Homeದಲಿತ್ ಫೈಲ್ಸ್ಕುದುರೆ ಮೇಲೆ ಮೆರವಣಿಗೆ ಮಾಡಿದ್ದಕ್ಕೆ ದಲಿತ ವರನಿಗೆ ಥಳಿಸಿ ಜಾತಿ ದೌರ್ಜನ್ಯ; ಎಫ್‌ಐಆರ್‌

ಕುದುರೆ ಮೇಲೆ ಮೆರವಣಿಗೆ ಮಾಡಿದ್ದಕ್ಕೆ ದಲಿತ ವರನಿಗೆ ಥಳಿಸಿ ಜಾತಿ ದೌರ್ಜನ್ಯ; ಎಫ್‌ಐಆರ್‌

ಹಲವು ದಲಿತರ ಮೇಲೆ ಹಲ್ಲೆಯಾಗಿದ್ದು, ಮಹಿಳೆಯರಿಗೆ ಜಾತಿವಾದಿಗಳು ಕಿರುಕುಳ ನೀಡಿದ್ದಾರೆಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ

- Advertisement -
- Advertisement -

ಮೇ 4ರ ಸಂಜೆ ಆಗ್ರಾದ ಸೋಹಲ್ಲಾ ಜಾತವ್ ಬಸ್ತಿಯಲ್ಲಿ ಸಾಗುತ್ತಿದ್ದ ವಿವಾಹ ಮೆರವಣಿಗೆಗೆ ಸವರ್ಣೀಯ ಜಾತಿಯ ಪುಂಡರು ಅಡ್ಡಿಪಡಿಸಿ, ಮದುವೆ ಗಂಡು ಮತ್ತು ಇತರರಿಗೆ ಥಳಿಸಿದ್ದು ಎಫ್‌ಐಆರ್‌ ದಾಖಲಾಗಿದೆ.

ದಲಿತ ವಧುವರರು ಕುದುರೆ ಮೇಲೆ ಸಾಗುತ್ತಿದ್ದನ್ನು ಕಂಡು ಕೆಂಡಮಂಡಲವಾದ ಸುಮಾರು 20-25 ಮಂದಿ ಜಾತಿವಾದಿಗಳು, ಬಲವಂತವಾಗಿ ವಧುವರರನ್ನು ಕುದುರೆಯಿಂದ ಕೆಳಗಿಳಿಸಿದ್ದಾರೆ ಮತ್ತು ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವರನ ಅತ್ತೆ ಗೀತಾ ಜಾತವ್ ಅವರು ಮೇ 8 ರಂದು ನೀಡಿದ ದೂರಿನ ಆಧಾರದ ಮೇಲೆ ಆಗ್ರಾ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ 25 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ಸೊಹಲ್ಲಾ ಬಸ್ತಿಯಲ್ಲಿ ಮಗಳ ಮದುವೆ ಮೆರವಣಿಗೆ ಸಾಗುತ್ತಿದ್ದಾಗ 20ರಿಂದ 25 ಮಂದಿ ಸವರ್ಣಿಯ ಜಾತಿಯ ಗಂಡಸರು ದೊಣ್ಣೆ, ಕಬ್ಬಿಣದ ಸರಳುಗಳನ್ನು ಹಿಡಿದುಕೊಂಡು ಬಂದು ಅಳಿಯನನ್ನು ಬಲವಂತವಾಗಿ ಕೆಳಗಿಳಿಸಿ ಥಳಿಸಿದ್ದಾರೆ” ಎಂದು ಗೀತಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

“ರಾಧಾಕೃಷ್ಣ ಮದುವೆ ಹಾಲ್‌ನಲ್ಲಿ ದಲಿತ ವಧುವರರನ್ನು ರಕ್ಷಿಸಲು ಬಂದಾಗ ಇತರರಿಗೂ ಸವರ್ಣೀಯ ಗಂಡಸರು ಥಳಿಸಿದ್ದಾರೆ. ದಲಿತ ಮಹಿಳೆಯರಿಗೆ ಕಿರುಕುಳ ನೀಡಿದ್ದಾರೆ” ಎಂದು ವಿವರಿಸಿದ್ದಾರೆ.

“ಸವರ್ಣೀಯ ಠಾಕೂರರು ಈ ಕೃತ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರು. ನಮ್ಮ ಹಳ್ಳಿಯಲ್ಲಿ ಮದುವೆ ಗಂಡು ಕುದುರೆ ಸವಾರಿ ಮಾಡುವುದಿಲ್ಲ, ನಿಮಗೆ ಎಷ್ಟು ಧೈರ್ಯ? ಎಂದು ಪ್ರಶ್ನಿಸಿದರು. ಮೂರು-ನಾಲ್ಕು ಬಾರಿ ವಿದ್ಯುತ್ ಸರಬರಾಜನ್ನು ಕಡಿತಗೊಳಿಸಿದರು. ಸ್ಥಳದಲ್ಲಿದ್ದ ಮಹಿಳೆಯರಿಗೆ ಕಿರುಕುಳ ನೀಡಿದರು, ಜಾತಿ ನಿಂದನೆ ಮಾಡಿದರು” ಎಂದು ಗೀತಾ ಅವರು ಹೇಳಿರುವುದಾಗಿ ಎಫ್‌ಐಆರ್‌ನಲ್ಲಿ ದಾಖಲಾಗಿದೆ.

ವಧುವಿನ ಸಹೋದರ ಮನೀಶ್ ಕುಮಾರ್ ಪ್ರತಿಕ್ರಿಯಿಸಿ, “ನಮ್ಮ ಹಳ್ಳಿಯಲ್ಲಿ ದಲಿತ ಅಳಿಯಂದಿರು ಕುದುರೆ ಸವಾರಿ ಮಾಡುವುದಿಲ್ಲ, ನಿಮಗೆ ಎಷ್ಟು ಧೈರ್ಯ? ಎಂದು ಅವರು ಪ್ರಶ್ನಿಸಿದರು. ನಾವು ದಾಳಿಕೋರರನ್ನು ತಡೆಯಲು ಪ್ರಯತ್ನಿಸಿದಾಗ, ದೊಣ್ಣೆಗಳಿಂದ ಥಳಿಸಲು ಪ್ರಾರಂಭಿಸಿದರು. ಕೆಲವು ಅತಿಥಿಗಳು ಗಂಭೀರವಾಗಿ ಗಾಯಗೊಂಡರು, ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಯಾರೋ ಕರೆ ಮಾಡಿದ್ದರು. ಮಾಹಿತಿ ತಿಳಿದ ತಕ್ಷಣ ಸುಮಾರು 10-12 ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ” ಎಂದಿದ್ದಾರೆ.

ದೂರಿನ ಆಧಾರದ ಮೇಲೆ ಯೋಗೇಶ್ ಠಾಕೂರ್, ರಾಹುಲ್ ಕುಮಾರ್, ಸೋನು ಠಾಕೂರ್, ಕುನಾಲ್, ಶಿಶುಪಾಲ್ ಮತ್ತು ಇತರ 20 ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ), ಎಸ್‌ಸಿ-ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿರಿ: ರಾಜಸ್ಥಾನ: ಕಾಣೆಯಾಗಿದ್ದ ಇಬ್ಬರು ಅಪ್ರಾಪ್ತ ದಲಿತ ಬಾಲಕಿಯರು ಶವವಾಗಿ ಪತ್ತೆ

ಮೇ 4ರಂದು ರಾತ್ರಿ ಘಟನೆ ನಡೆದಿದ್ದರೂ, ವರನ ಅತ್ತೆ ಗೀತಾದೇವಿ ನೀಡಿದ ದೂರಿನ ಮೇರೆಗೆ ಮೇ 9ರಂದು ಎಫ್‌ಐಆರ್ ದಾಖಲಿಸಲಾಗಿದೆ.

ಎಸ್‌ಎಚ್‌ಒ ನೀರಜ್ ಶರ್ಮಾ ಪ್ರತಿಕ್ರಿಯಿಸಿ, “ನಾಲ್ವರು ಆರೋಪಿಗಳಾದ ಯೋಗೇಶ್ ಠಾಕೂರ್, ರಾಹುಲ್ ಕುಮಾರ್, ಸೋನು ಠಾಕೂರ್, ಕುನಾಲ್ ಠಾಕೂರ್ ಮತ್ತು ಹಲವಾರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಅಟ್ರಾಸಿಟಿ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 354 (ದಾಳಿ ಅಥವಾ ಕ್ರಿಮಿನಲ್ ಬಲ ಪ್ರಯೋಗದ ಮೂಲಕ ಮಹಿಳೆಯರಿಗೆ ಕಿರುಕುಳ), 147 (ಗಲಭೆಗೆ ಶಿಕ್ಷೆ), 148 (ಗಲಭೆ, ಮಾರಣಾಂತಿಕ ಆಯುಧಗಳಿಂದ ಶಸ್ತ್ರಸಜ್ಜಿತ), 452 (ಗಾಯ, ಆಕ್ರಮಣ ಅಥವಾ ಮನೆ-ಅತಿಕ್ರಮಣ), 352 (ಹಲ್ಲೆಗೆ ಶಿಕ್ಷೆ), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 505 (ಶಾಂತಿಯ ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಎಫ್‌ಐಆರ್‌ ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಸರ್ಕಲ್ ಆಫೀಸರ್ (ಸದರ್) ಅರ್ಚನಾ ಸಿಂಗ್, “ಆರೋಪಿಗಳಲ್ಲಿ ಒಬ್ಬರಾದ ರಾಹುಲ್ ಅವರನ್ನು ಬಂಧಿಸಲಾಗಿದೆ. ಇತರರನ್ನು ಹಿಡಿಯಲು ನಾವು ರೈಡ್‌ ಮಾಡುತ್ತಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...