Homeಮುಖಪುಟದಲಿತ ಐಪಿಎಸ್ ಅಧಿಕಾರಿ ಆತ್ಮಹತ್ಯೆ ಪ್ರಕರಣ : ಹರಿಯಾಣ ಡಿಜಿಪಿಗೆ ಕಡ್ಡಾಯ ರಜೆ, ಪ್ರಧಾನಿ ಮೋದಿ...

ದಲಿತ ಐಪಿಎಸ್ ಅಧಿಕಾರಿ ಆತ್ಮಹತ್ಯೆ ಪ್ರಕರಣ : ಹರಿಯಾಣ ಡಿಜಿಪಿಗೆ ಕಡ್ಡಾಯ ರಜೆ, ಪ್ರಧಾನಿ ಮೋದಿ ಸೋನಿಪತ್ ರ‍್ಯಾಲಿ ರದ್ದು

- Advertisement -
- Advertisement -

ಜಾತಿ ದೌರ್ಜನ್ಯದ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಹರಿಯಾಣ ಕೇಡರ್‌ನ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಅವರ ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟಿನ ನಡುವೆಯೇ, ಹರಿಯಾಣ ಸರ್ಕಾರ ಡಿಜಿಪಿ ಶತ್ರುಜೀತ್ ಕಪೂರ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದೆ.

ಕಪೂರ್ ಅವರನ್ನು ರಜೆಯ ಮೇಲೆ ಕಳುಹಿಸಲಾಗಿದೆ ಎಂದು ಹರಿಯಾಣ ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ರಾಜೀವ್ ಜೇಟ್ಲಿ ಸೋಮವಾರ (ಅ.13) ದೃಢಪಡಿಸಿದ್ದಾರೆ.

ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಅಕ್ಟೋಬರ್ 17ಕ್ಕೆ ನಿಗದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸೋನಿಪತ್ ಭೇಟಿ ರದ್ದಾಗಿದೆ.

ಶತ್ರುಜೀತ್ ಕಪೂರ್ ಅವರ ಜವಾಬ್ದಾರಿಯನ್ನು ರಾಜ್ಯ ಸರ್ಕಾರವು ಹರಿಯಾಣ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮತ್ತು ಹರಿಯಾಣ ರಾಜ್ಯ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋದ ಮಹಾನಿರ್ದೇಶಕರಾಗಿರುವ 1992ರ ಬ್ಯಾಚ್ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ ಸಿಂಗ್ ಅವರಿಗೆ ಹೆಚ್ಚುವರಿಯಾಗಿ ನೀಡಿದೆ.

ಈ ವರ್ಷದ ಡಿಸೆಂಬರ್ 31 ರಂದು ನಿವೃತ್ತರಾಗಲಿರುವ ಸಿಂಗ್, ಕಪೂರ್ ಅವರ ರಜೆಯ ಸಮಯದಲ್ಲಿ ಅವರ ಹುದ್ದೆಯನ್ನು ಅಲಂಕರಿಸಲಿದ್ದಾರೆ.

ಪೂರಣ್ ಕುಮಾರ್ ಸಾವಿಗೆ ಸಂಬಂಧಿಸಿದಂತೆ ರೋಹ್ಟಕ್ ಪೊಲೀಸ್ ವರಿಷ್ಠಾಧಿಕಾರಿ ನರೇಂದ್ರ ಬಿಜಾರ್ನಿಯಾ ಅವರನ್ನು ಹುದ್ದೆ ಗೊತ್ತುಪಡಿಸದೆ ವರ್ಗಾವಣೆ ಮಾಡಿದ ಬೆನ್ನಲ್ಲೇ ಶತ್ರುಜೀತ್ ಕಪೂರ್ ಅವರನ್ನು ರಜೆಯ ಮೇಲೆ ಕಳುಹಿಸಲಾಗಿದೆ.

ಪೂರಣ್ ಕುಮಾರ್ ಅವರು ಸಾವಿಗೂ ಮುನ್ನ ಬರೆದಿರುವ 9 ಪುಟಗಳ ಸುದೀರ್ಘ ಡೆತ್ ನೋಟ್‌ನಲ್ಲಿ ಮೇಲಧಿಕಾರಿಗಳ ವಿರುದ್ದ ಜಾತಿ ತಾರತಮ್ಯದ ಆರೋಪ ಹೊರಿಸಿದ್ದಾರೆ. ಇದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಹಾಗಾಗಿ, ಒತ್ತಡದ ಹಿನ್ನೆಲೆ ಮತ್ತು ಪರಿಶಿಷ್ಟ ಜಾತಿ, ಸಮುದಾಯಗಳನ್ನು ಸಮಾಧಾನ ಮಾಡಲು ಸರ್ಕಾರ ಡಿಜಿಪಿ ವಿರುದ್ದ ಕ್ರಮ ಕೈಗೊಂಡಿದೆ ಎಂದು ಹೇಳಲಾಗ್ತಿದೆ.

ಡೆತ್ ನೋಟ್‌ನಲ್ಲಿ ಪೂರಣ್ ಕುಮಾರ್ ಅವರು ಕಪೂರ್, ಬಿಜಾರ್ನಿಯಾ ಸೇರಿದಂತೆ ಎಂಟು ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಮಾನಸಿಕ ಕಿರುಕುಳ, ಸಾರ್ವಜನಿಕ ಅವಮಾನ ಮತ್ತು ಅಧಿಕಾರ ದುರುಪಯೋಗದ ಆರೋಪ ಹೊರಿಸಿದ್ದಾರೆ.

ಕುಮಾರ್ ಅವರ ಪತ್ನಿ, ಹಿರಿಯ ಐಎಎಸ್ ಅಧಿಕಾರಿ ಅಮ್ನೀತ್ ಅವರು, ತಮ್ಮ ಪತಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕಪೂರ್ ಮತ್ತು ಬಿಜಾರ್ನಿಯಾ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಬೇಕೆಂದು ಒತ್ತಾಯಿಸಿದ್ದಾರೆ. ಕ್ರಮ ಕೈಗೊಳ್ಳುವವರೆಗೆ ಮರಣೋತ್ತರ ಪರೀಕ್ಷೆ ಮತ್ತು ಅಂತ್ಯಕ್ರಿಯೆಗೆ ಒಪ್ಪಿಗೆ ನೀಡಲು ಕುಟುಂಬ ನಿರಾಕರಿಸಿದೆ.

ಪ್ರಧಾನಿ ಮೋದಿ ಭೇಟಿ ರದ್ದು

ಹರಿಯಾಣದ ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರ್ಕಾರದ ಮೊದಲ ವಾರ್ಷಿಕೋತ್ಸವ ಆಚರಣೆಗಾಗಿ ಅಕ್ಟೋಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋನಿಪತ್‌ಗೆ ಭೇಟಿ ನೀಡಬೇಕಿತ್ತು. ಆದರೆ, ಅಧಿಕಾರಿಯ ಆತ್ಮಹತ್ಯೆಯಿಂದ ಉಂಟಾದ ಜನಾಕ್ರೋಶ ಮೋದಿ ಪ್ರವಾಸ ರದ್ದತಿಗೆ ಕಾರಣವಾಗಿದೆ.

ಇದಲ್ಲದೆ, ಮಂಗಳವಾರ ನಡೆಯಲಿರುವ ರಾಜ್ಯಮಟ್ಟದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಪಾಲ್ಗೊಳ್ಳಲು ಸಿಎಂ ಸೈನಿ ಅವರು ನೂಹ್‌ಗೆ ಭೇಟಿ ನೀಡುವುದನ್ನು ಕೂಡ ರದ್ದುಗೊಳಿಸಲಾಗಿದೆ.

ಸೋನಿಪತ್‌ನ ರಾಯ್‌ನಲ್ಲಿರುವ ಎಜುಕೇಶನ್ ಸಿಟಿಯಲ್ಲಿ ‘ಜನ್ ವಿಶ್ವಾಸ್-ಜನ್ ವಿಕಾಸ್’ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಬೇಕಿತ್ತು ಮತ್ತು ಹಲವಾರು ಹೊಸ ಉಪಕ್ರಮಗಳಿಗೆ ಚಾಲನೆ ನೀಡಬೇಕಿತ್ತು. ಆದರೆ, ಏಕಾಏಕಿ ಕಾರ್ಯಕ್ರಮ ಭೇಟಿ ರದ್ದಾಗಿದೆ.

ರದ್ದತಿಗೆ ಯಾವುದೇ ಅಧಿಕೃತ ಕಾರಣವನ್ನು ನೀಡಲಾಗಿಲ್ಲವಾದರೂ, ಐಪಿಎಸ್ ಅಧಿಕಾರಿಯ ಆತ್ಮಹತ್ಯೆಯ ನಂತರದ ಪರಿಸ್ಥಿತಿಯು ಪ್ರಧಾನಿಯವರ ಭೇಟಿಗೆ ಅನುಕೂಲಕರವಾಗಿಲ್ಲ ಎಂದು ವರದಿಗಳು ತಿಳಿಸಿವೆ.

ಜಿ.ಎನ್ ಸಾಯಿಬಾಬಾ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಟಿಐಎಸ್ಎಸ್ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...