Homeಮುಖಪುಟದಲಿತ ಐಪಿಎಸ್ ಅಧಿಕಾರಿ ಆತ್ಮಹತ್ಯೆ ಪ್ರಕರಣ : ಹರಿಯಾಣ ಡಿಜಿಪಿಗೆ ಕಡ್ಡಾಯ ರಜೆ, ಪ್ರಧಾನಿ ಮೋದಿ...

ದಲಿತ ಐಪಿಎಸ್ ಅಧಿಕಾರಿ ಆತ್ಮಹತ್ಯೆ ಪ್ರಕರಣ : ಹರಿಯಾಣ ಡಿಜಿಪಿಗೆ ಕಡ್ಡಾಯ ರಜೆ, ಪ್ರಧಾನಿ ಮೋದಿ ಸೋನಿಪತ್ ರ‍್ಯಾಲಿ ರದ್ದು

- Advertisement -
- Advertisement -

ಜಾತಿ ದೌರ್ಜನ್ಯದ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಹರಿಯಾಣ ಕೇಡರ್‌ನ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಅವರ ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟಿನ ನಡುವೆಯೇ, ಹರಿಯಾಣ ಸರ್ಕಾರ ಡಿಜಿಪಿ ಶತ್ರುಜೀತ್ ಕಪೂರ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದೆ.

ಕಪೂರ್ ಅವರನ್ನು ರಜೆಯ ಮೇಲೆ ಕಳುಹಿಸಲಾಗಿದೆ ಎಂದು ಹರಿಯಾಣ ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ರಾಜೀವ್ ಜೇಟ್ಲಿ ಸೋಮವಾರ (ಅ.13) ದೃಢಪಡಿಸಿದ್ದಾರೆ.

ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಅಕ್ಟೋಬರ್ 17ಕ್ಕೆ ನಿಗದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸೋನಿಪತ್ ಭೇಟಿ ರದ್ದಾಗಿದೆ.

ಶತ್ರುಜೀತ್ ಕಪೂರ್ ಅವರ ಜವಾಬ್ದಾರಿಯನ್ನು ರಾಜ್ಯ ಸರ್ಕಾರವು ಹರಿಯಾಣ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮತ್ತು ಹರಿಯಾಣ ರಾಜ್ಯ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋದ ಮಹಾನಿರ್ದೇಶಕರಾಗಿರುವ 1992ರ ಬ್ಯಾಚ್ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ ಸಿಂಗ್ ಅವರಿಗೆ ಹೆಚ್ಚುವರಿಯಾಗಿ ನೀಡಿದೆ.

ಈ ವರ್ಷದ ಡಿಸೆಂಬರ್ 31 ರಂದು ನಿವೃತ್ತರಾಗಲಿರುವ ಸಿಂಗ್, ಕಪೂರ್ ಅವರ ರಜೆಯ ಸಮಯದಲ್ಲಿ ಅವರ ಹುದ್ದೆಯನ್ನು ಅಲಂಕರಿಸಲಿದ್ದಾರೆ.

ಪೂರಣ್ ಕುಮಾರ್ ಸಾವಿಗೆ ಸಂಬಂಧಿಸಿದಂತೆ ರೋಹ್ಟಕ್ ಪೊಲೀಸ್ ವರಿಷ್ಠಾಧಿಕಾರಿ ನರೇಂದ್ರ ಬಿಜಾರ್ನಿಯಾ ಅವರನ್ನು ಹುದ್ದೆ ಗೊತ್ತುಪಡಿಸದೆ ವರ್ಗಾವಣೆ ಮಾಡಿದ ಬೆನ್ನಲ್ಲೇ ಶತ್ರುಜೀತ್ ಕಪೂರ್ ಅವರನ್ನು ರಜೆಯ ಮೇಲೆ ಕಳುಹಿಸಲಾಗಿದೆ.

ಪೂರಣ್ ಕುಮಾರ್ ಅವರು ಸಾವಿಗೂ ಮುನ್ನ ಬರೆದಿರುವ 9 ಪುಟಗಳ ಸುದೀರ್ಘ ಡೆತ್ ನೋಟ್‌ನಲ್ಲಿ ಮೇಲಧಿಕಾರಿಗಳ ವಿರುದ್ದ ಜಾತಿ ತಾರತಮ್ಯದ ಆರೋಪ ಹೊರಿಸಿದ್ದಾರೆ. ಇದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಹಾಗಾಗಿ, ಒತ್ತಡದ ಹಿನ್ನೆಲೆ ಮತ್ತು ಪರಿಶಿಷ್ಟ ಜಾತಿ, ಸಮುದಾಯಗಳನ್ನು ಸಮಾಧಾನ ಮಾಡಲು ಸರ್ಕಾರ ಡಿಜಿಪಿ ವಿರುದ್ದ ಕ್ರಮ ಕೈಗೊಂಡಿದೆ ಎಂದು ಹೇಳಲಾಗ್ತಿದೆ.

ಡೆತ್ ನೋಟ್‌ನಲ್ಲಿ ಪೂರಣ್ ಕುಮಾರ್ ಅವರು ಕಪೂರ್, ಬಿಜಾರ್ನಿಯಾ ಸೇರಿದಂತೆ ಎಂಟು ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಮಾನಸಿಕ ಕಿರುಕುಳ, ಸಾರ್ವಜನಿಕ ಅವಮಾನ ಮತ್ತು ಅಧಿಕಾರ ದುರುಪಯೋಗದ ಆರೋಪ ಹೊರಿಸಿದ್ದಾರೆ.

ಕುಮಾರ್ ಅವರ ಪತ್ನಿ, ಹಿರಿಯ ಐಎಎಸ್ ಅಧಿಕಾರಿ ಅಮ್ನೀತ್ ಅವರು, ತಮ್ಮ ಪತಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕಪೂರ್ ಮತ್ತು ಬಿಜಾರ್ನಿಯಾ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಬೇಕೆಂದು ಒತ್ತಾಯಿಸಿದ್ದಾರೆ. ಕ್ರಮ ಕೈಗೊಳ್ಳುವವರೆಗೆ ಮರಣೋತ್ತರ ಪರೀಕ್ಷೆ ಮತ್ತು ಅಂತ್ಯಕ್ರಿಯೆಗೆ ಒಪ್ಪಿಗೆ ನೀಡಲು ಕುಟುಂಬ ನಿರಾಕರಿಸಿದೆ.

ಪ್ರಧಾನಿ ಮೋದಿ ಭೇಟಿ ರದ್ದು

ಹರಿಯಾಣದ ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರ್ಕಾರದ ಮೊದಲ ವಾರ್ಷಿಕೋತ್ಸವ ಆಚರಣೆಗಾಗಿ ಅಕ್ಟೋಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋನಿಪತ್‌ಗೆ ಭೇಟಿ ನೀಡಬೇಕಿತ್ತು. ಆದರೆ, ಅಧಿಕಾರಿಯ ಆತ್ಮಹತ್ಯೆಯಿಂದ ಉಂಟಾದ ಜನಾಕ್ರೋಶ ಮೋದಿ ಪ್ರವಾಸ ರದ್ದತಿಗೆ ಕಾರಣವಾಗಿದೆ.

ಇದಲ್ಲದೆ, ಮಂಗಳವಾರ ನಡೆಯಲಿರುವ ರಾಜ್ಯಮಟ್ಟದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಪಾಲ್ಗೊಳ್ಳಲು ಸಿಎಂ ಸೈನಿ ಅವರು ನೂಹ್‌ಗೆ ಭೇಟಿ ನೀಡುವುದನ್ನು ಕೂಡ ರದ್ದುಗೊಳಿಸಲಾಗಿದೆ.

ಸೋನಿಪತ್‌ನ ರಾಯ್‌ನಲ್ಲಿರುವ ಎಜುಕೇಶನ್ ಸಿಟಿಯಲ್ಲಿ ‘ಜನ್ ವಿಶ್ವಾಸ್-ಜನ್ ವಿಕಾಸ್’ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಬೇಕಿತ್ತು ಮತ್ತು ಹಲವಾರು ಹೊಸ ಉಪಕ್ರಮಗಳಿಗೆ ಚಾಲನೆ ನೀಡಬೇಕಿತ್ತು. ಆದರೆ, ಏಕಾಏಕಿ ಕಾರ್ಯಕ್ರಮ ಭೇಟಿ ರದ್ದಾಗಿದೆ.

ರದ್ದತಿಗೆ ಯಾವುದೇ ಅಧಿಕೃತ ಕಾರಣವನ್ನು ನೀಡಲಾಗಿಲ್ಲವಾದರೂ, ಐಪಿಎಸ್ ಅಧಿಕಾರಿಯ ಆತ್ಮಹತ್ಯೆಯ ನಂತರದ ಪರಿಸ್ಥಿತಿಯು ಪ್ರಧಾನಿಯವರ ಭೇಟಿಗೆ ಅನುಕೂಲಕರವಾಗಿಲ್ಲ ಎಂದು ವರದಿಗಳು ತಿಳಿಸಿವೆ.

ಜಿ.ಎನ್ ಸಾಯಿಬಾಬಾ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಟಿಐಎಸ್ಎಸ್ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...