Homeದಲಿತ್ ಫೈಲ್ಸ್ಕುದುರೆ ಮೇಲೆ ಮೆರವಣಿಗೆ ಮಾಡಿದ್ದಕ್ಕೆ ದಲಿತ ವರನಿಗೆ ಥಳಿಸಿ ಜಾತಿ ದೌರ್ಜನ್ಯ; ಎಫ್‌ಐಆರ್‌

ಕುದುರೆ ಮೇಲೆ ಮೆರವಣಿಗೆ ಮಾಡಿದ್ದಕ್ಕೆ ದಲಿತ ವರನಿಗೆ ಥಳಿಸಿ ಜಾತಿ ದೌರ್ಜನ್ಯ; ಎಫ್‌ಐಆರ್‌

ಹಲವು ದಲಿತರ ಮೇಲೆ ಹಲ್ಲೆಯಾಗಿದ್ದು, ಮಹಿಳೆಯರಿಗೆ ಜಾತಿವಾದಿಗಳು ಕಿರುಕುಳ ನೀಡಿದ್ದಾರೆಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ

- Advertisement -
- Advertisement -

ಮೇ 4ರ ಸಂಜೆ ಆಗ್ರಾದ ಸೋಹಲ್ಲಾ ಜಾತವ್ ಬಸ್ತಿಯಲ್ಲಿ ಸಾಗುತ್ತಿದ್ದ ವಿವಾಹ ಮೆರವಣಿಗೆಗೆ ಸವರ್ಣೀಯ ಜಾತಿಯ ಪುಂಡರು ಅಡ್ಡಿಪಡಿಸಿ, ಮದುವೆ ಗಂಡು ಮತ್ತು ಇತರರಿಗೆ ಥಳಿಸಿದ್ದು ಎಫ್‌ಐಆರ್‌ ದಾಖಲಾಗಿದೆ.

ದಲಿತ ವಧುವರರು ಕುದುರೆ ಮೇಲೆ ಸಾಗುತ್ತಿದ್ದನ್ನು ಕಂಡು ಕೆಂಡಮಂಡಲವಾದ ಸುಮಾರು 20-25 ಮಂದಿ ಜಾತಿವಾದಿಗಳು, ಬಲವಂತವಾಗಿ ವಧುವರರನ್ನು ಕುದುರೆಯಿಂದ ಕೆಳಗಿಳಿಸಿದ್ದಾರೆ ಮತ್ತು ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವರನ ಅತ್ತೆ ಗೀತಾ ಜಾತವ್ ಅವರು ಮೇ 8 ರಂದು ನೀಡಿದ ದೂರಿನ ಆಧಾರದ ಮೇಲೆ ಆಗ್ರಾ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ 25 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ಸೊಹಲ್ಲಾ ಬಸ್ತಿಯಲ್ಲಿ ಮಗಳ ಮದುವೆ ಮೆರವಣಿಗೆ ಸಾಗುತ್ತಿದ್ದಾಗ 20ರಿಂದ 25 ಮಂದಿ ಸವರ್ಣಿಯ ಜಾತಿಯ ಗಂಡಸರು ದೊಣ್ಣೆ, ಕಬ್ಬಿಣದ ಸರಳುಗಳನ್ನು ಹಿಡಿದುಕೊಂಡು ಬಂದು ಅಳಿಯನನ್ನು ಬಲವಂತವಾಗಿ ಕೆಳಗಿಳಿಸಿ ಥಳಿಸಿದ್ದಾರೆ” ಎಂದು ಗೀತಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

“ರಾಧಾಕೃಷ್ಣ ಮದುವೆ ಹಾಲ್‌ನಲ್ಲಿ ದಲಿತ ವಧುವರರನ್ನು ರಕ್ಷಿಸಲು ಬಂದಾಗ ಇತರರಿಗೂ ಸವರ್ಣೀಯ ಗಂಡಸರು ಥಳಿಸಿದ್ದಾರೆ. ದಲಿತ ಮಹಿಳೆಯರಿಗೆ ಕಿರುಕುಳ ನೀಡಿದ್ದಾರೆ” ಎಂದು ವಿವರಿಸಿದ್ದಾರೆ.

“ಸವರ್ಣೀಯ ಠಾಕೂರರು ಈ ಕೃತ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರು. ನಮ್ಮ ಹಳ್ಳಿಯಲ್ಲಿ ಮದುವೆ ಗಂಡು ಕುದುರೆ ಸವಾರಿ ಮಾಡುವುದಿಲ್ಲ, ನಿಮಗೆ ಎಷ್ಟು ಧೈರ್ಯ? ಎಂದು ಪ್ರಶ್ನಿಸಿದರು. ಮೂರು-ನಾಲ್ಕು ಬಾರಿ ವಿದ್ಯುತ್ ಸರಬರಾಜನ್ನು ಕಡಿತಗೊಳಿಸಿದರು. ಸ್ಥಳದಲ್ಲಿದ್ದ ಮಹಿಳೆಯರಿಗೆ ಕಿರುಕುಳ ನೀಡಿದರು, ಜಾತಿ ನಿಂದನೆ ಮಾಡಿದರು” ಎಂದು ಗೀತಾ ಅವರು ಹೇಳಿರುವುದಾಗಿ ಎಫ್‌ಐಆರ್‌ನಲ್ಲಿ ದಾಖಲಾಗಿದೆ.

ವಧುವಿನ ಸಹೋದರ ಮನೀಶ್ ಕುಮಾರ್ ಪ್ರತಿಕ್ರಿಯಿಸಿ, “ನಮ್ಮ ಹಳ್ಳಿಯಲ್ಲಿ ದಲಿತ ಅಳಿಯಂದಿರು ಕುದುರೆ ಸವಾರಿ ಮಾಡುವುದಿಲ್ಲ, ನಿಮಗೆ ಎಷ್ಟು ಧೈರ್ಯ? ಎಂದು ಅವರು ಪ್ರಶ್ನಿಸಿದರು. ನಾವು ದಾಳಿಕೋರರನ್ನು ತಡೆಯಲು ಪ್ರಯತ್ನಿಸಿದಾಗ, ದೊಣ್ಣೆಗಳಿಂದ ಥಳಿಸಲು ಪ್ರಾರಂಭಿಸಿದರು. ಕೆಲವು ಅತಿಥಿಗಳು ಗಂಭೀರವಾಗಿ ಗಾಯಗೊಂಡರು, ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಯಾರೋ ಕರೆ ಮಾಡಿದ್ದರು. ಮಾಹಿತಿ ತಿಳಿದ ತಕ್ಷಣ ಸುಮಾರು 10-12 ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ” ಎಂದಿದ್ದಾರೆ.

ದೂರಿನ ಆಧಾರದ ಮೇಲೆ ಯೋಗೇಶ್ ಠಾಕೂರ್, ರಾಹುಲ್ ಕುಮಾರ್, ಸೋನು ಠಾಕೂರ್, ಕುನಾಲ್, ಶಿಶುಪಾಲ್ ಮತ್ತು ಇತರ 20 ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ), ಎಸ್‌ಸಿ-ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿರಿ: ರಾಜಸ್ಥಾನ: ಕಾಣೆಯಾಗಿದ್ದ ಇಬ್ಬರು ಅಪ್ರಾಪ್ತ ದಲಿತ ಬಾಲಕಿಯರು ಶವವಾಗಿ ಪತ್ತೆ

ಮೇ 4ರಂದು ರಾತ್ರಿ ಘಟನೆ ನಡೆದಿದ್ದರೂ, ವರನ ಅತ್ತೆ ಗೀತಾದೇವಿ ನೀಡಿದ ದೂರಿನ ಮೇರೆಗೆ ಮೇ 9ರಂದು ಎಫ್‌ಐಆರ್ ದಾಖಲಿಸಲಾಗಿದೆ.

ಎಸ್‌ಎಚ್‌ಒ ನೀರಜ್ ಶರ್ಮಾ ಪ್ರತಿಕ್ರಿಯಿಸಿ, “ನಾಲ್ವರು ಆರೋಪಿಗಳಾದ ಯೋಗೇಶ್ ಠಾಕೂರ್, ರಾಹುಲ್ ಕುಮಾರ್, ಸೋನು ಠಾಕೂರ್, ಕುನಾಲ್ ಠಾಕೂರ್ ಮತ್ತು ಹಲವಾರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಅಟ್ರಾಸಿಟಿ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 354 (ದಾಳಿ ಅಥವಾ ಕ್ರಿಮಿನಲ್ ಬಲ ಪ್ರಯೋಗದ ಮೂಲಕ ಮಹಿಳೆಯರಿಗೆ ಕಿರುಕುಳ), 147 (ಗಲಭೆಗೆ ಶಿಕ್ಷೆ), 148 (ಗಲಭೆ, ಮಾರಣಾಂತಿಕ ಆಯುಧಗಳಿಂದ ಶಸ್ತ್ರಸಜ್ಜಿತ), 452 (ಗಾಯ, ಆಕ್ರಮಣ ಅಥವಾ ಮನೆ-ಅತಿಕ್ರಮಣ), 352 (ಹಲ್ಲೆಗೆ ಶಿಕ್ಷೆ), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 505 (ಶಾಂತಿಯ ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಎಫ್‌ಐಆರ್‌ ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಸರ್ಕಲ್ ಆಫೀಸರ್ (ಸದರ್) ಅರ್ಚನಾ ಸಿಂಗ್, “ಆರೋಪಿಗಳಲ್ಲಿ ಒಬ್ಬರಾದ ರಾಹುಲ್ ಅವರನ್ನು ಬಂಧಿಸಲಾಗಿದೆ. ಇತರರನ್ನು ಹಿಡಿಯಲು ನಾವು ರೈಡ್‌ ಮಾಡುತ್ತಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...