Homeದಲಿತ್ ಫೈಲ್ಸ್ರಾಜಸ್ಥಾನ| ಪೊಲೀಸ್ ಭದ್ರತೆಯಲ್ಲಿ ದಲಿತ ವರನ ಕುದುರೆ ಮೆರವಣಿಗೆ; ಬೆದರಿಕೆ ಹಾಕಿದ ಪ್ರಬಲ ಜಾತಿಯ ನಾಲ್ವರ...

ರಾಜಸ್ಥಾನ| ಪೊಲೀಸ್ ಭದ್ರತೆಯಲ್ಲಿ ದಲಿತ ವರನ ಕುದುರೆ ಮೆರವಣಿಗೆ; ಬೆದರಿಕೆ ಹಾಕಿದ ಪ್ರಬಲ ಜಾತಿಯ ನಾಲ್ವರ ಬಂಧನ

- Advertisement -
- Advertisement -

ರಾಜಸ್ಥಾನದ ಜುಂಝುನು ಜಿಲ್ಲೆಯ ಮೆಹರಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋವಿಂದದಾಸಪುರ ಗ್ರಾಮದಲ್ಲಿ ದಲಿತ ವರನ ಕುದುರೆ ಮೆರವಣಿಗೆ ಭಾರೀ ಭದ್ರತೆ ನೀಡಲಾಗಿತ್ತು.

ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಕೈನಲ್ಲಿ ಹಿಡಿದಿದ್ದ ವರ ರಾಕೇಶ್ ಕುದುರೆಯ ಮೇಲೆ ಸವಾರಿ ಮಾಡುತ್ತಿದ್ದಾಗ, ಗ್ರಾಮದಲ್ಲಿ ಅವರಿಗೆ ರಕ್ಷಣೆ ನೀಡಲು ರ್ಯಾಪಿಡ್ ಆಕ್ಷನ್ ಫೋರ್ಸ್‌ ಮತ್ತು ಪೊಲೀಸ್ ಇಲಾಖೆಯ 60 ಕ್ಕೂ ಹೆಚ್ಚು ಸಿಬ್ಬಂದಿ ಕಾವಲು ಕಾಯುತ್ತಿದ್ದರು.

“ಬಾರಾತ್ (ವರನ ಕುದುರೆ ಸವಾರಿ) ಮೆರವಣಿಗೆಗಾಗಿ ಕುದುರೆಯ ಮೇಲೆ ಕುಳಿತರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ” ಎಂದು ರಾಕೇಶ್‌ಗೆ ಬೆದರಿಕೆ ಹಾಕಲಾಗಿದೆ ಎಂದು ದೂರು ಬಂದಿದೆ ಎಂದು ಮೆಹರಾ ಪೊಲೀಸ್ ಠಾಣೆಯ ಉಸ್ತುವಾರಿ ಭಜನ್‌ರಾಮ್ ಹೇಳಿದ್ದಾರೆ. ಎರಡು ದಿನಗಳ ಹಿಂದೆ ಪೊಲೀಸ್ ಸಿಬ್ಬಂದಿ ಗ್ರಾಮಕ್ಕೆ ಧಾವಿಸಿ ರಾಕೇಶ್‌ಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕೆಲವರನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದರು.

ರಾಕೇಶ್ ಮತ್ತು ಅವರ ಕುಟುಂಬಕ್ಕೆ ಗ್ರಾಮದ ಕೆಲವು ಯುವಕರು ಕುದುರೆಯ ಮೇಲೆ ಕುಳಿತುಕೊಳ್ಳದಂತೆ ಬೆದರಿಕೆ ಹಾಕಿದರು. ನಂತರ ರಾಕೇಶ್ ಅವರ ಕುಟುಂಬವು ಪೊಲೀಸರಿಗೆ ಈ ವಿಷಯವನ್ನು ವರದಿ ಮಾಡಿತು. ಗ್ರಾಮದ ಅರ್ಧ ಡಜನ್‌ಗೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ರಾಕೇಶ್ ಅವರ ಬಾರಾತ್ ಅನ್ನು ಹೊರಗೆ ಕರೆದೊಯ್ಯುವಾಗ ಮೆಹರಾ, ಖೇತ್ರಿ, ಖೇತ್ರಿ ನಗರ ಮತ್ತು ಬಬಾಯಿ ಪೊಲೀಸ್ ಠಾಣೆಗಳ ಸಿಬ್ಬಂದಿಯನ್ನು ಗ್ರಾಮದಲ್ಲಿ ನಿಯೋಜಿಸಲಾಗಿತ್ತು. ಪೊಲೀಸ್ ಸಿಬ್ಬಂದಿಯಲ್ಲದೆ, ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ವಿಕಾಸ್ ಆಲ್ಹಾ ಮತ್ತು ರಾಜ್ಯ ಕಾರ್ಯದರ್ಶಿ ರವಿ ಮರೋಡಿಯಾ ಗ್ರಾಮದಲ್ಲಿ ಹಾಜರಿದ್ದರು.

ಕಳೆದ ವರ್ಷ ಡಿಸೆಂಬರ್‌ನಲ್ಲಿ, ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯ ಪ್ರಬಲ ಜಾತಿಯ ನೆರೆಹೊರೆಯ ಮೂಲಕ ಮದುವೆ ಮೆರವಣಿಗೆ ಹೋಗುತ್ತಿದ್ದಾಗ ದಲಿತ ವರನನ್ನು ಕುದುರೆಯಿಂದ ಬಲವಂತವಾಗಿ ಕೆಳಗಿಳಿಸಿ ಕಲ್ಲುಗಳನ್ನು ಎಸೆಯಲಾಯಿತು. ಪೊಲೀಸ್ ಕಾನ್‌ಸ್ಟೆಬಲ್ ರಾಬಿನ್ ಸಿಂಗ್ ಡಿಸೆಂಬರ್ 11 ರಂದು ವಧುವಿನ ಮನೆಗೆ ಹೋಗುತ್ತಿದ್ದಾಗ ಪುರುಷರ ಗುಂಪೊಂದು ಕುದುರೆಯನ್ನು ಕಡಿವಾಣದಿಂದ ಹಿಡಿದು ಬಲವಂತವಾಗಿ ಕೆಳಗಿಳಿಸಿತು ಎಂದು ಕುಟುಂಬವು ತನ್ನ ದೂರಿನಲ್ಲಿ ಆರೋಪಿಸಿದೆ.

ಅವರು ಕಲ್ಲುಗಳನ್ನು ಎಸೆದು ಮದುವೆಯಲ್ಲಿ ಭಾಗವಹಿಸಿದ್ದ ಮಹಿಳೆಯರಿಗೆ ಕಿರುಕುಳ ನೀಡಿದರು. ಆರೋಪಿಗಳು ಸಂಗೀತ ವ್ಯವಸ್ಥೆಯನ್ನು ಸಹ ಹಾನಿಗೊಳಿಸಿ, ಕಲ್ಲು ತೂರಾಟದಲ್ಲಿ ಡಿಜೆ ಗಾಯಗೊಂಡರು ಎಂದು ವರನ ತಂದೆ ನಂದ್ರಮ್ ಸಿಂಗ್ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ‘ಟರ್ಬನ್‌ ತೆಗೆಸಿ ಕಸದ ಬುಟ್ಟಿಗೆ ಎಸೆದರು..’; ಅಮೆರಿಕ ಬಂಧನ ಶಿಬಿರದಲ್ಲಿನ ಚಿತ್ರಹಿಂಸೆ ಬಗ್ಗೆ ವಿವರಿಸಿದ ಸಿಖ್‌ ವ್ಯಕ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....