Homeದಲಿತ್ ಫೈಲ್ಸ್ದಲಿತ ಐಪಿಎಸ್ ಅಧಿಕಾರಿ ಪೂರಣ್‌ ಕುಮಾರ್ 'ಆತ್ಮಹತ್ಯೆ' ಪ್ರಕರಣ: ಎಫ್‌ಐಆರ್‌ನಲ್ಲಿ ಎಸ್‌ಸಿ/ಎಸ್‌ಟಿ ಕಾಯ್ದೆ ದುರ್ಬಲಗೊಳಿಸಿರುವ ಆರೋಪ 

ದಲಿತ ಐಪಿಎಸ್ ಅಧಿಕಾರಿ ಪೂರಣ್‌ ಕುಮಾರ್ ‘ಆತ್ಮಹತ್ಯೆ’ ಪ್ರಕರಣ: ಎಫ್‌ಐಆರ್‌ನಲ್ಲಿ ಎಸ್‌ಸಿ/ಎಸ್‌ಟಿ ಕಾಯ್ದೆ ದುರ್ಬಲಗೊಳಿಸಿರುವ ಆರೋಪ 

- Advertisement -
- Advertisement -

ಹರಿಯಾಣದ ಉನ್ನತ ಪೊಲೀಸರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಚಂಡೀಗಢ ಪೊಲೀಸರು ನಿನ್ನೆ ರಾತ್ರಿ ದಾಖಲಿಸಿದ ಎಫ್‌ಐಆರ್‌ನಿಂದ ತೃಪ್ತರಾಗದ ಮೃತ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಅವರ ಕುಟುಂಬ, ಎಫ್‌ಐಆರ್‌ನಲ್ಲಿ ಕೆಲ ಬದಲಾವಣೆಗಳನ್ನು ಕೋರಿದೆ.

ಚಂಡೀಗಢದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಅವರಿಗೆ ಐಎಎಸ್ ಅಧಿಕಾರಿ ಮತ್ತು ಪೂರಣ್ ಕುಮಾರ್ ಅವರ ಪತ್ನಿ ಅಮ್ನೀತ್ ಪಿ. ಕುಮಾರ್ ಅವರು ಬರೆದ ಪತ್ರದಲ್ಲಿ, “ಎಫ್‌ಐಆರ್‌ನಲ್ಲಿ ಆರೋಪಿಗಳ ಹೆಸರುಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿಲ್ಲ, ನ್ಯಾಯಯುತ ಮತ್ತು ಪಾರದರ್ಶಕ ತನಿಖೆಗೆ ಅಗತ್ಯವಾದ ವಿವರಗಳು ದಾಖಲೆಯಲ್ಲಿ ಇಲ್ಲ” ಎಂದು ಒತ್ತಿ ಹೇಳಿದರು.

ಅಕ್ಟೋಬರ್ 8 ರಂದು ಸಲ್ಲಿಸಿದ ದೂರನ್ನು ಉಲ್ಲೇಖಿಸಿ ಪತ್ರ ಬರೆದಿರುವ ಅಮ್ನೀತ್ ಅವರು, “ಇಬ್ಬರು ಆರೋಪಿಗಳಾದ ಶತ್ರುಜೀತ್ ಕಪೂರ್ (ಹರಿಯಾಣ ಡಿಜಿಪಿ) ಮತ್ತು ನರೇಂದ್ರ ಬಿಜಾರ್ನಿಯಾ (ರೋಹ್ಟಕ್ ಎಸ್‌ಪಿ) ಅವರ ಹೆಸರುಗಳನ್ನು ಎಫ್‌ಐಆರ್‌ನಲ್ಲಿ ನಮೂದಿಸಲಾಗಿಲ್ಲ” ಎಂದು ಉಲ್ಲೇಖಿಸಿದ್ದಾರೆ.

ಚಂಡೀಗಢ ಪೊಲೀಸರು ಹೇಳಿಕೆಯಲ್ಲಿ, ಪೂರಣ್ ಕುಮಾರ್ ಅವರ ಆತ್ಮಹತ್ಯೆ ಪತ್ರದಲ್ಲಿ ಹೆಸರಿಸಲಾದ ಎಲ್ಲ ಅಧಿಕಾರಿಗಳ ವಿರುದ್ಧ ಬಿಎನ್‌ಎಸ್ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಚಂಡೀಗಢ ಪೊಲೀಸರು ತಿಳಿಸಿದ್ದಾರೆ.

ಪೂರಣ್ ಕುಮಾರ್ ಅವರ ಆತ್ಮಹತ್ಯೆ ಪತ್ರದಲ್ಲಿ, ಅವರು ತಮ್ಮ ಸಾವಿಗೆ ಪ್ರಸ್ತುತ ಹರಿಯಾಣ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಸೇರಿದಂತೆ ಹರಿಯಾಣದ 11 ಉನ್ನತ ಪೊಲೀಸರನ್ನು ಹೆಸರಿಸಿದ್ದಾರೆ. ಅಕ್ಟೋಬರ್ 7 ರಂದು, ಅವರು ಚಂಡೀಗಢದಲ್ಲಿರುವ ಖಾಸಗಿ ನಿವಾಸದಲ್ಲಿ ತಮ್ಮ ಸೇವಾ ರಿವಾಲ್ವರ್ ಬಳಸಿ ಆತ್ಮಹತ್ಯೆ ಮಾಡಿಕೊಂಡರು.

ಆದರೂ, ಮೃತ ಅಧಿಕಾರಿಯ ಪತ್ನಿ ನಿಗದಿತ ಎಫ್‌ಐಆರ್ ಸ್ವರೂಪದ ಪ್ರಕಾರ, ಎಲ್ಲಾ ಆರೋಪಿಗಳ ಹೆಸರುಗಳನ್ನು ಕಾಲಮ್ ಸಂಖ್ಯೆ ಏಳರ ಅಡಿಯಲ್ಲಿ ಸ್ಪಷ್ಟವಾಗಿ ಪಟ್ಟಿ ಮಾಡಬೇಕು. ಆದರೆ, ಅದನ್ನು ಅನುಸರಿಸಲಾಗಿಲ್ಲ ಎಂದು ಆರೋಪಿಸಿದ್ದಾರೆ. “ಸರಿಯಾದ ವಿಭಾಗದಲ್ಲಿ ಎಲ್ಲ ಆರೋಪಿ ವ್ಯಕ್ತಿಗಳ ಹೆಸರುಗಳನ್ನು ನಿಖರವಾಗಿ ಪ್ರತಿಬಿಂಬಿಸಲು ಎಫ್‌ಐಆರ್ ಅನ್ನು ತಿದ್ದುಪಡಿ ಮಾಡಬೇಕೆಂದು ವಿನಂತಿಸಲಾಗಿದೆ” ಎಂದು ಅವರು ಪತ್ರ ಬರೆದಿದ್ದಾರೆ.

“ಎಸ್‌ಸಿ/ಎಸ್‌ಟಿ ಕಾಯ್ದೆಯ ದುರ್ಬಲಗೊಳಿಸಿದ ವಿಭಾಗಗಳನ್ನು ತಿದ್ದುಪಡಿ ಮಾಡಬೇಕು” ಎಂದು ಅವರು ಒತ್ತಿ ಹೇಳಿದರು. “ಎಫ್‌ಐಆರ್‌ನಲ್ಲಿ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲಿ ಉಲ್ಲೇಖಿಸಲಾದ ವಿಭಾಗವನ್ನು ದುರ್ಬಲಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಅನ್ವಯವಾಗುವ ಸೂಕ್ತ ವಿಭಾಗವೆಂದರೆ ತಿದ್ದುಪಡಿ ಮಾಡಲಾದ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(2)(ವಿ) ಆಗಿದೆ. ಸರಿಯಾದ ಕಾನೂನು ನಿಬಂಧನೆಗಳನ್ನು ಅನ್ವಯಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಈ ವಿಭಾಗಗಳನ್ನು ಅದಕ್ಕೆ ಅನುಗುಣವಾಗಿ ಸೇರಿಸಬೇಕು” ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ, 1989 ರ ಸೆಕ್ಷನ್ 3(2)(ವಿ) ಪ್ರಕಾರ, ಬಲಿಪಶು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ (ಎಸ್‌ಸಿ/ಎಸ್‌ಟಿ) ಸದಸ್ಯನಾಗಿರುವುದರಿಂದ ಮಾತ್ರ ಅಪರಾಧ ಎಸಗುವ ವ್ಯಕ್ತಿಗಳು ಜೀವಾವಧಿ ಶಿಕ್ಷೆ ಮತ್ತು ದಂಡಕ್ಕೆ ಗುರಿಯಾಗುತ್ತಾರೆ.

ಅಮ್ನೀತ್ ಅವರು ಅಕ್ಟೋಬರ್ 8 ರಂದು ಚಂಡೀಗಢ ಪೊಲೀಸರಿಗೆ ನೀಡಿದ ದೂರಿನಲ್ಲಿ, ತನ್ನ ಪತಿಯ ಸಾವು ಸಾಮಾನ್ಯ ಆತ್ಮಹತ್ಯೆಯಲ್ಲ, ಬದಲಾಗಿ ತನ್ನ ಪತಿಯ ಮೇಲೆ ವ್ಯವಸ್ಥಿತವಾಗಿ ಕಿರುಕುಳ ನೀಡಿದ ಪರಿಣಾಮವಾಗಿದೆ. ಎಸ್‌ಸಿ ಸಮುದಾಯದ ಅಧಿಕಾರಿಯಾಗಿದ್ದ ಅವರಿಗೆ ಮೇಲಧಿಕಾರಿಗಳು ತಮ್ಮ ಸ್ಥಾನಗಳನ್ನು ಬಳಸಿಕೊಂಡು ಮಾನಸಿಕವಾಗಿ ಹಿಂಸೆ ನೀಡಿ ಸಾವಿಗೆ ಕಾರಣರಾಗಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗವು ಈ ಘಟನೆಯನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿ, ಚಂಡೀಗಢ ಪೊಲೀಸರಿಂದ ಕ್ರಮ ಕೈಗೊಳ್ಳುವಂತೆ ಕೇಳಿದೆ.

ಕ್ರಮಕ್ಕೆ ಆಗ್ರಹ

ಹರಿಯಾಣದಲ್ಲಿ ನಡೆದಿರುವ ಐಪಿಎಸ್‌ ಆತ್ಮಹತ್ಯೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಸರ್ಕಾರದ ವಿರುದ್ಧ ಸಾರ್ವಜನಿಕರು ಹಾಗೂ ವಿಪಕ್ಷ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ದಲಿತ ಸಂಘಟನೆಗಳಿಂದ ಹಿಡಿದು ಹಿರಿಯ ವಿರೋಧ ಪಕ್ಷದ ನಾಯಕರವರೆಗೆ ಎಲ್ಲರೂ ತ್ವರಿತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

ದಲಿತ ಐಪಿಎಸ್ ಅಧಿಕಾರಿಯ ಆತ್ಮಹತ್ಯೆಗೆ ಬಿಜೆಪಿ-ಆರ್‌ಎಸ್‌ಎಸ್‌ನ ‘ಮನುವಾದಿ’ ಸಿದ್ಧಾಂತವೇ ಕಾರಣ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...