Homeಕರ್ನಾಟಕದಲಿತ ಪತ್ರಕರ್ತನ ಮೇಲೆ ಹಲ್ಲೆ-ಜಾತಿ ನಿಂದನೆ: ತುಮಕೂರು ಜಿಲ್ಲಾ ಪಬ್ಲಿಕ್ ಟಿವಿ ವರದಿಗಾರನ ಬಂಧನ

ದಲಿತ ಪತ್ರಕರ್ತನ ಮೇಲೆ ಹಲ್ಲೆ-ಜಾತಿ ನಿಂದನೆ: ತುಮಕೂರು ಜಿಲ್ಲಾ ಪಬ್ಲಿಕ್ ಟಿವಿ ವರದಿಗಾರನ ಬಂಧನ

- Advertisement -
- Advertisement -

ದಲಿತ ಸಮುದಾಯದ ಪತ್ರಕರ್ತನ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದಡಿ ತುಮಕೂರು ಜಿಲ್ಲೆ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಅವರನ್ನು ಬಂಧಿಸಲಾಗಿದ್ದು, ಆರೋಪಿತ ಪತ್ರಕರ್ತನ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಆರೋಪಿತ ಪತ್ರಕರ್ತ ಮಂಜುನಾಥ್ ತಾಳಮಕ್ಕಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

ಪರಿಶಿಷ್ಟ ಜಾತಿಗೆ ಸೇರಿದ ಝೀ ಕನ್ನಡ ನ್ಯೂಸ್ ವರದಿಗಾರ ಜಿ.ಎನ್.ಮಂಜುನಾಥ್ (ಸಮಯ ಮಂಜು) ಎಂಬವರು ನೀಡಿರುವ ದೂರಿನ ಮೇರೆಗೆ ತಿಲಕ್ ಪಾರ್ಕ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇದೇ ತಿಂಗಳ 21ರಂದು ಬೆಳಗ್ಗೆ ನಗರದ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಮೇಲೆ ನಡೆದ ಇ.ಡಿ. ದಾಳಿ ನಡೆದಿತ್ತು. ಅದರ ವರದಿ ಮಾಡಲು ಝೀ ಕನ್ನಡ ನ್ಯೂಸ್ ವರದಿಗಾರ ಮಂಜುನಾಥ್ ಕೂಡ ತೆರಳಿದ್ದರು. ಈ ವೇಳೆ, ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಮಂಜುನಾಥ್ ಮೇಲೆ ಜಾತಿ ನಿಂದನೆ ಮಾಡಿ, ತಮ್ಮ ಮೈಕ್‌ನಿಂದ ಥಳಿಸಿದ್ದಾರೆ.

“ಏನಲೇ ನೀನು ಬಂದಿದ್ದೀಯಾ, ನಿನಗೆ ನೀನೇ ಮಹಾ ಬುದ್ಧಿವಂತ ಅಂದ್ಕೊಂಡಿದ್ದೀಯಾ, ಏನೇ ಮಾಡಿದರೂ ಕೀಳು ಜಾತಿನೇ, ಕೀಳು ಜಾತಿ ಬುದ್ಧಿ ಬಿಡಲ್ಲ, ಮಾದಿಗರ ಬುದ್ಧಿ ಲದ್ದಿ” ಎಂದು ಜಾತಿ ನಿಂದನೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದಾನೆ. ಅಲ್ಲದೇ ತಾನು ಪ್ರತಿನಿಧಿಸುವ ಸುದ್ದಿವಾಹಿನಿಯ ಲೋಗೋವಿದ್ದ ಮೈಕ್ ನಿಂದ ದಲಿತ ಪತ್ರಕರ್ತನ ತಲೆ ಮತ್ತು ಕಿವಿಗೆ ಹಲ್ಲೆ ನಡೆಸಿದ್ದಾನೆ. ಈ ಬಗ್ಗೆ ತುಮಕೂರಿನ ತಿಲಕ್ ಪಾರ್ಕ್ ಠಾಣೆಗೆ ಸಂತ್ರಸ್ತ ಜಿ.ಎನ್.ಮಂಜುನಾಥ್ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ಪಬ್ಲಿಕ್ ಟಿವಿ ವರದಿಗಾರ ನಡೆಸಿದ ಹಲ್ಲೆಯಿಂದ ಜಿ.ಎನ್.ಮಂಜುನಾಥ್ ಅವರ ಕಿವಿ, ಬಲ ಕುತ್ತಿಗೆಗೆ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಮಂಜುನಾಥ್‌ ನೀಡಿದ ದೂರಿನ ಅನ್ವಯ ತನಿಖಾಧಿಕಾರಿಯಾಗಿರುವ ಮಧುಗಿರಿ ಡಿವೈಎಸ್‌ಪಿ ಅವರು ಆರೋಪಿ ಮಂಜುನಾಥ್ ತಾಳಮಕ್ಕಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಹೊಲದಲ್ಲಿ ದನ ಮೇಯಿಸುವುದನ್ನು ಆಕ್ಷೇಪಿಸಿದ ದಲಿತ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -