಮರ್ ಮತ್ತು ಅವರ ಸಹಾಯಕರು ಮತ್ತು 20 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ” ಎಂದು ಎಸ್‌ಎಚ್‌ಒ ಆನಂದ್ ವೀರ್ ತಿಳಿಸಿದ್ದಾರೆ.

ದಾಳಿಗೆ ಸಂಬಂಧಿಸಿದಂತೆ ಅಜಿತ್ ತೋಮರ್, ಅಜಯ್ ತೋಮರ್, ಸೌರಭ್ ತೋಮರ್ ಮತ್ತು ಪ್ರದೀಪ್ ತೋಮರ್ ಮತ್ತು ಅವರ ಸಹಾಯಕರು ಸೇರಿದಂತೆ 29 ಮಂದಿಗಳ ವಿರುದ್ಧ ದೂರು ನೀಡಲಾಗಿದೆ. ಇದರಲ್ಲಿ  20 ಅಪರಿಚಿತ ವ್ಯಕ್ತಿಗಳು ಸೇರಿದ್ದಾರೆ ಎಂದು ಅವರು ಹೇಳಿದರು.

ಮಾಂಸಾಹಾರಿಗಳು “ಕೊಳಕರು” ಎಂದು ಕರೆದಿದ್ದಕ್ಕೆ ಅಪಾರ್ಟ್‌ಮೆಂಟ್ ನಲ್ಲಿ ಉದ್ವಿಗ್ನತೆ: ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...