Homeದಲಿತ್ ಫೈಲ್ಸ್ದಲಿತ ಐಪಿಎಸ್ ಅಧಿಕಾರಿ ಪೂರಣ್‌ ಕುಮಾರ್ 'ಆತ್ಮಹತ್ಯೆ' ಪ್ರಕರಣ: ಎಫ್‌ಐಆರ್‌ನಲ್ಲಿ ಎಸ್‌ಸಿ/ಎಸ್‌ಟಿ ಕಾಯ್ದೆ ದುರ್ಬಲಗೊಳಿಸಿರುವ ಆರೋಪ 

ದಲಿತ ಐಪಿಎಸ್ ಅಧಿಕಾರಿ ಪೂರಣ್‌ ಕುಮಾರ್ ‘ಆತ್ಮಹತ್ಯೆ’ ಪ್ರಕರಣ: ಎಫ್‌ಐಆರ್‌ನಲ್ಲಿ ಎಸ್‌ಸಿ/ಎಸ್‌ಟಿ ಕಾಯ್ದೆ ದುರ್ಬಲಗೊಳಿಸಿರುವ ಆರೋಪ 

- Advertisement -
- Advertisement -

ಹರಿಯಾಣದ ಉನ್ನತ ಪೊಲೀಸರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಚಂಡೀಗಢ ಪೊಲೀಸರು ನಿನ್ನೆ ರಾತ್ರಿ ದಾಖಲಿಸಿದ ಎಫ್‌ಐಆರ್‌ನಿಂದ ತೃಪ್ತರಾಗದ ಮೃತ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಅವರ ಕುಟುಂಬ, ಎಫ್‌ಐಆರ್‌ನಲ್ಲಿ ಕೆಲ ಬದಲಾವಣೆಗಳನ್ನು ಕೋರಿದೆ.

ಚಂಡೀಗಢದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಅವರಿಗೆ ಐಎಎಸ್ ಅಧಿಕಾರಿ ಮತ್ತು ಪೂರಣ್ ಕುಮಾರ್ ಅವರ ಪತ್ನಿ ಅಮ್ನೀತ್ ಪಿ. ಕುಮಾರ್ ಅವರು ಬರೆದ ಪತ್ರದಲ್ಲಿ, “ಎಫ್‌ಐಆರ್‌ನಲ್ಲಿ ಆರೋಪಿಗಳ ಹೆಸರುಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿಲ್ಲ, ನ್ಯಾಯಯುತ ಮತ್ತು ಪಾರದರ್ಶಕ ತನಿಖೆಗೆ ಅಗತ್ಯವಾದ ವಿವರಗಳು ದಾಖಲೆಯಲ್ಲಿ ಇಲ್ಲ” ಎಂದು ಒತ್ತಿ ಹೇಳಿದರು.

ಅಕ್ಟೋಬರ್ 8 ರಂದು ಸಲ್ಲಿಸಿದ ದೂರನ್ನು ಉಲ್ಲೇಖಿಸಿ ಪತ್ರ ಬರೆದಿರುವ ಅಮ್ನೀತ್ ಅವರು, “ಇಬ್ಬರು ಆರೋಪಿಗಳಾದ ಶತ್ರುಜೀತ್ ಕಪೂರ್ (ಹರಿಯಾಣ ಡಿಜಿಪಿ) ಮತ್ತು ನರೇಂದ್ರ ಬಿಜಾರ್ನಿಯಾ (ರೋಹ್ಟಕ್ ಎಸ್‌ಪಿ) ಅವರ ಹೆಸರುಗಳನ್ನು ಎಫ್‌ಐಆರ್‌ನಲ್ಲಿ ನಮೂದಿಸಲಾಗಿಲ್ಲ” ಎಂದು ಉಲ್ಲೇಖಿಸಿದ್ದಾರೆ.

ಚಂಡೀಗಢ ಪೊಲೀಸರು ಹೇಳಿಕೆಯಲ್ಲಿ, ಪೂರಣ್ ಕುಮಾರ್ ಅವರ ಆತ್ಮಹತ್ಯೆ ಪತ್ರದಲ್ಲಿ ಹೆಸರಿಸಲಾದ ಎಲ್ಲ ಅಧಿಕಾರಿಗಳ ವಿರುದ್ಧ ಬಿಎನ್‌ಎಸ್ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಚಂಡೀಗಢ ಪೊಲೀಸರು ತಿಳಿಸಿದ್ದಾರೆ.

ಪೂರಣ್ ಕುಮಾರ್ ಅವರ ಆತ್ಮಹತ್ಯೆ ಪತ್ರದಲ್ಲಿ, ಅವರು ತಮ್ಮ ಸಾವಿಗೆ ಪ್ರಸ್ತುತ ಹರಿಯಾಣ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಸೇರಿದಂತೆ ಹರಿಯಾಣದ 11 ಉನ್ನತ ಪೊಲೀಸರನ್ನು ಹೆಸರಿಸಿದ್ದಾರೆ. ಅಕ್ಟೋಬರ್ 7 ರಂದು, ಅವರು ಚಂಡೀಗಢದಲ್ಲಿರುವ ಖಾಸಗಿ ನಿವಾಸದಲ್ಲಿ ತಮ್ಮ ಸೇವಾ ರಿವಾಲ್ವರ್ ಬಳಸಿ ಆತ್ಮಹತ್ಯೆ ಮಾಡಿಕೊಂಡರು.

ಆದರೂ, ಮೃತ ಅಧಿಕಾರಿಯ ಪತ್ನಿ ನಿಗದಿತ ಎಫ್‌ಐಆರ್ ಸ್ವರೂಪದ ಪ್ರಕಾರ, ಎಲ್ಲಾ ಆರೋಪಿಗಳ ಹೆಸರುಗಳನ್ನು ಕಾಲಮ್ ಸಂಖ್ಯೆ ಏಳರ ಅಡಿಯಲ್ಲಿ ಸ್ಪಷ್ಟವಾಗಿ ಪಟ್ಟಿ ಮಾಡಬೇಕು. ಆದರೆ, ಅದನ್ನು ಅನುಸರಿಸಲಾಗಿಲ್ಲ ಎಂದು ಆರೋಪಿಸಿದ್ದಾರೆ. “ಸರಿಯಾದ ವಿಭಾಗದಲ್ಲಿ ಎಲ್ಲ ಆರೋಪಿ ವ್ಯಕ್ತಿಗಳ ಹೆಸರುಗಳನ್ನು ನಿಖರವಾಗಿ ಪ್ರತಿಬಿಂಬಿಸಲು ಎಫ್‌ಐಆರ್ ಅನ್ನು ತಿದ್ದುಪಡಿ ಮಾಡಬೇಕೆಂದು ವಿನಂತಿಸಲಾಗಿದೆ” ಎಂದು ಅವರು ಪತ್ರ ಬರೆದಿದ್ದಾರೆ.

“ಎಸ್‌ಸಿ/ಎಸ್‌ಟಿ ಕಾಯ್ದೆಯ ದುರ್ಬಲಗೊಳಿಸಿದ ವಿಭಾಗಗಳನ್ನು ತಿದ್ದುಪಡಿ ಮಾಡಬೇಕು” ಎಂದು ಅವರು ಒತ್ತಿ ಹೇಳಿದರು. “ಎಫ್‌ಐಆರ್‌ನಲ್ಲಿ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲಿ ಉಲ್ಲೇಖಿಸಲಾದ ವಿಭಾಗವನ್ನು ದುರ್ಬಲಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಅನ್ವಯವಾಗುವ ಸೂಕ್ತ ವಿಭಾಗವೆಂದರೆ ತಿದ್ದುಪಡಿ ಮಾಡಲಾದ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(2)(ವಿ) ಆಗಿದೆ. ಸರಿಯಾದ ಕಾನೂನು ನಿಬಂಧನೆಗಳನ್ನು ಅನ್ವಯಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಈ ವಿಭಾಗಗಳನ್ನು ಅದಕ್ಕೆ ಅನುಗುಣವಾಗಿ ಸೇರಿಸಬೇಕು” ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ, 1989 ರ ಸೆಕ್ಷನ್ 3(2)(ವಿ) ಪ್ರಕಾರ, ಬಲಿಪಶು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ (ಎಸ್‌ಸಿ/ಎಸ್‌ಟಿ) ಸದಸ್ಯನಾಗಿರುವುದರಿಂದ ಮಾತ್ರ ಅಪರಾಧ ಎಸಗುವ ವ್ಯಕ್ತಿಗಳು ಜೀವಾವಧಿ ಶಿಕ್ಷೆ ಮತ್ತು ದಂಡಕ್ಕೆ ಗುರಿಯಾಗುತ್ತಾರೆ.

ಅಮ್ನೀತ್ ಅವರು ಅಕ್ಟೋಬರ್ 8 ರಂದು ಚಂಡೀಗಢ ಪೊಲೀಸರಿಗೆ ನೀಡಿದ ದೂರಿನಲ್ಲಿ, ತನ್ನ ಪತಿಯ ಸಾವು ಸಾಮಾನ್ಯ ಆತ್ಮಹತ್ಯೆಯಲ್ಲ, ಬದಲಾಗಿ ತನ್ನ ಪತಿಯ ಮೇಲೆ ವ್ಯವಸ್ಥಿತವಾಗಿ ಕಿರುಕುಳ ನೀಡಿದ ಪರಿಣಾಮವಾಗಿದೆ. ಎಸ್‌ಸಿ ಸಮುದಾಯದ ಅಧಿಕಾರಿಯಾಗಿದ್ದ ಅವರಿಗೆ ಮೇಲಧಿಕಾರಿಗಳು ತಮ್ಮ ಸ್ಥಾನಗಳನ್ನು ಬಳಸಿಕೊಂಡು ಮಾನಸಿಕವಾಗಿ ಹಿಂಸೆ ನೀಡಿ ಸಾವಿಗೆ ಕಾರಣರಾಗಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗವು ಈ ಘಟನೆಯನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿ, ಚಂಡೀಗಢ ಪೊಲೀಸರಿಂದ ಕ್ರಮ ಕೈಗೊಳ್ಳುವಂತೆ ಕೇಳಿದೆ.

ಕ್ರಮಕ್ಕೆ ಆಗ್ರಹ

ಹರಿಯಾಣದಲ್ಲಿ ನಡೆದಿರುವ ಐಪಿಎಸ್‌ ಆತ್ಮಹತ್ಯೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಸರ್ಕಾರದ ವಿರುದ್ಧ ಸಾರ್ವಜನಿಕರು ಹಾಗೂ ವಿಪಕ್ಷ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ದಲಿತ ಸಂಘಟನೆಗಳಿಂದ ಹಿಡಿದು ಹಿರಿಯ ವಿರೋಧ ಪಕ್ಷದ ನಾಯಕರವರೆಗೆ ಎಲ್ಲರೂ ತ್ವರಿತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

ದಲಿತ ಐಪಿಎಸ್ ಅಧಿಕಾರಿಯ ಆತ್ಮಹತ್ಯೆಗೆ ಬಿಜೆಪಿ-ಆರ್‌ಎಸ್‌ಎಸ್‌ನ ‘ಮನುವಾದಿ’ ಸಿದ್ಧಾಂತವೇ ಕಾರಣ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...