Homeದಲಿತ್ ಫೈಲ್ಸ್ಕುದುರೆ ಮೇಲೆ ಮೆರವಣಿಗೆ ಮಾಡಿದ್ದಕ್ಕೆ ದಲಿತ ವರನಿಗೆ ಥಳಿಸಿ ಜಾತಿ ದೌರ್ಜನ್ಯ; ಎಫ್‌ಐಆರ್‌

ಕುದುರೆ ಮೇಲೆ ಮೆರವಣಿಗೆ ಮಾಡಿದ್ದಕ್ಕೆ ದಲಿತ ವರನಿಗೆ ಥಳಿಸಿ ಜಾತಿ ದೌರ್ಜನ್ಯ; ಎಫ್‌ಐಆರ್‌

ಹಲವು ದಲಿತರ ಮೇಲೆ ಹಲ್ಲೆಯಾಗಿದ್ದು, ಮಹಿಳೆಯರಿಗೆ ಜಾತಿವಾದಿಗಳು ಕಿರುಕುಳ ನೀಡಿದ್ದಾರೆಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ

- Advertisement -
- Advertisement -

ಮೇ 4ರ ಸಂಜೆ ಆಗ್ರಾದ ಸೋಹಲ್ಲಾ ಜಾತವ್ ಬಸ್ತಿಯಲ್ಲಿ ಸಾಗುತ್ತಿದ್ದ ವಿವಾಹ ಮೆರವಣಿಗೆಗೆ ಸವರ್ಣೀಯ ಜಾತಿಯ ಪುಂಡರು ಅಡ್ಡಿಪಡಿಸಿ, ಮದುವೆ ಗಂಡು ಮತ್ತು ಇತರರಿಗೆ ಥಳಿಸಿದ್ದು ಎಫ್‌ಐಆರ್‌ ದಾಖಲಾಗಿದೆ.

ದಲಿತ ವಧುವರರು ಕುದುರೆ ಮೇಲೆ ಸಾಗುತ್ತಿದ್ದನ್ನು ಕಂಡು ಕೆಂಡಮಂಡಲವಾದ ಸುಮಾರು 20-25 ಮಂದಿ ಜಾತಿವಾದಿಗಳು, ಬಲವಂತವಾಗಿ ವಧುವರರನ್ನು ಕುದುರೆಯಿಂದ ಕೆಳಗಿಳಿಸಿದ್ದಾರೆ ಮತ್ತು ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವರನ ಅತ್ತೆ ಗೀತಾ ಜಾತವ್ ಅವರು ಮೇ 8 ರಂದು ನೀಡಿದ ದೂರಿನ ಆಧಾರದ ಮೇಲೆ ಆಗ್ರಾ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ 25 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ಸೊಹಲ್ಲಾ ಬಸ್ತಿಯಲ್ಲಿ ಮಗಳ ಮದುವೆ ಮೆರವಣಿಗೆ ಸಾಗುತ್ತಿದ್ದಾಗ 20ರಿಂದ 25 ಮಂದಿ ಸವರ್ಣಿಯ ಜಾತಿಯ ಗಂಡಸರು ದೊಣ್ಣೆ, ಕಬ್ಬಿಣದ ಸರಳುಗಳನ್ನು ಹಿಡಿದುಕೊಂಡು ಬಂದು ಅಳಿಯನನ್ನು ಬಲವಂತವಾಗಿ ಕೆಳಗಿಳಿಸಿ ಥಳಿಸಿದ್ದಾರೆ” ಎಂದು ಗೀತಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

“ರಾಧಾಕೃಷ್ಣ ಮದುವೆ ಹಾಲ್‌ನಲ್ಲಿ ದಲಿತ ವಧುವರರನ್ನು ರಕ್ಷಿಸಲು ಬಂದಾಗ ಇತರರಿಗೂ ಸವರ್ಣೀಯ ಗಂಡಸರು ಥಳಿಸಿದ್ದಾರೆ. ದಲಿತ ಮಹಿಳೆಯರಿಗೆ ಕಿರುಕುಳ ನೀಡಿದ್ದಾರೆ” ಎಂದು ವಿವರಿಸಿದ್ದಾರೆ.

“ಸವರ್ಣೀಯ ಠಾಕೂರರು ಈ ಕೃತ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರು. ನಮ್ಮ ಹಳ್ಳಿಯಲ್ಲಿ ಮದುವೆ ಗಂಡು ಕುದುರೆ ಸವಾರಿ ಮಾಡುವುದಿಲ್ಲ, ನಿಮಗೆ ಎಷ್ಟು ಧೈರ್ಯ? ಎಂದು ಪ್ರಶ್ನಿಸಿದರು. ಮೂರು-ನಾಲ್ಕು ಬಾರಿ ವಿದ್ಯುತ್ ಸರಬರಾಜನ್ನು ಕಡಿತಗೊಳಿಸಿದರು. ಸ್ಥಳದಲ್ಲಿದ್ದ ಮಹಿಳೆಯರಿಗೆ ಕಿರುಕುಳ ನೀಡಿದರು, ಜಾತಿ ನಿಂದನೆ ಮಾಡಿದರು” ಎಂದು ಗೀತಾ ಅವರು ಹೇಳಿರುವುದಾಗಿ ಎಫ್‌ಐಆರ್‌ನಲ್ಲಿ ದಾಖಲಾಗಿದೆ.

ವಧುವಿನ ಸಹೋದರ ಮನೀಶ್ ಕುಮಾರ್ ಪ್ರತಿಕ್ರಿಯಿಸಿ, “ನಮ್ಮ ಹಳ್ಳಿಯಲ್ಲಿ ದಲಿತ ಅಳಿಯಂದಿರು ಕುದುರೆ ಸವಾರಿ ಮಾಡುವುದಿಲ್ಲ, ನಿಮಗೆ ಎಷ್ಟು ಧೈರ್ಯ? ಎಂದು ಅವರು ಪ್ರಶ್ನಿಸಿದರು. ನಾವು ದಾಳಿಕೋರರನ್ನು ತಡೆಯಲು ಪ್ರಯತ್ನಿಸಿದಾಗ, ದೊಣ್ಣೆಗಳಿಂದ ಥಳಿಸಲು ಪ್ರಾರಂಭಿಸಿದರು. ಕೆಲವು ಅತಿಥಿಗಳು ಗಂಭೀರವಾಗಿ ಗಾಯಗೊಂಡರು, ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಯಾರೋ ಕರೆ ಮಾಡಿದ್ದರು. ಮಾಹಿತಿ ತಿಳಿದ ತಕ್ಷಣ ಸುಮಾರು 10-12 ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ” ಎಂದಿದ್ದಾರೆ.

ದೂರಿನ ಆಧಾರದ ಮೇಲೆ ಯೋಗೇಶ್ ಠಾಕೂರ್, ರಾಹುಲ್ ಕುಮಾರ್, ಸೋನು ಠಾಕೂರ್, ಕುನಾಲ್, ಶಿಶುಪಾಲ್ ಮತ್ತು ಇತರ 20 ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ), ಎಸ್‌ಸಿ-ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿರಿ: ರಾಜಸ್ಥಾನ: ಕಾಣೆಯಾಗಿದ್ದ ಇಬ್ಬರು ಅಪ್ರಾಪ್ತ ದಲಿತ ಬಾಲಕಿಯರು ಶವವಾಗಿ ಪತ್ತೆ

ಮೇ 4ರಂದು ರಾತ್ರಿ ಘಟನೆ ನಡೆದಿದ್ದರೂ, ವರನ ಅತ್ತೆ ಗೀತಾದೇವಿ ನೀಡಿದ ದೂರಿನ ಮೇರೆಗೆ ಮೇ 9ರಂದು ಎಫ್‌ಐಆರ್ ದಾಖಲಿಸಲಾಗಿದೆ.

ಎಸ್‌ಎಚ್‌ಒ ನೀರಜ್ ಶರ್ಮಾ ಪ್ರತಿಕ್ರಿಯಿಸಿ, “ನಾಲ್ವರು ಆರೋಪಿಗಳಾದ ಯೋಗೇಶ್ ಠಾಕೂರ್, ರಾಹುಲ್ ಕುಮಾರ್, ಸೋನು ಠಾಕೂರ್, ಕುನಾಲ್ ಠಾಕೂರ್ ಮತ್ತು ಹಲವಾರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಅಟ್ರಾಸಿಟಿ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 354 (ದಾಳಿ ಅಥವಾ ಕ್ರಿಮಿನಲ್ ಬಲ ಪ್ರಯೋಗದ ಮೂಲಕ ಮಹಿಳೆಯರಿಗೆ ಕಿರುಕುಳ), 147 (ಗಲಭೆಗೆ ಶಿಕ್ಷೆ), 148 (ಗಲಭೆ, ಮಾರಣಾಂತಿಕ ಆಯುಧಗಳಿಂದ ಶಸ್ತ್ರಸಜ್ಜಿತ), 452 (ಗಾಯ, ಆಕ್ರಮಣ ಅಥವಾ ಮನೆ-ಅತಿಕ್ರಮಣ), 352 (ಹಲ್ಲೆಗೆ ಶಿಕ್ಷೆ), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 505 (ಶಾಂತಿಯ ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಎಫ್‌ಐಆರ್‌ ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಸರ್ಕಲ್ ಆಫೀಸರ್ (ಸದರ್) ಅರ್ಚನಾ ಸಿಂಗ್, “ಆರೋಪಿಗಳಲ್ಲಿ ಒಬ್ಬರಾದ ರಾಹುಲ್ ಅವರನ್ನು ಬಂಧಿಸಲಾಗಿದೆ. ಇತರರನ್ನು ಹಿಡಿಯಲು ನಾವು ರೈಡ್‌ ಮಾಡುತ್ತಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...