Homeದಲಿತ್ ಫೈಲ್ಸ್ಕುದುರೆ ಮೇಲೆ ಮೆರವಣಿಗೆ ಮಾಡಿದ್ದಕ್ಕೆ ದಲಿತ ವರನಿಗೆ ಥಳಿಸಿ ಜಾತಿ ದೌರ್ಜನ್ಯ; ಎಫ್‌ಐಆರ್‌

ಕುದುರೆ ಮೇಲೆ ಮೆರವಣಿಗೆ ಮಾಡಿದ್ದಕ್ಕೆ ದಲಿತ ವರನಿಗೆ ಥಳಿಸಿ ಜಾತಿ ದೌರ್ಜನ್ಯ; ಎಫ್‌ಐಆರ್‌

ಹಲವು ದಲಿತರ ಮೇಲೆ ಹಲ್ಲೆಯಾಗಿದ್ದು, ಮಹಿಳೆಯರಿಗೆ ಜಾತಿವಾದಿಗಳು ಕಿರುಕುಳ ನೀಡಿದ್ದಾರೆಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ

- Advertisement -
- Advertisement -

ಮೇ 4ರ ಸಂಜೆ ಆಗ್ರಾದ ಸೋಹಲ್ಲಾ ಜಾತವ್ ಬಸ್ತಿಯಲ್ಲಿ ಸಾಗುತ್ತಿದ್ದ ವಿವಾಹ ಮೆರವಣಿಗೆಗೆ ಸವರ್ಣೀಯ ಜಾತಿಯ ಪುಂಡರು ಅಡ್ಡಿಪಡಿಸಿ, ಮದುವೆ ಗಂಡು ಮತ್ತು ಇತರರಿಗೆ ಥಳಿಸಿದ್ದು ಎಫ್‌ಐಆರ್‌ ದಾಖಲಾಗಿದೆ.

ದಲಿತ ವಧುವರರು ಕುದುರೆ ಮೇಲೆ ಸಾಗುತ್ತಿದ್ದನ್ನು ಕಂಡು ಕೆಂಡಮಂಡಲವಾದ ಸುಮಾರು 20-25 ಮಂದಿ ಜಾತಿವಾದಿಗಳು, ಬಲವಂತವಾಗಿ ವಧುವರರನ್ನು ಕುದುರೆಯಿಂದ ಕೆಳಗಿಳಿಸಿದ್ದಾರೆ ಮತ್ತು ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವರನ ಅತ್ತೆ ಗೀತಾ ಜಾತವ್ ಅವರು ಮೇ 8 ರಂದು ನೀಡಿದ ದೂರಿನ ಆಧಾರದ ಮೇಲೆ ಆಗ್ರಾ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ 25 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ಸೊಹಲ್ಲಾ ಬಸ್ತಿಯಲ್ಲಿ ಮಗಳ ಮದುವೆ ಮೆರವಣಿಗೆ ಸಾಗುತ್ತಿದ್ದಾಗ 20ರಿಂದ 25 ಮಂದಿ ಸವರ್ಣಿಯ ಜಾತಿಯ ಗಂಡಸರು ದೊಣ್ಣೆ, ಕಬ್ಬಿಣದ ಸರಳುಗಳನ್ನು ಹಿಡಿದುಕೊಂಡು ಬಂದು ಅಳಿಯನನ್ನು ಬಲವಂತವಾಗಿ ಕೆಳಗಿಳಿಸಿ ಥಳಿಸಿದ್ದಾರೆ” ಎಂದು ಗೀತಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

“ರಾಧಾಕೃಷ್ಣ ಮದುವೆ ಹಾಲ್‌ನಲ್ಲಿ ದಲಿತ ವಧುವರರನ್ನು ರಕ್ಷಿಸಲು ಬಂದಾಗ ಇತರರಿಗೂ ಸವರ್ಣೀಯ ಗಂಡಸರು ಥಳಿಸಿದ್ದಾರೆ. ದಲಿತ ಮಹಿಳೆಯರಿಗೆ ಕಿರುಕುಳ ನೀಡಿದ್ದಾರೆ” ಎಂದು ವಿವರಿಸಿದ್ದಾರೆ.

“ಸವರ್ಣೀಯ ಠಾಕೂರರು ಈ ಕೃತ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರು. ನಮ್ಮ ಹಳ್ಳಿಯಲ್ಲಿ ಮದುವೆ ಗಂಡು ಕುದುರೆ ಸವಾರಿ ಮಾಡುವುದಿಲ್ಲ, ನಿಮಗೆ ಎಷ್ಟು ಧೈರ್ಯ? ಎಂದು ಪ್ರಶ್ನಿಸಿದರು. ಮೂರು-ನಾಲ್ಕು ಬಾರಿ ವಿದ್ಯುತ್ ಸರಬರಾಜನ್ನು ಕಡಿತಗೊಳಿಸಿದರು. ಸ್ಥಳದಲ್ಲಿದ್ದ ಮಹಿಳೆಯರಿಗೆ ಕಿರುಕುಳ ನೀಡಿದರು, ಜಾತಿ ನಿಂದನೆ ಮಾಡಿದರು” ಎಂದು ಗೀತಾ ಅವರು ಹೇಳಿರುವುದಾಗಿ ಎಫ್‌ಐಆರ್‌ನಲ್ಲಿ ದಾಖಲಾಗಿದೆ.

ವಧುವಿನ ಸಹೋದರ ಮನೀಶ್ ಕುಮಾರ್ ಪ್ರತಿಕ್ರಿಯಿಸಿ, “ನಮ್ಮ ಹಳ್ಳಿಯಲ್ಲಿ ದಲಿತ ಅಳಿಯಂದಿರು ಕುದುರೆ ಸವಾರಿ ಮಾಡುವುದಿಲ್ಲ, ನಿಮಗೆ ಎಷ್ಟು ಧೈರ್ಯ? ಎಂದು ಅವರು ಪ್ರಶ್ನಿಸಿದರು. ನಾವು ದಾಳಿಕೋರರನ್ನು ತಡೆಯಲು ಪ್ರಯತ್ನಿಸಿದಾಗ, ದೊಣ್ಣೆಗಳಿಂದ ಥಳಿಸಲು ಪ್ರಾರಂಭಿಸಿದರು. ಕೆಲವು ಅತಿಥಿಗಳು ಗಂಭೀರವಾಗಿ ಗಾಯಗೊಂಡರು, ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಯಾರೋ ಕರೆ ಮಾಡಿದ್ದರು. ಮಾಹಿತಿ ತಿಳಿದ ತಕ್ಷಣ ಸುಮಾರು 10-12 ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ” ಎಂದಿದ್ದಾರೆ.

ದೂರಿನ ಆಧಾರದ ಮೇಲೆ ಯೋಗೇಶ್ ಠಾಕೂರ್, ರಾಹುಲ್ ಕುಮಾರ್, ಸೋನು ಠಾಕೂರ್, ಕುನಾಲ್, ಶಿಶುಪಾಲ್ ಮತ್ತು ಇತರ 20 ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ), ಎಸ್‌ಸಿ-ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿರಿ: ರಾಜಸ್ಥಾನ: ಕಾಣೆಯಾಗಿದ್ದ ಇಬ್ಬರು ಅಪ್ರಾಪ್ತ ದಲಿತ ಬಾಲಕಿಯರು ಶವವಾಗಿ ಪತ್ತೆ

ಮೇ 4ರಂದು ರಾತ್ರಿ ಘಟನೆ ನಡೆದಿದ್ದರೂ, ವರನ ಅತ್ತೆ ಗೀತಾದೇವಿ ನೀಡಿದ ದೂರಿನ ಮೇರೆಗೆ ಮೇ 9ರಂದು ಎಫ್‌ಐಆರ್ ದಾಖಲಿಸಲಾಗಿದೆ.

ಎಸ್‌ಎಚ್‌ಒ ನೀರಜ್ ಶರ್ಮಾ ಪ್ರತಿಕ್ರಿಯಿಸಿ, “ನಾಲ್ವರು ಆರೋಪಿಗಳಾದ ಯೋಗೇಶ್ ಠಾಕೂರ್, ರಾಹುಲ್ ಕುಮಾರ್, ಸೋನು ಠಾಕೂರ್, ಕುನಾಲ್ ಠಾಕೂರ್ ಮತ್ತು ಹಲವಾರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಅಟ್ರಾಸಿಟಿ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 354 (ದಾಳಿ ಅಥವಾ ಕ್ರಿಮಿನಲ್ ಬಲ ಪ್ರಯೋಗದ ಮೂಲಕ ಮಹಿಳೆಯರಿಗೆ ಕಿರುಕುಳ), 147 (ಗಲಭೆಗೆ ಶಿಕ್ಷೆ), 148 (ಗಲಭೆ, ಮಾರಣಾಂತಿಕ ಆಯುಧಗಳಿಂದ ಶಸ್ತ್ರಸಜ್ಜಿತ), 452 (ಗಾಯ, ಆಕ್ರಮಣ ಅಥವಾ ಮನೆ-ಅತಿಕ್ರಮಣ), 352 (ಹಲ್ಲೆಗೆ ಶಿಕ್ಷೆ), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 505 (ಶಾಂತಿಯ ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಎಫ್‌ಐಆರ್‌ ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಸರ್ಕಲ್ ಆಫೀಸರ್ (ಸದರ್) ಅರ್ಚನಾ ಸಿಂಗ್, “ಆರೋಪಿಗಳಲ್ಲಿ ಒಬ್ಬರಾದ ರಾಹುಲ್ ಅವರನ್ನು ಬಂಧಿಸಲಾಗಿದೆ. ಇತರರನ್ನು ಹಿಡಿಯಲು ನಾವು ರೈಡ್‌ ಮಾಡುತ್ತಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...