Homeಮುಖಪುಟದಲಿತ ಐಪಿಎಸ್ ಅಧಿಕಾರಿ ಆತ್ಮಹತ್ಯೆ ಪ್ರಕರಣ : ಹರಿಯಾಣ ಡಿಜಿಪಿಗೆ ಕಡ್ಡಾಯ ರಜೆ, ಪ್ರಧಾನಿ ಮೋದಿ...

ದಲಿತ ಐಪಿಎಸ್ ಅಧಿಕಾರಿ ಆತ್ಮಹತ್ಯೆ ಪ್ರಕರಣ : ಹರಿಯಾಣ ಡಿಜಿಪಿಗೆ ಕಡ್ಡಾಯ ರಜೆ, ಪ್ರಧಾನಿ ಮೋದಿ ಸೋನಿಪತ್ ರ‍್ಯಾಲಿ ರದ್ದು

- Advertisement -
- Advertisement -

ಜಾತಿ ದೌರ್ಜನ್ಯದ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಹರಿಯಾಣ ಕೇಡರ್‌ನ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಅವರ ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟಿನ ನಡುವೆಯೇ, ಹರಿಯಾಣ ಸರ್ಕಾರ ಡಿಜಿಪಿ ಶತ್ರುಜೀತ್ ಕಪೂರ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದೆ.

ಕಪೂರ್ ಅವರನ್ನು ರಜೆಯ ಮೇಲೆ ಕಳುಹಿಸಲಾಗಿದೆ ಎಂದು ಹರಿಯಾಣ ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ರಾಜೀವ್ ಜೇಟ್ಲಿ ಸೋಮವಾರ (ಅ.13) ದೃಢಪಡಿಸಿದ್ದಾರೆ.

ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಅಕ್ಟೋಬರ್ 17ಕ್ಕೆ ನಿಗದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸೋನಿಪತ್ ಭೇಟಿ ರದ್ದಾಗಿದೆ.

ಶತ್ರುಜೀತ್ ಕಪೂರ್ ಅವರ ಜವಾಬ್ದಾರಿಯನ್ನು ರಾಜ್ಯ ಸರ್ಕಾರವು ಹರಿಯಾಣ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮತ್ತು ಹರಿಯಾಣ ರಾಜ್ಯ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋದ ಮಹಾನಿರ್ದೇಶಕರಾಗಿರುವ 1992ರ ಬ್ಯಾಚ್ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ ಸಿಂಗ್ ಅವರಿಗೆ ಹೆಚ್ಚುವರಿಯಾಗಿ ನೀಡಿದೆ.

ಈ ವರ್ಷದ ಡಿಸೆಂಬರ್ 31 ರಂದು ನಿವೃತ್ತರಾಗಲಿರುವ ಸಿಂಗ್, ಕಪೂರ್ ಅವರ ರಜೆಯ ಸಮಯದಲ್ಲಿ ಅವರ ಹುದ್ದೆಯನ್ನು ಅಲಂಕರಿಸಲಿದ್ದಾರೆ.

ಪೂರಣ್ ಕುಮಾರ್ ಸಾವಿಗೆ ಸಂಬಂಧಿಸಿದಂತೆ ರೋಹ್ಟಕ್ ಪೊಲೀಸ್ ವರಿಷ್ಠಾಧಿಕಾರಿ ನರೇಂದ್ರ ಬಿಜಾರ್ನಿಯಾ ಅವರನ್ನು ಹುದ್ದೆ ಗೊತ್ತುಪಡಿಸದೆ ವರ್ಗಾವಣೆ ಮಾಡಿದ ಬೆನ್ನಲ್ಲೇ ಶತ್ರುಜೀತ್ ಕಪೂರ್ ಅವರನ್ನು ರಜೆಯ ಮೇಲೆ ಕಳುಹಿಸಲಾಗಿದೆ.

ಪೂರಣ್ ಕುಮಾರ್ ಅವರು ಸಾವಿಗೂ ಮುನ್ನ ಬರೆದಿರುವ 9 ಪುಟಗಳ ಸುದೀರ್ಘ ಡೆತ್ ನೋಟ್‌ನಲ್ಲಿ ಮೇಲಧಿಕಾರಿಗಳ ವಿರುದ್ದ ಜಾತಿ ತಾರತಮ್ಯದ ಆರೋಪ ಹೊರಿಸಿದ್ದಾರೆ. ಇದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಹಾಗಾಗಿ, ಒತ್ತಡದ ಹಿನ್ನೆಲೆ ಮತ್ತು ಪರಿಶಿಷ್ಟ ಜಾತಿ, ಸಮುದಾಯಗಳನ್ನು ಸಮಾಧಾನ ಮಾಡಲು ಸರ್ಕಾರ ಡಿಜಿಪಿ ವಿರುದ್ದ ಕ್ರಮ ಕೈಗೊಂಡಿದೆ ಎಂದು ಹೇಳಲಾಗ್ತಿದೆ.

ಡೆತ್ ನೋಟ್‌ನಲ್ಲಿ ಪೂರಣ್ ಕುಮಾರ್ ಅವರು ಕಪೂರ್, ಬಿಜಾರ್ನಿಯಾ ಸೇರಿದಂತೆ ಎಂಟು ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಮಾನಸಿಕ ಕಿರುಕುಳ, ಸಾರ್ವಜನಿಕ ಅವಮಾನ ಮತ್ತು ಅಧಿಕಾರ ದುರುಪಯೋಗದ ಆರೋಪ ಹೊರಿಸಿದ್ದಾರೆ.

ಕುಮಾರ್ ಅವರ ಪತ್ನಿ, ಹಿರಿಯ ಐಎಎಸ್ ಅಧಿಕಾರಿ ಅಮ್ನೀತ್ ಅವರು, ತಮ್ಮ ಪತಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕಪೂರ್ ಮತ್ತು ಬಿಜಾರ್ನಿಯಾ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಬೇಕೆಂದು ಒತ್ತಾಯಿಸಿದ್ದಾರೆ. ಕ್ರಮ ಕೈಗೊಳ್ಳುವವರೆಗೆ ಮರಣೋತ್ತರ ಪರೀಕ್ಷೆ ಮತ್ತು ಅಂತ್ಯಕ್ರಿಯೆಗೆ ಒಪ್ಪಿಗೆ ನೀಡಲು ಕುಟುಂಬ ನಿರಾಕರಿಸಿದೆ.

ಪ್ರಧಾನಿ ಮೋದಿ ಭೇಟಿ ರದ್ದು

ಹರಿಯಾಣದ ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರ್ಕಾರದ ಮೊದಲ ವಾರ್ಷಿಕೋತ್ಸವ ಆಚರಣೆಗಾಗಿ ಅಕ್ಟೋಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋನಿಪತ್‌ಗೆ ಭೇಟಿ ನೀಡಬೇಕಿತ್ತು. ಆದರೆ, ಅಧಿಕಾರಿಯ ಆತ್ಮಹತ್ಯೆಯಿಂದ ಉಂಟಾದ ಜನಾಕ್ರೋಶ ಮೋದಿ ಪ್ರವಾಸ ರದ್ದತಿಗೆ ಕಾರಣವಾಗಿದೆ.

ಇದಲ್ಲದೆ, ಮಂಗಳವಾರ ನಡೆಯಲಿರುವ ರಾಜ್ಯಮಟ್ಟದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಪಾಲ್ಗೊಳ್ಳಲು ಸಿಎಂ ಸೈನಿ ಅವರು ನೂಹ್‌ಗೆ ಭೇಟಿ ನೀಡುವುದನ್ನು ಕೂಡ ರದ್ದುಗೊಳಿಸಲಾಗಿದೆ.

ಸೋನಿಪತ್‌ನ ರಾಯ್‌ನಲ್ಲಿರುವ ಎಜುಕೇಶನ್ ಸಿಟಿಯಲ್ಲಿ ‘ಜನ್ ವಿಶ್ವಾಸ್-ಜನ್ ವಿಕಾಸ್’ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಬೇಕಿತ್ತು ಮತ್ತು ಹಲವಾರು ಹೊಸ ಉಪಕ್ರಮಗಳಿಗೆ ಚಾಲನೆ ನೀಡಬೇಕಿತ್ತು. ಆದರೆ, ಏಕಾಏಕಿ ಕಾರ್ಯಕ್ರಮ ಭೇಟಿ ರದ್ದಾಗಿದೆ.

ರದ್ದತಿಗೆ ಯಾವುದೇ ಅಧಿಕೃತ ಕಾರಣವನ್ನು ನೀಡಲಾಗಿಲ್ಲವಾದರೂ, ಐಪಿಎಸ್ ಅಧಿಕಾರಿಯ ಆತ್ಮಹತ್ಯೆಯ ನಂತರದ ಪರಿಸ್ಥಿತಿಯು ಪ್ರಧಾನಿಯವರ ಭೇಟಿಗೆ ಅನುಕೂಲಕರವಾಗಿಲ್ಲ ಎಂದು ವರದಿಗಳು ತಿಳಿಸಿವೆ.

ಜಿ.ಎನ್ ಸಾಯಿಬಾಬಾ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಟಿಐಎಸ್ಎಸ್ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...